Homeಮುಖಪುಟಲವ್ ಮತ್ತು ಜಿಹಾದ್ ಒಟ್ಟಿಗೆ ಇರಲು ಸಾಧ್ಯವಿಲ್ಲ: ಸಂಸದೆ ನುಸ್ರತ್ ಜಹಾನ್

ಲವ್ ಮತ್ತು ಜಿಹಾದ್ ಒಟ್ಟಿಗೆ ಇರಲು ಸಾಧ್ಯವಿಲ್ಲ: ಸಂಸದೆ ನುಸ್ರತ್ ಜಹಾನ್

ನೀವು ಯಾರೊಂದಿಗೆ ಇರಬೇಕೆಂಬುದು ವೈಯಕ್ತಿಕ ಆಯ್ಕೆಯಾಗಿದೆ. ಎಲ್ಲರು ಪ್ರೀತಿಯಲ್ಲಿರಿ ಮತ್ತು ಪರಸ್ಪರ ಪ್ರೀತಿಸಲು ಪ್ರಾರಂಭಿಸಿ. ಧರ್ಮವನ್ನು ರಾಜಕೀಯ ಸಾಧನವನ್ನಾಗಿ ಮಾಡಬೇಡಿ

- Advertisement -
- Advertisement -

ಲವ್ ಜಿಹಾದ್ ಅನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಧರ್ಮವನ್ನು ರಾಜಕೀಯ ಸಾಧನವಾಗಿ ಬಳಸಲಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಭಾರತಿಯ ಜನತಾ ಪಾರ್ಟಿ ಆಡಳಿತವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರುವ ಕುರಿತು ಚರ್ಚೆಗಳಾಗುತ್ತಿವೆ. ಕರ್ನಾಟಕ, ಉತ್ತರಪ್ರದೇಶ, ಮಧ್ಯಪ್ರದೇಶ, ಹರಿಯಾಣ ರಾಜ್ಯಗಳು ಈ ಕುರಿತು ಅನೇಕ ಹೇಳಿಕೆ ನೀಡಿವೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ತಮ್ಮ ಬೆಂಬಲ ನೆಲೆಯನ್ನು ಬಲಪಡಿಸಲು ಧರ್ಮವನ್ನು ರಾಜಕೀಯ ಸಾಧನವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬಳಸಿಕೊಳ್ಳುತ್ತಿದೆ ಎಂದು ನುಸ್ರತ್ ಆರೋಪಿಸಿದ್ದಾರೆ.

‘ಲವ್ ಮತ್ತು ಜಿಹಾದ್’ ಎಂಬ ಸಂಬಂಧವಿಲ್ಲದ ಎರಡು ಪ್ರತ್ಯೇಕ ವಿಷಯಗಳನ್ನು ಒಂದು ಮಾಡಿ ಬಿಜೆಪಿಯವರು ಮಾತನಾಡುತ್ತಿದ್ದಾರೆ. ಲವ್ ಮತ್ತು ಜಿಹಾದ್ ಒಟ್ಟಿಗೆ ಇರಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕೌಂಟರ್: ಅಂತರ್‌ಧರ್ಮೀಯ ವಿವಾಹಿತರಿಗೆ ಪ್ರೋತ್ಸಾಹ ಧನ ಘೋಷಿಸಿದ ಉತ್ತರಾಖಂಡ್‌!

“ಪ್ರೀತಿ” ಮತ್ತು “ಜಿಹಾದ್” ಎರಡು ವಿಭಿನ್ನ ವಿಷಯಗಳು, ಅವು ಎಂದಿಗೂ ಪರಸ್ಪರ ಕೈಜೋಡಿಸುವುದಿಲ್ಲ. ಯಾರು ಯಾರೊಂದಿಗೆ ಇರಬೇಕೆಂದು ಬಯಸುತ್ತಾರೆ ಎಂಬುದು ವ್ಯಕ್ತಿಯ ವೈಯಕ್ತಿಕ ಆಯ್ಕೆಯ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

“ಪ್ರೀತಿ ತುಂಬಾ ವೈಯಕ್ತಿಕ. ಪ್ರೀತಿ ಮತ್ತು ಜಿಹಾದ್ ಪರಸ್ಪರ ಕೈಜೋಡಿಸುವುದಿಲ್ಲ. ಬಿಜೆಪಿಗರು ಚುನಾವಣೆಗೆ ಸ್ವಲ್ಪ ದಿನ ಇರುವ ಮೊದಲು ಈ ರೀತಿಯ ವಿಷಯಗಳೊಂದಿಗೆ ಬರುತ್ತಾರೆ. ನೀವು ಯಾರೊಂದಿಗೆ ಇರಬೇಕೆಂಬುದು ವೈಯಕ್ತಿಕ ಆಯ್ಕೆಯಾಗಿದೆ. ಎಲ್ಲರು ಪ್ರೀತಿಯಲ್ಲಿರಿ ಮತ್ತು ಪರಸ್ಪರ ಪ್ರೀತಿಸಲು ಪ್ರಾರಂಭಿಸಿ. ಧರ್ಮವನ್ನು ರಾಜಕೀಯ ಸಾಧನವನ್ನಾಗಿ ಮಾಡಬೇಡಿ” ಎಂದು ಸಂಸದೆ ನುಸ್ರತ್ ಜಹಾನ್ ಹೇಳಿದ್ದಾರೆ.

ಬಂಗಾಳಿ ನಟಿ, ರಾಜಕಾರಣಿ ನುಸ್ರತ್ ಜಹಾನ್ ಉದ್ಯಮಿ ನಿಖಿಲ್ ಜೈನ್ ಎಂಬುವವರನ್ನು ವಿವಾಹವಾಗಿದ್ದಾರೆ.

ಇದಕ್ಕೂ ಮೊದಲು, ನುಸ್ರತ್ ಜಹಾನ್, ಬಂಗಾಳಿಗರ ಅತಿದೊಡ್ಡ ಹಬ್ಬವಾದ ದುರ್ಗಾ ಪೂಜೆಯ ಉತ್ಸವಗಳಲ್ಲಿ ಭಾಗವಹಿಸಿದ್ದಕ್ಕಾಗಿ ಇಸ್ಲಾಮಿಕ್ ಮೂಲಭೂತವಾದಿಗಳಿಂದ, ಇಸ್ಲಾಂ ಧರ್ಮಕ್ಕೆ ‘ಅಪಖ್ಯಾತಿ ತಂದಿದ್ದಾರೆ’ ಎಂದು ತೀವ್ರ ದಾಳಿಗೆ ಒಳಗಾಗಿದ್ದರು.

ಇತ್ತ ಉತ್ತರಪ್ರದೇಶದಲ್ಲಿ ಆದಿತ್ಯನಾಥ್ ಸರ್ಕಾರ ಜಾರಿಗೆ ತರಲು ಹೊರಟ ಲವ್ ಜಿಹಾದ್ ಕಾನೂನಿನ ವಿರುದ್ಧ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ್ದು, ವ್ಯಕ್ತಿ ಸ್ವಾತಂತ್ಯ್ರವನ್ನು ಸರ್ಕಾರ ಕಿತ್ತುಕೊಳ್ಳಲು ಸಾಧ್ಯವಿಲ್ಲ ಹಾಗೂ ಮತಾಂತರದ ವಿರುದ್ಧದ ಕಾನೂನು ತಪ್ಪಾಗಿದೆ ಎಂದು ನ್ಯಾಯಾಲಯವು ತೀರ್ಪು ನೀಡಿದೆ.


ಇದನ್ನೂ ಓದಿ: ’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ: ಅಶೋಕ್ ಗೆಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...