Homeಕರ್ನಾಟಕಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

- Advertisement -
- Advertisement -

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ಇಬ್ಬರು ನಾಯಕರೂ ಶನಿವಾರ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆದ “ಜನಸ್ಪಂದನ” ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಚುನಾವಣೆಗಾಗಿ ರಾಹುಲ್ ಗಾಂಧಿ ಈಗಾಗಲೇ ಎಲ್ಲೆಲ್ಲಿ ಹೋಗಿದ್ದಾರೋ, ಎಲ್ಲ ಕಡೆಯಲ್ಲಿಯೂ ಕಾಂಗ್ರೆಸ್ ಸೋತಿದೆ.‌ ಈಗ ಕಾಂಗ್ರೆಸ್ ಪಕ್ಷ ಆರಂಭಿಸಿದ ‘ಭಾರತ್ ಜೋಡೋ ಯಾತ್ರೆ’ಯು ಕಾಂಗ್ರೆಸ್ ಮುಕ್ತ ಭಾರತದ ಮುನ್ಸೂಚನೆಯಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಖಚಿತ” ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಬೊಮ್ಮಾಯಿಯವರು ‘ವಿದ್ಯಾಸಿರಿ’ಯನ್ನು ಆರಂಭಿಸಿದ್ದಾರೆ. ಕಿಸಾನ್ ಸಮ್ಮಾನ್‌ಗೆ ಹೆಚ್ಚುವರಿ ಮೊತ್ತ ಸೇರಿಸಿ ಕೊಡಲಾಗುತ್ತಿದೆ. ಸೋನಿಯಾ ಗಾಂಧಿ, ರಾಹುಲ್, ಡಿ ಕೆ ಶಿವಕುಮಾರ್ ಸೇರಿ ಎಲ್ಲರೂ ಜಾಮೀನ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರಿಗಳ ಪಕ್ಷ. ಸಿದ್ದರಾಮಯ್ಯರ ಕಾಲದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಹಗರಣ ಆಗಿದೆ” ಎಂದು ನಳಿನ್ ಕುಮಾರ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ,“ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ. ರಾಜ್ಯದಾದ್ಯಂತ ಇಂಥ ಹಲವು ಸಮಾವೇಶ ನಡೆಸುತ್ತೇವೆ. ತಾಕತ್ತಿದ್ದರೆ…ಧಮ್ಮಿದ್ದರೆ…ನಿಲ್ಲಿಸಿ ನೋಡೋಣ. ನಿಮ್ಮ ಹಣಬಲದಿಂದ ಏನೂ ಮಾಡಲಿಕ್ಕೆ ಸಾಧ್ಯವಿಲ್ಲ. ನೀವು ಮಾಡಿರುವ ಎಲ್ಲ ಹಗರಣಗಳನ್ನು, ನಿಮ್ಮ ನಿಜ ಸ್ವರೂಪವನ್ನು ಕರ್ನಾಟಕದ ಜನತೆ ಮುಂದಿಡುತ್ತೇವೆ” ಎಂದು ಹೇಳಿದ್ದಾರೆ.

“2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕನ್ನಡ ನಾಡಿನ ಸೇವೆಗಾಗಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಮಲ ಅರಳಿಸಲಿದೆ. ಇಂದು ನೀವು (ಸಭಿಕರು) ಆ ಸಂದೇಶ ನೀಡಿದ್ದೀರ. ತಾವು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬೆಂಬಲದಿಂದ 2019ರಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿಗೆ ಕೊಟ್ಟಿದ್ದೀರಾ; ನ್ಯಾಯಯುತವಾಗಿ ಯಡಿಯೂರಪ್ಪ ಆಗಲೇ ಮುಖ್ಯಮಂತ್ರಿಯಾಗಬೇಕಿತ್ತು. ಕಾಂಗ್ರೆಸ್ ನಾಯಕರು ವಾಮಮಾರ್ಗದಿಂದ, ಸಂವಿಧಾನಬಾಹಿರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕೆಲಸ ಮಾಡಿದರು” ಎಂದು ಅವರು ಹೇಳಿದ್ದಾರೆ.

“ಯಾವಾಗಲೂ ಸಂವಿಧಾನ ಪರವಾಗಿ ಮಾತನಾಡುವ ಸಿದ್ದರಾಮಣ್ಣ ಅಂದು ನಿಮ್ಮ ನೈತಿಕತೆ ಎಲ್ಲಿತ್ತು? ನೀವು ಯಾರಿಗೆ ಉಪದೇಶ ಹೇಳುತ್ತೀರಾ, ನಿಮ್ಮಿಂದ ನಾವು ಪಾಠ ಕಲಿಯಬೇಕಿಲ್ಲ. ಅಧಿಕಾರಕ್ಕಾಗಿ ನೀವು ಏನು ಮಾಡದ್ರಿ ಎಂಬುದು ಅಂದು ಜಗಜ್ಜಾಹೀರಾಗಿದೆ” ಎಂದು ಸಿದ್ದರಾಮಯ್ಯ ಅವರ ವಿರುದ್ಧ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದವರು ವೀರರು

“ಮೈತ್ರಿ ಸರ್ಕಾರ ರಾಜ್ಯವನ್ನು ಹಾಳು ಮಾಡುತ್ತಿದೆ ಎಂದು 17 ಜನರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಸುಮ್ಮನೆ ಬರಲಿಲ್ಲ. ರಾಜೀನಾಮೆ ನೀಡಿ ಮತ್ತೊಮ್ಮೆ ಜನರ ನಡುವೆ ಹೋಗುತ್ತೇವೆ ಎಂದು ಮತ್ತೆ ಗೆದ್ದು ಬಂದರು. ಅವರೆಲ್ಲರೂ ವೀರರು” ಎಂದು ಬೊಮ್ಮಾಯಿ ಅವರು ಆಪರೇಷನ್‌ ಕಮಲ ವೇಳೆ ಬಿಜೆಪಿ ಸೇರಿದ ಕಾಂಗ್ರೆಸ್‌ನ ನಾಯಕರನ್ನು ಕೊಂಡಾಡಿದ್ದಾರೆ.

“ಕೋವಿಡ್ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಅಧಿಕಾರದಲ್ಲಿ ಇರದಿದ್ದರೆ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ, ಜನ ನರಕಕ್ಕೆ ಹೋಗುತ್ತಿದ್ದರು. ಕಾಂಗ್ರೆಸ್‌ನವರದ್ದು ಕೇವಲ ಅಧಿಕಾರದ ದಾಹ ಮಾತ್ರ. ಅವರಿಗೆ ಜಸೇವೆಯ ಯಾವ ಉದ್ದೇಶವೂ ಇಲ್ಲ; ಎಲ್ಲವೂ ನಾಟಕ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೆರೆ ಖಾಲಿ ಬೀಳುತ್ತದೆ: ಸಿ ಟಿ ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮಾತನಾಡಿ, “ಬಿಜೆಪಿ ಅಧಿಕಾರಕ್ಕೆ ಬಂದಾಗ ಕೆರೆ ತುಂಬುತ್ತದೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಹಾಗೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಕೆರೆ ಖಾಲಿ ಬೀಳುತ್ತದೆ. ಬಿಜೆಪಿ ಕಾಲ್ಗುಣ ಒಳ್ಳೆಯದಿದೆ. ಈ ಬಾರಿ ಇಲ್ಲಿನ 18 ಶಾಸಕರ ಸ್ಥಾನದಲ್ಲಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭರವಸೆಗಳು ಇಲ್ಲದೆ ಹೋದಾಗ ಚಡಪಡಿಕೆಯ ಮಾತುಗಳು ಸ್ವಾಭಾವಿಕ ಎಲ್ಲಾ ಕಳೆದು ಹೋದ ಮೇಲೆ ಬರುವ ಮಾತುಗಳು ಇಂಥವುಗಳೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...