Homeಕರ್ನಾಟಕಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

- Advertisement -
- Advertisement -

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ಇಬ್ಬರು ನಾಯಕರೂ ಶನಿವಾರ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆದ “ಜನಸ್ಪಂದನ” ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಚುನಾವಣೆಗಾಗಿ ರಾಹುಲ್ ಗಾಂಧಿ ಈಗಾಗಲೇ ಎಲ್ಲೆಲ್ಲಿ ಹೋಗಿದ್ದಾರೋ, ಎಲ್ಲ ಕಡೆಯಲ್ಲಿಯೂ ಕಾಂಗ್ರೆಸ್ ಸೋತಿದೆ.‌ ಈಗ ಕಾಂಗ್ರೆಸ್ ಪಕ್ಷ ಆರಂಭಿಸಿದ ‘ಭಾರತ್ ಜೋಡೋ ಯಾತ್ರೆ’ಯು ಕಾಂಗ್ರೆಸ್ ಮುಕ್ತ ಭಾರತದ ಮುನ್ಸೂಚನೆಯಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಖಚಿತ” ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಬೊಮ್ಮಾಯಿಯವರು ‘ವಿದ್ಯಾಸಿರಿ’ಯನ್ನು ಆರಂಭಿಸಿದ್ದಾರೆ. ಕಿಸಾನ್ ಸಮ್ಮಾನ್‌ಗೆ ಹೆಚ್ಚುವರಿ ಮೊತ್ತ ಸೇರಿಸಿ ಕೊಡಲಾಗುತ್ತಿದೆ. ಸೋನಿಯಾ ಗಾಂಧಿ, ರಾಹುಲ್, ಡಿ ಕೆ ಶಿವಕುಮಾರ್ ಸೇರಿ ಎಲ್ಲರೂ ಜಾಮೀನ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರಿಗಳ ಪಕ್ಷ. ಸಿದ್ದರಾಮಯ್ಯರ ಕಾಲದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಹಗರಣ ಆಗಿದೆ” ಎಂದು ನಳಿನ್ ಕುಮಾರ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ,“ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ. ರಾಜ್ಯದಾದ್ಯಂತ ಇಂಥ ಹಲವು ಸಮಾವೇಶ ನಡೆಸುತ್ತೇವೆ. ತಾಕತ್ತಿದ್ದರೆ…ಧಮ್ಮಿದ್ದರೆ…ನಿಲ್ಲಿಸಿ ನೋಡೋಣ. ನಿಮ್ಮ ಹಣಬಲದಿಂದ ಏನೂ ಮಾಡಲಿಕ್ಕೆ ಸಾಧ್ಯವಿಲ್ಲ. ನೀವು ಮಾಡಿರುವ ಎಲ್ಲ ಹಗರಣಗಳನ್ನು, ನಿಮ್ಮ ನಿಜ ಸ್ವರೂಪವನ್ನು ಕರ್ನಾಟಕದ ಜನತೆ ಮುಂದಿಡುತ್ತೇವೆ” ಎಂದು ಹೇಳಿದ್ದಾರೆ.

“2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕನ್ನಡ ನಾಡಿನ ಸೇವೆಗಾಗಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಮಲ ಅರಳಿಸಲಿದೆ. ಇಂದು ನೀವು (ಸಭಿಕರು) ಆ ಸಂದೇಶ ನೀಡಿದ್ದೀರ. ತಾವು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬೆಂಬಲದಿಂದ 2019ರಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿಗೆ ಕೊಟ್ಟಿದ್ದೀರಾ; ನ್ಯಾಯಯುತವಾಗಿ ಯಡಿಯೂರಪ್ಪ ಆಗಲೇ ಮುಖ್ಯಮಂತ್ರಿಯಾಗಬೇಕಿತ್ತು. ಕಾಂಗ್ರೆಸ್ ನಾಯಕರು ವಾಮಮಾರ್ಗದಿಂದ, ಸಂವಿಧಾನಬಾಹಿರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕೆಲಸ ಮಾಡಿದರು” ಎಂದು ಅವರು ಹೇಳಿದ್ದಾರೆ.

“ಯಾವಾಗಲೂ ಸಂವಿಧಾನ ಪರವಾಗಿ ಮಾತನಾಡುವ ಸಿದ್ದರಾಮಣ್ಣ ಅಂದು ನಿಮ್ಮ ನೈತಿಕತೆ ಎಲ್ಲಿತ್ತು? ನೀವು ಯಾರಿಗೆ ಉಪದೇಶ ಹೇಳುತ್ತೀರಾ, ನಿಮ್ಮಿಂದ ನಾವು ಪಾಠ ಕಲಿಯಬೇಕಿಲ್ಲ. ಅಧಿಕಾರಕ್ಕಾಗಿ ನೀವು ಏನು ಮಾಡದ್ರಿ ಎಂಬುದು ಅಂದು ಜಗಜ್ಜಾಹೀರಾಗಿದೆ” ಎಂದು ಸಿದ್ದರಾಮಯ್ಯ ಅವರ ವಿರುದ್ಧ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದವರು ವೀರರು

“ಮೈತ್ರಿ ಸರ್ಕಾರ ರಾಜ್ಯವನ್ನು ಹಾಳು ಮಾಡುತ್ತಿದೆ ಎಂದು 17 ಜನರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಸುಮ್ಮನೆ ಬರಲಿಲ್ಲ. ರಾಜೀನಾಮೆ ನೀಡಿ ಮತ್ತೊಮ್ಮೆ ಜನರ ನಡುವೆ ಹೋಗುತ್ತೇವೆ ಎಂದು ಮತ್ತೆ ಗೆದ್ದು ಬಂದರು. ಅವರೆಲ್ಲರೂ ವೀರರು” ಎಂದು ಬೊಮ್ಮಾಯಿ ಅವರು ಆಪರೇಷನ್‌ ಕಮಲ ವೇಳೆ ಬಿಜೆಪಿ ಸೇರಿದ ಕಾಂಗ್ರೆಸ್‌ನ ನಾಯಕರನ್ನು ಕೊಂಡಾಡಿದ್ದಾರೆ.

“ಕೋವಿಡ್ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಅಧಿಕಾರದಲ್ಲಿ ಇರದಿದ್ದರೆ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ, ಜನ ನರಕಕ್ಕೆ ಹೋಗುತ್ತಿದ್ದರು. ಕಾಂಗ್ರೆಸ್‌ನವರದ್ದು ಕೇವಲ ಅಧಿಕಾರದ ದಾಹ ಮಾತ್ರ. ಅವರಿಗೆ ಜಸೇವೆಯ ಯಾವ ಉದ್ದೇಶವೂ ಇಲ್ಲ; ಎಲ್ಲವೂ ನಾಟಕ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೆರೆ ಖಾಲಿ ಬೀಳುತ್ತದೆ: ಸಿ ಟಿ ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮಾತನಾಡಿ, “ಬಿಜೆಪಿ ಅಧಿಕಾರಕ್ಕೆ ಬಂದಾಗ ಕೆರೆ ತುಂಬುತ್ತದೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಹಾಗೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಕೆರೆ ಖಾಲಿ ಬೀಳುತ್ತದೆ. ಬಿಜೆಪಿ ಕಾಲ್ಗುಣ ಒಳ್ಳೆಯದಿದೆ. ಈ ಬಾರಿ ಇಲ್ಲಿನ 18 ಶಾಸಕರ ಸ್ಥಾನದಲ್ಲಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭರವಸೆಗಳು ಇಲ್ಲದೆ ಹೋದಾಗ ಚಡಪಡಿಕೆಯ ಮಾತುಗಳು ಸ್ವಾಭಾವಿಕ ಎಲ್ಲಾ ಕಳೆದು ಹೋದ ಮೇಲೆ ಬರುವ ಮಾತುಗಳು ಇಂಥವುಗಳೆ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....