Homeಕರ್ನಾಟಕ'ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -
- Advertisement -

ಲವ್ ಜಿಹಾದ್ ತಡೆಗೆ, ಕೇವಲ ಮದುವೆ ಆಗುವ ಉದ್ದೇಶದಿಂದಲೇ ಆಗುವ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನು ಶೀಘ್ರವೇ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂಬ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ತಮ್ಮ ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದಿದ್ದಾರೆ.

ಕೇವಲ ಮದುವೆ ಆಗುವ ಉದ್ದೇಶದಿಂದಲೇ ಆಗುವ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನು ಶೀಘ್ರವೇ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದರು, ಲವ್ ಜಿಹಾದ್ ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ತಡೆಯಲು ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕುಡ ಧ್ವನಿಗೂಡಿಸಿದ್ದರು. ಇದಕ್ಕೆ ಮುಖ್ಯಮಂತ್ರಿಗಳು ಸಹಮತ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ’ಲವ್ ಜಿಹಾದ್’ ಸಾಮಾಜಿಕ ಪಿಡುಗು, ಇದರ ವಿರುದ್ದ ಕಠಿಣ ಕಾನೂನು: ಗೃಹ ಸಚಿವ

ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ’ಲವ್ ಜಿಹಾದ್’ ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ, ‘ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ’ ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, ಮುಖ್ಯಮಂತ್ರಿಗಳು ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ..? ಎಂದು ಪ್ರಶ್ನಿಸಿದ್ದಾರೆ.

ವಿವಾಹಕ್ಕಾಗಿಯೇ ಮತಾಂತರವಾದರೇ ಅದು ಮಾನ್ಯವಲ್ಲ ಎಂಬ ಅಲಹಾಬಾದ್ ಕೋರ್ಟ್ ತೀರ್ಪನ್ನು ಅನುಕೂಲಕ್ಕೆ ತಕ್ಕಂತೆ ಬಳಸಲಾಗುತ್ತಿದೆ ಎಂದಿದ್ದಾರೆ.

’ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ‘ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು’ ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

’ಮುಖ್ಯಮಂತ್ರಿಗಳು ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ’ಲವ್ ಜಿಹಾದ್’ ತಡೆಯುವ ಕಾನೂನು ಜಾರಿಗೆ ತರಲು ತಮ್ಮ ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ತಿಳಿಸಿದ್ದರು. ಉತ್ತರಪ್ರದೇಶದಲ್ಲೂ


ಇದನ್ನೂ ಓದಿ: ಕರ್ನಾಟಕ, ಮಧ್ಯಪ್ರದೇಶದಲ್ಲಿ ವಿವಾಹಕ್ಕಾಗಿ ಮತಾಂತರ ನಿಷೇಧ ಕಾನೂನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಿದ್ದರಾಮಯ್ಯನವರ ಅಭಿಪ್ರಾಯ ಸರಿಯಾಗಿದೆ. ನಮಗೆ ಉತ್ತರ ಪ್ರದೇಶದ ಆದಿತ್ಯನಾತರ ಆಡಳಿತ ಯಾವ ರೀತಿಯಲ್ಲೂ ಆದರ್ಶನೀಯವಲ್ಲ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....