Homeಮುಖಪುಟಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌...

ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ತಯಾರಿಗಳು ಸದ್ದಿಲ್ಲದೇ ನಡೆಯತೊಡಗಿವೆ. ಆಡಳಿತಾರೂಢ ಬಿಜೆಪಿಗೆ ಕೊರೋನಾ ಮತ್ತು ರೈತರ ಪ್ರತಿಭಟನೆಗಳು ಆತಂಕವನ್ನು ತಂದಿವೆ. ಅತ್ತ ವಿರೋಧ ಪಕ್ಷಗಳು ಕೂಡ ಉತ್ತರ ಪ್ರದೇಶ ಚುನಾವಣೆಗೆ ರಾಜಕೀಯ ತಂತ್ರಗಾರಿಕೆಯನ್ನು ಆರಂಭಿಸಿವೆ. ರೈತ ಹೋರಾಟಗಳಲ್ಲೂ ಕಾಣಿಸಿಕೊಳ್ಳುತ್ತಿವೆ. ಕೆಲವು ಪಕ್ಷಗಳು ರೈತರ ಜೊತೆ ನಿಂತಿವೆ.  ಹಾಗೆ ನಿಂತಿರುವ ಪಕ್ಷಗಳಲ್ಲಿ ಒಂದು ರಾಷ್ಟ್ರೀಯ ಲೋಕ ದಳ. ರಾಷ್ಟ್ರೀಯ ಲೋಕದಳದ ಅಧ್ಷಕ್ಷ ಜಯಂತ್‌ ಚೌಧರಿ ಬಿಜೆಪಿ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ರೈತರ ಬಗೆಗಿನ ಅಸಡ್ಡೆ ಮತ್ತು ತಿರಸ್ಕಾರ ಬಿಜೆಪಿಗೆ ಮುಳುವಾಗಲಿದೆ ಎಂದು ಅವರು  ವಾಗ್ದಾಳಿ ನಡೆಸಿದ್ದಾರೆ.  ಇನ್ನು ಬಿಜೆಪಿಯ ಲವ್‌ ಜಿಹಾದ್‌, ಗೋ ಹತ್ಯೆಯ ಹುಸಿ ನಾಟಕಗಳು ಅವರಿಗೆ ಚುನಾವಣೆಯ ಗೆಲುವನ್ನು ತಂದು ಕೊಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಜಯಂತ್‌ ಹೇಳುತ್ತಾರೆ.

ಆರೋಗ್ಯ ವ್ಯವಸ್ಥೆಯ ಸುಧಾರಣೆ. ಶಿಕ್ಷಣ ಮತ್ತು ಸಮತೋಲಿತ ಅಭಿವೃದ್ಧಿಗೆ ಮಾತ್ರ ಈ ಬಾರಿ ಯುಪಿಯ ಜನ ಮತ ಹಾಕಲಿದ್ದಾರೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ನಂತರ ದೇಶದ ಗಮನ ಉತ್ತರ ಪ್ರದೇಶದ ಕಡೆ ತಿರುಗುತ್ತಿರುವ ಈ ಹೊತ್ತಿನಲ್ಲಿ ಜಯಂತ್‌ ಚೌಧರಿ ಆರ್‌ಎಲ್‌ಡಿಯ ಹೊಸ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಯಂತ್‌ ಯಾದವ್‌ ತಮ್ಮ ಪಕ್ಷವು ಧರ್ಮ ಆಧಾರಿತ ಚುನಾವಣಾ ಪ್ರಚಾರಕ್ಕೆ ಮತ್ತು ಓಲೈಕೆಗೆ ಈ ಚುನಾವಣೆಯಲ್ಲಿ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ತಂದೆ ಅಜಿತ್‌ ಸಿಂಗ್‌ ಚೌಧರಿ ಮರಣದ ನಂತರ ಪಕ್ಷದ ಅಧಿಕಾರ  ಸ್ವೀಕರಿಸಿರುವ ಜಯಂತ್‌ ಚೌಧರಿ ತಮ್ಮ ಪಕ್ಷ ಮತ್ತು ಸಮಾಜವಾದಿ ಪಕ್ಷದ ಜೊತೆ ಉತ್ತಮ ಹೊಂದಾಣಿಕೆಯಿದೆ. ಮುಂದೆಯೂ ಅದೇ ಹೊಂದಾಣಿಕೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಮುಂದೆ ಉತ್ತರ ಪ್ರದೇಶದಲ್ಲಿ ಎಲ್ಲಾ ವಿರೋಧ ಪಕ್ಷಗಳನ್ನು ಒಳಗೊಂಡ ಮಹಾ ಘಟಬಂಧನ ಒಕ್ಕೂಟ ನಿರ್ಮಾಣಮಾಡುವ ಪ್ರಯತ್ನ ನಡೆಸುತ್ತೀರಾ ಎಂಬ ಪ್ರಶ್ನೆಗೆ ನಮಗೆ ಜನರ ಸಮಸ್ಯೆಗಳು ಬಹಳ ಮುಖ್ಯ. ನಮ್ಮ ಮತ್ತು ಬೇರೆ ಪಕ್ಷಗಳ ಅಜೆಂಡಾ, ಪ್ರಣಾಳಿಕೆಗಳು ಮತ್ತು ಉದ್ಧೇಶಗಳು ಒಂದೇ ಆಗಿದ್ದರೆ ಕೈಜೋಡಿಸಬಹುದು. ಸದ್ಯ ನಮ್ಮ ಮುಂದೆ ಅಂತಹ ಆಯ್ಕೆಗಳಿಲ್ಲ ಎಂದು ಜಯಂತ್‌ ಚೌಧರಿ ಹೇಳುತ್ತಾರೆ.

ಇದನ್ನೂ ಓದಿ : ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದಲ್ಲಿ ಯಾವ ಪಾತ್ರ ವಹಿಸಬಹುದು? ಪಂಚಾಯತ ಚುನಾವಣೆಯಲ್ಲಿನ ಕಾಂಗ್ರೆಸ್‌ ನ ಕಳಪೆ ಪ್ರದರ್ಶನಗಳು ಅಸ್ಸೆಂಬ್ಲಿ ಚುನಾವಣೆಗಳ ಮೇಲೆ ಪ್ರಭಾವ ಬೀರಬಹುದೇ ? ಎಂಬ ಪ್ರಶ್ನೆಗೆ ಜಯಂತ್‌ ಯಾವುದೇ ಉತ್ತರಗಳನ್ನು ನೀಡಲು ನಿರಾಕರಿಸುತ್ತಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬದಲಾವಣೆ ಕುರಿತು, ಸಚಿವ ಸಂಪುಣ ವಿಸ್ತರಣೆಯ ಕುರಿತು ಕೇಳಿದಾಗ ಜಯಂತ್‌ ಯಾದವ್‌  “ಬಿಜೆಪಿಯು ತನ್ನ ಪಕ್ಷದ ಒಳಗಿನ ಆಂತರಿಕ ಸಮಸ್ಯೆಗಳನ್ನು ಮುಚ್ಚಿ ಹಾಕಿಕೊಳ್ಳಲೂ ಈ ಚರ್ಚೆಗಳನ್ನು ಹುಟ್ಟುಹಾಕಿದೆ. ಕೇವಲ ಒಬ್ಬರು ಇಬ್ಬರು ನಾಯಕರನ್ನು ಬದಲಾಯಿಸುವುದರಿಂದ ಸರ್ಕಾರದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ.  ಬಿಜೆಪಿಯ ಸರ್ಕಾರ ಜಾತಿ ಲೆಕ್ಕಾಚಾರದ ಗೋಜಲಾಗಿದೆ. ಯೋಗಿ ಸರ್ಕಾರ ಜನರಿಗೆ ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯಗಳನ್ನು ನೀಡಲು ವಿಫಲವಾಗಿದೆ. ಆರ್ಥಿಕ ಪ್ರಗತಿ ಬಿಜೆಪಿ ಅವಧಿಯಲ್ಲಿ ಕುಂಠಿತವಾಗಿದೆ. ಯೋಗಿ ಆದಿತ್ಯನಾಥ ಸರ್ಕಾರದ ಕೊರೋನಾ ನಿವರ್ವಹಣೆಯ ರೀತಿಯಿಂದ ನೂರಾರು ಜನರ ದೇಹ ನದಿಯಲ್ಲಿ ತೇಲಿ ಹೋಗುವಂತ ಕೆಟ್ಟ ದಿನಗಳನ್ನು ಉತ್ತರ ಪ್ರದೇಶ ನೋಡುವಂತಾಯಿತು. ಯೋಗಿ ಆದಿತ್ಯನಾಥ್‌ ಸರ್ಕಾರ ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ವಿಷಯವನ್ನೂ ಜನರ ಮುಂದೆ ಕೊಂಡೊಯ್ಯುತ್ತೇವೆ ಎಂದು ಜಯಂತ್‌ ಯಾದವ್‌ ಹೇಳಿದ್ದಾರೆ.

ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯ ಮುಖ್ಯ ವಿಷಯಗಳಾಗಬಹುದೇ? ಎಂಬ ಪ್ರಶ್ನೆಗೆ ಜಯಂತ್‌ ಚೌಧರಿ, ಖಂಡಿತ ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಪಂಚಾಯತ್‌ ಚುನಾವಣೆಗಳಲ್ಲಿಯೇ ಇದನ್ನು ಗಮನಿಸಹಬಹುದು. ಕೇಂದ್ರ ಸರ್ಕಾರದ ಮತ್ತು ಬಿಜೆಪಿಯ ರೈತ ವಿರೋಧಿ ನೀತಿ ವಿರುದ್ಧ ನಾವೆಲ್ಲರೂ ಉತ್ತರ ಪ್ರದೇಶದಲ್ಲಿ ಹೋರಾಟವನ್ನು ಮುಂದುವರೆಸಲಿದ್ದೇವೆ. ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ವೈಫಲ್ಯವನ್ನು ಎಳೆ ಎಳೆಯಾಗಿ ತೆರೆದಿಡುತ್ತೇವೆ. ರೈತರನ್ನು ಸಂಘಟಿಸಿ ಬಿಜೆಪಿ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದು ಜಯಂತ್‌ ಚೌಧರಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ತೀವ್ರ ಗೊಳ್ಳುತ್ತಿವೆ. ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ,  ರೈತ ಹೋರಾಟದ ಲಾಭ ಪಡೆಯುವ ಪ್ರಯತ್ನಗಳನ್ನು ಅನೇಕ ನಾಯಕರು ಮಾಡತೊಡಗಿದ್ದಾರೆ. ಅದೇ ಪ್ರಯತ್ನದಲ್ಲಿ ಆರ್‌ಎಲ್‌ಡಿ ನಾಯಕ ಜಯಂತ್‌ ಚೌಧರಿ ಕೂಡ ತೊಡಗಿರುವಂತೆ ತೋರುತ್ತದೆ.

ಇದನ್ನೂ ಓದಿ : ಅಂಬೇಡ್ಕರ್‌ ಇದ್ದಿದ್ದರೇ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...