Homeಮುಖಪುಟಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ...

ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ಮತಕ್ಕಾಗಿ ಮನಬಂದಂತೆ ಲವ್‌ ಜಿಹಾದ್‌ ಬಳಸುವ ಬಿಜೆಪಿ ಸಂಸತ್ತಿನಲ್ಲಿ ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಲಾಗಿಲ್ಲ, ಈ ಕುರಿತು ತನಿಖೆ ಸಹ ನಡೆದಿಲ್ಲ ಎಂದು ಒಪ್ಪಿಕೊಂಡಿದೆ.

- Advertisement -
- Advertisement -

ಲವ್‌ ಜಿಹಾದ್‌ ನಡೆಯುತ್ತಿದೆ ಎಂದು ಆರೋಪಿಸಿ ಈ ಹಿಂದೆ ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ಅಲ್ಲಲ್ಲಿ ಗಲಾಟೆ ಮಾಡಿರುವುದು, ಗಲಭೆ ಎಬ್ಬಿಸಿರುವುದನ್ನು ನೀವು ಗಮನಿಸಿರುತ್ತೀರಿ.. ಆದರೆ ಅದು ಈಗ ಬಿಜೆಪಿ ವಿರುದ್ಧದ ಬಿಜೆಪಿ ಹೋರಾಟವಾಗಿ ಮಾರ್ಪಾಟಾಗಿದೆ. ಗೊಂದಲವಾಗುತ್ತಿದೆಯೇ? ಈ ಲೇಖನ ಓದಿ.

ಫೆಬ್ರವರಿ 4 ರಂದು, ಮೋದಿ ಸರ್ಕಾರವು ಸಂಸತ್ತಿನಲ್ಲಿ ಲವ್‌ ಜಿಹಾದ್‌ ವಿಷಯದ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ. ಇದು ದೇಶಾದ್ಯಂತ ಬಿಜೆಪಿಯ ವಾಕ್ಚಾತುರ್ಯಕ್ಕೆ ವಿರುದ್ಧವಾಗಿದೆ.

ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಅವರು ‘ಲವ್ ಜಿಹಾದ್ ’ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಲೋಕಸಭೆಗೆ ತಿಳಿಸಿದರು.

ಇದಲ್ಲದೆ, “ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಪ್ರಚಾರ ಮಾಡಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ.”

ಕೇರಳದ ಕಾಂಗ್ರೆಸ್ ಸಂಸದ ಬೆನ್ನಿ ಬೆಹಾನನ್ ಅವರು ಸದನದಲ್ಲಿ ಕೇಳಿದ ಪ್ರಶ್ನೆಗೆ ರೆಡ್ಡಿ ಉತ್ತರಿಸುತ್ತಿದ್ದರು.

ಆದರೆ ಇಲ್ಲಿ ವಿಷಯವೆಂದರೆ, ಸಂಸತ್ತಿನೊಳಗೆ ಬಿಜೆಪಿ ಹೇಳಿದ್ದು, ಬಿಜೆಪಿ ಹೊರಗೆ ಹೇಳುವುದಕ್ಕಿಂತ ಬಹಳ ಭಿನ್ನವಾಗಿದೆ ಅಲ್ಲವೇ?

ಸಂಸತ್ತಿನ ಹೊರಗೆ ಬಿಜೆಪಿ ವರಸೆ ಹೀಗಿದೆ.
ಉದಾಹರಣೆಗೆ, ಸಂಸತ್ತಿನಲ್ಲಿ ಬಿಜೆಪಿ ಸರ್ಕಾರದ ಹೇಳಿಕೆಯ ಒಂದು ದಿನದ ನಂತರ ಬಿಜೆಪಿ ಹೀಗೆ ಹೇಳಿದೆ.

ಬಿಜೆಪಿ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಪಿ.ಕೆ.ಕೃಷ್ಣದಾಸ್, “ಲವ್ ಜಿಹಾದ್” ಎಂಬ ಪದವನ್ನು ಈಗಿರುವ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ ಆದರೆ ಈ ಲವ್ ಜಿಹಾದ್ ಕೇರಳದಲ್ಲಿ ನಡೆಯುತ್ತಿದೆ ಎಂಬುದು ಸತ್ಯ. ಹಾಗಾಗಿ ಇಂತಹ ಸಂದರ್ಭಗಳಲ್ಲಿ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯವನ್ನು ಒತ್ತಾಯಿಸಿದರು.

ಸ್ಪಷ್ಟವಾಗಿ ಹೇಳುವುದಾದರೆ, ಬಿಜೆಪಿ ‘ಲವ್ ಜಿಹಾದ್’ ಎಂದು ಉಲ್ಲೇಖಿಸುತ್ತಿರುವುದು ಭಾರತದಲ್ಲಿ ಹಿಂದೂಗಳ ವಿರುದ್ಧ ಭಾರಿ ಪಿತೂರಿ ನಡೆಯುತ್ತಿದೆ ಎಂಬ ಸಿದ್ಧಾಂತವಾಗಿದೆ. ಇದರಲ್ಲಿ ಮುಸ್ಲಿಂ ಪುರುಷರು ಮುಸ್ಲಿಮೇತರ ಸಮುದಾಯಗಳ ಮಹಿಳೆಯರನ್ನು ಪ್ರೀತಿಸುವ ನಾಟಕವಾಡಿ, ಮದುವೆಯಾಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಆಮಿಷವೊಡ್ಡುತ್ತಿದ್ದಾರೆ.

‘ಲವ್ ಜಿಹಾದ್’ ಪದದ ಬಿಜೆಪಿಯ ಚತುರ ಬಳಕೆಯ ಇತರ ಕೆಲವು ಉದಾಹರಣೆಗಳು ಇಲ್ಲಿವೆ. ಹಾಗಾದರೆ ಅವರು ಸಂಸತ್ತಿನಲ್ಲಿ ವ್ಯಾಖ್ಯಾನಿಸಲು ಸಾಧ್ಯವಾಗದಿದ್ದರೆ, ಅವರು ಅದನ್ನು ಖಂಡಿತವಾಗಿಯೂ ಎಲ್ಲೆಡೆಯೂ ಬಳಸಬಹುದೇ?

ಚುನಾವಣಾ ವಿಷಯ ಯಾವುದು: ಉತ್ತರ- ‘ಲವ್ ಜಿಹಾದ್!’
ಫೆಬ್ರವರಿ 2017 ರಲ್ಲಿ, ಉತ್ತರಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ಯೋಗಿ ಆದಿತ್ಯನಾಥ್, “ಕೈರಾನಾದಿಂದ ಹಿಂದೂಗಳು ವಲಸೆ ಹೋಗುತ್ತಿರುವುದು ಮತ್ತು ಲವ್ ಜಿಹಾದ್ ಮತದಾನದ ಮೇಲೆ ಪ್ರಾಬಲ್ಯ ಸಾಧಿಸುತ್ತದೆ” ಎಂದು ಹೇಳಿದ್ದರು.

ಸಿಎಎ ವಿರೋಧಿ ಪ್ರತಿಭಟನೆಯನ್ನು ಟೀಕಿಸುವುದು ಹೇಗೆ? ಉತ್ತರ – ‘ಲವ್ ಜಿಹಾದ್!’

2020ರ ಜನವರಿಯಲ್ಲಿ, ಸಿಎಎ ವಿರೋಧಿ ಪ್ರತಿಭಟನೆಗಳನ್ನು ಟೀಕಿಸುವಾಗ ಕೇರಳ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕುಮ್ಮನಂ ರಾಜಶೇಖರನ್ ಅವರು ‘ಲವ್ ಜಿಹಾದ್’ ನ ಪದವನ್ನು ಎಳೆದುತಂದರು. “ಕಾಂಗ್ರೆಸ್, ಸಿಪಿಎಂ ಮತ್ತು ಜಿಹಾದಿ ಸಂಘಟನೆಗಳು ಇತರ ದೇಶಗಳಲ್ಲಿ ಕಿರುಕುಳಕ್ಕೊಳಗಾದ ಕ್ರಿಶ್ಚಿಯನ್, ಹಿಂದೂ, ಬೌದ್ಧ ಸದಸ್ಯರಿಗೆ ಸಾಮಾಜಿಕ ನ್ಯಾಯ ಒದಗಿಸುವುದನ್ನು ವಿರೋಧಿಸುತ್ತಿವೆ. ಆದರೆ ಲವ್ ಜಿಹಾದ್ ಬೆಂಬಲಿಸುತ್ತಾರೆ” ಎಂದು ಅವರು ಹೇಳಿದ್ದರು.

ಮಗಳು ಕಾಣೆಯಾಗಿದ್ದಾಳೆ ಏನು ಹೇಳುವುದು? ಉತ್ತರ- ‘ಲವ್ ಜಿಹಾದ್!’
ಸಮುದಾಯಗಳ ನಡುವೆ ದ್ವೇಷವನ್ನು ಹುಟ್ಟುಹಾಕಿದ್ದಾರೆ ಎಂದು ಆರೋಪಿಸಿ 2019ರ ಅಕ್ಟೋಬರ್‌ನಲ್ಲಿ ಬಿಜೆಪಿ ಮುಖಂಡ ಸುರೇಂದ್ರ ನಾಥ್ ಸಿಂಗ್ ಅವರ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು. ಏಕೆಂದರೆ ಆತ  ತನ್ನ ಮಗಳ ನಾಪತ್ತೆಯಾಗಿದ್ದನ್ನು ‘ಲವ್ ಜಿಹಾದ್’ ಗೆ ಲಿಂಕ್ ಮಾಡಿದ್ದರು. ಈ ಪ್ರಕರಣದಲ್ಲಿ ಭೋಪಾಲ್ ಶಾಸಕ ಮತ್ತು ಕಾಂಗ್ರೆಸ್ ಮುಖಂಡ ಆರಿಫ್ ಮಸೂದ್ ಪಾತ್ರವಿದೆ ಎಂದು ಹೇಳಿಕೊಂಡಿದ್ದರು. ಆದರೆ ವಿಚಾರಣೆ ನಡೆದಾಗ ಎಲ್ಲಾ ಸುಳ್ಳು ಎಂದು ಸಾಬೀತಾಯಿತು.

ಮುಸ್ಲಿಮರು ಹಸುಗಳನ್ನು ಸಾಕುತ್ತಾರೆಯೇ? ‘ಲವ್ ಜಿಹಾದ್!’

ಜುಲೈ 2019 ರಲ್ಲಿ ಬಿಜೆಪಿ ನಾಯಕ ರಂಜಿತ್ ಬಹದ್ದೂರ್ ಶ್ರೀವಾಸ್ತವ ವಿವಾದಾತ್ಮಕ ಹೇಳಿಕೆಯಲ್ಲಿ ಮುಸ್ಲಿಮರಿಗೆ ಸೇರಿದ ಹಸುಗಳನ್ನು ಯಾವುದೇ ಬೆಲೆ ತೆತ್ತಾದರೂ ಸರಿ ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ. ಮುಸ್ಲಿಮರು ಹಸುಗಳನ್ನು ಸಾಕುವುದು ಕೂಡ “ಲವ್ ಜಿಹಾದ್” ಎಂದು ಅವರು ಹೇಳಿದರು.

ಜ್ಞಾಪನೆ: ಲೋಕಸಭೆಯಲ್ಲಿ ಲವ್‌ ಜಿಹಾದ್‌ ಬಗ್ಗೆ ಮೋದಿ ಸರ್ಕಾರ ಏನು ಹೇಳಿದೆ
ಇಷ್ಟೆಲ್ಲಾ ಘಟನೆಗಳಾದ ಮೇಲೆ ಕೇರಳದ ಕಾಂಗ್ರೆಸ್ ಸಂಸದ ಬೆನ್ನಿ ಬೆಹಾನನ್ ಅವರು ಲೋಕಸಭೆಯಲ್ಲಿ ಮೋದಿ ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳು ಇಲ್ಲಿವೆ.

(ಎ) ಕೇರಳದಲ್ಲಿ ಲವ್ ಜಿಹಾದ್ ಪ್ರಕರಣವಿಲ್ಲ ಎಂದು ಕೇರಳ ಹೈಕೋರ್ಟ್‌ನ ವೀಕ್ಷಣೆಯ ಬಗ್ಗೆ ಸರ್ಕಾರಕ್ಕೆ ತಿಳಿದಿದೆಯೇ?

(ಬಿ) ಹಾಗಿದ್ದರೆ, ಅದರ ವಿವರಗಳೇನು? ಮತ್ತು

(ಸಿ) ಕಳೆದ ಎರಡು ವರ್ಷಗಳಲ್ಲಿ ಯಾವುದೇ ಕೇಂದ್ರ ಏಜೆನ್ಸಿಗಳು ಕೇರಳದಿಂದ ಲವ್ ಜಿಹಾದ್ ಪ್ರಕರಣವನ್ನು ವರದಿ ಮಾಡಿವೆಯೇ? ಹಾಗಿದ್ದಲ್ಲಿ, ಅದರ ವಿವರಗಳನ್ನು ನೀಡಿ.

ಈ ಪ್ರಶ್ನೆಗಳಿಗೆ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಅವರ ಸಂಪೂರ್ಣ ಪ್ರತಿಕ್ರಿಯೆ ಇಲ್ಲಿದೆ.

ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ.

‘ಲವ್ ಜಿಹಾದ್’ ಎಂಬ ಪದವನ್ನು ಈಗಿರುವ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ.

ಆದರೆ, ಕೇರಳದಿಂದ ಅಂತರ್ ಧರ್ಮ -ನಂಬಿಕೆಯ ವಿವಾಹಗಳನ್ನು ಒಳಗೊಂಡ ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ಮಾಡಿದೆ.

ಬಿಜೆಪಿ ಸರ್ಕಾರ ಹೇಳಿದ್ದರ ಬಗ್ಗೆ ಬಿಜೆಪಿಗೆ ಒಂದು ಸ್ನೇಹಪೂರ್ವಕ ಜ್ಞಾಪನೆ

ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...