Homeಮುಖಪುಟಲವ್ ಜಿಹಾದ್ ಕುರಿತ ಸುದ್ದಿಗಳಿಗೆ ನಿರ್ಬಂಧ ಹೇರಿ: ಹೋರಾಟಗಾರರ ಪತ್ರ

ಲವ್ ಜಿಹಾದ್ ಕುರಿತ ಸುದ್ದಿಗಳಿಗೆ ನಿರ್ಬಂಧ ಹೇರಿ: ಹೋರಾಟಗಾರರ ಪತ್ರ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ, ಕಾನೂನಿನಡಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

- Advertisement -
- Advertisement -

ಇತ್ತಿಚೆಗೆ ದೇಶದಲ್ಲಿ ಲವ್ ಜಿಹಾದ್ ಎಂಬ ಪದ ಪದೇ ಪದೇ ಪ್ರಸ್ತಾಪವಾಗುತ್ತಲೇ ಇದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ತಡೆಗೆ ಕಾನೂನು ತರುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಹೇಳಿಕೆಗಳನ್ನು ಅಲ್ಲಿನ ಮುಖ್ಯಮಂತ್ರಿಗಳೇ ನೀಡಿದ್ದಾರೆ. ಸುದ್ದಿ ಚಾನೆಲ್‌ಗಳಲ್ಲಿ ಇದು ಹಾಟ್ ಟಾಪಿಕ್ ಆಗಿದೆ.

ಸುದ್ದಿ ಮಾಧ್ಯಮಗಳು ತಮ್ಮ ಸುದ್ದಿ, ಚರ್ಚೆಗಳಲ್ಲಿ ಲವ್ ಜಿಹಾದ್ ಅನ್ನು ಪ್ರಮುಖ ವಿಷಯವಾಗಿಸಿವೆ. ಆದರೆ ಅವರು ಪ್ರಸ್ತಾಪಿಸುತ್ತಿರುವ, ವ್ಯಾಖ್ಯಾನಿಸುತ್ತಿರುವ ವಿವರಗಳಿಗೆ ಇದಕ್ಕೆ ಅಡೆ ತಡೆಗಳೇ ಇಲ್ಲವಾಗಿವೆ. ಇಂತಹ ಚರ್ಚೆಗಳು ದೇಶದ ಸಾರ್ವಭೌಮತೆಗೆ ದಕ್ಕೆ ತರುವಂತಹ, ಕೋಮು ಸಂಘರ್ಷಕ್ಕೆ ಕಾರಣವಾಗುವ ಅಂಶಗಳನ್ನು ಒಳಗೊಂಡಿವೆ ಎಂದು ಸಾಮಾಜಿಕ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸುದ್ದಿ ಚಾನೆಲ್‌ಗಳಲ್ಲಿ ಲವ್ ಜಿಹಾದ್ ಸುತ್ತಲಿನ ಚರ್ಚೆಗಳು, ಇದರಲ್ಲಿ ಭಾಗವಹಿಸುವವರು ಸಮಾಜವನ್ನು ಹಾಳುಗೆಡವುವಂತಹ ಸುಳ್ಳು ಮತ್ತು ಅರ್ಧ-ಸತ್ಯಗಳನ್ನು ಮಾತನಾಡುತ್ತಿದ್ದಾರೆ. ಹಾಗಾಗಿ ಈ ವಿಷಯದ ಕುರಿತ ಮಾಧ್ಯಮ ಚರ್ಚೆಗಳಿಗೆ ನಿರ್ಬಂಧ ವಿಧಿಸಿ ಎಂದು ಸಾಮಾಜಿಕ ಹೋರಾಟಗಾರ ತೆಹ್ಸೀನ್ ಪೂನವಾಲ್ಲಾ ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್(NBA) ಅಧ್ಯಕ್ಷ ರಾಜತ್‌ ಶರ್ಮ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ: ಅಶೋಕ್ ಗೆಹ್ಲೋಟ್

ಬಿಜೆಪಿಯ ಹಲವಾರು ಮುಖಂಡರ ಕುಟುಂಬ ಸದಸ್ಯರು ಅಂತರ್‌ಧರ್ಮೀಯ ಮದುವೆಯಾಗಿದ್ದಾರೆ. ಅವೆಲ್ಲರೂ ಲವ್ ಜಿಹಾದ್ ಅಡಿಯಲ್ಲಿ ಬರುತ್ತವೆಯೇ? ಎಂದು ಛತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಪ್ರಶ್ನಿಸಿದ್ದಾರೆ.

ಹಿಂದೂ ಯುವತಿಯರನ್ನು ಪ್ರೀತಿ ಹೆಸರಲ್ಲಿ ಇನ್ನೊಂದು ಧರ್ಮಕ್ಕೆ ಮತಾಂತರಿಸಲಾಗುತ್ತಿದೆ. ಇದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಯುವತಿಯರು ಬಲಿಯಾಗುತ್ತಿದ್ದಾರೆ ಎಂದು ಆರೋಪಿಸಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ ಸೇರಿದಂತೆ ಬಿಜೆಪಿ ಆಳ್ವಿಕೆಯ ಹಲವಾರು ರಾಜ್ಯಗಳಲ್ಲಿ “ಲವ್ ಜಿಹಾದ್” ವಿರುದ್ಧ ಕಠಿಣ ಕಾನೂನು ಶೀಘ್ರದಲ್ಲೇ  ತರಲಾಗುವುದು ಎಂದು ಘೋಷಣೆ ಮಾಡಿವೆ.

ಇದನ್ನು ಗಮನದಲ್ಲಿಟ್ಟುಕೊಂಡೆ ಸುದ್ದಿ ಮಾಧ್ಯಮಗಳು ತಮ್ಮ ಚಾನೆಲ್‌ಗಳಲ್ಲಿ ಗಂಟೆಗಟ್ಟಲೆ ಪ್ಯಾನೆಲ್ ಡಿಸ್ಕಷನ್ ಹೆಸರಲ್ಲಿ ಹಲವು ಜನರನ್ನು ಕರೆಸಿ ಚರ್ಚೆ ನಡೆಸುತ್ತಿವೆ. ಆದರೆ ಚರ್ಚೆಯಲ್ಲಿ ಭಾಗವಹಿಸುವವರ ಮಾತುಗಳು, ಅವರು ಪ್ರಸ್ತುತ ಪಡಿಸುವ ಲವ್ ಜಿಹಾದ್ ಅಂಶಗಳು ನಿಜಕ್ಕೂ ಗಾಬರಿ ಮೂಡಿಸುವಂತಿದ್ದು, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯುಂಟು ಮಾಡುವಂತಿವೆ ಎನ್ನಲಾಗಿದೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!

ನಿನ್ನೆ ಕೂಡ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲವ್ ಜಿಹಾದ್ ಎಂಬುದು ಬಿಜೆಪಿ ರಾಷ್ಟ್ರವನ್ನು ವಿಭಜಿಸಲು ಮತ್ತು ಕೋಮು ಸೌಹಾರ್ದತೆಗೆ ಭಂಗ ತರಲು ಸೃಷ್ಟಿಸಿದ ಪದ. ಮದುವೆ ಎಂಬುದು ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದ್ದು, ಅದಕ್ಕೆ ಕಾನೂನು ತರುವುದು ಅಸಂವಿಧಾನಿಕ ಎಂದು  ಟೀಕಿಸಿದ್ದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಈ ಸಂಬಂಧ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಆದರೆ ತನ್ನದೆ ಪಕ್ಷ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ಎಂಬ ಅಂಶವನ್ನಿಟ್ಟುಕೊಂಡು ಕಾನೂನು ಜಾರಿ ಮಾಡಲು ಹೊರಟಿರುವುದನ್ನು ಕೇಂದ್ರ ಸರ್ಕಾರ ಪ್ರಶ್ನಿಸಿಲ್ಲ. ಯಾವುದೇ ಆದೇಶಗಳನ್ನು ಈ ಬಗ್ಗೆ ಹೊರಡಿಸಿಲ್ಲ. ಇದು ಭಾರತೀಯ ಜನತಾ ಪಾರ್ಟಿ ತನ್ನ ಸಂಸದೀಯ ಹೇಳಿಕೆ ಮತ್ತು ಹೊರ ಜಗತ್ತಿನಲ್ಲಿ ದ್ವಿನೀತಿಯನ್ನು ಅನುಸರಿಸುತ್ತಿದೇಯೇ ಎಂಬ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ಸದ್ಯ ಲವ್ ಜಿಹಾದ್ ಪದ ಬಳಕೆ ಬಗ್ಗೆ ಹಲವು ಹೊರಾಟಗಾರರು, ಚಿಂತಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರೀತಿಯಲ್ಲಿ ಜಿಹಾದ್ ಬರುವುದಿಲ್ಲ ಎಂಬ ಮಾತುಗಳನ್ನು ಆಡುತ್ತಿದ್ದಾರೆ. ಆದರೆ ಪ್ರತಿ ದಿನ ಹೆಚ್ಚಾಗುತ್ತಿರುವ ಮಾಧ್ಯಮಗಳ ಕೆಟ್ಟ ಚರ್ಚೆಗಳನ್ನು ನಿಲ್ಲಿಸದಿದ್ದರೇ, ಅವುಗಳ ಮೇಲೆ ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ನಿರ್ಬಂಧ ವಿಧಿಸದಿದ್ದರೇ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು ಖಂಡಿತ.


ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...