Homeಮುಖಪುಟಬಜರಂಗದಳ ಟಾರ್ಗೆಟ್‌ ಮಾಡಿದ್ದ ನಾಲ್ವರು ಮುಸ್ಲಿಂ ಯುವಕರ ಬಂಧನ

ಬಜರಂಗದಳ ಟಾರ್ಗೆಟ್‌ ಮಾಡಿದ್ದ ನಾಲ್ವರು ಮುಸ್ಲಿಂ ಯುವಕರ ಬಂಧನ

ಬಿಜೆಪಿ ಸರ್ಕಾರ ಈ ಹಿಂದೆಯೇ ‘ಲವ್‌ ಜಿಹಾದ್‌’ ಇದೆ ಎಂಬುದನ್ನು ಅಲ್ಲಗಳೆದಿದೆ. ಸಂಘ ಪರಿವಾರ ಮಾತ್ರ ಮತ್ತೆ ಮತ್ತೆ ಲವ್‌ ಜಿಹಾದ್‌ ಇದೆ ಎಂದು ವಿವಾದ ಸೃಷ್ಟಿಸುತ್ತದೆ.

- Advertisement -
- Advertisement -

ನಾಲ್ವರು ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ‘ಗರ್ಭ ನೃತ್ಯ’ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಬಂಧಿಸಲಾಗಿದೆ. ಅಕ್ಟೋಬರ್‌ 10ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ‘ಲವ್‌ ಜಿಹಾದ್‌ ಪ್ರೋತ್ಸಾಹಿಸಲಾಗಿದೆ’, ಕೋವಿಡ್‌ ನಿಯಮಾವಳಿ ಉಲ್ಲಂಘಿಸಲಾಗಿದೆ ಎಂದು ಬಜರಂಗದಳ ಆರೋಪಿಸಿದೆ.

ಬಂಧಿತ ನಾಲ್ವರಲ್ಲಿ ಇಬ್ಬರು ಕಾರ್ಯಕ್ರಮ ಆಯೋಜಿಸಿದ್ದ ಇಂದೋರ್‌ನ ಆಕ್ಸ್‌ಫರ್ಡ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಲವ್‌ ಜಿಹಾದ್ ಪ್ರಚೋದಿಸಲು ಹಾಗೂ ವಾಣೀಜ್ಯೀಕರಣದ ದೃಷ್ಟಿಯಿಂದ ಯುವತಿಯರನ್ನು ಒಂದೆಡೆ ಸೇರಿಸಲಾಗಿದೆ ಎಂದು ಬಜರಂಗ ದಳ ಆರೋಪಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ನಾಲ್ವರು ಬಂಧನವಾಗಿರುವುದು ಏತಕ್ಕೆ?

“ಬಜರಂಗದಳದ ಕಾರ್ಯಕರ್ತರು ಈ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ ನಂತರ ಸಾರ್ವಜನಿಕ ತೊಂದರೆ ಉಂಟು ಮಾಡಿದ ಆರೋಪದ ಮೇಲೆ ಜೈಲಿಗೆ ದೂಡಲಾಗಿದೆ” ಎಂದು ವರದಿಯಾಗಿದೆ.

ಬಂಧಿತ ನಾಲ್ವರನ್ನು ಆಕ್ಸ್‌ಫರ್ಡ್ ಕಾಲೇಜಿನ ವಿದ್ಯಾರ್ಥಿಗಳಾದ ಅದ್ನಾನ್ ಶಾ, ಕದಿರ್ ಮನ್ಸೂರಿ ಮತ್ತು ಅವರ ಸ್ನೇಹಿತರಾದ ಉಮರ್ ಖಾಲಿದ್, ಸಯ್ಯದ್ ಸಕೀಬ್ ಎಂದು ಗುರುತಿಸಲಾಗಿದೆ.

ಗರ್ಭ ನೃತ್ಯ (ಸಾಂದರ್ಭಿಕ ಚಿತ್ರ)

ಪೊಲೀಸರು ಹೇಳುವುದು ಏನು?

ಪಶ್ಚಿಮ ಇಂದೋರ್‌ ಪೊಲೀಸ್ ವರಿಷ್ಠಾಧಿಕಾರಿ ಮಹೇಶಚಂದ್ರ ಜೈನ್‌ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿ, ಈ ನಾಲ್ವರು ವಿರುದ್ಧದ ಕ್ರಮ ‘ಅನ್ಯಾಯ’ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಕುಟುಂಬದವರು ಜಾಮೀನು ತೆಗೆದುಕೊಳ್ಳುವಲ್ಲಿ ವಿಫಲರಾದ್ದರಿಂದ ಅವರನ್ನು ಜೈಲಿಗೆ ತಳ್ಳಲಾಗಿದೆ. ಸುಮಾರು 5,000 ಜನರನ್ನು ಒಂದೆಡೆ ಸೇರಿಸಿ ಕೋವಿಡ್ ನಿಯಮಾವಳಿಗಳನ್ನು ಸಂಘಟಕರು ಉಲ್ಲಂಘಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಯುಎಪಿಎ ಅಡಿಯಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿಗಳಿಗೆ ಜಾಮೀನು!

ಕುಟುಂಬ ಹೇಳುವುದೇನು?

ಅದ್ನಾನ್‌ ಅವರ ಚಿಕ್ಕಪ್ಪ ಸಾಜಿದ್‌ ಅವರು ಪತ್ರಿಕೆಗೆ ಪ್ರತಿಕ್ರಿಯಿಸಿದ್ದು, ಭಾನುವಾರ ರಾತ್ರಿ 11.30ಕ್ಕೆ ಬಂಧನದ ವಿಷಯ ತಿಳಿಯಿತು. ಪೊಲೀಸರನ್ನು ಸಂಪರ್ಕಿಸಲು ತಡವಾಯಿತು ಎಂದಿದ್ದಾರೆ.

“ಅಕ್ಟೋಬರ್ 11, ಸೋಮವಾರ ಮುಂಜಾನೆ, ನಾಲ್ವರನ್ನು ಬಿಡುಗಡೆ ಮಾಡಲಾಗುವುದು ಎಂದು ಪೊಲೀಸರು ನಮಗೆ ಭರವಸೆ ನೀಡಿದರು. ಆದರೆ ಅವರನ್ನು ಸಬ್‌‌ಡಿಜಿಸನ್‌ ಮ್ಯಾಜಿಸ್ಟ್ರೇಟ್‌‌ ಮುಂದೆ ಹಾಜರುಪಡಿಸಲಾಯಿತು. ಅವರು ಜಾಮೀನು ನೀಡುವ ಬದಲು, ನಮಗೆ ಗೊತ್ತಿಲ್ಲದೆ ಅವರನ್ನು ಜೈಲಿಗೆ ಕಳುಹಿಸಿದರು” ಎಂದು ಶಾ ಹೇಳಿದ್ದಾರೆ.

‘ಹಿಂದೂಗಳಲ್ಲದವರಿಗೆ ಗರ್ಭ ನೃತ್ಯಕ್ಕೆ ಪ್ರವೇಶವಿಲ್ಲ’: ವಿಎಚ್‌ಪಿ

ನವರಾತ್ರಿಯ ದುರ್ಗಾ ಪೂಜೆಯಲ್ಲಿ ನಡೆಯುವ ಗರ್ಭ ನೃತ್ಯದಲ್ಲಿ ಹಿಂದೂಗಳಲ್ಲದವರು ಪ್ರವೇಶಿಸುವಂತಿಲ್ಲ ಎಂಬ ಪೋಸ್ಟರ್‌ಗಳನ್ನು ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಮಧ್ಯಪ್ರದೇಶದ ರತ್ಲಮ್‌ ಜಿಲ್ಲೆಯ ಹಲವೆಡೆ ಅಂಟಿಸಿದೆ. 56 ಪಂದಲ್‌ಗಳಲ್ಲಿ “ಹಿಂದೂಯೇತರರ ಪ್ರವೇಶವನ್ನು ನಿಷೇಧಿಸಲಾಗಿದೆ” ಎಂದು ಪೋಸ್ಟರ್‌ ಹಾಕಲಾಗಿದೆ ಎಂದು ವರದಿಯಾಗಿದೆ.

ವಿಎಚ್‌ಪಿಯ ಧರ್ಮ್ ಪ್ರಚಾರ ವಿಭಾಗ ರತ್ಲಾಮ್‌ನ ಜಿಲ್ಲಾ ಕಾರ್ಯದರ್ಶಿ ಚಂದನ್ ಶರ್ಮಾ, “ದುರ್ಗಾದೇವಿಯನ್ನು ಸ್ತುತಿಸಿ ನೃತ್ಯ ಮಾಡುವ ಗರ್ಭ ಪಂದಲ್‌ಗಳನ್ನು ಹಿಂದೂ ಅಲ್ಲದ ಯುವಕರು ಪ್ರವೇಶಿಸುವ ಮೂಲಕ ಆಕ್ಷೇಪಾರ್ಹ ಚಟುವಟಿಕೆಗಳಲ್ಲಿ ತೊಡಗುತ್ತಾರೆ” ಎಂದು ಆರೋಪಿಸಿದ್ದಾರೆ.

“ಹಿಂದೂಯೇತರ ಯುವಕರ ಪ್ರವೇಶವು ಕಳೆದ ವರ್ಷ ಹಲವು ಸ್ಥಳಗಳಲ್ಲಿ ವಿವಾದಗಳಿಗೆ ಕಾರಣವಾಗಿತ್ತು. ಇಂತಹ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ, ಹಿಂದೂಯೇತರರಿಗೆ ಗರ್ಭ ಮತ್ತು ದುರ್ಗಾ ಪಂದಲ್‌ಗಳಿಗೆ ಪ್ರವೇಶಿಸದಂತೆ ತಿಳಿಸಲಾಗಿದೆ. ಇದರಿಂದ ಇಂತಹ ಘಟನೆಗಳನ್ನು ತಪ್ಪಿಸಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

ಲವ್‌ ಜಿಹಾದ್ ಎಂಬುದು ಇಲ್ಲ: ಬಿಜೆಪಿ ಸರ್ಕಾರ

ಕಳೆದ ಫೆಬ್ರವರಿ 4 ರಂದು, ಮೋದಿ ಸರ್ಕಾರವು ಸಂಸತ್ತಿನಲ್ಲಿ ಲವ್‌ ಜಿಹಾದ್‌ ವಿಷಯದ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಅವರು ‘ಲವ್ ಜಿಹಾದ್ ’ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ ಎಂದು ಲೋಕಸಭೆಗೆ ಈ ಹಿಂದೆಯೇ ತಿಳಿಸಿದ್ದಾರೆ.

ಇದಲ್ಲದೆ, “ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಪ್ರಚಾರ ಮಾಡಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ.”

ಚುನಾವಣಾ ವಿಷಯ ಯಾವುದು: ಉತ್ತರ- ‘ಲವ್ ಜಿಹಾದ್!’

ಫೆಬ್ರವರಿ 2017 ರಲ್ಲಿ, ಉತ್ತರಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ಯೋಗಿ ಆದಿತ್ಯನಾಥ್, “ಕೈರಾನಾದಿಂದ ಹಿಂದೂಗಳು ವಲಸೆ ಹೋಗುತ್ತಿರುವುದು ಮತ್ತು ಲವ್ ಜಿಹಾದ್ ಮತದಾನದ ಮೇಲೆ ಪ್ರಾಬಲ್ಯ ಸಾಧಿಸುತ್ತದೆ” ಎಂದು ಹೇಳಿದ್ದರು.

ಸಿಎಎ ವಿರೋಧಿ ಪ್ರತಿಭಟನೆಯನ್ನು ಟೀಕಿಸುವುದು ಹೇಗೆ? ಉತ್ತರ – ‘ಲವ್ ಜಿಹಾದ್!’

2020ರ ಜನವರಿಯಲ್ಲಿ, ಸಿಎಎ ವಿರೋಧಿ ಪ್ರತಿಭಟನೆಗಳನ್ನು ಟೀಕಿಸುವಾಗ ಕೇರಳ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕುಮ್ಮನಂ ರಾಜಶೇಖರನ್ ಅವರು ‘ಲವ್ ಜಿಹಾದ್’ ನ ಪದವನ್ನು ಎಳೆದುತಂದರು. “ಕಾಂಗ್ರೆಸ್, ಸಿಪಿಎಂ ಮತ್ತು ಜಿಹಾದಿ ಸಂಘಟನೆಗಳು ಇತರ ದೇಶಗಳಲ್ಲಿ ಕಿರುಕುಳಕ್ಕೊಳಗಾದ ಕ್ರಿಶ್ಚಿಯನ್, ಹಿಂದೂ, ಬೌದ್ಧ ಸದಸ್ಯರಿಗೆ ಸಾಮಾಜಿಕ ನ್ಯಾಯ ಒದಗಿಸುವುದನ್ನು ವಿರೋಧಿಸುತ್ತಿವೆ. ಆದರೆ ಲವ್ ಜಿಹಾದ್ ಬೆಂಬಲಿಸುತ್ತಾರೆ” ಎಂದು ಅವರು ಹೇಳಿದ್ದರು.

ಮಗಳು ಕಾಣೆಯಾಗಿದ್ದಾಳೆ ಏನು ಹೇಳುವುದು? ಉತ್ತರ- ‘ಲವ್ ಜಿಹಾದ್!’

ಸಮುದಾಯಗಳ ನಡುವೆ ದ್ವೇಷವನ್ನು ಹುಟ್ಟುಹಾಕಿದ್ದಾರೆ ಎಂದು ಆರೋಪಿಸಿ 2019ರ ಅಕ್ಟೋಬರ್‌ನಲ್ಲಿ ಬಿಜೆಪಿ ಮುಖಂಡ ಸುರೇಂದ್ರ ನಾಥ್ ಸಿಂಗ್ ಅವರ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು. ಏಕೆಂದರೆ ಆತ  ತನ್ನ ಮಗಳ ನಾಪತ್ತೆಯಾಗಿದ್ದನ್ನು ‘ಲವ್ ಜಿಹಾದ್’ ಗೆ ಲಿಂಕ್ ಮಾಡಿದ್ದರು. ಈ ಪ್ರಕರಣದಲ್ಲಿ ಭೋಪಾಲ್ ಶಾಸಕ ಮತ್ತು ಕಾಂಗ್ರೆಸ್ ಮುಖಂಡ ಆರಿಫ್ ಮಸೂದ್ ಪಾತ್ರವಿದೆ ಎಂದು ಹೇಳಿಕೊಂಡಿದ್ದರು. ಆದರೆ ವಿಚಾರಣೆ ನಡೆದಾಗ ಎಲ್ಲಾ ಸುಳ್ಳು ಎಂದು ಸಾಬೀತಾಯಿತು.

ಮುಸ್ಲಿಮರು ಹಸುಗಳನ್ನು ಸಾಕುತ್ತಾರೆಯೇ? ‘ಲವ್ ಜಿಹಾದ್!’

ಜುಲೈ 2019 ರಲ್ಲಿ ಬಿಜೆಪಿ ನಾಯಕ ರಂಜಿತ್ ಬಹದ್ದೂರ್ ಶ್ರೀವಾಸ್ತವ ವಿವಾದಾತ್ಮಕ ಹೇಳಿಕೆಯಲ್ಲಿ ಮುಸ್ಲಿಮರಿಗೆ ಸೇರಿದ ಹಸುಗಳನ್ನು ಯಾವುದೇ ಬೆಲೆ ತೆತ್ತಾದರೂ ಸರಿ ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ. ಮುಸ್ಲಿಮರು ಹಸುಗಳನ್ನು ಸಾಕುವುದು ಕೂಡ “ಲವ್ ಜಿಹಾದ್” ಎಂದು ಅವರು ಹೇಳಿದರು.

ಜ್ಞಾಪನೆ: ಲೋಕಸಭೆಯಲ್ಲಿ ಲವ್‌ ಜಿಹಾದ್‌ ಬಗ್ಗೆ ಮೋದಿ ಸರ್ಕಾರ ಏನು ಹೇಳಿದೆ
ಇಷ್ಟೆಲ್ಲಾ ಘಟನೆಗಳಾದ ಮೇಲೆ ಕೇರಳದ ಕಾಂಗ್ರೆಸ್ ಸಂಸದ ಬೆನ್ನಿ ಬೆಹಾನನ್ ಅವರು ಲೋಕಸಭೆಯಲ್ಲಿ ಮೋದಿ ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳು ಇಲ್ಲಿವೆ.

(ಎ) ಕೇರಳದಲ್ಲಿ ಲವ್ ಜಿಹಾದ್ ಪ್ರಕರಣವಿಲ್ಲ ಎಂದು ಕೇರಳ ಹೈಕೋರ್ಟ್‌ನ ವೀಕ್ಷಣೆಯ ಬಗ್ಗೆ ಸರ್ಕಾರಕ್ಕೆ ತಿಳಿದಿದೆಯೇ?

(ಬಿ) ಹಾಗಿದ್ದರೆ, ಅದರ ವಿವರಗಳೇನು? ಮತ್ತು

(ಸಿ) ಕಳೆದ ಎರಡು ವರ್ಷಗಳಲ್ಲಿ ಯಾವುದೇ ಕೇಂದ್ರ ಏಜೆನ್ಸಿಗಳು ಕೇರಳದಿಂದ ಲವ್ ಜಿಹಾದ್ ಪ್ರಕರಣವನ್ನು ವರದಿ ಮಾಡಿವೆಯೇ? ಹಾಗಿದ್ದಲ್ಲಿ, ಅದರ ವಿವರಗಳನ್ನು ನೀಡಿ.

ಈ ಪ್ರಶ್ನೆಗಳಿಗೆ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಅವರ ಸಂಪೂರ್ಣ ಪ್ರತಿಕ್ರಿಯೆ ಇಲ್ಲಿದೆ.

ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ.

‘ಲವ್ ಜಿಹಾದ್’ ಎಂಬ ಪದವನ್ನು ಈಗಿರುವ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ.

ಇಷ್ಟೆಲ್ಲ ಆಗಿರುವಾಗ ಸಂಘ ಪರಿವಾರದವರು ಲವ್‌ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸುತ್ತಿರುವುದು ಯಾತಕ್ಕಾಗಿ? ಸರ್ಕಾರವೇ ಲವ್‌ ಜಿಹಾದ್‌ ಎಂಬುದನ್ನು ಅಲ್ಲಗಳೆದಿರುವಾಗ ಸಂಘಪರಿವಾರದವರು ಲವ್‌ ಜಿಹಾದ್‌ ಎಂದು ಮತ್ತೆ ಮತ್ತೆ ಆರೋಪಿಸುತ್ತಿರುವುದನ್ನು ಹೇಗೆ ನೋಡಬೇಕು ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...