Homeಮುಖಪುಟಲವ್ ಮತ್ತು ಜಿಹಾದ್ ಒಟ್ಟಿಗೆ ಇರಲು ಸಾಧ್ಯವಿಲ್ಲ: ಸಂಸದೆ ನುಸ್ರತ್ ಜಹಾನ್

ಲವ್ ಮತ್ತು ಜಿಹಾದ್ ಒಟ್ಟಿಗೆ ಇರಲು ಸಾಧ್ಯವಿಲ್ಲ: ಸಂಸದೆ ನುಸ್ರತ್ ಜಹಾನ್

ನೀವು ಯಾರೊಂದಿಗೆ ಇರಬೇಕೆಂಬುದು ವೈಯಕ್ತಿಕ ಆಯ್ಕೆಯಾಗಿದೆ. ಎಲ್ಲರು ಪ್ರೀತಿಯಲ್ಲಿರಿ ಮತ್ತು ಪರಸ್ಪರ ಪ್ರೀತಿಸಲು ಪ್ರಾರಂಭಿಸಿ. ಧರ್ಮವನ್ನು ರಾಜಕೀಯ ಸಾಧನವನ್ನಾಗಿ ಮಾಡಬೇಡಿ

- Advertisement -
- Advertisement -

ಲವ್ ಜಿಹಾದ್ ಅನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಧರ್ಮವನ್ನು ರಾಜಕೀಯ ಸಾಧನವಾಗಿ ಬಳಸಲಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಭಾರತಿಯ ಜನತಾ ಪಾರ್ಟಿ ಆಡಳಿತವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರುವ ಕುರಿತು ಚರ್ಚೆಗಳಾಗುತ್ತಿವೆ. ಕರ್ನಾಟಕ, ಉತ್ತರಪ್ರದೇಶ, ಮಧ್ಯಪ್ರದೇಶ, ಹರಿಯಾಣ ರಾಜ್ಯಗಳು ಈ ಕುರಿತು ಅನೇಕ ಹೇಳಿಕೆ ನೀಡಿವೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ತಮ್ಮ ಬೆಂಬಲ ನೆಲೆಯನ್ನು ಬಲಪಡಿಸಲು ಧರ್ಮವನ್ನು ರಾಜಕೀಯ ಸಾಧನವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬಳಸಿಕೊಳ್ಳುತ್ತಿದೆ ಎಂದು ನುಸ್ರತ್ ಆರೋಪಿಸಿದ್ದಾರೆ.

‘ಲವ್ ಮತ್ತು ಜಿಹಾದ್’ ಎಂಬ ಸಂಬಂಧವಿಲ್ಲದ ಎರಡು ಪ್ರತ್ಯೇಕ ವಿಷಯಗಳನ್ನು ಒಂದು ಮಾಡಿ ಬಿಜೆಪಿಯವರು ಮಾತನಾಡುತ್ತಿದ್ದಾರೆ. ಲವ್ ಮತ್ತು ಜಿಹಾದ್ ಒಟ್ಟಿಗೆ ಇರಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕೌಂಟರ್: ಅಂತರ್‌ಧರ್ಮೀಯ ವಿವಾಹಿತರಿಗೆ ಪ್ರೋತ್ಸಾಹ ಧನ ಘೋಷಿಸಿದ ಉತ್ತರಾಖಂಡ್‌!

“ಪ್ರೀತಿ” ಮತ್ತು “ಜಿಹಾದ್” ಎರಡು ವಿಭಿನ್ನ ವಿಷಯಗಳು, ಅವು ಎಂದಿಗೂ ಪರಸ್ಪರ ಕೈಜೋಡಿಸುವುದಿಲ್ಲ. ಯಾರು ಯಾರೊಂದಿಗೆ ಇರಬೇಕೆಂದು ಬಯಸುತ್ತಾರೆ ಎಂಬುದು ವ್ಯಕ್ತಿಯ ವೈಯಕ್ತಿಕ ಆಯ್ಕೆಯ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

“ಪ್ರೀತಿ ತುಂಬಾ ವೈಯಕ್ತಿಕ. ಪ್ರೀತಿ ಮತ್ತು ಜಿಹಾದ್ ಪರಸ್ಪರ ಕೈಜೋಡಿಸುವುದಿಲ್ಲ. ಬಿಜೆಪಿಗರು ಚುನಾವಣೆಗೆ ಸ್ವಲ್ಪ ದಿನ ಇರುವ ಮೊದಲು ಈ ರೀತಿಯ ವಿಷಯಗಳೊಂದಿಗೆ ಬರುತ್ತಾರೆ. ನೀವು ಯಾರೊಂದಿಗೆ ಇರಬೇಕೆಂಬುದು ವೈಯಕ್ತಿಕ ಆಯ್ಕೆಯಾಗಿದೆ. ಎಲ್ಲರು ಪ್ರೀತಿಯಲ್ಲಿರಿ ಮತ್ತು ಪರಸ್ಪರ ಪ್ರೀತಿಸಲು ಪ್ರಾರಂಭಿಸಿ. ಧರ್ಮವನ್ನು ರಾಜಕೀಯ ಸಾಧನವನ್ನಾಗಿ ಮಾಡಬೇಡಿ” ಎಂದು ಸಂಸದೆ ನುಸ್ರತ್ ಜಹಾನ್ ಹೇಳಿದ್ದಾರೆ.

ಬಂಗಾಳಿ ನಟಿ, ರಾಜಕಾರಣಿ ನುಸ್ರತ್ ಜಹಾನ್ ಉದ್ಯಮಿ ನಿಖಿಲ್ ಜೈನ್ ಎಂಬುವವರನ್ನು ವಿವಾಹವಾಗಿದ್ದಾರೆ.

ಇದಕ್ಕೂ ಮೊದಲು, ನುಸ್ರತ್ ಜಹಾನ್, ಬಂಗಾಳಿಗರ ಅತಿದೊಡ್ಡ ಹಬ್ಬವಾದ ದುರ್ಗಾ ಪೂಜೆಯ ಉತ್ಸವಗಳಲ್ಲಿ ಭಾಗವಹಿಸಿದ್ದಕ್ಕಾಗಿ ಇಸ್ಲಾಮಿಕ್ ಮೂಲಭೂತವಾದಿಗಳಿಂದ, ಇಸ್ಲಾಂ ಧರ್ಮಕ್ಕೆ ‘ಅಪಖ್ಯಾತಿ ತಂದಿದ್ದಾರೆ’ ಎಂದು ತೀವ್ರ ದಾಳಿಗೆ ಒಳಗಾಗಿದ್ದರು.

ಇತ್ತ ಉತ್ತರಪ್ರದೇಶದಲ್ಲಿ ಆದಿತ್ಯನಾಥ್ ಸರ್ಕಾರ ಜಾರಿಗೆ ತರಲು ಹೊರಟ ಲವ್ ಜಿಹಾದ್ ಕಾನೂನಿನ ವಿರುದ್ಧ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ್ದು, ವ್ಯಕ್ತಿ ಸ್ವಾತಂತ್ಯ್ರವನ್ನು ಸರ್ಕಾರ ಕಿತ್ತುಕೊಳ್ಳಲು ಸಾಧ್ಯವಿಲ್ಲ ಹಾಗೂ ಮತಾಂತರದ ವಿರುದ್ಧದ ಕಾನೂನು ತಪ್ಪಾಗಿದೆ ಎಂದು ನ್ಯಾಯಾಲಯವು ತೀರ್ಪು ನೀಡಿದೆ.


ಇದನ್ನೂ ಓದಿ: ’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ: ಅಶೋಕ್ ಗೆಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...