Homeಮುಖಪುಟಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌...

ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ತಯಾರಿಗಳು ಸದ್ದಿಲ್ಲದೇ ನಡೆಯತೊಡಗಿವೆ. ಆಡಳಿತಾರೂಢ ಬಿಜೆಪಿಗೆ ಕೊರೋನಾ ಮತ್ತು ರೈತರ ಪ್ರತಿಭಟನೆಗಳು ಆತಂಕವನ್ನು ತಂದಿವೆ. ಅತ್ತ ವಿರೋಧ ಪಕ್ಷಗಳು ಕೂಡ ಉತ್ತರ ಪ್ರದೇಶ ಚುನಾವಣೆಗೆ ರಾಜಕೀಯ ತಂತ್ರಗಾರಿಕೆಯನ್ನು ಆರಂಭಿಸಿವೆ. ರೈತ ಹೋರಾಟಗಳಲ್ಲೂ ಕಾಣಿಸಿಕೊಳ್ಳುತ್ತಿವೆ. ಕೆಲವು ಪಕ್ಷಗಳು ರೈತರ ಜೊತೆ ನಿಂತಿವೆ.  ಹಾಗೆ ನಿಂತಿರುವ ಪಕ್ಷಗಳಲ್ಲಿ ಒಂದು ರಾಷ್ಟ್ರೀಯ ಲೋಕ ದಳ. ರಾಷ್ಟ್ರೀಯ ಲೋಕದಳದ ಅಧ್ಷಕ್ಷ ಜಯಂತ್‌ ಚೌಧರಿ ಬಿಜೆಪಿ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ರೈತರ ಬಗೆಗಿನ ಅಸಡ್ಡೆ ಮತ್ತು ತಿರಸ್ಕಾರ ಬಿಜೆಪಿಗೆ ಮುಳುವಾಗಲಿದೆ ಎಂದು ಅವರು  ವಾಗ್ದಾಳಿ ನಡೆಸಿದ್ದಾರೆ.  ಇನ್ನು ಬಿಜೆಪಿಯ ಲವ್‌ ಜಿಹಾದ್‌, ಗೋ ಹತ್ಯೆಯ ಹುಸಿ ನಾಟಕಗಳು ಅವರಿಗೆ ಚುನಾವಣೆಯ ಗೆಲುವನ್ನು ತಂದು ಕೊಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಜಯಂತ್‌ ಹೇಳುತ್ತಾರೆ.

ಆರೋಗ್ಯ ವ್ಯವಸ್ಥೆಯ ಸುಧಾರಣೆ. ಶಿಕ್ಷಣ ಮತ್ತು ಸಮತೋಲಿತ ಅಭಿವೃದ್ಧಿಗೆ ಮಾತ್ರ ಈ ಬಾರಿ ಯುಪಿಯ ಜನ ಮತ ಹಾಕಲಿದ್ದಾರೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ನಂತರ ದೇಶದ ಗಮನ ಉತ್ತರ ಪ್ರದೇಶದ ಕಡೆ ತಿರುಗುತ್ತಿರುವ ಈ ಹೊತ್ತಿನಲ್ಲಿ ಜಯಂತ್‌ ಚೌಧರಿ ಆರ್‌ಎಲ್‌ಡಿಯ ಹೊಸ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಯಂತ್‌ ಯಾದವ್‌ ತಮ್ಮ ಪಕ್ಷವು ಧರ್ಮ ಆಧಾರಿತ ಚುನಾವಣಾ ಪ್ರಚಾರಕ್ಕೆ ಮತ್ತು ಓಲೈಕೆಗೆ ಈ ಚುನಾವಣೆಯಲ್ಲಿ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ತಂದೆ ಅಜಿತ್‌ ಸಿಂಗ್‌ ಚೌಧರಿ ಮರಣದ ನಂತರ ಪಕ್ಷದ ಅಧಿಕಾರ  ಸ್ವೀಕರಿಸಿರುವ ಜಯಂತ್‌ ಚೌಧರಿ ತಮ್ಮ ಪಕ್ಷ ಮತ್ತು ಸಮಾಜವಾದಿ ಪಕ್ಷದ ಜೊತೆ ಉತ್ತಮ ಹೊಂದಾಣಿಕೆಯಿದೆ. ಮುಂದೆಯೂ ಅದೇ ಹೊಂದಾಣಿಕೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಮುಂದೆ ಉತ್ತರ ಪ್ರದೇಶದಲ್ಲಿ ಎಲ್ಲಾ ವಿರೋಧ ಪಕ್ಷಗಳನ್ನು ಒಳಗೊಂಡ ಮಹಾ ಘಟಬಂಧನ ಒಕ್ಕೂಟ ನಿರ್ಮಾಣಮಾಡುವ ಪ್ರಯತ್ನ ನಡೆಸುತ್ತೀರಾ ಎಂಬ ಪ್ರಶ್ನೆಗೆ ನಮಗೆ ಜನರ ಸಮಸ್ಯೆಗಳು ಬಹಳ ಮುಖ್ಯ. ನಮ್ಮ ಮತ್ತು ಬೇರೆ ಪಕ್ಷಗಳ ಅಜೆಂಡಾ, ಪ್ರಣಾಳಿಕೆಗಳು ಮತ್ತು ಉದ್ಧೇಶಗಳು ಒಂದೇ ಆಗಿದ್ದರೆ ಕೈಜೋಡಿಸಬಹುದು. ಸದ್ಯ ನಮ್ಮ ಮುಂದೆ ಅಂತಹ ಆಯ್ಕೆಗಳಿಲ್ಲ ಎಂದು ಜಯಂತ್‌ ಚೌಧರಿ ಹೇಳುತ್ತಾರೆ.

ಇದನ್ನೂ ಓದಿ : ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದಲ್ಲಿ ಯಾವ ಪಾತ್ರ ವಹಿಸಬಹುದು? ಪಂಚಾಯತ ಚುನಾವಣೆಯಲ್ಲಿನ ಕಾಂಗ್ರೆಸ್‌ ನ ಕಳಪೆ ಪ್ರದರ್ಶನಗಳು ಅಸ್ಸೆಂಬ್ಲಿ ಚುನಾವಣೆಗಳ ಮೇಲೆ ಪ್ರಭಾವ ಬೀರಬಹುದೇ ? ಎಂಬ ಪ್ರಶ್ನೆಗೆ ಜಯಂತ್‌ ಯಾವುದೇ ಉತ್ತರಗಳನ್ನು ನೀಡಲು ನಿರಾಕರಿಸುತ್ತಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬದಲಾವಣೆ ಕುರಿತು, ಸಚಿವ ಸಂಪುಣ ವಿಸ್ತರಣೆಯ ಕುರಿತು ಕೇಳಿದಾಗ ಜಯಂತ್‌ ಯಾದವ್‌  “ಬಿಜೆಪಿಯು ತನ್ನ ಪಕ್ಷದ ಒಳಗಿನ ಆಂತರಿಕ ಸಮಸ್ಯೆಗಳನ್ನು ಮುಚ್ಚಿ ಹಾಕಿಕೊಳ್ಳಲೂ ಈ ಚರ್ಚೆಗಳನ್ನು ಹುಟ್ಟುಹಾಕಿದೆ. ಕೇವಲ ಒಬ್ಬರು ಇಬ್ಬರು ನಾಯಕರನ್ನು ಬದಲಾಯಿಸುವುದರಿಂದ ಸರ್ಕಾರದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ.  ಬಿಜೆಪಿಯ ಸರ್ಕಾರ ಜಾತಿ ಲೆಕ್ಕಾಚಾರದ ಗೋಜಲಾಗಿದೆ. ಯೋಗಿ ಸರ್ಕಾರ ಜನರಿಗೆ ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯಗಳನ್ನು ನೀಡಲು ವಿಫಲವಾಗಿದೆ. ಆರ್ಥಿಕ ಪ್ರಗತಿ ಬಿಜೆಪಿ ಅವಧಿಯಲ್ಲಿ ಕುಂಠಿತವಾಗಿದೆ. ಯೋಗಿ ಆದಿತ್ಯನಾಥ ಸರ್ಕಾರದ ಕೊರೋನಾ ನಿವರ್ವಹಣೆಯ ರೀತಿಯಿಂದ ನೂರಾರು ಜನರ ದೇಹ ನದಿಯಲ್ಲಿ ತೇಲಿ ಹೋಗುವಂತ ಕೆಟ್ಟ ದಿನಗಳನ್ನು ಉತ್ತರ ಪ್ರದೇಶ ನೋಡುವಂತಾಯಿತು. ಯೋಗಿ ಆದಿತ್ಯನಾಥ್‌ ಸರ್ಕಾರ ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ವಿಷಯವನ್ನೂ ಜನರ ಮುಂದೆ ಕೊಂಡೊಯ್ಯುತ್ತೇವೆ ಎಂದು ಜಯಂತ್‌ ಯಾದವ್‌ ಹೇಳಿದ್ದಾರೆ.

ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯ ಮುಖ್ಯ ವಿಷಯಗಳಾಗಬಹುದೇ? ಎಂಬ ಪ್ರಶ್ನೆಗೆ ಜಯಂತ್‌ ಚೌಧರಿ, ಖಂಡಿತ ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಪಂಚಾಯತ್‌ ಚುನಾವಣೆಗಳಲ್ಲಿಯೇ ಇದನ್ನು ಗಮನಿಸಹಬಹುದು. ಕೇಂದ್ರ ಸರ್ಕಾರದ ಮತ್ತು ಬಿಜೆಪಿಯ ರೈತ ವಿರೋಧಿ ನೀತಿ ವಿರುದ್ಧ ನಾವೆಲ್ಲರೂ ಉತ್ತರ ಪ್ರದೇಶದಲ್ಲಿ ಹೋರಾಟವನ್ನು ಮುಂದುವರೆಸಲಿದ್ದೇವೆ. ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ವೈಫಲ್ಯವನ್ನು ಎಳೆ ಎಳೆಯಾಗಿ ತೆರೆದಿಡುತ್ತೇವೆ. ರೈತರನ್ನು ಸಂಘಟಿಸಿ ಬಿಜೆಪಿ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದು ಜಯಂತ್‌ ಚೌಧರಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ತೀವ್ರ ಗೊಳ್ಳುತ್ತಿವೆ. ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ,  ರೈತ ಹೋರಾಟದ ಲಾಭ ಪಡೆಯುವ ಪ್ರಯತ್ನಗಳನ್ನು ಅನೇಕ ನಾಯಕರು ಮಾಡತೊಡಗಿದ್ದಾರೆ. ಅದೇ ಪ್ರಯತ್ನದಲ್ಲಿ ಆರ್‌ಎಲ್‌ಡಿ ನಾಯಕ ಜಯಂತ್‌ ಚೌಧರಿ ಕೂಡ ತೊಡಗಿರುವಂತೆ ತೋರುತ್ತದೆ.

ಇದನ್ನೂ ಓದಿ : ಅಂಬೇಡ್ಕರ್‌ ಇದ್ದಿದ್ದರೇ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...