Homeಮುಖಪುಟಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌...

ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ತಯಾರಿಗಳು ಸದ್ದಿಲ್ಲದೇ ನಡೆಯತೊಡಗಿವೆ. ಆಡಳಿತಾರೂಢ ಬಿಜೆಪಿಗೆ ಕೊರೋನಾ ಮತ್ತು ರೈತರ ಪ್ರತಿಭಟನೆಗಳು ಆತಂಕವನ್ನು ತಂದಿವೆ. ಅತ್ತ ವಿರೋಧ ಪಕ್ಷಗಳು ಕೂಡ ಉತ್ತರ ಪ್ರದೇಶ ಚುನಾವಣೆಗೆ ರಾಜಕೀಯ ತಂತ್ರಗಾರಿಕೆಯನ್ನು ಆರಂಭಿಸಿವೆ. ರೈತ ಹೋರಾಟಗಳಲ್ಲೂ ಕಾಣಿಸಿಕೊಳ್ಳುತ್ತಿವೆ. ಕೆಲವು ಪಕ್ಷಗಳು ರೈತರ ಜೊತೆ ನಿಂತಿವೆ.  ಹಾಗೆ ನಿಂತಿರುವ ಪಕ್ಷಗಳಲ್ಲಿ ಒಂದು ರಾಷ್ಟ್ರೀಯ ಲೋಕ ದಳ. ರಾಷ್ಟ್ರೀಯ ಲೋಕದಳದ ಅಧ್ಷಕ್ಷ ಜಯಂತ್‌ ಚೌಧರಿ ಬಿಜೆಪಿ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ರೈತರ ಬಗೆಗಿನ ಅಸಡ್ಡೆ ಮತ್ತು ತಿರಸ್ಕಾರ ಬಿಜೆಪಿಗೆ ಮುಳುವಾಗಲಿದೆ ಎಂದು ಅವರು  ವಾಗ್ದಾಳಿ ನಡೆಸಿದ್ದಾರೆ.  ಇನ್ನು ಬಿಜೆಪಿಯ ಲವ್‌ ಜಿಹಾದ್‌, ಗೋ ಹತ್ಯೆಯ ಹುಸಿ ನಾಟಕಗಳು ಅವರಿಗೆ ಚುನಾವಣೆಯ ಗೆಲುವನ್ನು ತಂದು ಕೊಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಜಯಂತ್‌ ಹೇಳುತ್ತಾರೆ.

ಆರೋಗ್ಯ ವ್ಯವಸ್ಥೆಯ ಸುಧಾರಣೆ. ಶಿಕ್ಷಣ ಮತ್ತು ಸಮತೋಲಿತ ಅಭಿವೃದ್ಧಿಗೆ ಮಾತ್ರ ಈ ಬಾರಿ ಯುಪಿಯ ಜನ ಮತ ಹಾಕಲಿದ್ದಾರೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ನಂತರ ದೇಶದ ಗಮನ ಉತ್ತರ ಪ್ರದೇಶದ ಕಡೆ ತಿರುಗುತ್ತಿರುವ ಈ ಹೊತ್ತಿನಲ್ಲಿ ಜಯಂತ್‌ ಚೌಧರಿ ಆರ್‌ಎಲ್‌ಡಿಯ ಹೊಸ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಯಂತ್‌ ಯಾದವ್‌ ತಮ್ಮ ಪಕ್ಷವು ಧರ್ಮ ಆಧಾರಿತ ಚುನಾವಣಾ ಪ್ರಚಾರಕ್ಕೆ ಮತ್ತು ಓಲೈಕೆಗೆ ಈ ಚುನಾವಣೆಯಲ್ಲಿ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ತಂದೆ ಅಜಿತ್‌ ಸಿಂಗ್‌ ಚೌಧರಿ ಮರಣದ ನಂತರ ಪಕ್ಷದ ಅಧಿಕಾರ  ಸ್ವೀಕರಿಸಿರುವ ಜಯಂತ್‌ ಚೌಧರಿ ತಮ್ಮ ಪಕ್ಷ ಮತ್ತು ಸಮಾಜವಾದಿ ಪಕ್ಷದ ಜೊತೆ ಉತ್ತಮ ಹೊಂದಾಣಿಕೆಯಿದೆ. ಮುಂದೆಯೂ ಅದೇ ಹೊಂದಾಣಿಕೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಮುಂದೆ ಉತ್ತರ ಪ್ರದೇಶದಲ್ಲಿ ಎಲ್ಲಾ ವಿರೋಧ ಪಕ್ಷಗಳನ್ನು ಒಳಗೊಂಡ ಮಹಾ ಘಟಬಂಧನ ಒಕ್ಕೂಟ ನಿರ್ಮಾಣಮಾಡುವ ಪ್ರಯತ್ನ ನಡೆಸುತ್ತೀರಾ ಎಂಬ ಪ್ರಶ್ನೆಗೆ ನಮಗೆ ಜನರ ಸಮಸ್ಯೆಗಳು ಬಹಳ ಮುಖ್ಯ. ನಮ್ಮ ಮತ್ತು ಬೇರೆ ಪಕ್ಷಗಳ ಅಜೆಂಡಾ, ಪ್ರಣಾಳಿಕೆಗಳು ಮತ್ತು ಉದ್ಧೇಶಗಳು ಒಂದೇ ಆಗಿದ್ದರೆ ಕೈಜೋಡಿಸಬಹುದು. ಸದ್ಯ ನಮ್ಮ ಮುಂದೆ ಅಂತಹ ಆಯ್ಕೆಗಳಿಲ್ಲ ಎಂದು ಜಯಂತ್‌ ಚೌಧರಿ ಹೇಳುತ್ತಾರೆ.

ಇದನ್ನೂ ಓದಿ : ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದಲ್ಲಿ ಯಾವ ಪಾತ್ರ ವಹಿಸಬಹುದು? ಪಂಚಾಯತ ಚುನಾವಣೆಯಲ್ಲಿನ ಕಾಂಗ್ರೆಸ್‌ ನ ಕಳಪೆ ಪ್ರದರ್ಶನಗಳು ಅಸ್ಸೆಂಬ್ಲಿ ಚುನಾವಣೆಗಳ ಮೇಲೆ ಪ್ರಭಾವ ಬೀರಬಹುದೇ ? ಎಂಬ ಪ್ರಶ್ನೆಗೆ ಜಯಂತ್‌ ಯಾವುದೇ ಉತ್ತರಗಳನ್ನು ನೀಡಲು ನಿರಾಕರಿಸುತ್ತಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬದಲಾವಣೆ ಕುರಿತು, ಸಚಿವ ಸಂಪುಣ ವಿಸ್ತರಣೆಯ ಕುರಿತು ಕೇಳಿದಾಗ ಜಯಂತ್‌ ಯಾದವ್‌  “ಬಿಜೆಪಿಯು ತನ್ನ ಪಕ್ಷದ ಒಳಗಿನ ಆಂತರಿಕ ಸಮಸ್ಯೆಗಳನ್ನು ಮುಚ್ಚಿ ಹಾಕಿಕೊಳ್ಳಲೂ ಈ ಚರ್ಚೆಗಳನ್ನು ಹುಟ್ಟುಹಾಕಿದೆ. ಕೇವಲ ಒಬ್ಬರು ಇಬ್ಬರು ನಾಯಕರನ್ನು ಬದಲಾಯಿಸುವುದರಿಂದ ಸರ್ಕಾರದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ.  ಬಿಜೆಪಿಯ ಸರ್ಕಾರ ಜಾತಿ ಲೆಕ್ಕಾಚಾರದ ಗೋಜಲಾಗಿದೆ. ಯೋಗಿ ಸರ್ಕಾರ ಜನರಿಗೆ ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯಗಳನ್ನು ನೀಡಲು ವಿಫಲವಾಗಿದೆ. ಆರ್ಥಿಕ ಪ್ರಗತಿ ಬಿಜೆಪಿ ಅವಧಿಯಲ್ಲಿ ಕುಂಠಿತವಾಗಿದೆ. ಯೋಗಿ ಆದಿತ್ಯನಾಥ ಸರ್ಕಾರದ ಕೊರೋನಾ ನಿವರ್ವಹಣೆಯ ರೀತಿಯಿಂದ ನೂರಾರು ಜನರ ದೇಹ ನದಿಯಲ್ಲಿ ತೇಲಿ ಹೋಗುವಂತ ಕೆಟ್ಟ ದಿನಗಳನ್ನು ಉತ್ತರ ಪ್ರದೇಶ ನೋಡುವಂತಾಯಿತು. ಯೋಗಿ ಆದಿತ್ಯನಾಥ್‌ ಸರ್ಕಾರ ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ವಿಷಯವನ್ನೂ ಜನರ ಮುಂದೆ ಕೊಂಡೊಯ್ಯುತ್ತೇವೆ ಎಂದು ಜಯಂತ್‌ ಯಾದವ್‌ ಹೇಳಿದ್ದಾರೆ.

ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯ ಮುಖ್ಯ ವಿಷಯಗಳಾಗಬಹುದೇ? ಎಂಬ ಪ್ರಶ್ನೆಗೆ ಜಯಂತ್‌ ಚೌಧರಿ, ಖಂಡಿತ ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಪಂಚಾಯತ್‌ ಚುನಾವಣೆಗಳಲ್ಲಿಯೇ ಇದನ್ನು ಗಮನಿಸಹಬಹುದು. ಕೇಂದ್ರ ಸರ್ಕಾರದ ಮತ್ತು ಬಿಜೆಪಿಯ ರೈತ ವಿರೋಧಿ ನೀತಿ ವಿರುದ್ಧ ನಾವೆಲ್ಲರೂ ಉತ್ತರ ಪ್ರದೇಶದಲ್ಲಿ ಹೋರಾಟವನ್ನು ಮುಂದುವರೆಸಲಿದ್ದೇವೆ. ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ವೈಫಲ್ಯವನ್ನು ಎಳೆ ಎಳೆಯಾಗಿ ತೆರೆದಿಡುತ್ತೇವೆ. ರೈತರನ್ನು ಸಂಘಟಿಸಿ ಬಿಜೆಪಿ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದು ಜಯಂತ್‌ ಚೌಧರಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ತೀವ್ರ ಗೊಳ್ಳುತ್ತಿವೆ. ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ,  ರೈತ ಹೋರಾಟದ ಲಾಭ ಪಡೆಯುವ ಪ್ರಯತ್ನಗಳನ್ನು ಅನೇಕ ನಾಯಕರು ಮಾಡತೊಡಗಿದ್ದಾರೆ. ಅದೇ ಪ್ರಯತ್ನದಲ್ಲಿ ಆರ್‌ಎಲ್‌ಡಿ ನಾಯಕ ಜಯಂತ್‌ ಚೌಧರಿ ಕೂಡ ತೊಡಗಿರುವಂತೆ ತೋರುತ್ತದೆ.

ಇದನ್ನೂ ಓದಿ : ಅಂಬೇಡ್ಕರ್‌ ಇದ್ದಿದ್ದರೇ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...