Homeಮುಖಪುಟ‘ಮದರಸಾಗಳಲ್ಲಿ ಲವ್ ಜಿಹಾದ್‌ ಕಲಿಸಲಾಗುತ್ತಿದೆ’: ಸಾಧ್ವಿ ಪ್ರಾಚಿ ಆರೋಪ

‘ಮದರಸಾಗಳಲ್ಲಿ ಲವ್ ಜಿಹಾದ್‌ ಕಲಿಸಲಾಗುತ್ತಿದೆ’: ಸಾಧ್ವಿ ಪ್ರಾಚಿ ಆರೋಪ

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ನಾಯಕಿ ಸಾಧ್ವಿ ಪ್ರಾಚಿ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದು, “ಮದರಸಾಗಳ ಮೂಲಕ ‘ಲವ್ ಜಿಹಾದ್’ ಹೇಳಿಕೊಡಲಾಗುತ್ತಿದೆ. ದೇಶದಲ್ಲಿ ಮದರಸಾಗಳನ್ನು ಮುಚ್ಚಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೇಮ ಪ್ರಕರಣದಲ್ಲಿ ಸಿಲುಕಿಸಿ, ನಂತರ ಮತಾಂತರ ಮಾಡುತ್ತಾರೆಂಬ ಬಲಪಂಥೀಯ ಪಿತೂರಿ ಸಿದ್ಧಾಂತವಾದ ‘ಲವ್‌ ಜಿಹಾದ್‌’ಗೆ ಮದರಸಾಗಳನ್ನು ಥಳುಕಿ ಹಾಕಿರುವ ಅವರು ದ್ವೇಷಯುಕ್ತ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರಾಚಿ, “ಹಿಂದೂಗಳು ಕೇವಲ ಹಣ ಗಳಿಸುವ ಬಗ್ಗೆ ಮಾತ್ರ ಯೋಚಿಸುತ್ತಾರೆ. ಆದರೆ ವಿಶೇಷ ಸಮುದಾಯವೊಂದಿದೆ, ಅದು ಭಾರತವನ್ನು ಆಳುವ ಬಗ್ಗೆ ಯೋಚಿಸುತ್ತದೆ. ಭಾರತವನ್ನು ಆಳುವ ಅವರ ಅಜೆಂಡಾ ಸಾವಿರಾರು ವರ್ಷಗಳಿಂದ ಇದೆ. ಅವರು ಏನು ಮಾಡುತ್ತಾರೆ? ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಕ್ಚರ್ ಅಂಗಡಿ ನಡೆಸುತ್ತಾರೆ. ನಗರದ ಯಾವುದೇ ಬೈಲೇನ್‌ನಲ್ಲಿ ಪಂಕ್ಚರ್ ಅಂಗಡಿ ಏಕೆ ಕಾಣಿಸುವುದಿಲ್ಲ?” ಎಂದು ಪ್ರಶ್ನಿಸಿದ್ದಾರೆ

“ಲವ್ ಜಿಹಾದ್ ಮದರಸಾಗಳಿಂದ ಪ್ರಾರಂಭವಾಗುತ್ತದೆ, ಲವ್‌ ಜಿಹಾದ್‌ ಬಗ್ಗೆ ತಿಳಿಸಿಕೊಡಲಾಗುತ್ತದೆ. ಇದೇ ಕಾರಣಕ್ಕಾಗಿ ‘ಲವ್ ಜಿಹಾದ್’ ಹೆಚ್ಚುತ್ತಿದೆ. ಭಾರತದಲ್ಲಿ ಮದರಸಾಗಳು ಮುಚ್ಚಲ್ಪಟ್ಟ ದಿನ, ‘ಲವ್ ಜಿಹಾದ್’ ಅಸ್ತಿತ್ವದಲ್ಲಿ ಇರುವುದಿಲ್ಲ. ಭಾರತದಲ್ಲಿ ಮಾತ್ರವಲ್ಲದೆ ಇಡೀ ವಿಶ್ವದಲ್ಲಿ ಶಾಂತಿ ಮತ್ತು ಸೌಹಾರ್ದತೆ ಇರಬೇಕು” ಎಂದು ತಿಳಿಸಿದ್ದಾರೆ.

‘ಲವ್ ಜಿಹಾದ್’ ಎಂಬ ಪಿತೂರಿ ಸಿದ್ಧಾಂತವನ್ನು ಬಿಜೆಪಿ ಮತ್ತು ಬಲಪಂಥೀಯ ಕಾರ್ಯಕರ್ತರು ಹೆಚ್ಚಾಗಿ ಮಂಡಿಸುತ್ತಾರೆ. ಆದರೆ ಈ ಕುರಿತು ಕೇಂದ್ರ ಸರ್ಕಾರವೇ ಅಲ್ಲಗಳೆದಿರುವ ಪ್ರಸಂಗಗಳೂ ಇವೆ.

ಭಾರತ ಸರ್ಕಾರವು ಈ ಪದಕ್ಕೆ ಯಾವುದೇ ಮಾನ್ಯತೆ ನೀಡಿಲ್ಲ. 2020ರಲ್ಲಿ ಸಂಸತ್ತಿನಲ್ಲಿ ಪ್ರತಿಕ್ರಿಯಿಸಿದ ಸಚಿವರು, “ಲವ್‌ ಜಿಹಾದ್ ಸಂಬಂಧ ಕೇಂದ್ರೀಯ ಸಂಸ್ಥೆಗಳು ಯಾವುದೇ ಪ್ರಕರಣಗಳನ್ನು ದಾಖಲಿಸಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಲವ್ ಜಿಹಾದ್ ಎಂಬ ಪದವನ್ನು ಅಸ್ತಿತ್ವದಲ್ಲಿರುವ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ.

ಲವ್ ಜಿಹಾದ್‌ನ ಯಾವುದೇ ಪ್ರಕರಣವನ್ನು ಕೇಂದ್ರೀಯ ಸಂಸ್ಥೆಗಳು ವರದಿ ಮಾಡಿಲ್ಲ ಎಂದು ಕಿರಿಯ ಗೃಹ ಸಚಿವ ಜಿ ಕಿಶನ್ ರೆಡ್ಡಿ ಪ್ರತಿಕ್ರಿಯಿಸಿದ್ದರು.

ಮುಂದುವರಿದು ಮಾತನಾಡಿರುವ ಸಾಧ್ವಿ ಪ್ರಾಚಿ, “ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗುವ ತಮ್ಮ ಕನಸುಗಳನ್ನು ಕೈಬಿಡಬೇಕು” ಎಂದಿದ್ದಾರೆ.

ಇದನ್ನೂ ಓದಿರಿ: ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

“ಅವರು ಯುಪಿ ಮುಖ್ಯಮಂತ್ರಿಯಾಗುವುದಿಲ್ಲ ಅಥವಾ ಪ್ರಧಾನಿಯಾಗುವುದಿಲ್ಲ. 2024ರ ಸಂಸತ್ತಿನ ಚುನಾವಣೆಯಲ್ಲೂ ನರೇಂದ್ರ ಮೋದಿ ಗೆಲ್ಲುತ್ತಾರೆ. ಇದು ಜನರಿಗೆ ತಿಳಿದಿದೆ. ಜನರು ನರೇಂದ್ರ ಮೋದಿಯವರಿಗೆ ಮಾತ್ರ ಮತ ಹಾಕುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಉತ್ತರಾಖಂಡ್ ರಾಜ್ಯದಲ್ಲಿ ಯಾವುದೇ ಮಸೀದಿಯನ್ನು ತೆರವು ಮಾಡಿಲ್ಲ. ಅಕ್ರಮ ಸಮಾಧಿಗಳನ್ನು ಮಾತ್ರ ಧ್ವಂಸಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಕ್ರಮ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿರುವುದಾಗಿ ಉತ್ತರಖಾಂಡ್ ಸರ್ಕಾರ ಹೇಳುತ್ತಿದೆ.

“ದೇವಭೂಮಿಯಲ್ಲಿ ಹಿಂದೂಯೇತರರ ಸಂಖ್ಯೆ ಹೆಚ್ಚುತ್ತಿದೆ. ಉತ್ತರಾಖಂಡ್‌ನ ಹಿಂದೂಗಳು ವಲಸೆ ಹೋಗುತ್ತಿದ್ದಾರೆ” ಎಂದು ಪ್ರಾಚಿ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...