Homeಚಳವಳಿಪ್ರೀತಿ ಕೊಂದ ಜಾತಿ... ಜಾತಿಯನ್ನು ಕೊಲ್ಲುವುದು ಯಾವಾಗ?

ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?

- Advertisement -
- Advertisement -

ಘಟನೆ ನಡೆದು ಕೇವಲ 4 ದಿನಗಳಾಗಿವೆ. ಆಗಲೇ ತೆಲಂಗಾಣವೂ ಸೇರಿದಂತೆ ದೇಶಾದ್ಯಂತ ಜನರು ಕಂಬನಿ ಮಿಡಿದಿದ್ದಾರೆ. ಹತ್ಯೆಗೀಡಾದ ಪ್ರಣಯ್‍ನ ಪ್ರಿಯ ಪತ್ನಿ ಅಮೃತಾ ತೆರೆದ ‘ಜಸ್ಟೀಸ್ ಫಾರ್ ಪ್ರಣಯ್’ ಫೇಸ್‍ಬುಕ್ ಪುಟದ ಪ್ರಕಾರ ವಿದೇಶಗಳಲ್ಲೂ ಸಾರ್ವಜನಿಕ ಸಂತಾಪ ಮತ್ತು ಪ್ರತಿಭಟನೆ ನಡೆದಿದೆ.

ಪ್ರಣಯ್ ಎಂಬ ದಲಿತ ಹುಡುಗ, ಅಮೃತಾ ಎಂಬ ಮೇಲ್ಜಾತಿಯ ಹುಡುಗಿಯನ್ನು ಮದುವೆಯಾದದ್ದಕ್ಕಾಗಿ, ಅಮೃತಾಳ ತಂದೆ ಮಾರುತಿರಾವ್ ಕೊಲೆ ಮಾಡಿಸಿದ್ದು ಎಂಬಲ್ಲಿಂದ ಎಲ್ಲಾ ವಿವರಗಳು ಈಗಾಗಲೇ ಓದಿರುತ್ತೀರಿ.
ಪ್ರಶ್ನೆಯಿರುವುದು ಈ ಲೇಖನ ಮಾಡುವುದರ ಜೊತೆಗೆ ‘ಪತ್ರಿಕೆ’ಯ ಜವಾಬ್ದಾರಿ ಮುಗಿದು ಹೋಗುತ್ತದೆಯೇ?

ಫೇಸ್‍ಬುಕ್‍ನಲ್ಲಿ ಆಕ್ರೋಶ, ಕಂಬನಿ ತೋರಿದಾಗ ಮುಗಿದು ಹೋಗುವಂತೆ. ಈಗೀಗ ಅಭಿವ್ಯಕ್ತಿಗೆ ಹೊಸ ದಾರಿಗಳು ಇವೆ. ಫೇಸ್‍ಬುಕ್, ವಾಟ್ಸಾಪ್ ಡಿಪಿ (ಪ್ರೊಫೈಲ್ ಚಿತ್ರ) ಬದಲಿಸುವುದ, ಪೋಸ್ಟರ್ ಮಾಡಿ ಹಂಚಿಕೊಳ್ಳುವುದು. ತಾರಾಮಾರಾ ವ್ಯವಸ್ಥೆಯನ್ನು ಬಯ್ದುಕೊಳ್ಳುವುದು. ನಂತರ ಇನ್ನೊಂದು ಇಂತಹ ಘಟನೆ ನಡೆಯುವವರೆಗೆ ನಡುವೆ ಅದೂ ಇದೂ ಮಾಡಿಕೊಳ್ಳುವುದು. ಮತ್ತೊಂದು ಭೀಕರ ಘಟನೆ ನಡೆದಾಗ ಎಲ್ಲವೂ ಪುನರಾವರ್ತನೆ.

ಹಾಗಾಗಬಾರದೆಂದರೆ ಇನ್ನಷ್ಟು ಆಳಕ್ಕೆ ಹೋಗುವ ಅಗತ್ಯವಿದೆ. ಈ ರೀತಿಯ ಜಾತಿ ಹತ್ಯೆಯಾಗುತ್ತಿರುವ ಸಂದರ್ಭದಲ್ಲೇ, ಎಸ್‍ಸಿ-ಎಸ್‍ಟಿ ಅಟ್ರಾಸಿಟಿ ಕಾಯ್ದೆ ದುರ್ಬಲವಾಗುತ್ತಿದೆ. ಅಕ್ಷರದ ಅರಿವನ್ನೂ ಶೋಷಿತ ಸಮುದಾಯಗಳು ಪಡೆದುಕೊಳ್ಳಲು ಒದ್ದಾಡಬೇಕಾದ ಸ್ಥಿತಿ ಇನ್ನೂ ಇರುವಾಗಲೇ, ಮೀಸಲಾತಿ ತೆಗೆಯಿರಿ ಎಂದು ಕೂಗಾಡುವ ಮನಸ್ಸುಗಳು ಇವೆ. ಇದನ್ನು ಎಲ್ಲಿಂದ ಬದಲಿಸುವುದು? ಹಾಗೆಯೇ ಅದೆಷ್ಟನೇ ಬಾರಿಯೋ, ಕಮ್ಯುನಿಸ್ಟರು ಮತ್ತು ಅಂಬೇಡ್ಕರ್‌ವಾದಿಗಳು ಚರ್ಚೆ ಕನ್ನಡ ಫೇಸ್‍ಬುಕ್ ವಲಯದಲ್ಲಿ ಶುರುವಾಗಿದೆ. ಅದು ಮುಗಿಯುವುದೂ ಕಷ್ಟ.

ಇದು ಮತ್ತೊಂದು ಹತಾಶೆಯ ಸಂದರ್ಭ ವಾಗಬಾರದು ಎಂಬ ಕಾರಣಕ್ಕೆ ಪತ್ರಿಕೆಯು ವಿವಿಧ ಹಿನ್ನೆಲೆಗಳಿಗೆ ಸೇರಿದ ಮೂವರಿಂದ ಈ ಹೊತ್ತಿನ ಮಾತುಗಳನ್ನು ಬರೆದುಕೊಡುವಂತೆ ಕೇಳಿತು. ಈ ಅಂಶಗಳ ಕುರಿತು ಚರ್ಚೆಯಾಗಬೇಕೆಂದು ಬಯಸುತ್ತೇವೆ. ಆದರೆ, ಈ ಚರ್ಚೆಯು ಆಳಕ್ಕೆ ಹೋಗಬೇಕು; ಪರಿಹಾರದ ಕುರಿತು ಸಾಗಬೇಕು. ಸಾಮೂಹಿಕ ಕ್ರಿಯಾಶೀಲತೆಯ ಮೂಲಕ ದಾರಿ ಕಂಡುಕೊಳ್ಳುವಂತೆ ಆಗಬೇಕು.

ಇಲ್ಲದಿದ್ದರೆ, ತನ್ನ ತಂದೆಯಿಂದಲೇ ಕೊಲೆಗೀಡಾದ ಮಂಡ್ಯ ಜಿಲ್ಲೆ ಆಬಲವಾಡಿ ಸುವರ್ಣಳ ಕೇಸಿನಲ್ಲಿ ಆದಂತೆ ಆಗಿಬಿಡಬಹುದು. ಘಟನೆಯ ತರುವಾಯ ಅದನ್ನು ಹೊರತರುವಲ್ಲಿ ಕೆಲವು ಸಂಘಟನೆಗಳ ಬೆಂಬಲವಿದ್ದೂ, ಬಲಾಢ್ಯ ಕೊಲೆಗಡುಕ ತಂದೆಯ ಬಂಧನವಾಗಿದ್ದಾಗ್ಯೂ ನಿಧಾನಕ್ಕೆ ಮೊಕದ್ದಮೆಯ ವಿಚಾರಣೆಯು ನಿರಾಶಾದಾಯಕವಾಗಿ ಸಾಗುತ್ತಿದೆ. ಕೆಲವೇ ತಿಂಗಳಲ್ಲಿ ಜಾಮೀನು ಸಿಕ್ಕಿಬಿಟ್ಟಿತು. ಜಾಮೀನಾದ ನಂತರ ಹಳ್ಳಿಗೆ ಹೋಗಿ ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ. ನಂತರ ಜಾಮೀನು ರದ್ದಾದರೂ, ಇನ್ನೊಂದಷ್ಟು ದಿನಗಳ ನಂತರ ಜೈಲಿನಿಂದ ಹೊರಗೆ ಬರಲು ಸಾಧ್ಯವಾಯಿತು. ‘ಮರ್ಯಾದೆ ಸ್ಥಿರಗೊಂಡಿತು’. ಅಂತಿಮವಾಗಿ ಕಂಬಾಲಪಲ್ಲಿಯಲ್ಲಿ ಆದಂತೆ ಇಲ್ಲಿಯೂ ಸಾಕ್ಷಿಗಳೇ ಉಲ್ಟಾ ಹೊಡೆಯಬಹುದು.

ಇದನ್ನೂ ಓದಿ; ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಹಾಗಾದರೆ ಈ ಜಾತಿ ಹತ್ಯೆಗಳಿಗೆ ನಿಜಕ್ಕೂ ಶಿಕ್ಷೆ ಹೇಗೆ ಆಗುತ್ತದೆ? ಇದು ಕೇವಲ ನ್ಯಾಯಾಲಯಗಳಲ್ಲಿ ಬಗೆಹರಿಯುವ ವಿಷಯ ಅಲ್ಲ ಎಂದಾದಲ್ಲಿ ಸಮಾಜದಲ್ಲಿ ಬಗೆಹರಿಸುವ ವಿಧಾನ ಯಾವುದು ಎಂಬುದನ್ನು ಮನುಷ್ಯ ಧರ್ಮದ ಮೇಲೆ ವಿಶ್ವಾಸವುಳ್ಳ ಎಲ್ಲರೂ ಚಿಂತಿಸಬೇಕು. ಅಂತಹ ಚರ್ಚೆಯನ್ನಷ್ಟೇ ಈ ಸಂಚಿಕೆಯಲ್ಲಿ ಆರಂಭಿಸಲಾಗಿದೆ. ಸಾಂದರ್ಭಿಕವಾದ ಬರಹಗಳನ್ನು ಇಲ್ಲಿ ಪ್ರಕಟಿಸಲಾಗಿದೆ. ಇದರೊಂದಿಗೆ ನಮ್ಮ ಕರ್ತವ್ಯ ಮುಗಿಯುವುದಿಲ್ಲ. ಏಕೆಂದರೆ ಇಂತಹ ಹತ್ಯೆಗಳು ಇದೊಂದೇ ಅಲ್ಲ. ಅವೂ ಇದರೊಂದಿಗೆ ಮುಗಿಯುವುದಿಲ್ಲ.

 

ಗಂಡನ ಕೊಲೆಯ ವಿರುದ್ಧ ಅಮೃತಾಳ ಅಭಿಯಾನ

ಎಲ್ಲರೂ ತಾಯಿಯ ಪ್ರೀತಿಯ ಬಗ್ಗೆಯೇ ಮಾತಾಡುತ್ತಾರೆ; ತಂದೆಯ ತ್ಯಾಗದ ಬಗ್ಗೆ ಯಾರು ಮಾತನಾಡುವುದಿಲ್ಲ’ ಎಂದು ಸೆಪ್ಟೆಂಬರ್ 9ರಂದು ಫಾಧರ್‌ ಡೇಯಂದು ತನ್ನ ಫೇಸ್‍ಬುಕ್ ವಾಲ್ ಮೇಲೆ ಬರೆದುಕೊಂಡಿದ್ದಳು ಅಮೃತಾ. ಅವಳ ಗಂಡ ಪ್ರಣಯ್‍ನನ್ನು, ಆಕೆಯ ಎದುರಿಗೇ ಅದೇ ತಂದೆ ಸೆ.16ರಂದು ಕೊಲ್ಲಿಸಿದ.

ತಂದೆಯೊಂದಿಗೆ ಅಮೃತ

 

ಪ್ರಣಯ್ ಗರ್ಭಿಣಿಯಾದ ತನ್ನ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದ ಸಮಯವನ್ನು ಕಾದು ನೋಡಿ ಅವನ ಮೇಲೆ ದಾಳಿಮಾಡಿ ಮಚ್ಚಿನಲ್ಲಿ ಕೊಚ್ಚಿ ಭೀಕರವಾಗಿ ಕೊಂದು ಹಾಕಿದ್ದಾರೆ. ಈ ಹತ್ಯೆಗೆ ಹುಡುಗಿಯ ತಂದೆ ಮಾರುತಿರಾವ್ ಒಂದು ಕೋಟಿ ರೂಪಾಯಿಗಳ ಸುಪಾರಿ ಕೊಟ್ಟಿದ್ದೆ ಎಂಬ ಹೇಳಿಕೆ ಕೊಟ್ಟಿದ್ದಾನೆ.

ಕೇವಲ 7 ದಿನಗಳ ಹಿಂದೆಯಷ್ಟೇ ತಂದೆಯ ತ್ಯಾಗದ ಕುರಿತು ಸಾರ್ವಜನಿಕವಾಗಿ ಅಮೃತಾ ಬರೆದ ಪೋಸ್ಟಿಗೆ ಈಗ ನೂರಾರು ಜನರು ಪ್ರತಿಕ್ರಿಯಿಸುತ್ತಿದ್ದಾರೆ. ಆಕೆ ಬರೆದ ಪೋಸ್ಟನ್ನು ನೋಡಿದರೆ ಎಂತವರಿಗಾದರೂ ಕಣ್ಣುತುಂಬಿ ಬರುವುದಂತೂ ನಿಜ. ಆದರೆ ಆ ಕಟುಕ ತಂದೆಯ ಮನಸ್ಸು ಮಾತ್ರ ಕರಗದೇ ಇರುವುದು ಜಡ್ಡುಗಟ್ಟಿದ ಜಾತಿ ರೋಗದ ಮತ್ತು ಜಾತಿಯು ಪ್ರತಿಷ್ಠೆಯ ಸಂಕೇತವಾಗಿರುವುದರ ಕುರುಹಾಗಿದೆ.

ಈಗಾಗಲೇ ಎಲ್ಲರಿಗೂ ಗೊತ್ತಿರುವ ಹಾಗೆ ಇದು ಅಂತರ್ಜಾತಿ ಮದುವೆಯನ್ನು ಒಪ್ಪದ ಮೇಲ್ಜಾತಿಯ ಶ್ರೀಮಂತ ಕುಟುಂಬದ ಯಜಮಾನ ನಡೆಸಿರುವ ಘೋರ ಹತ್ಯೆ. ಆ ಕುರಿತ ವಿವರಗಳು ಈಗಾಗಲೇ ಫೇಸ್‍ಬುಕ್ ಮೂಲಕ ಎಲ್ಲರಿಗೂ ಗೊತ್ತಿದೆ. ಆದರೆ, ತನ್ನ ಫೇಸ್‍ಬುಕ್‍ನಲ್ಲಿ ಏನು ಬರೆದುಕೊಂಡಿದ್ದಳು ಎಂಬುದು ಇಡೀ ದುರಂತ ಕಥಾನಕದ ಇತರ ಮಗ್ಗುಲುಗಳನ್ನೂ ತೋರಿಸುತ್ತದೆ.

ತಾನು ‘ಕೆಳ’ಜಾತಿಯ ಪ್ರಣಯ್‍ನನ್ನು ಮದುವೆಯಾದ ಕಾರಣಕ್ಕೆ ತಂದೆ ಮುನಿಸಿಕೊಂಡರೂ ಸಹ ಆಕೆ ತನ್ನ ಫೇಸ್‍ಬುಕ್ ಖಾತೆಯಲ್ಲಿ ತಂದೆಯ ಜನುಮದಿನಕ್ಕೆ ಶುಭ ಕೋರಿದ್ದಾಳೆ. ಅಷ್ಟೇ ಅಲ್ಲದೇ ತಂದೆ ಮತ್ತು ಮಗಳ ಸಂಬಂಧದ ಬಗ್ಗೆಯು ಕೆಲವು ಭಾವನಾತ್ಮಕ ವಿಡಿಯೋಗಳನ್ನು ಕೂಡ ಶೇರ್ ಮಾಡಿದ್ದಾಳೆ.

ಪ್ರಣಯ್ ಮತ್ತು ಅಮೃತ ವರ್ಷಿಣಿ ಒಂಬತ್ತನೇ ತರಗತಿಯಿಂದ ಕ್ಲಾಸ್‍ಮೇಟ್ಸ್ ಮತ್ತು ಬಿ.ಟೆಕ್ ಮುಗಿಸಿದ ನಂತರ ಅವರ ಪ್ರೀತಿಯು ಮದುವೆಯವರೆಗೆ ಹೋಗಿದೆ. ತಮ್ಮಿಬ್ಬರ ಚಿಕ್ಕವಯಸ್ಸಿನ ಫೋಟೋಗಳನ್ನೂ ಷೇರ್ ಮಾಡಿರುವ ಅಮೃತಾ ಆತನನ್ನು ಹಚ್ಚಿಕೊಂಡಿರುವುದು ಎದ್ದು ಕಾಣುತ್ತದೆ.

ತೆಲುಗು ಸಿನೆಮಾದ ಗಾಢ ಪ್ರಭಾವ ಇವರ ಮೇಲಿರುವುದು ಎದ್ದು ಕಾಣುತ್ತದೆ. ಇವರು ಮಾಡಿರುವ ತೆಲುಗು ಸಿನೆಮಾಗಳ ಕೆಲವು ಡಬ್‍ಸ್ಮಾಷ್‍ಗಳು ಮತ್ತು ಅಮೃತ ಹಾಕಿದ ತಮ್ಮ ಜೋಡಿಯ ಮುದ್ದಾದ ಫೋಟೋಗಳ ಮೇಲೆ ಬರೆದ ತಲೆ ಬರಹಗಳು ಅವರು ಒಬ್ಬರನ್ನೊಬ್ಬರು ಎಷ್ಟು ಪ್ರೀತಿಸುತ್ತಿದ್ದರು ಎನ್ನುವುದನ್ನೂ ಹೇಳುತ್ತವೆ.
ಹಾಗೆಯೇ ಈ ಕಾಲದಲ್ಲಿನ ಶ್ರೀಮಂತರ ಮತ್ತು ಮೇಲ್ಮಧ್ಯಮ ವರ್ಗದ ಮದುವೆಯ ಭಾಗವಾಗಿರುವ ಪ್ರೀ ವೆಡ್ಡಿಂಗ್ ಶೂಟ್ ಸಹಾ ಈಕೆಯ ಫೇಸ್‍ಬುಕ್‍ನಲ್ಲಿ ಬಿತ್ತರವಾಗಿದೆ.

ಅದನ್ನು ಸಾಕಷ್ಟು ಜನ ನೋಡಿದ್ಧಾರೆ. ಈ ವಿಡಿಯೋಗೆ ಹೆಚ್ಚು ಲೈಕ್ಸ್ ಬಂದಿರುವುದನ್ನು ನೋಡಿದ ಅಮೃತಾಳ ತಂದೆ, ನಿನ್ನ ಗಂಡನ ಸಾವಿನ ವಿಡಿಯೋ ಕೂಡ ಇದಕ್ಕಿಂತ ಹೆಚ್ಚು ಜನ ನೋಡುತ್ತಾರೆ ಎಂದಿದ್ದನಂತೆ. ಈ ವಿಡಿಯೋ ನೋಡಿ ಮಾರುತಿರಾವ್ ಮತ್ತಷ್ಟು ಕೆರಳಿದ್ದನೆಂದು ಹೇಳುವ ವಿಡಿಯೋ ಈಗಾಗಲೇ ಯೂಟ್ಯೂಬ್‍ನಲ್ಲಿ ಓಡಾಡುತ್ತಿದೆ. ಸರಿಯೋ ತಪ್ಪೋ, ಇಂದಿನ ಯುವಜನರ ಮನೋಭಾವ, ಮದುವೆಯ ಮಾರುಕಟ್ಟೆ, ಸಿನೆಮಾ ಸಂಸ್ಕೃತಿಯ ಪ್ರಭಾವ ಎಲ್ಲವೂ ಫೇಸ್‍ಬುಕ್‍ನಲ್ಲಿ ಎದ್ದು ಕಾಣುತ್ತದೆ.

ತನ್ನ ಪ್ರೇಮಿಯೆಡೆಗಿನ ಪ್ರೀತಿಯೂ ಉತ್ಕಟವಾಗಿ ಮತ್ತು ಎಂದೆಂದೂ ಬಿಟ್ಟಿರಲಾರೆನೆಂಬ ಭಾವವನ್ನು ಹಲವು ಪೋಸ್ಟ್‌ಗಳಲ್ಲಿ ಅವರು ವ್ಯಕ್ತಪಡಿಸುತ್ತಾರೆ; ಅದೇ ರೀತಿಯಲ್ಲಿ ತಂದೆಯ ಕುರಿತ ಉತ್ಕಟ ಅಭಿಮಾನವೂ ಫೇಸ್‍ಬುಕ್‍ನಲ್ಲೇ ಕಾಣುತ್ತದೆ.

ತನ್ನ ಗಂಡನ ಹತ್ಯೆಯ ನಂತರ ತಂದೆಯ ಕುರಿತು ಆಕ್ರೋಶಭರಿತಳಾಗಿರುವ ಅಮೃತ ‘ಜಸ್ಟೀಸ್ ಫಾರ್ ಪ್ರಣಯ್’ ಎಂಬ ಪೇಸ್‍ಬುಕ್ ಪೇಜ್ ತೆರೆದು, ತನ್ನ ತಂದೆಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸುತ್ತಿದ್ದಾಳೆ. ಅಲ್ಲೂ ಮೂರು ಬಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಒಂದು, ಅಮೃತಾ ಮತ್ತು ಪ್ರಣಯ್‍ರ ಮುಗ್ಧ ಪ್ರೀತಿಯ ಪರವಾಗಿ ದನಿಯೆತ್ತಿ ಸಹಾನುಭೂತಿ ವ್ಯಕ್ತಪಡಿಸಿ ಸಂತಾಪ ಸೂಚಿಸುವ ಬಹುತೇಕರು. ಎರಡು, ನಿನ್ನಿಂದ ಮತ್ತು ನಿನ್ನಂತಹ ಜಾತಿಯ ಜನರಿಂದ ಪ್ರಣಯ್ ಥರದವರು ಕೊಲೆಯಾಗುತ್ತಿದ್ದಾರೆ; ನೀನು ನಿನ್ನ ಪಾಡಿಗಿರು ಎಂದು ಹೇಳುವ ಪ್ರಣಯ್‍ನ ಪರವಾಗಿ ನಿಂತ ಬೆರಳೆಣಿಕೆಯವರು. ಮೂರು, ಮೀಸಲಾತಿ ತೆಗೆಯಲು ಹೋರಾಡು; ಆಗಲೇ ಜಾತಿಯೂ ಹೋಗುತ್ತೆ ಎಂದು ಹೇಳುವ ಕೆಲವರು.

ಪ್ರೀತಿ, ದ್ವೇಷ, ಹೋರಾಟ, ಕ್ರೌರ್ಯ ಎಲ್ಲವೂ ಸಾಮಾಜಿಕ ಜಾಲತಾಣಗಳ ಭಾಗವಾಗುತ್ತಿರುವ ದಿನಗಳಲ್ಲಿ ನಮ್ಮೆಲ್ಲರ ಬದುಕಿನ ಮೇಲೂ ಸಮಾಜದ ಪ್ರಭಾವ ಮತ್ತಷ್ಟು ಹೆಚ್ಚಾಗುತ್ತದೆ. ಅದೇ ಸಮಾಜದಲ್ಲಿ ಎಲ್ಲವೂ ಮಾಡ್ರನ್ ಆಗುತ್ತಾ, ಜಾತಿಯ ವಿಷಯದಲ್ಲಿ ಮಾತ್ರ ಹಿಂದುಳಿಯುತ್ತಿರುವುದು ವಿಪರ್ಯಾಸ.

– ಅನಿಲ್‍ಕುಮಾರ್ ಚಿಕ್ಕದಾಳವಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...