Homeಕರ್ನಾಟಕಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

- Advertisement -
- Advertisement -

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ಇಬ್ಬರು ನಾಯಕರೂ ಶನಿವಾರ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆದ “ಜನಸ್ಪಂದನ” ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಚುನಾವಣೆಗಾಗಿ ರಾಹುಲ್ ಗಾಂಧಿ ಈಗಾಗಲೇ ಎಲ್ಲೆಲ್ಲಿ ಹೋಗಿದ್ದಾರೋ, ಎಲ್ಲ ಕಡೆಯಲ್ಲಿಯೂ ಕಾಂಗ್ರೆಸ್ ಸೋತಿದೆ.‌ ಈಗ ಕಾಂಗ್ರೆಸ್ ಪಕ್ಷ ಆರಂಭಿಸಿದ ‘ಭಾರತ್ ಜೋಡೋ ಯಾತ್ರೆ’ಯು ಕಾಂಗ್ರೆಸ್ ಮುಕ್ತ ಭಾರತದ ಮುನ್ಸೂಚನೆಯಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಖಚಿತ” ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಬೊಮ್ಮಾಯಿಯವರು ‘ವಿದ್ಯಾಸಿರಿ’ಯನ್ನು ಆರಂಭಿಸಿದ್ದಾರೆ. ಕಿಸಾನ್ ಸಮ್ಮಾನ್‌ಗೆ ಹೆಚ್ಚುವರಿ ಮೊತ್ತ ಸೇರಿಸಿ ಕೊಡಲಾಗುತ್ತಿದೆ. ಸೋನಿಯಾ ಗಾಂಧಿ, ರಾಹುಲ್, ಡಿ ಕೆ ಶಿವಕುಮಾರ್ ಸೇರಿ ಎಲ್ಲರೂ ಜಾಮೀನ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರಿಗಳ ಪಕ್ಷ. ಸಿದ್ದರಾಮಯ್ಯರ ಕಾಲದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಹಗರಣ ಆಗಿದೆ” ಎಂದು ನಳಿನ್ ಕುಮಾರ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ,“ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ. ರಾಜ್ಯದಾದ್ಯಂತ ಇಂಥ ಹಲವು ಸಮಾವೇಶ ನಡೆಸುತ್ತೇವೆ. ತಾಕತ್ತಿದ್ದರೆ…ಧಮ್ಮಿದ್ದರೆ…ನಿಲ್ಲಿಸಿ ನೋಡೋಣ. ನಿಮ್ಮ ಹಣಬಲದಿಂದ ಏನೂ ಮಾಡಲಿಕ್ಕೆ ಸಾಧ್ಯವಿಲ್ಲ. ನೀವು ಮಾಡಿರುವ ಎಲ್ಲ ಹಗರಣಗಳನ್ನು, ನಿಮ್ಮ ನಿಜ ಸ್ವರೂಪವನ್ನು ಕರ್ನಾಟಕದ ಜನತೆ ಮುಂದಿಡುತ್ತೇವೆ” ಎಂದು ಹೇಳಿದ್ದಾರೆ.

“2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕನ್ನಡ ನಾಡಿನ ಸೇವೆಗಾಗಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಮಲ ಅರಳಿಸಲಿದೆ. ಇಂದು ನೀವು (ಸಭಿಕರು) ಆ ಸಂದೇಶ ನೀಡಿದ್ದೀರ. ತಾವು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬೆಂಬಲದಿಂದ 2019ರಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿಗೆ ಕೊಟ್ಟಿದ್ದೀರಾ; ನ್ಯಾಯಯುತವಾಗಿ ಯಡಿಯೂರಪ್ಪ ಆಗಲೇ ಮುಖ್ಯಮಂತ್ರಿಯಾಗಬೇಕಿತ್ತು. ಕಾಂಗ್ರೆಸ್ ನಾಯಕರು ವಾಮಮಾರ್ಗದಿಂದ, ಸಂವಿಧಾನಬಾಹಿರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕೆಲಸ ಮಾಡಿದರು” ಎಂದು ಅವರು ಹೇಳಿದ್ದಾರೆ.

“ಯಾವಾಗಲೂ ಸಂವಿಧಾನ ಪರವಾಗಿ ಮಾತನಾಡುವ ಸಿದ್ದರಾಮಣ್ಣ ಅಂದು ನಿಮ್ಮ ನೈತಿಕತೆ ಎಲ್ಲಿತ್ತು? ನೀವು ಯಾರಿಗೆ ಉಪದೇಶ ಹೇಳುತ್ತೀರಾ, ನಿಮ್ಮಿಂದ ನಾವು ಪಾಠ ಕಲಿಯಬೇಕಿಲ್ಲ. ಅಧಿಕಾರಕ್ಕಾಗಿ ನೀವು ಏನು ಮಾಡದ್ರಿ ಎಂಬುದು ಅಂದು ಜಗಜ್ಜಾಹೀರಾಗಿದೆ” ಎಂದು ಸಿದ್ದರಾಮಯ್ಯ ಅವರ ವಿರುದ್ಧ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದವರು ವೀರರು

“ಮೈತ್ರಿ ಸರ್ಕಾರ ರಾಜ್ಯವನ್ನು ಹಾಳು ಮಾಡುತ್ತಿದೆ ಎಂದು 17 ಜನರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಸುಮ್ಮನೆ ಬರಲಿಲ್ಲ. ರಾಜೀನಾಮೆ ನೀಡಿ ಮತ್ತೊಮ್ಮೆ ಜನರ ನಡುವೆ ಹೋಗುತ್ತೇವೆ ಎಂದು ಮತ್ತೆ ಗೆದ್ದು ಬಂದರು. ಅವರೆಲ್ಲರೂ ವೀರರು” ಎಂದು ಬೊಮ್ಮಾಯಿ ಅವರು ಆಪರೇಷನ್‌ ಕಮಲ ವೇಳೆ ಬಿಜೆಪಿ ಸೇರಿದ ಕಾಂಗ್ರೆಸ್‌ನ ನಾಯಕರನ್ನು ಕೊಂಡಾಡಿದ್ದಾರೆ.

“ಕೋವಿಡ್ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಅಧಿಕಾರದಲ್ಲಿ ಇರದಿದ್ದರೆ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ, ಜನ ನರಕಕ್ಕೆ ಹೋಗುತ್ತಿದ್ದರು. ಕಾಂಗ್ರೆಸ್‌ನವರದ್ದು ಕೇವಲ ಅಧಿಕಾರದ ದಾಹ ಮಾತ್ರ. ಅವರಿಗೆ ಜಸೇವೆಯ ಯಾವ ಉದ್ದೇಶವೂ ಇಲ್ಲ; ಎಲ್ಲವೂ ನಾಟಕ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೆರೆ ಖಾಲಿ ಬೀಳುತ್ತದೆ: ಸಿ ಟಿ ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮಾತನಾಡಿ, “ಬಿಜೆಪಿ ಅಧಿಕಾರಕ್ಕೆ ಬಂದಾಗ ಕೆರೆ ತುಂಬುತ್ತದೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಹಾಗೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಕೆರೆ ಖಾಲಿ ಬೀಳುತ್ತದೆ. ಬಿಜೆಪಿ ಕಾಲ್ಗುಣ ಒಳ್ಳೆಯದಿದೆ. ಈ ಬಾರಿ ಇಲ್ಲಿನ 18 ಶಾಸಕರ ಸ್ಥಾನದಲ್ಲಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಿ” ಎಂದು ಮನವಿ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಭರವಸೆಗಳು ಇಲ್ಲದೆ ಹೋದಾಗ ಚಡಪಡಿಕೆಯ ಮಾತುಗಳು ಸ್ವಾಭಾವಿಕ ಎಲ್ಲಾ ಕಳೆದು ಹೋದ ಮೇಲೆ ಬರುವ ಮಾತುಗಳು ಇಂಥವುಗಳೆ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...