Homeಮುಖಪುಟಬಜರಂಗದಳ ಟಾರ್ಗೆಟ್‌ ಮಾಡಿದ್ದ ನಾಲ್ವರು ಮುಸ್ಲಿಂ ಯುವಕರ ಬಂಧನ

ಬಜರಂಗದಳ ಟಾರ್ಗೆಟ್‌ ಮಾಡಿದ್ದ ನಾಲ್ವರು ಮುಸ್ಲಿಂ ಯುವಕರ ಬಂಧನ

ಬಿಜೆಪಿ ಸರ್ಕಾರ ಈ ಹಿಂದೆಯೇ ‘ಲವ್‌ ಜಿಹಾದ್‌’ ಇದೆ ಎಂಬುದನ್ನು ಅಲ್ಲಗಳೆದಿದೆ. ಸಂಘ ಪರಿವಾರ ಮಾತ್ರ ಮತ್ತೆ ಮತ್ತೆ ಲವ್‌ ಜಿಹಾದ್‌ ಇದೆ ಎಂದು ವಿವಾದ ಸೃಷ್ಟಿಸುತ್ತದೆ.

- Advertisement -
- Advertisement -

ನಾಲ್ವರು ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ‘ಗರ್ಭ ನೃತ್ಯ’ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಬಂಧಿಸಲಾಗಿದೆ. ಅಕ್ಟೋಬರ್‌ 10ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ‘ಲವ್‌ ಜಿಹಾದ್‌ ಪ್ರೋತ್ಸಾಹಿಸಲಾಗಿದೆ’, ಕೋವಿಡ್‌ ನಿಯಮಾವಳಿ ಉಲ್ಲಂಘಿಸಲಾಗಿದೆ ಎಂದು ಬಜರಂಗದಳ ಆರೋಪಿಸಿದೆ.

ಬಂಧಿತ ನಾಲ್ವರಲ್ಲಿ ಇಬ್ಬರು ಕಾರ್ಯಕ್ರಮ ಆಯೋಜಿಸಿದ್ದ ಇಂದೋರ್‌ನ ಆಕ್ಸ್‌ಫರ್ಡ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಲವ್‌ ಜಿಹಾದ್ ಪ್ರಚೋದಿಸಲು ಹಾಗೂ ವಾಣೀಜ್ಯೀಕರಣದ ದೃಷ್ಟಿಯಿಂದ ಯುವತಿಯರನ್ನು ಒಂದೆಡೆ ಸೇರಿಸಲಾಗಿದೆ ಎಂದು ಬಜರಂಗ ದಳ ಆರೋಪಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ನಾಲ್ವರು ಬಂಧನವಾಗಿರುವುದು ಏತಕ್ಕೆ?

“ಬಜರಂಗದಳದ ಕಾರ್ಯಕರ್ತರು ಈ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ ನಂತರ ಸಾರ್ವಜನಿಕ ತೊಂದರೆ ಉಂಟು ಮಾಡಿದ ಆರೋಪದ ಮೇಲೆ ಜೈಲಿಗೆ ದೂಡಲಾಗಿದೆ” ಎಂದು ವರದಿಯಾಗಿದೆ.

ಬಂಧಿತ ನಾಲ್ವರನ್ನು ಆಕ್ಸ್‌ಫರ್ಡ್ ಕಾಲೇಜಿನ ವಿದ್ಯಾರ್ಥಿಗಳಾದ ಅದ್ನಾನ್ ಶಾ, ಕದಿರ್ ಮನ್ಸೂರಿ ಮತ್ತು ಅವರ ಸ್ನೇಹಿತರಾದ ಉಮರ್ ಖಾಲಿದ್, ಸಯ್ಯದ್ ಸಕೀಬ್ ಎಂದು ಗುರುತಿಸಲಾಗಿದೆ.

ಗರ್ಭ ನೃತ್ಯ (ಸಾಂದರ್ಭಿಕ ಚಿತ್ರ)

ಪೊಲೀಸರು ಹೇಳುವುದು ಏನು?

ಪಶ್ಚಿಮ ಇಂದೋರ್‌ ಪೊಲೀಸ್ ವರಿಷ್ಠಾಧಿಕಾರಿ ಮಹೇಶಚಂದ್ರ ಜೈನ್‌ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿ, ಈ ನಾಲ್ವರು ವಿರುದ್ಧದ ಕ್ರಮ ‘ಅನ್ಯಾಯ’ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಕುಟುಂಬದವರು ಜಾಮೀನು ತೆಗೆದುಕೊಳ್ಳುವಲ್ಲಿ ವಿಫಲರಾದ್ದರಿಂದ ಅವರನ್ನು ಜೈಲಿಗೆ ತಳ್ಳಲಾಗಿದೆ. ಸುಮಾರು 5,000 ಜನರನ್ನು ಒಂದೆಡೆ ಸೇರಿಸಿ ಕೋವಿಡ್ ನಿಯಮಾವಳಿಗಳನ್ನು ಸಂಘಟಕರು ಉಲ್ಲಂಘಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಯುಎಪಿಎ ಅಡಿಯಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿಗಳಿಗೆ ಜಾಮೀನು!

ಕುಟುಂಬ ಹೇಳುವುದೇನು?

ಅದ್ನಾನ್‌ ಅವರ ಚಿಕ್ಕಪ್ಪ ಸಾಜಿದ್‌ ಅವರು ಪತ್ರಿಕೆಗೆ ಪ್ರತಿಕ್ರಿಯಿಸಿದ್ದು, ಭಾನುವಾರ ರಾತ್ರಿ 11.30ಕ್ಕೆ ಬಂಧನದ ವಿಷಯ ತಿಳಿಯಿತು. ಪೊಲೀಸರನ್ನು ಸಂಪರ್ಕಿಸಲು ತಡವಾಯಿತು ಎಂದಿದ್ದಾರೆ.

“ಅಕ್ಟೋಬರ್ 11, ಸೋಮವಾರ ಮುಂಜಾನೆ, ನಾಲ್ವರನ್ನು ಬಿಡುಗಡೆ ಮಾಡಲಾಗುವುದು ಎಂದು ಪೊಲೀಸರು ನಮಗೆ ಭರವಸೆ ನೀಡಿದರು. ಆದರೆ ಅವರನ್ನು ಸಬ್‌‌ಡಿಜಿಸನ್‌ ಮ್ಯಾಜಿಸ್ಟ್ರೇಟ್‌‌ ಮುಂದೆ ಹಾಜರುಪಡಿಸಲಾಯಿತು. ಅವರು ಜಾಮೀನು ನೀಡುವ ಬದಲು, ನಮಗೆ ಗೊತ್ತಿಲ್ಲದೆ ಅವರನ್ನು ಜೈಲಿಗೆ ಕಳುಹಿಸಿದರು” ಎಂದು ಶಾ ಹೇಳಿದ್ದಾರೆ.

‘ಹಿಂದೂಗಳಲ್ಲದವರಿಗೆ ಗರ್ಭ ನೃತ್ಯಕ್ಕೆ ಪ್ರವೇಶವಿಲ್ಲ’: ವಿಎಚ್‌ಪಿ

ನವರಾತ್ರಿಯ ದುರ್ಗಾ ಪೂಜೆಯಲ್ಲಿ ನಡೆಯುವ ಗರ್ಭ ನೃತ್ಯದಲ್ಲಿ ಹಿಂದೂಗಳಲ್ಲದವರು ಪ್ರವೇಶಿಸುವಂತಿಲ್ಲ ಎಂಬ ಪೋಸ್ಟರ್‌ಗಳನ್ನು ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಮಧ್ಯಪ್ರದೇಶದ ರತ್ಲಮ್‌ ಜಿಲ್ಲೆಯ ಹಲವೆಡೆ ಅಂಟಿಸಿದೆ. 56 ಪಂದಲ್‌ಗಳಲ್ಲಿ “ಹಿಂದೂಯೇತರರ ಪ್ರವೇಶವನ್ನು ನಿಷೇಧಿಸಲಾಗಿದೆ” ಎಂದು ಪೋಸ್ಟರ್‌ ಹಾಕಲಾಗಿದೆ ಎಂದು ವರದಿಯಾಗಿದೆ.

ವಿಎಚ್‌ಪಿಯ ಧರ್ಮ್ ಪ್ರಚಾರ ವಿಭಾಗ ರತ್ಲಾಮ್‌ನ ಜಿಲ್ಲಾ ಕಾರ್ಯದರ್ಶಿ ಚಂದನ್ ಶರ್ಮಾ, “ದುರ್ಗಾದೇವಿಯನ್ನು ಸ್ತುತಿಸಿ ನೃತ್ಯ ಮಾಡುವ ಗರ್ಭ ಪಂದಲ್‌ಗಳನ್ನು ಹಿಂದೂ ಅಲ್ಲದ ಯುವಕರು ಪ್ರವೇಶಿಸುವ ಮೂಲಕ ಆಕ್ಷೇಪಾರ್ಹ ಚಟುವಟಿಕೆಗಳಲ್ಲಿ ತೊಡಗುತ್ತಾರೆ” ಎಂದು ಆರೋಪಿಸಿದ್ದಾರೆ.

“ಹಿಂದೂಯೇತರ ಯುವಕರ ಪ್ರವೇಶವು ಕಳೆದ ವರ್ಷ ಹಲವು ಸ್ಥಳಗಳಲ್ಲಿ ವಿವಾದಗಳಿಗೆ ಕಾರಣವಾಗಿತ್ತು. ಇಂತಹ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ, ಹಿಂದೂಯೇತರರಿಗೆ ಗರ್ಭ ಮತ್ತು ದುರ್ಗಾ ಪಂದಲ್‌ಗಳಿಗೆ ಪ್ರವೇಶಿಸದಂತೆ ತಿಳಿಸಲಾಗಿದೆ. ಇದರಿಂದ ಇಂತಹ ಘಟನೆಗಳನ್ನು ತಪ್ಪಿಸಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

ಲವ್‌ ಜಿಹಾದ್ ಎಂಬುದು ಇಲ್ಲ: ಬಿಜೆಪಿ ಸರ್ಕಾರ

ಕಳೆದ ಫೆಬ್ರವರಿ 4 ರಂದು, ಮೋದಿ ಸರ್ಕಾರವು ಸಂಸತ್ತಿನಲ್ಲಿ ಲವ್‌ ಜಿಹಾದ್‌ ವಿಷಯದ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಅವರು ‘ಲವ್ ಜಿಹಾದ್ ’ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ ಎಂದು ಲೋಕಸಭೆಗೆ ಈ ಹಿಂದೆಯೇ ತಿಳಿಸಿದ್ದಾರೆ.

ಇದಲ್ಲದೆ, “ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಪ್ರಚಾರ ಮಾಡಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ.”

ಚುನಾವಣಾ ವಿಷಯ ಯಾವುದು: ಉತ್ತರ- ‘ಲವ್ ಜಿಹಾದ್!’

ಫೆಬ್ರವರಿ 2017 ರಲ್ಲಿ, ಉತ್ತರಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ಯೋಗಿ ಆದಿತ್ಯನಾಥ್, “ಕೈರಾನಾದಿಂದ ಹಿಂದೂಗಳು ವಲಸೆ ಹೋಗುತ್ತಿರುವುದು ಮತ್ತು ಲವ್ ಜಿಹಾದ್ ಮತದಾನದ ಮೇಲೆ ಪ್ರಾಬಲ್ಯ ಸಾಧಿಸುತ್ತದೆ” ಎಂದು ಹೇಳಿದ್ದರು.

ಸಿಎಎ ವಿರೋಧಿ ಪ್ರತಿಭಟನೆಯನ್ನು ಟೀಕಿಸುವುದು ಹೇಗೆ? ಉತ್ತರ – ‘ಲವ್ ಜಿಹಾದ್!’

2020ರ ಜನವರಿಯಲ್ಲಿ, ಸಿಎಎ ವಿರೋಧಿ ಪ್ರತಿಭಟನೆಗಳನ್ನು ಟೀಕಿಸುವಾಗ ಕೇರಳ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕುಮ್ಮನಂ ರಾಜಶೇಖರನ್ ಅವರು ‘ಲವ್ ಜಿಹಾದ್’ ನ ಪದವನ್ನು ಎಳೆದುತಂದರು. “ಕಾಂಗ್ರೆಸ್, ಸಿಪಿಎಂ ಮತ್ತು ಜಿಹಾದಿ ಸಂಘಟನೆಗಳು ಇತರ ದೇಶಗಳಲ್ಲಿ ಕಿರುಕುಳಕ್ಕೊಳಗಾದ ಕ್ರಿಶ್ಚಿಯನ್, ಹಿಂದೂ, ಬೌದ್ಧ ಸದಸ್ಯರಿಗೆ ಸಾಮಾಜಿಕ ನ್ಯಾಯ ಒದಗಿಸುವುದನ್ನು ವಿರೋಧಿಸುತ್ತಿವೆ. ಆದರೆ ಲವ್ ಜಿಹಾದ್ ಬೆಂಬಲಿಸುತ್ತಾರೆ” ಎಂದು ಅವರು ಹೇಳಿದ್ದರು.

ಮಗಳು ಕಾಣೆಯಾಗಿದ್ದಾಳೆ ಏನು ಹೇಳುವುದು? ಉತ್ತರ- ‘ಲವ್ ಜಿಹಾದ್!’

ಸಮುದಾಯಗಳ ನಡುವೆ ದ್ವೇಷವನ್ನು ಹುಟ್ಟುಹಾಕಿದ್ದಾರೆ ಎಂದು ಆರೋಪಿಸಿ 2019ರ ಅಕ್ಟೋಬರ್‌ನಲ್ಲಿ ಬಿಜೆಪಿ ಮುಖಂಡ ಸುರೇಂದ್ರ ನಾಥ್ ಸಿಂಗ್ ಅವರ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು. ಏಕೆಂದರೆ ಆತ  ತನ್ನ ಮಗಳ ನಾಪತ್ತೆಯಾಗಿದ್ದನ್ನು ‘ಲವ್ ಜಿಹಾದ್’ ಗೆ ಲಿಂಕ್ ಮಾಡಿದ್ದರು. ಈ ಪ್ರಕರಣದಲ್ಲಿ ಭೋಪಾಲ್ ಶಾಸಕ ಮತ್ತು ಕಾಂಗ್ರೆಸ್ ಮುಖಂಡ ಆರಿಫ್ ಮಸೂದ್ ಪಾತ್ರವಿದೆ ಎಂದು ಹೇಳಿಕೊಂಡಿದ್ದರು. ಆದರೆ ವಿಚಾರಣೆ ನಡೆದಾಗ ಎಲ್ಲಾ ಸುಳ್ಳು ಎಂದು ಸಾಬೀತಾಯಿತು.

ಮುಸ್ಲಿಮರು ಹಸುಗಳನ್ನು ಸಾಕುತ್ತಾರೆಯೇ? ‘ಲವ್ ಜಿಹಾದ್!’

ಜುಲೈ 2019 ರಲ್ಲಿ ಬಿಜೆಪಿ ನಾಯಕ ರಂಜಿತ್ ಬಹದ್ದೂರ್ ಶ್ರೀವಾಸ್ತವ ವಿವಾದಾತ್ಮಕ ಹೇಳಿಕೆಯಲ್ಲಿ ಮುಸ್ಲಿಮರಿಗೆ ಸೇರಿದ ಹಸುಗಳನ್ನು ಯಾವುದೇ ಬೆಲೆ ತೆತ್ತಾದರೂ ಸರಿ ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ. ಮುಸ್ಲಿಮರು ಹಸುಗಳನ್ನು ಸಾಕುವುದು ಕೂಡ “ಲವ್ ಜಿಹಾದ್” ಎಂದು ಅವರು ಹೇಳಿದರು.

ಜ್ಞಾಪನೆ: ಲೋಕಸಭೆಯಲ್ಲಿ ಲವ್‌ ಜಿಹಾದ್‌ ಬಗ್ಗೆ ಮೋದಿ ಸರ್ಕಾರ ಏನು ಹೇಳಿದೆ
ಇಷ್ಟೆಲ್ಲಾ ಘಟನೆಗಳಾದ ಮೇಲೆ ಕೇರಳದ ಕಾಂಗ್ರೆಸ್ ಸಂಸದ ಬೆನ್ನಿ ಬೆಹಾನನ್ ಅವರು ಲೋಕಸಭೆಯಲ್ಲಿ ಮೋದಿ ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳು ಇಲ್ಲಿವೆ.

(ಎ) ಕೇರಳದಲ್ಲಿ ಲವ್ ಜಿಹಾದ್ ಪ್ರಕರಣವಿಲ್ಲ ಎಂದು ಕೇರಳ ಹೈಕೋರ್ಟ್‌ನ ವೀಕ್ಷಣೆಯ ಬಗ್ಗೆ ಸರ್ಕಾರಕ್ಕೆ ತಿಳಿದಿದೆಯೇ?

(ಬಿ) ಹಾಗಿದ್ದರೆ, ಅದರ ವಿವರಗಳೇನು? ಮತ್ತು

(ಸಿ) ಕಳೆದ ಎರಡು ವರ್ಷಗಳಲ್ಲಿ ಯಾವುದೇ ಕೇಂದ್ರ ಏಜೆನ್ಸಿಗಳು ಕೇರಳದಿಂದ ಲವ್ ಜಿಹಾದ್ ಪ್ರಕರಣವನ್ನು ವರದಿ ಮಾಡಿವೆಯೇ? ಹಾಗಿದ್ದಲ್ಲಿ, ಅದರ ವಿವರಗಳನ್ನು ನೀಡಿ.

ಈ ಪ್ರಶ್ನೆಗಳಿಗೆ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಅವರ ಸಂಪೂರ್ಣ ಪ್ರತಿಕ್ರಿಯೆ ಇಲ್ಲಿದೆ.

ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ.

‘ಲವ್ ಜಿಹಾದ್’ ಎಂಬ ಪದವನ್ನು ಈಗಿರುವ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ.

ಇಷ್ಟೆಲ್ಲ ಆಗಿರುವಾಗ ಸಂಘ ಪರಿವಾರದವರು ಲವ್‌ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸುತ್ತಿರುವುದು ಯಾತಕ್ಕಾಗಿ? ಸರ್ಕಾರವೇ ಲವ್‌ ಜಿಹಾದ್‌ ಎಂಬುದನ್ನು ಅಲ್ಲಗಳೆದಿರುವಾಗ ಸಂಘಪರಿವಾರದವರು ಲವ್‌ ಜಿಹಾದ್‌ ಎಂದು ಮತ್ತೆ ಮತ್ತೆ ಆರೋಪಿಸುತ್ತಿರುವುದನ್ನು ಹೇಗೆ ನೋಡಬೇಕು ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...