Homeಮುಖಪುಟಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌...

ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ತಯಾರಿಗಳು ಸದ್ದಿಲ್ಲದೇ ನಡೆಯತೊಡಗಿವೆ. ಆಡಳಿತಾರೂಢ ಬಿಜೆಪಿಗೆ ಕೊರೋನಾ ಮತ್ತು ರೈತರ ಪ್ರತಿಭಟನೆಗಳು ಆತಂಕವನ್ನು ತಂದಿವೆ. ಅತ್ತ ವಿರೋಧ ಪಕ್ಷಗಳು ಕೂಡ ಉತ್ತರ ಪ್ರದೇಶ ಚುನಾವಣೆಗೆ ರಾಜಕೀಯ ತಂತ್ರಗಾರಿಕೆಯನ್ನು ಆರಂಭಿಸಿವೆ. ರೈತ ಹೋರಾಟಗಳಲ್ಲೂ ಕಾಣಿಸಿಕೊಳ್ಳುತ್ತಿವೆ. ಕೆಲವು ಪಕ್ಷಗಳು ರೈತರ ಜೊತೆ ನಿಂತಿವೆ.  ಹಾಗೆ ನಿಂತಿರುವ ಪಕ್ಷಗಳಲ್ಲಿ ಒಂದು ರಾಷ್ಟ್ರೀಯ ಲೋಕ ದಳ. ರಾಷ್ಟ್ರೀಯ ಲೋಕದಳದ ಅಧ್ಷಕ್ಷ ಜಯಂತ್‌ ಚೌಧರಿ ಬಿಜೆಪಿ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ರೈತರ ಬಗೆಗಿನ ಅಸಡ್ಡೆ ಮತ್ತು ತಿರಸ್ಕಾರ ಬಿಜೆಪಿಗೆ ಮುಳುವಾಗಲಿದೆ ಎಂದು ಅವರು  ವಾಗ್ದಾಳಿ ನಡೆಸಿದ್ದಾರೆ.  ಇನ್ನು ಬಿಜೆಪಿಯ ಲವ್‌ ಜಿಹಾದ್‌, ಗೋ ಹತ್ಯೆಯ ಹುಸಿ ನಾಟಕಗಳು ಅವರಿಗೆ ಚುನಾವಣೆಯ ಗೆಲುವನ್ನು ತಂದು ಕೊಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಜಯಂತ್‌ ಹೇಳುತ್ತಾರೆ.

ಆರೋಗ್ಯ ವ್ಯವಸ್ಥೆಯ ಸುಧಾರಣೆ. ಶಿಕ್ಷಣ ಮತ್ತು ಸಮತೋಲಿತ ಅಭಿವೃದ್ಧಿಗೆ ಮಾತ್ರ ಈ ಬಾರಿ ಯುಪಿಯ ಜನ ಮತ ಹಾಕಲಿದ್ದಾರೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ನಂತರ ದೇಶದ ಗಮನ ಉತ್ತರ ಪ್ರದೇಶದ ಕಡೆ ತಿರುಗುತ್ತಿರುವ ಈ ಹೊತ್ತಿನಲ್ಲಿ ಜಯಂತ್‌ ಚೌಧರಿ ಆರ್‌ಎಲ್‌ಡಿಯ ಹೊಸ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಯಂತ್‌ ಯಾದವ್‌ ತಮ್ಮ ಪಕ್ಷವು ಧರ್ಮ ಆಧಾರಿತ ಚುನಾವಣಾ ಪ್ರಚಾರಕ್ಕೆ ಮತ್ತು ಓಲೈಕೆಗೆ ಈ ಚುನಾವಣೆಯಲ್ಲಿ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ತಂದೆ ಅಜಿತ್‌ ಸಿಂಗ್‌ ಚೌಧರಿ ಮರಣದ ನಂತರ ಪಕ್ಷದ ಅಧಿಕಾರ  ಸ್ವೀಕರಿಸಿರುವ ಜಯಂತ್‌ ಚೌಧರಿ ತಮ್ಮ ಪಕ್ಷ ಮತ್ತು ಸಮಾಜವಾದಿ ಪಕ್ಷದ ಜೊತೆ ಉತ್ತಮ ಹೊಂದಾಣಿಕೆಯಿದೆ. ಮುಂದೆಯೂ ಅದೇ ಹೊಂದಾಣಿಕೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಮುಂದೆ ಉತ್ತರ ಪ್ರದೇಶದಲ್ಲಿ ಎಲ್ಲಾ ವಿರೋಧ ಪಕ್ಷಗಳನ್ನು ಒಳಗೊಂಡ ಮಹಾ ಘಟಬಂಧನ ಒಕ್ಕೂಟ ನಿರ್ಮಾಣಮಾಡುವ ಪ್ರಯತ್ನ ನಡೆಸುತ್ತೀರಾ ಎಂಬ ಪ್ರಶ್ನೆಗೆ ನಮಗೆ ಜನರ ಸಮಸ್ಯೆಗಳು ಬಹಳ ಮುಖ್ಯ. ನಮ್ಮ ಮತ್ತು ಬೇರೆ ಪಕ್ಷಗಳ ಅಜೆಂಡಾ, ಪ್ರಣಾಳಿಕೆಗಳು ಮತ್ತು ಉದ್ಧೇಶಗಳು ಒಂದೇ ಆಗಿದ್ದರೆ ಕೈಜೋಡಿಸಬಹುದು. ಸದ್ಯ ನಮ್ಮ ಮುಂದೆ ಅಂತಹ ಆಯ್ಕೆಗಳಿಲ್ಲ ಎಂದು ಜಯಂತ್‌ ಚೌಧರಿ ಹೇಳುತ್ತಾರೆ.

ಇದನ್ನೂ ಓದಿ : ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದಲ್ಲಿ ಯಾವ ಪಾತ್ರ ವಹಿಸಬಹುದು? ಪಂಚಾಯತ ಚುನಾವಣೆಯಲ್ಲಿನ ಕಾಂಗ್ರೆಸ್‌ ನ ಕಳಪೆ ಪ್ರದರ್ಶನಗಳು ಅಸ್ಸೆಂಬ್ಲಿ ಚುನಾವಣೆಗಳ ಮೇಲೆ ಪ್ರಭಾವ ಬೀರಬಹುದೇ ? ಎಂಬ ಪ್ರಶ್ನೆಗೆ ಜಯಂತ್‌ ಯಾವುದೇ ಉತ್ತರಗಳನ್ನು ನೀಡಲು ನಿರಾಕರಿಸುತ್ತಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬದಲಾವಣೆ ಕುರಿತು, ಸಚಿವ ಸಂಪುಣ ವಿಸ್ತರಣೆಯ ಕುರಿತು ಕೇಳಿದಾಗ ಜಯಂತ್‌ ಯಾದವ್‌  “ಬಿಜೆಪಿಯು ತನ್ನ ಪಕ್ಷದ ಒಳಗಿನ ಆಂತರಿಕ ಸಮಸ್ಯೆಗಳನ್ನು ಮುಚ್ಚಿ ಹಾಕಿಕೊಳ್ಳಲೂ ಈ ಚರ್ಚೆಗಳನ್ನು ಹುಟ್ಟುಹಾಕಿದೆ. ಕೇವಲ ಒಬ್ಬರು ಇಬ್ಬರು ನಾಯಕರನ್ನು ಬದಲಾಯಿಸುವುದರಿಂದ ಸರ್ಕಾರದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ.  ಬಿಜೆಪಿಯ ಸರ್ಕಾರ ಜಾತಿ ಲೆಕ್ಕಾಚಾರದ ಗೋಜಲಾಗಿದೆ. ಯೋಗಿ ಸರ್ಕಾರ ಜನರಿಗೆ ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯಗಳನ್ನು ನೀಡಲು ವಿಫಲವಾಗಿದೆ. ಆರ್ಥಿಕ ಪ್ರಗತಿ ಬಿಜೆಪಿ ಅವಧಿಯಲ್ಲಿ ಕುಂಠಿತವಾಗಿದೆ. ಯೋಗಿ ಆದಿತ್ಯನಾಥ ಸರ್ಕಾರದ ಕೊರೋನಾ ನಿವರ್ವಹಣೆಯ ರೀತಿಯಿಂದ ನೂರಾರು ಜನರ ದೇಹ ನದಿಯಲ್ಲಿ ತೇಲಿ ಹೋಗುವಂತ ಕೆಟ್ಟ ದಿನಗಳನ್ನು ಉತ್ತರ ಪ್ರದೇಶ ನೋಡುವಂತಾಯಿತು. ಯೋಗಿ ಆದಿತ್ಯನಾಥ್‌ ಸರ್ಕಾರ ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ವಿಷಯವನ್ನೂ ಜನರ ಮುಂದೆ ಕೊಂಡೊಯ್ಯುತ್ತೇವೆ ಎಂದು ಜಯಂತ್‌ ಯಾದವ್‌ ಹೇಳಿದ್ದಾರೆ.

ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯ ಮುಖ್ಯ ವಿಷಯಗಳಾಗಬಹುದೇ? ಎಂಬ ಪ್ರಶ್ನೆಗೆ ಜಯಂತ್‌ ಚೌಧರಿ, ಖಂಡಿತ ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಪಂಚಾಯತ್‌ ಚುನಾವಣೆಗಳಲ್ಲಿಯೇ ಇದನ್ನು ಗಮನಿಸಹಬಹುದು. ಕೇಂದ್ರ ಸರ್ಕಾರದ ಮತ್ತು ಬಿಜೆಪಿಯ ರೈತ ವಿರೋಧಿ ನೀತಿ ವಿರುದ್ಧ ನಾವೆಲ್ಲರೂ ಉತ್ತರ ಪ್ರದೇಶದಲ್ಲಿ ಹೋರಾಟವನ್ನು ಮುಂದುವರೆಸಲಿದ್ದೇವೆ. ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ವೈಫಲ್ಯವನ್ನು ಎಳೆ ಎಳೆಯಾಗಿ ತೆರೆದಿಡುತ್ತೇವೆ. ರೈತರನ್ನು ಸಂಘಟಿಸಿ ಬಿಜೆಪಿ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದು ಜಯಂತ್‌ ಚೌಧರಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ತೀವ್ರ ಗೊಳ್ಳುತ್ತಿವೆ. ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ,  ರೈತ ಹೋರಾಟದ ಲಾಭ ಪಡೆಯುವ ಪ್ರಯತ್ನಗಳನ್ನು ಅನೇಕ ನಾಯಕರು ಮಾಡತೊಡಗಿದ್ದಾರೆ. ಅದೇ ಪ್ರಯತ್ನದಲ್ಲಿ ಆರ್‌ಎಲ್‌ಡಿ ನಾಯಕ ಜಯಂತ್‌ ಚೌಧರಿ ಕೂಡ ತೊಡಗಿರುವಂತೆ ತೋರುತ್ತದೆ.

ಇದನ್ನೂ ಓದಿ : ಅಂಬೇಡ್ಕರ್‌ ಇದ್ದಿದ್ದರೇ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...