Homeಮುಖಪುಟಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌...

ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ತಯಾರಿಗಳು ಸದ್ದಿಲ್ಲದೇ ನಡೆಯತೊಡಗಿವೆ. ಆಡಳಿತಾರೂಢ ಬಿಜೆಪಿಗೆ ಕೊರೋನಾ ಮತ್ತು ರೈತರ ಪ್ರತಿಭಟನೆಗಳು ಆತಂಕವನ್ನು ತಂದಿವೆ. ಅತ್ತ ವಿರೋಧ ಪಕ್ಷಗಳು ಕೂಡ ಉತ್ತರ ಪ್ರದೇಶ ಚುನಾವಣೆಗೆ ರಾಜಕೀಯ ತಂತ್ರಗಾರಿಕೆಯನ್ನು ಆರಂಭಿಸಿವೆ. ರೈತ ಹೋರಾಟಗಳಲ್ಲೂ ಕಾಣಿಸಿಕೊಳ್ಳುತ್ತಿವೆ. ಕೆಲವು ಪಕ್ಷಗಳು ರೈತರ ಜೊತೆ ನಿಂತಿವೆ.  ಹಾಗೆ ನಿಂತಿರುವ ಪಕ್ಷಗಳಲ್ಲಿ ಒಂದು ರಾಷ್ಟ್ರೀಯ ಲೋಕ ದಳ. ರಾಷ್ಟ್ರೀಯ ಲೋಕದಳದ ಅಧ್ಷಕ್ಷ ಜಯಂತ್‌ ಚೌಧರಿ ಬಿಜೆಪಿ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ರೈತರ ಬಗೆಗಿನ ಅಸಡ್ಡೆ ಮತ್ತು ತಿರಸ್ಕಾರ ಬಿಜೆಪಿಗೆ ಮುಳುವಾಗಲಿದೆ ಎಂದು ಅವರು  ವಾಗ್ದಾಳಿ ನಡೆಸಿದ್ದಾರೆ.  ಇನ್ನು ಬಿಜೆಪಿಯ ಲವ್‌ ಜಿಹಾದ್‌, ಗೋ ಹತ್ಯೆಯ ಹುಸಿ ನಾಟಕಗಳು ಅವರಿಗೆ ಚುನಾವಣೆಯ ಗೆಲುವನ್ನು ತಂದು ಕೊಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಜಯಂತ್‌ ಹೇಳುತ್ತಾರೆ.

ಆರೋಗ್ಯ ವ್ಯವಸ್ಥೆಯ ಸುಧಾರಣೆ. ಶಿಕ್ಷಣ ಮತ್ತು ಸಮತೋಲಿತ ಅಭಿವೃದ್ಧಿಗೆ ಮಾತ್ರ ಈ ಬಾರಿ ಯುಪಿಯ ಜನ ಮತ ಹಾಕಲಿದ್ದಾರೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ನಂತರ ದೇಶದ ಗಮನ ಉತ್ತರ ಪ್ರದೇಶದ ಕಡೆ ತಿರುಗುತ್ತಿರುವ ಈ ಹೊತ್ತಿನಲ್ಲಿ ಜಯಂತ್‌ ಚೌಧರಿ ಆರ್‌ಎಲ್‌ಡಿಯ ಹೊಸ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಯಂತ್‌ ಯಾದವ್‌ ತಮ್ಮ ಪಕ್ಷವು ಧರ್ಮ ಆಧಾರಿತ ಚುನಾವಣಾ ಪ್ರಚಾರಕ್ಕೆ ಮತ್ತು ಓಲೈಕೆಗೆ ಈ ಚುನಾವಣೆಯಲ್ಲಿ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ತಂದೆ ಅಜಿತ್‌ ಸಿಂಗ್‌ ಚೌಧರಿ ಮರಣದ ನಂತರ ಪಕ್ಷದ ಅಧಿಕಾರ  ಸ್ವೀಕರಿಸಿರುವ ಜಯಂತ್‌ ಚೌಧರಿ ತಮ್ಮ ಪಕ್ಷ ಮತ್ತು ಸಮಾಜವಾದಿ ಪಕ್ಷದ ಜೊತೆ ಉತ್ತಮ ಹೊಂದಾಣಿಕೆಯಿದೆ. ಮುಂದೆಯೂ ಅದೇ ಹೊಂದಾಣಿಕೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಮುಂದೆ ಉತ್ತರ ಪ್ರದೇಶದಲ್ಲಿ ಎಲ್ಲಾ ವಿರೋಧ ಪಕ್ಷಗಳನ್ನು ಒಳಗೊಂಡ ಮಹಾ ಘಟಬಂಧನ ಒಕ್ಕೂಟ ನಿರ್ಮಾಣಮಾಡುವ ಪ್ರಯತ್ನ ನಡೆಸುತ್ತೀರಾ ಎಂಬ ಪ್ರಶ್ನೆಗೆ ನಮಗೆ ಜನರ ಸಮಸ್ಯೆಗಳು ಬಹಳ ಮುಖ್ಯ. ನಮ್ಮ ಮತ್ತು ಬೇರೆ ಪಕ್ಷಗಳ ಅಜೆಂಡಾ, ಪ್ರಣಾಳಿಕೆಗಳು ಮತ್ತು ಉದ್ಧೇಶಗಳು ಒಂದೇ ಆಗಿದ್ದರೆ ಕೈಜೋಡಿಸಬಹುದು. ಸದ್ಯ ನಮ್ಮ ಮುಂದೆ ಅಂತಹ ಆಯ್ಕೆಗಳಿಲ್ಲ ಎಂದು ಜಯಂತ್‌ ಚೌಧರಿ ಹೇಳುತ್ತಾರೆ.

ಇದನ್ನೂ ಓದಿ : ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದಲ್ಲಿ ಯಾವ ಪಾತ್ರ ವಹಿಸಬಹುದು? ಪಂಚಾಯತ ಚುನಾವಣೆಯಲ್ಲಿನ ಕಾಂಗ್ರೆಸ್‌ ನ ಕಳಪೆ ಪ್ರದರ್ಶನಗಳು ಅಸ್ಸೆಂಬ್ಲಿ ಚುನಾವಣೆಗಳ ಮೇಲೆ ಪ್ರಭಾವ ಬೀರಬಹುದೇ ? ಎಂಬ ಪ್ರಶ್ನೆಗೆ ಜಯಂತ್‌ ಯಾವುದೇ ಉತ್ತರಗಳನ್ನು ನೀಡಲು ನಿರಾಕರಿಸುತ್ತಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬದಲಾವಣೆ ಕುರಿತು, ಸಚಿವ ಸಂಪುಣ ವಿಸ್ತರಣೆಯ ಕುರಿತು ಕೇಳಿದಾಗ ಜಯಂತ್‌ ಯಾದವ್‌  “ಬಿಜೆಪಿಯು ತನ್ನ ಪಕ್ಷದ ಒಳಗಿನ ಆಂತರಿಕ ಸಮಸ್ಯೆಗಳನ್ನು ಮುಚ್ಚಿ ಹಾಕಿಕೊಳ್ಳಲೂ ಈ ಚರ್ಚೆಗಳನ್ನು ಹುಟ್ಟುಹಾಕಿದೆ. ಕೇವಲ ಒಬ್ಬರು ಇಬ್ಬರು ನಾಯಕರನ್ನು ಬದಲಾಯಿಸುವುದರಿಂದ ಸರ್ಕಾರದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ.  ಬಿಜೆಪಿಯ ಸರ್ಕಾರ ಜಾತಿ ಲೆಕ್ಕಾಚಾರದ ಗೋಜಲಾಗಿದೆ. ಯೋಗಿ ಸರ್ಕಾರ ಜನರಿಗೆ ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯಗಳನ್ನು ನೀಡಲು ವಿಫಲವಾಗಿದೆ. ಆರ್ಥಿಕ ಪ್ರಗತಿ ಬಿಜೆಪಿ ಅವಧಿಯಲ್ಲಿ ಕುಂಠಿತವಾಗಿದೆ. ಯೋಗಿ ಆದಿತ್ಯನಾಥ ಸರ್ಕಾರದ ಕೊರೋನಾ ನಿವರ್ವಹಣೆಯ ರೀತಿಯಿಂದ ನೂರಾರು ಜನರ ದೇಹ ನದಿಯಲ್ಲಿ ತೇಲಿ ಹೋಗುವಂತ ಕೆಟ್ಟ ದಿನಗಳನ್ನು ಉತ್ತರ ಪ್ರದೇಶ ನೋಡುವಂತಾಯಿತು. ಯೋಗಿ ಆದಿತ್ಯನಾಥ್‌ ಸರ್ಕಾರ ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ವಿಷಯವನ್ನೂ ಜನರ ಮುಂದೆ ಕೊಂಡೊಯ್ಯುತ್ತೇವೆ ಎಂದು ಜಯಂತ್‌ ಯಾದವ್‌ ಹೇಳಿದ್ದಾರೆ.

ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯ ಮುಖ್ಯ ವಿಷಯಗಳಾಗಬಹುದೇ? ಎಂಬ ಪ್ರಶ್ನೆಗೆ ಜಯಂತ್‌ ಚೌಧರಿ, ಖಂಡಿತ ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಪಂಚಾಯತ್‌ ಚುನಾವಣೆಗಳಲ್ಲಿಯೇ ಇದನ್ನು ಗಮನಿಸಹಬಹುದು. ಕೇಂದ್ರ ಸರ್ಕಾರದ ಮತ್ತು ಬಿಜೆಪಿಯ ರೈತ ವಿರೋಧಿ ನೀತಿ ವಿರುದ್ಧ ನಾವೆಲ್ಲರೂ ಉತ್ತರ ಪ್ರದೇಶದಲ್ಲಿ ಹೋರಾಟವನ್ನು ಮುಂದುವರೆಸಲಿದ್ದೇವೆ. ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ವೈಫಲ್ಯವನ್ನು ಎಳೆ ಎಳೆಯಾಗಿ ತೆರೆದಿಡುತ್ತೇವೆ. ರೈತರನ್ನು ಸಂಘಟಿಸಿ ಬಿಜೆಪಿ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದು ಜಯಂತ್‌ ಚೌಧರಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ತೀವ್ರ ಗೊಳ್ಳುತ್ತಿವೆ. ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ,  ರೈತ ಹೋರಾಟದ ಲಾಭ ಪಡೆಯುವ ಪ್ರಯತ್ನಗಳನ್ನು ಅನೇಕ ನಾಯಕರು ಮಾಡತೊಡಗಿದ್ದಾರೆ. ಅದೇ ಪ್ರಯತ್ನದಲ್ಲಿ ಆರ್‌ಎಲ್‌ಡಿ ನಾಯಕ ಜಯಂತ್‌ ಚೌಧರಿ ಕೂಡ ತೊಡಗಿರುವಂತೆ ತೋರುತ್ತದೆ.

ಇದನ್ನೂ ಓದಿ : ಅಂಬೇಡ್ಕರ್‌ ಇದ್ದಿದ್ದರೇ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...