Homeಮುಖಪುಟಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌...

ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ತಯಾರಿಗಳು ಸದ್ದಿಲ್ಲದೇ ನಡೆಯತೊಡಗಿವೆ. ಆಡಳಿತಾರೂಢ ಬಿಜೆಪಿಗೆ ಕೊರೋನಾ ಮತ್ತು ರೈತರ ಪ್ರತಿಭಟನೆಗಳು ಆತಂಕವನ್ನು ತಂದಿವೆ. ಅತ್ತ ವಿರೋಧ ಪಕ್ಷಗಳು ಕೂಡ ಉತ್ತರ ಪ್ರದೇಶ ಚುನಾವಣೆಗೆ ರಾಜಕೀಯ ತಂತ್ರಗಾರಿಕೆಯನ್ನು ಆರಂಭಿಸಿವೆ. ರೈತ ಹೋರಾಟಗಳಲ್ಲೂ ಕಾಣಿಸಿಕೊಳ್ಳುತ್ತಿವೆ. ಕೆಲವು ಪಕ್ಷಗಳು ರೈತರ ಜೊತೆ ನಿಂತಿವೆ.  ಹಾಗೆ ನಿಂತಿರುವ ಪಕ್ಷಗಳಲ್ಲಿ ಒಂದು ರಾಷ್ಟ್ರೀಯ ಲೋಕ ದಳ. ರಾಷ್ಟ್ರೀಯ ಲೋಕದಳದ ಅಧ್ಷಕ್ಷ ಜಯಂತ್‌ ಚೌಧರಿ ಬಿಜೆಪಿ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ರೈತರ ಬಗೆಗಿನ ಅಸಡ್ಡೆ ಮತ್ತು ತಿರಸ್ಕಾರ ಬಿಜೆಪಿಗೆ ಮುಳುವಾಗಲಿದೆ ಎಂದು ಅವರು  ವಾಗ್ದಾಳಿ ನಡೆಸಿದ್ದಾರೆ.  ಇನ್ನು ಬಿಜೆಪಿಯ ಲವ್‌ ಜಿಹಾದ್‌, ಗೋ ಹತ್ಯೆಯ ಹುಸಿ ನಾಟಕಗಳು ಅವರಿಗೆ ಚುನಾವಣೆಯ ಗೆಲುವನ್ನು ತಂದು ಕೊಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಜಯಂತ್‌ ಹೇಳುತ್ತಾರೆ.

ಆರೋಗ್ಯ ವ್ಯವಸ್ಥೆಯ ಸುಧಾರಣೆ. ಶಿಕ್ಷಣ ಮತ್ತು ಸಮತೋಲಿತ ಅಭಿವೃದ್ಧಿಗೆ ಮಾತ್ರ ಈ ಬಾರಿ ಯುಪಿಯ ಜನ ಮತ ಹಾಕಲಿದ್ದಾರೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ನಂತರ ದೇಶದ ಗಮನ ಉತ್ತರ ಪ್ರದೇಶದ ಕಡೆ ತಿರುಗುತ್ತಿರುವ ಈ ಹೊತ್ತಿನಲ್ಲಿ ಜಯಂತ್‌ ಚೌಧರಿ ಆರ್‌ಎಲ್‌ಡಿಯ ಹೊಸ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಯಂತ್‌ ಯಾದವ್‌ ತಮ್ಮ ಪಕ್ಷವು ಧರ್ಮ ಆಧಾರಿತ ಚುನಾವಣಾ ಪ್ರಚಾರಕ್ಕೆ ಮತ್ತು ಓಲೈಕೆಗೆ ಈ ಚುನಾವಣೆಯಲ್ಲಿ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ತಂದೆ ಅಜಿತ್‌ ಸಿಂಗ್‌ ಚೌಧರಿ ಮರಣದ ನಂತರ ಪಕ್ಷದ ಅಧಿಕಾರ  ಸ್ವೀಕರಿಸಿರುವ ಜಯಂತ್‌ ಚೌಧರಿ ತಮ್ಮ ಪಕ್ಷ ಮತ್ತು ಸಮಾಜವಾದಿ ಪಕ್ಷದ ಜೊತೆ ಉತ್ತಮ ಹೊಂದಾಣಿಕೆಯಿದೆ. ಮುಂದೆಯೂ ಅದೇ ಹೊಂದಾಣಿಕೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಮುಂದೆ ಉತ್ತರ ಪ್ರದೇಶದಲ್ಲಿ ಎಲ್ಲಾ ವಿರೋಧ ಪಕ್ಷಗಳನ್ನು ಒಳಗೊಂಡ ಮಹಾ ಘಟಬಂಧನ ಒಕ್ಕೂಟ ನಿರ್ಮಾಣಮಾಡುವ ಪ್ರಯತ್ನ ನಡೆಸುತ್ತೀರಾ ಎಂಬ ಪ್ರಶ್ನೆಗೆ ನಮಗೆ ಜನರ ಸಮಸ್ಯೆಗಳು ಬಹಳ ಮುಖ್ಯ. ನಮ್ಮ ಮತ್ತು ಬೇರೆ ಪಕ್ಷಗಳ ಅಜೆಂಡಾ, ಪ್ರಣಾಳಿಕೆಗಳು ಮತ್ತು ಉದ್ಧೇಶಗಳು ಒಂದೇ ಆಗಿದ್ದರೆ ಕೈಜೋಡಿಸಬಹುದು. ಸದ್ಯ ನಮ್ಮ ಮುಂದೆ ಅಂತಹ ಆಯ್ಕೆಗಳಿಲ್ಲ ಎಂದು ಜಯಂತ್‌ ಚೌಧರಿ ಹೇಳುತ್ತಾರೆ.

ಇದನ್ನೂ ಓದಿ : ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದಲ್ಲಿ ಯಾವ ಪಾತ್ರ ವಹಿಸಬಹುದು? ಪಂಚಾಯತ ಚುನಾವಣೆಯಲ್ಲಿನ ಕಾಂಗ್ರೆಸ್‌ ನ ಕಳಪೆ ಪ್ರದರ್ಶನಗಳು ಅಸ್ಸೆಂಬ್ಲಿ ಚುನಾವಣೆಗಳ ಮೇಲೆ ಪ್ರಭಾವ ಬೀರಬಹುದೇ ? ಎಂಬ ಪ್ರಶ್ನೆಗೆ ಜಯಂತ್‌ ಯಾವುದೇ ಉತ್ತರಗಳನ್ನು ನೀಡಲು ನಿರಾಕರಿಸುತ್ತಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬದಲಾವಣೆ ಕುರಿತು, ಸಚಿವ ಸಂಪುಣ ವಿಸ್ತರಣೆಯ ಕುರಿತು ಕೇಳಿದಾಗ ಜಯಂತ್‌ ಯಾದವ್‌  “ಬಿಜೆಪಿಯು ತನ್ನ ಪಕ್ಷದ ಒಳಗಿನ ಆಂತರಿಕ ಸಮಸ್ಯೆಗಳನ್ನು ಮುಚ್ಚಿ ಹಾಕಿಕೊಳ್ಳಲೂ ಈ ಚರ್ಚೆಗಳನ್ನು ಹುಟ್ಟುಹಾಕಿದೆ. ಕೇವಲ ಒಬ್ಬರು ಇಬ್ಬರು ನಾಯಕರನ್ನು ಬದಲಾಯಿಸುವುದರಿಂದ ಸರ್ಕಾರದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ.  ಬಿಜೆಪಿಯ ಸರ್ಕಾರ ಜಾತಿ ಲೆಕ್ಕಾಚಾರದ ಗೋಜಲಾಗಿದೆ. ಯೋಗಿ ಸರ್ಕಾರ ಜನರಿಗೆ ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯಗಳನ್ನು ನೀಡಲು ವಿಫಲವಾಗಿದೆ. ಆರ್ಥಿಕ ಪ್ರಗತಿ ಬಿಜೆಪಿ ಅವಧಿಯಲ್ಲಿ ಕುಂಠಿತವಾಗಿದೆ. ಯೋಗಿ ಆದಿತ್ಯನಾಥ ಸರ್ಕಾರದ ಕೊರೋನಾ ನಿವರ್ವಹಣೆಯ ರೀತಿಯಿಂದ ನೂರಾರು ಜನರ ದೇಹ ನದಿಯಲ್ಲಿ ತೇಲಿ ಹೋಗುವಂತ ಕೆಟ್ಟ ದಿನಗಳನ್ನು ಉತ್ತರ ಪ್ರದೇಶ ನೋಡುವಂತಾಯಿತು. ಯೋಗಿ ಆದಿತ್ಯನಾಥ್‌ ಸರ್ಕಾರ ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ವಿಷಯವನ್ನೂ ಜನರ ಮುಂದೆ ಕೊಂಡೊಯ್ಯುತ್ತೇವೆ ಎಂದು ಜಯಂತ್‌ ಯಾದವ್‌ ಹೇಳಿದ್ದಾರೆ.

ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯ ಮುಖ್ಯ ವಿಷಯಗಳಾಗಬಹುದೇ? ಎಂಬ ಪ್ರಶ್ನೆಗೆ ಜಯಂತ್‌ ಚೌಧರಿ, ಖಂಡಿತ ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಪಂಚಾಯತ್‌ ಚುನಾವಣೆಗಳಲ್ಲಿಯೇ ಇದನ್ನು ಗಮನಿಸಹಬಹುದು. ಕೇಂದ್ರ ಸರ್ಕಾರದ ಮತ್ತು ಬಿಜೆಪಿಯ ರೈತ ವಿರೋಧಿ ನೀತಿ ವಿರುದ್ಧ ನಾವೆಲ್ಲರೂ ಉತ್ತರ ಪ್ರದೇಶದಲ್ಲಿ ಹೋರಾಟವನ್ನು ಮುಂದುವರೆಸಲಿದ್ದೇವೆ. ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ವೈಫಲ್ಯವನ್ನು ಎಳೆ ಎಳೆಯಾಗಿ ತೆರೆದಿಡುತ್ತೇವೆ. ರೈತರನ್ನು ಸಂಘಟಿಸಿ ಬಿಜೆಪಿ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದು ಜಯಂತ್‌ ಚೌಧರಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ತೀವ್ರ ಗೊಳ್ಳುತ್ತಿವೆ. ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ,  ರೈತ ಹೋರಾಟದ ಲಾಭ ಪಡೆಯುವ ಪ್ರಯತ್ನಗಳನ್ನು ಅನೇಕ ನಾಯಕರು ಮಾಡತೊಡಗಿದ್ದಾರೆ. ಅದೇ ಪ್ರಯತ್ನದಲ್ಲಿ ಆರ್‌ಎಲ್‌ಡಿ ನಾಯಕ ಜಯಂತ್‌ ಚೌಧರಿ ಕೂಡ ತೊಡಗಿರುವಂತೆ ತೋರುತ್ತದೆ.

ಇದನ್ನೂ ಓದಿ : ಅಂಬೇಡ್ಕರ್‌ ಇದ್ದಿದ್ದರೇ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...