Homeಮುಖಪುಟಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌...

ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ತಯಾರಿಗಳು ಸದ್ದಿಲ್ಲದೇ ನಡೆಯತೊಡಗಿವೆ. ಆಡಳಿತಾರೂಢ ಬಿಜೆಪಿಗೆ ಕೊರೋನಾ ಮತ್ತು ರೈತರ ಪ್ರತಿಭಟನೆಗಳು ಆತಂಕವನ್ನು ತಂದಿವೆ. ಅತ್ತ ವಿರೋಧ ಪಕ್ಷಗಳು ಕೂಡ ಉತ್ತರ ಪ್ರದೇಶ ಚುನಾವಣೆಗೆ ರಾಜಕೀಯ ತಂತ್ರಗಾರಿಕೆಯನ್ನು ಆರಂಭಿಸಿವೆ. ರೈತ ಹೋರಾಟಗಳಲ್ಲೂ ಕಾಣಿಸಿಕೊಳ್ಳುತ್ತಿವೆ. ಕೆಲವು ಪಕ್ಷಗಳು ರೈತರ ಜೊತೆ ನಿಂತಿವೆ.  ಹಾಗೆ ನಿಂತಿರುವ ಪಕ್ಷಗಳಲ್ಲಿ ಒಂದು ರಾಷ್ಟ್ರೀಯ ಲೋಕ ದಳ. ರಾಷ್ಟ್ರೀಯ ಲೋಕದಳದ ಅಧ್ಷಕ್ಷ ಜಯಂತ್‌ ಚೌಧರಿ ಬಿಜೆಪಿ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ರೈತರ ಬಗೆಗಿನ ಅಸಡ್ಡೆ ಮತ್ತು ತಿರಸ್ಕಾರ ಬಿಜೆಪಿಗೆ ಮುಳುವಾಗಲಿದೆ ಎಂದು ಅವರು  ವಾಗ್ದಾಳಿ ನಡೆಸಿದ್ದಾರೆ.  ಇನ್ನು ಬಿಜೆಪಿಯ ಲವ್‌ ಜಿಹಾದ್‌, ಗೋ ಹತ್ಯೆಯ ಹುಸಿ ನಾಟಕಗಳು ಅವರಿಗೆ ಚುನಾವಣೆಯ ಗೆಲುವನ್ನು ತಂದು ಕೊಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಜಯಂತ್‌ ಹೇಳುತ್ತಾರೆ.

ಆರೋಗ್ಯ ವ್ಯವಸ್ಥೆಯ ಸುಧಾರಣೆ. ಶಿಕ್ಷಣ ಮತ್ತು ಸಮತೋಲಿತ ಅಭಿವೃದ್ಧಿಗೆ ಮಾತ್ರ ಈ ಬಾರಿ ಯುಪಿಯ ಜನ ಮತ ಹಾಕಲಿದ್ದಾರೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ನಂತರ ದೇಶದ ಗಮನ ಉತ್ತರ ಪ್ರದೇಶದ ಕಡೆ ತಿರುಗುತ್ತಿರುವ ಈ ಹೊತ್ತಿನಲ್ಲಿ ಜಯಂತ್‌ ಚೌಧರಿ ಆರ್‌ಎಲ್‌ಡಿಯ ಹೊಸ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಯಂತ್‌ ಯಾದವ್‌ ತಮ್ಮ ಪಕ್ಷವು ಧರ್ಮ ಆಧಾರಿತ ಚುನಾವಣಾ ಪ್ರಚಾರಕ್ಕೆ ಮತ್ತು ಓಲೈಕೆಗೆ ಈ ಚುನಾವಣೆಯಲ್ಲಿ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ತಂದೆ ಅಜಿತ್‌ ಸಿಂಗ್‌ ಚೌಧರಿ ಮರಣದ ನಂತರ ಪಕ್ಷದ ಅಧಿಕಾರ  ಸ್ವೀಕರಿಸಿರುವ ಜಯಂತ್‌ ಚೌಧರಿ ತಮ್ಮ ಪಕ್ಷ ಮತ್ತು ಸಮಾಜವಾದಿ ಪಕ್ಷದ ಜೊತೆ ಉತ್ತಮ ಹೊಂದಾಣಿಕೆಯಿದೆ. ಮುಂದೆಯೂ ಅದೇ ಹೊಂದಾಣಿಕೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಮುಂದೆ ಉತ್ತರ ಪ್ರದೇಶದಲ್ಲಿ ಎಲ್ಲಾ ವಿರೋಧ ಪಕ್ಷಗಳನ್ನು ಒಳಗೊಂಡ ಮಹಾ ಘಟಬಂಧನ ಒಕ್ಕೂಟ ನಿರ್ಮಾಣಮಾಡುವ ಪ್ರಯತ್ನ ನಡೆಸುತ್ತೀರಾ ಎಂಬ ಪ್ರಶ್ನೆಗೆ ನಮಗೆ ಜನರ ಸಮಸ್ಯೆಗಳು ಬಹಳ ಮುಖ್ಯ. ನಮ್ಮ ಮತ್ತು ಬೇರೆ ಪಕ್ಷಗಳ ಅಜೆಂಡಾ, ಪ್ರಣಾಳಿಕೆಗಳು ಮತ್ತು ಉದ್ಧೇಶಗಳು ಒಂದೇ ಆಗಿದ್ದರೆ ಕೈಜೋಡಿಸಬಹುದು. ಸದ್ಯ ನಮ್ಮ ಮುಂದೆ ಅಂತಹ ಆಯ್ಕೆಗಳಿಲ್ಲ ಎಂದು ಜಯಂತ್‌ ಚೌಧರಿ ಹೇಳುತ್ತಾರೆ.

ಇದನ್ನೂ ಓದಿ : ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದಲ್ಲಿ ಯಾವ ಪಾತ್ರ ವಹಿಸಬಹುದು? ಪಂಚಾಯತ ಚುನಾವಣೆಯಲ್ಲಿನ ಕಾಂಗ್ರೆಸ್‌ ನ ಕಳಪೆ ಪ್ರದರ್ಶನಗಳು ಅಸ್ಸೆಂಬ್ಲಿ ಚುನಾವಣೆಗಳ ಮೇಲೆ ಪ್ರಭಾವ ಬೀರಬಹುದೇ ? ಎಂಬ ಪ್ರಶ್ನೆಗೆ ಜಯಂತ್‌ ಯಾವುದೇ ಉತ್ತರಗಳನ್ನು ನೀಡಲು ನಿರಾಕರಿಸುತ್ತಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬದಲಾವಣೆ ಕುರಿತು, ಸಚಿವ ಸಂಪುಣ ವಿಸ್ತರಣೆಯ ಕುರಿತು ಕೇಳಿದಾಗ ಜಯಂತ್‌ ಯಾದವ್‌  “ಬಿಜೆಪಿಯು ತನ್ನ ಪಕ್ಷದ ಒಳಗಿನ ಆಂತರಿಕ ಸಮಸ್ಯೆಗಳನ್ನು ಮುಚ್ಚಿ ಹಾಕಿಕೊಳ್ಳಲೂ ಈ ಚರ್ಚೆಗಳನ್ನು ಹುಟ್ಟುಹಾಕಿದೆ. ಕೇವಲ ಒಬ್ಬರು ಇಬ್ಬರು ನಾಯಕರನ್ನು ಬದಲಾಯಿಸುವುದರಿಂದ ಸರ್ಕಾರದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ.  ಬಿಜೆಪಿಯ ಸರ್ಕಾರ ಜಾತಿ ಲೆಕ್ಕಾಚಾರದ ಗೋಜಲಾಗಿದೆ. ಯೋಗಿ ಸರ್ಕಾರ ಜನರಿಗೆ ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯಗಳನ್ನು ನೀಡಲು ವಿಫಲವಾಗಿದೆ. ಆರ್ಥಿಕ ಪ್ರಗತಿ ಬಿಜೆಪಿ ಅವಧಿಯಲ್ಲಿ ಕುಂಠಿತವಾಗಿದೆ. ಯೋಗಿ ಆದಿತ್ಯನಾಥ ಸರ್ಕಾರದ ಕೊರೋನಾ ನಿವರ್ವಹಣೆಯ ರೀತಿಯಿಂದ ನೂರಾರು ಜನರ ದೇಹ ನದಿಯಲ್ಲಿ ತೇಲಿ ಹೋಗುವಂತ ಕೆಟ್ಟ ದಿನಗಳನ್ನು ಉತ್ತರ ಪ್ರದೇಶ ನೋಡುವಂತಾಯಿತು. ಯೋಗಿ ಆದಿತ್ಯನಾಥ್‌ ಸರ್ಕಾರ ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ವಿಷಯವನ್ನೂ ಜನರ ಮುಂದೆ ಕೊಂಡೊಯ್ಯುತ್ತೇವೆ ಎಂದು ಜಯಂತ್‌ ಯಾದವ್‌ ಹೇಳಿದ್ದಾರೆ.

ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯ ಮುಖ್ಯ ವಿಷಯಗಳಾಗಬಹುದೇ? ಎಂಬ ಪ್ರಶ್ನೆಗೆ ಜಯಂತ್‌ ಚೌಧರಿ, ಖಂಡಿತ ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಪಂಚಾಯತ್‌ ಚುನಾವಣೆಗಳಲ್ಲಿಯೇ ಇದನ್ನು ಗಮನಿಸಹಬಹುದು. ಕೇಂದ್ರ ಸರ್ಕಾರದ ಮತ್ತು ಬಿಜೆಪಿಯ ರೈತ ವಿರೋಧಿ ನೀತಿ ವಿರುದ್ಧ ನಾವೆಲ್ಲರೂ ಉತ್ತರ ಪ್ರದೇಶದಲ್ಲಿ ಹೋರಾಟವನ್ನು ಮುಂದುವರೆಸಲಿದ್ದೇವೆ. ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ವೈಫಲ್ಯವನ್ನು ಎಳೆ ಎಳೆಯಾಗಿ ತೆರೆದಿಡುತ್ತೇವೆ. ರೈತರನ್ನು ಸಂಘಟಿಸಿ ಬಿಜೆಪಿ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದು ಜಯಂತ್‌ ಚೌಧರಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ತೀವ್ರ ಗೊಳ್ಳುತ್ತಿವೆ. ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ,  ರೈತ ಹೋರಾಟದ ಲಾಭ ಪಡೆಯುವ ಪ್ರಯತ್ನಗಳನ್ನು ಅನೇಕ ನಾಯಕರು ಮಾಡತೊಡಗಿದ್ದಾರೆ. ಅದೇ ಪ್ರಯತ್ನದಲ್ಲಿ ಆರ್‌ಎಲ್‌ಡಿ ನಾಯಕ ಜಯಂತ್‌ ಚೌಧರಿ ಕೂಡ ತೊಡಗಿರುವಂತೆ ತೋರುತ್ತದೆ.

ಇದನ್ನೂ ಓದಿ : ಅಂಬೇಡ್ಕರ್‌ ಇದ್ದಿದ್ದರೇ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...