Homeಮುಖಪುಟಲವ್ ಜಿಹಾದ್ ಕುರಿತ ಸುದ್ದಿಗಳಿಗೆ ನಿರ್ಬಂಧ ಹೇರಿ: ಹೋರಾಟಗಾರರ ಪತ್ರ

ಲವ್ ಜಿಹಾದ್ ಕುರಿತ ಸುದ್ದಿಗಳಿಗೆ ನಿರ್ಬಂಧ ಹೇರಿ: ಹೋರಾಟಗಾರರ ಪತ್ರ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ, ಕಾನೂನಿನಡಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

- Advertisement -
- Advertisement -

ಇತ್ತಿಚೆಗೆ ದೇಶದಲ್ಲಿ ಲವ್ ಜಿಹಾದ್ ಎಂಬ ಪದ ಪದೇ ಪದೇ ಪ್ರಸ್ತಾಪವಾಗುತ್ತಲೇ ಇದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ತಡೆಗೆ ಕಾನೂನು ತರುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಹೇಳಿಕೆಗಳನ್ನು ಅಲ್ಲಿನ ಮುಖ್ಯಮಂತ್ರಿಗಳೇ ನೀಡಿದ್ದಾರೆ. ಸುದ್ದಿ ಚಾನೆಲ್‌ಗಳಲ್ಲಿ ಇದು ಹಾಟ್ ಟಾಪಿಕ್ ಆಗಿದೆ.

ಸುದ್ದಿ ಮಾಧ್ಯಮಗಳು ತಮ್ಮ ಸುದ್ದಿ, ಚರ್ಚೆಗಳಲ್ಲಿ ಲವ್ ಜಿಹಾದ್ ಅನ್ನು ಪ್ರಮುಖ ವಿಷಯವಾಗಿಸಿವೆ. ಆದರೆ ಅವರು ಪ್ರಸ್ತಾಪಿಸುತ್ತಿರುವ, ವ್ಯಾಖ್ಯಾನಿಸುತ್ತಿರುವ ವಿವರಗಳಿಗೆ ಇದಕ್ಕೆ ಅಡೆ ತಡೆಗಳೇ ಇಲ್ಲವಾಗಿವೆ. ಇಂತಹ ಚರ್ಚೆಗಳು ದೇಶದ ಸಾರ್ವಭೌಮತೆಗೆ ದಕ್ಕೆ ತರುವಂತಹ, ಕೋಮು ಸಂಘರ್ಷಕ್ಕೆ ಕಾರಣವಾಗುವ ಅಂಶಗಳನ್ನು ಒಳಗೊಂಡಿವೆ ಎಂದು ಸಾಮಾಜಿಕ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸುದ್ದಿ ಚಾನೆಲ್‌ಗಳಲ್ಲಿ ಲವ್ ಜಿಹಾದ್ ಸುತ್ತಲಿನ ಚರ್ಚೆಗಳು, ಇದರಲ್ಲಿ ಭಾಗವಹಿಸುವವರು ಸಮಾಜವನ್ನು ಹಾಳುಗೆಡವುವಂತಹ ಸುಳ್ಳು ಮತ್ತು ಅರ್ಧ-ಸತ್ಯಗಳನ್ನು ಮಾತನಾಡುತ್ತಿದ್ದಾರೆ. ಹಾಗಾಗಿ ಈ ವಿಷಯದ ಕುರಿತ ಮಾಧ್ಯಮ ಚರ್ಚೆಗಳಿಗೆ ನಿರ್ಬಂಧ ವಿಧಿಸಿ ಎಂದು ಸಾಮಾಜಿಕ ಹೋರಾಟಗಾರ ತೆಹ್ಸೀನ್ ಪೂನವಾಲ್ಲಾ ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್(NBA) ಅಧ್ಯಕ್ಷ ರಾಜತ್‌ ಶರ್ಮ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ: ಅಶೋಕ್ ಗೆಹ್ಲೋಟ್

ಬಿಜೆಪಿಯ ಹಲವಾರು ಮುಖಂಡರ ಕುಟುಂಬ ಸದಸ್ಯರು ಅಂತರ್‌ಧರ್ಮೀಯ ಮದುವೆಯಾಗಿದ್ದಾರೆ. ಅವೆಲ್ಲರೂ ಲವ್ ಜಿಹಾದ್ ಅಡಿಯಲ್ಲಿ ಬರುತ್ತವೆಯೇ? ಎಂದು ಛತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಪ್ರಶ್ನಿಸಿದ್ದಾರೆ.

ಹಿಂದೂ ಯುವತಿಯರನ್ನು ಪ್ರೀತಿ ಹೆಸರಲ್ಲಿ ಇನ್ನೊಂದು ಧರ್ಮಕ್ಕೆ ಮತಾಂತರಿಸಲಾಗುತ್ತಿದೆ. ಇದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಯುವತಿಯರು ಬಲಿಯಾಗುತ್ತಿದ್ದಾರೆ ಎಂದು ಆರೋಪಿಸಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ ಸೇರಿದಂತೆ ಬಿಜೆಪಿ ಆಳ್ವಿಕೆಯ ಹಲವಾರು ರಾಜ್ಯಗಳಲ್ಲಿ “ಲವ್ ಜಿಹಾದ್” ವಿರುದ್ಧ ಕಠಿಣ ಕಾನೂನು ಶೀಘ್ರದಲ್ಲೇ  ತರಲಾಗುವುದು ಎಂದು ಘೋಷಣೆ ಮಾಡಿವೆ.

ಇದನ್ನು ಗಮನದಲ್ಲಿಟ್ಟುಕೊಂಡೆ ಸುದ್ದಿ ಮಾಧ್ಯಮಗಳು ತಮ್ಮ ಚಾನೆಲ್‌ಗಳಲ್ಲಿ ಗಂಟೆಗಟ್ಟಲೆ ಪ್ಯಾನೆಲ್ ಡಿಸ್ಕಷನ್ ಹೆಸರಲ್ಲಿ ಹಲವು ಜನರನ್ನು ಕರೆಸಿ ಚರ್ಚೆ ನಡೆಸುತ್ತಿವೆ. ಆದರೆ ಚರ್ಚೆಯಲ್ಲಿ ಭಾಗವಹಿಸುವವರ ಮಾತುಗಳು, ಅವರು ಪ್ರಸ್ತುತ ಪಡಿಸುವ ಲವ್ ಜಿಹಾದ್ ಅಂಶಗಳು ನಿಜಕ್ಕೂ ಗಾಬರಿ ಮೂಡಿಸುವಂತಿದ್ದು, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯುಂಟು ಮಾಡುವಂತಿವೆ ಎನ್ನಲಾಗಿದೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!

ನಿನ್ನೆ ಕೂಡ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲವ್ ಜಿಹಾದ್ ಎಂಬುದು ಬಿಜೆಪಿ ರಾಷ್ಟ್ರವನ್ನು ವಿಭಜಿಸಲು ಮತ್ತು ಕೋಮು ಸೌಹಾರ್ದತೆಗೆ ಭಂಗ ತರಲು ಸೃಷ್ಟಿಸಿದ ಪದ. ಮದುವೆ ಎಂಬುದು ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದ್ದು, ಅದಕ್ಕೆ ಕಾನೂನು ತರುವುದು ಅಸಂವಿಧಾನಿಕ ಎಂದು  ಟೀಕಿಸಿದ್ದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಈ ಸಂಬಂಧ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಆದರೆ ತನ್ನದೆ ಪಕ್ಷ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ಎಂಬ ಅಂಶವನ್ನಿಟ್ಟುಕೊಂಡು ಕಾನೂನು ಜಾರಿ ಮಾಡಲು ಹೊರಟಿರುವುದನ್ನು ಕೇಂದ್ರ ಸರ್ಕಾರ ಪ್ರಶ್ನಿಸಿಲ್ಲ. ಯಾವುದೇ ಆದೇಶಗಳನ್ನು ಈ ಬಗ್ಗೆ ಹೊರಡಿಸಿಲ್ಲ. ಇದು ಭಾರತೀಯ ಜನತಾ ಪಾರ್ಟಿ ತನ್ನ ಸಂಸದೀಯ ಹೇಳಿಕೆ ಮತ್ತು ಹೊರ ಜಗತ್ತಿನಲ್ಲಿ ದ್ವಿನೀತಿಯನ್ನು ಅನುಸರಿಸುತ್ತಿದೇಯೇ ಎಂಬ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ಸದ್ಯ ಲವ್ ಜಿಹಾದ್ ಪದ ಬಳಕೆ ಬಗ್ಗೆ ಹಲವು ಹೊರಾಟಗಾರರು, ಚಿಂತಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರೀತಿಯಲ್ಲಿ ಜಿಹಾದ್ ಬರುವುದಿಲ್ಲ ಎಂಬ ಮಾತುಗಳನ್ನು ಆಡುತ್ತಿದ್ದಾರೆ. ಆದರೆ ಪ್ರತಿ ದಿನ ಹೆಚ್ಚಾಗುತ್ತಿರುವ ಮಾಧ್ಯಮಗಳ ಕೆಟ್ಟ ಚರ್ಚೆಗಳನ್ನು ನಿಲ್ಲಿಸದಿದ್ದರೇ, ಅವುಗಳ ಮೇಲೆ ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ನಿರ್ಬಂಧ ವಿಧಿಸದಿದ್ದರೇ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು ಖಂಡಿತ.


ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...