Homeಚಳವಳಿಪ್ರೀತಿ ಕೊಂದ ಜಾತಿ... ಜಾತಿಯನ್ನು ಕೊಲ್ಲುವುದು ಯಾವಾಗ?

ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?

- Advertisement -
- Advertisement -

ಘಟನೆ ನಡೆದು ಕೇವಲ 4 ದಿನಗಳಾಗಿವೆ. ಆಗಲೇ ತೆಲಂಗಾಣವೂ ಸೇರಿದಂತೆ ದೇಶಾದ್ಯಂತ ಜನರು ಕಂಬನಿ ಮಿಡಿದಿದ್ದಾರೆ. ಹತ್ಯೆಗೀಡಾದ ಪ್ರಣಯ್‍ನ ಪ್ರಿಯ ಪತ್ನಿ ಅಮೃತಾ ತೆರೆದ ‘ಜಸ್ಟೀಸ್ ಫಾರ್ ಪ್ರಣಯ್’ ಫೇಸ್‍ಬುಕ್ ಪುಟದ ಪ್ರಕಾರ ವಿದೇಶಗಳಲ್ಲೂ ಸಾರ್ವಜನಿಕ ಸಂತಾಪ ಮತ್ತು ಪ್ರತಿಭಟನೆ ನಡೆದಿದೆ.

ಪ್ರಣಯ್ ಎಂಬ ದಲಿತ ಹುಡುಗ, ಅಮೃತಾ ಎಂಬ ಮೇಲ್ಜಾತಿಯ ಹುಡುಗಿಯನ್ನು ಮದುವೆಯಾದದ್ದಕ್ಕಾಗಿ, ಅಮೃತಾಳ ತಂದೆ ಮಾರುತಿರಾವ್ ಕೊಲೆ ಮಾಡಿಸಿದ್ದು ಎಂಬಲ್ಲಿಂದ ಎಲ್ಲಾ ವಿವರಗಳು ಈಗಾಗಲೇ ಓದಿರುತ್ತೀರಿ.
ಪ್ರಶ್ನೆಯಿರುವುದು ಈ ಲೇಖನ ಮಾಡುವುದರ ಜೊತೆಗೆ ‘ಪತ್ರಿಕೆ’ಯ ಜವಾಬ್ದಾರಿ ಮುಗಿದು ಹೋಗುತ್ತದೆಯೇ?

ಫೇಸ್‍ಬುಕ್‍ನಲ್ಲಿ ಆಕ್ರೋಶ, ಕಂಬನಿ ತೋರಿದಾಗ ಮುಗಿದು ಹೋಗುವಂತೆ. ಈಗೀಗ ಅಭಿವ್ಯಕ್ತಿಗೆ ಹೊಸ ದಾರಿಗಳು ಇವೆ. ಫೇಸ್‍ಬುಕ್, ವಾಟ್ಸಾಪ್ ಡಿಪಿ (ಪ್ರೊಫೈಲ್ ಚಿತ್ರ) ಬದಲಿಸುವುದ, ಪೋಸ್ಟರ್ ಮಾಡಿ ಹಂಚಿಕೊಳ್ಳುವುದು. ತಾರಾಮಾರಾ ವ್ಯವಸ್ಥೆಯನ್ನು ಬಯ್ದುಕೊಳ್ಳುವುದು. ನಂತರ ಇನ್ನೊಂದು ಇಂತಹ ಘಟನೆ ನಡೆಯುವವರೆಗೆ ನಡುವೆ ಅದೂ ಇದೂ ಮಾಡಿಕೊಳ್ಳುವುದು. ಮತ್ತೊಂದು ಭೀಕರ ಘಟನೆ ನಡೆದಾಗ ಎಲ್ಲವೂ ಪುನರಾವರ್ತನೆ.

ಹಾಗಾಗಬಾರದೆಂದರೆ ಇನ್ನಷ್ಟು ಆಳಕ್ಕೆ ಹೋಗುವ ಅಗತ್ಯವಿದೆ. ಈ ರೀತಿಯ ಜಾತಿ ಹತ್ಯೆಯಾಗುತ್ತಿರುವ ಸಂದರ್ಭದಲ್ಲೇ, ಎಸ್‍ಸಿ-ಎಸ್‍ಟಿ ಅಟ್ರಾಸಿಟಿ ಕಾಯ್ದೆ ದುರ್ಬಲವಾಗುತ್ತಿದೆ. ಅಕ್ಷರದ ಅರಿವನ್ನೂ ಶೋಷಿತ ಸಮುದಾಯಗಳು ಪಡೆದುಕೊಳ್ಳಲು ಒದ್ದಾಡಬೇಕಾದ ಸ್ಥಿತಿ ಇನ್ನೂ ಇರುವಾಗಲೇ, ಮೀಸಲಾತಿ ತೆಗೆಯಿರಿ ಎಂದು ಕೂಗಾಡುವ ಮನಸ್ಸುಗಳು ಇವೆ. ಇದನ್ನು ಎಲ್ಲಿಂದ ಬದಲಿಸುವುದು? ಹಾಗೆಯೇ ಅದೆಷ್ಟನೇ ಬಾರಿಯೋ, ಕಮ್ಯುನಿಸ್ಟರು ಮತ್ತು ಅಂಬೇಡ್ಕರ್‌ವಾದಿಗಳು ಚರ್ಚೆ ಕನ್ನಡ ಫೇಸ್‍ಬುಕ್ ವಲಯದಲ್ಲಿ ಶುರುವಾಗಿದೆ. ಅದು ಮುಗಿಯುವುದೂ ಕಷ್ಟ.

ಇದು ಮತ್ತೊಂದು ಹತಾಶೆಯ ಸಂದರ್ಭ ವಾಗಬಾರದು ಎಂಬ ಕಾರಣಕ್ಕೆ ಪತ್ರಿಕೆಯು ವಿವಿಧ ಹಿನ್ನೆಲೆಗಳಿಗೆ ಸೇರಿದ ಮೂವರಿಂದ ಈ ಹೊತ್ತಿನ ಮಾತುಗಳನ್ನು ಬರೆದುಕೊಡುವಂತೆ ಕೇಳಿತು. ಈ ಅಂಶಗಳ ಕುರಿತು ಚರ್ಚೆಯಾಗಬೇಕೆಂದು ಬಯಸುತ್ತೇವೆ. ಆದರೆ, ಈ ಚರ್ಚೆಯು ಆಳಕ್ಕೆ ಹೋಗಬೇಕು; ಪರಿಹಾರದ ಕುರಿತು ಸಾಗಬೇಕು. ಸಾಮೂಹಿಕ ಕ್ರಿಯಾಶೀಲತೆಯ ಮೂಲಕ ದಾರಿ ಕಂಡುಕೊಳ್ಳುವಂತೆ ಆಗಬೇಕು.

ಇಲ್ಲದಿದ್ದರೆ, ತನ್ನ ತಂದೆಯಿಂದಲೇ ಕೊಲೆಗೀಡಾದ ಮಂಡ್ಯ ಜಿಲ್ಲೆ ಆಬಲವಾಡಿ ಸುವರ್ಣಳ ಕೇಸಿನಲ್ಲಿ ಆದಂತೆ ಆಗಿಬಿಡಬಹುದು. ಘಟನೆಯ ತರುವಾಯ ಅದನ್ನು ಹೊರತರುವಲ್ಲಿ ಕೆಲವು ಸಂಘಟನೆಗಳ ಬೆಂಬಲವಿದ್ದೂ, ಬಲಾಢ್ಯ ಕೊಲೆಗಡುಕ ತಂದೆಯ ಬಂಧನವಾಗಿದ್ದಾಗ್ಯೂ ನಿಧಾನಕ್ಕೆ ಮೊಕದ್ದಮೆಯ ವಿಚಾರಣೆಯು ನಿರಾಶಾದಾಯಕವಾಗಿ ಸಾಗುತ್ತಿದೆ. ಕೆಲವೇ ತಿಂಗಳಲ್ಲಿ ಜಾಮೀನು ಸಿಕ್ಕಿಬಿಟ್ಟಿತು. ಜಾಮೀನಾದ ನಂತರ ಹಳ್ಳಿಗೆ ಹೋಗಿ ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ. ನಂತರ ಜಾಮೀನು ರದ್ದಾದರೂ, ಇನ್ನೊಂದಷ್ಟು ದಿನಗಳ ನಂತರ ಜೈಲಿನಿಂದ ಹೊರಗೆ ಬರಲು ಸಾಧ್ಯವಾಯಿತು. ‘ಮರ್ಯಾದೆ ಸ್ಥಿರಗೊಂಡಿತು’. ಅಂತಿಮವಾಗಿ ಕಂಬಾಲಪಲ್ಲಿಯಲ್ಲಿ ಆದಂತೆ ಇಲ್ಲಿಯೂ ಸಾಕ್ಷಿಗಳೇ ಉಲ್ಟಾ ಹೊಡೆಯಬಹುದು.

ಇದನ್ನೂ ಓದಿ; ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಹಾಗಾದರೆ ಈ ಜಾತಿ ಹತ್ಯೆಗಳಿಗೆ ನಿಜಕ್ಕೂ ಶಿಕ್ಷೆ ಹೇಗೆ ಆಗುತ್ತದೆ? ಇದು ಕೇವಲ ನ್ಯಾಯಾಲಯಗಳಲ್ಲಿ ಬಗೆಹರಿಯುವ ವಿಷಯ ಅಲ್ಲ ಎಂದಾದಲ್ಲಿ ಸಮಾಜದಲ್ಲಿ ಬಗೆಹರಿಸುವ ವಿಧಾನ ಯಾವುದು ಎಂಬುದನ್ನು ಮನುಷ್ಯ ಧರ್ಮದ ಮೇಲೆ ವಿಶ್ವಾಸವುಳ್ಳ ಎಲ್ಲರೂ ಚಿಂತಿಸಬೇಕು. ಅಂತಹ ಚರ್ಚೆಯನ್ನಷ್ಟೇ ಈ ಸಂಚಿಕೆಯಲ್ಲಿ ಆರಂಭಿಸಲಾಗಿದೆ. ಸಾಂದರ್ಭಿಕವಾದ ಬರಹಗಳನ್ನು ಇಲ್ಲಿ ಪ್ರಕಟಿಸಲಾಗಿದೆ. ಇದರೊಂದಿಗೆ ನಮ್ಮ ಕರ್ತವ್ಯ ಮುಗಿಯುವುದಿಲ್ಲ. ಏಕೆಂದರೆ ಇಂತಹ ಹತ್ಯೆಗಳು ಇದೊಂದೇ ಅಲ್ಲ. ಅವೂ ಇದರೊಂದಿಗೆ ಮುಗಿಯುವುದಿಲ್ಲ.

 

ಗಂಡನ ಕೊಲೆಯ ವಿರುದ್ಧ ಅಮೃತಾಳ ಅಭಿಯಾನ

ಎಲ್ಲರೂ ತಾಯಿಯ ಪ್ರೀತಿಯ ಬಗ್ಗೆಯೇ ಮಾತಾಡುತ್ತಾರೆ; ತಂದೆಯ ತ್ಯಾಗದ ಬಗ್ಗೆ ಯಾರು ಮಾತನಾಡುವುದಿಲ್ಲ’ ಎಂದು ಸೆಪ್ಟೆಂಬರ್ 9ರಂದು ಫಾಧರ್‌ ಡೇಯಂದು ತನ್ನ ಫೇಸ್‍ಬುಕ್ ವಾಲ್ ಮೇಲೆ ಬರೆದುಕೊಂಡಿದ್ದಳು ಅಮೃತಾ. ಅವಳ ಗಂಡ ಪ್ರಣಯ್‍ನನ್ನು, ಆಕೆಯ ಎದುರಿಗೇ ಅದೇ ತಂದೆ ಸೆ.16ರಂದು ಕೊಲ್ಲಿಸಿದ.

ತಂದೆಯೊಂದಿಗೆ ಅಮೃತ

 

ಪ್ರಣಯ್ ಗರ್ಭಿಣಿಯಾದ ತನ್ನ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದ ಸಮಯವನ್ನು ಕಾದು ನೋಡಿ ಅವನ ಮೇಲೆ ದಾಳಿಮಾಡಿ ಮಚ್ಚಿನಲ್ಲಿ ಕೊಚ್ಚಿ ಭೀಕರವಾಗಿ ಕೊಂದು ಹಾಕಿದ್ದಾರೆ. ಈ ಹತ್ಯೆಗೆ ಹುಡುಗಿಯ ತಂದೆ ಮಾರುತಿರಾವ್ ಒಂದು ಕೋಟಿ ರೂಪಾಯಿಗಳ ಸುಪಾರಿ ಕೊಟ್ಟಿದ್ದೆ ಎಂಬ ಹೇಳಿಕೆ ಕೊಟ್ಟಿದ್ದಾನೆ.

ಕೇವಲ 7 ದಿನಗಳ ಹಿಂದೆಯಷ್ಟೇ ತಂದೆಯ ತ್ಯಾಗದ ಕುರಿತು ಸಾರ್ವಜನಿಕವಾಗಿ ಅಮೃತಾ ಬರೆದ ಪೋಸ್ಟಿಗೆ ಈಗ ನೂರಾರು ಜನರು ಪ್ರತಿಕ್ರಿಯಿಸುತ್ತಿದ್ದಾರೆ. ಆಕೆ ಬರೆದ ಪೋಸ್ಟನ್ನು ನೋಡಿದರೆ ಎಂತವರಿಗಾದರೂ ಕಣ್ಣುತುಂಬಿ ಬರುವುದಂತೂ ನಿಜ. ಆದರೆ ಆ ಕಟುಕ ತಂದೆಯ ಮನಸ್ಸು ಮಾತ್ರ ಕರಗದೇ ಇರುವುದು ಜಡ್ಡುಗಟ್ಟಿದ ಜಾತಿ ರೋಗದ ಮತ್ತು ಜಾತಿಯು ಪ್ರತಿಷ್ಠೆಯ ಸಂಕೇತವಾಗಿರುವುದರ ಕುರುಹಾಗಿದೆ.

ಈಗಾಗಲೇ ಎಲ್ಲರಿಗೂ ಗೊತ್ತಿರುವ ಹಾಗೆ ಇದು ಅಂತರ್ಜಾತಿ ಮದುವೆಯನ್ನು ಒಪ್ಪದ ಮೇಲ್ಜಾತಿಯ ಶ್ರೀಮಂತ ಕುಟುಂಬದ ಯಜಮಾನ ನಡೆಸಿರುವ ಘೋರ ಹತ್ಯೆ. ಆ ಕುರಿತ ವಿವರಗಳು ಈಗಾಗಲೇ ಫೇಸ್‍ಬುಕ್ ಮೂಲಕ ಎಲ್ಲರಿಗೂ ಗೊತ್ತಿದೆ. ಆದರೆ, ತನ್ನ ಫೇಸ್‍ಬುಕ್‍ನಲ್ಲಿ ಏನು ಬರೆದುಕೊಂಡಿದ್ದಳು ಎಂಬುದು ಇಡೀ ದುರಂತ ಕಥಾನಕದ ಇತರ ಮಗ್ಗುಲುಗಳನ್ನೂ ತೋರಿಸುತ್ತದೆ.

ತಾನು ‘ಕೆಳ’ಜಾತಿಯ ಪ್ರಣಯ್‍ನನ್ನು ಮದುವೆಯಾದ ಕಾರಣಕ್ಕೆ ತಂದೆ ಮುನಿಸಿಕೊಂಡರೂ ಸಹ ಆಕೆ ತನ್ನ ಫೇಸ್‍ಬುಕ್ ಖಾತೆಯಲ್ಲಿ ತಂದೆಯ ಜನುಮದಿನಕ್ಕೆ ಶುಭ ಕೋರಿದ್ದಾಳೆ. ಅಷ್ಟೇ ಅಲ್ಲದೇ ತಂದೆ ಮತ್ತು ಮಗಳ ಸಂಬಂಧದ ಬಗ್ಗೆಯು ಕೆಲವು ಭಾವನಾತ್ಮಕ ವಿಡಿಯೋಗಳನ್ನು ಕೂಡ ಶೇರ್ ಮಾಡಿದ್ದಾಳೆ.

ಪ್ರಣಯ್ ಮತ್ತು ಅಮೃತ ವರ್ಷಿಣಿ ಒಂಬತ್ತನೇ ತರಗತಿಯಿಂದ ಕ್ಲಾಸ್‍ಮೇಟ್ಸ್ ಮತ್ತು ಬಿ.ಟೆಕ್ ಮುಗಿಸಿದ ನಂತರ ಅವರ ಪ್ರೀತಿಯು ಮದುವೆಯವರೆಗೆ ಹೋಗಿದೆ. ತಮ್ಮಿಬ್ಬರ ಚಿಕ್ಕವಯಸ್ಸಿನ ಫೋಟೋಗಳನ್ನೂ ಷೇರ್ ಮಾಡಿರುವ ಅಮೃತಾ ಆತನನ್ನು ಹಚ್ಚಿಕೊಂಡಿರುವುದು ಎದ್ದು ಕಾಣುತ್ತದೆ.

ತೆಲುಗು ಸಿನೆಮಾದ ಗಾಢ ಪ್ರಭಾವ ಇವರ ಮೇಲಿರುವುದು ಎದ್ದು ಕಾಣುತ್ತದೆ. ಇವರು ಮಾಡಿರುವ ತೆಲುಗು ಸಿನೆಮಾಗಳ ಕೆಲವು ಡಬ್‍ಸ್ಮಾಷ್‍ಗಳು ಮತ್ತು ಅಮೃತ ಹಾಕಿದ ತಮ್ಮ ಜೋಡಿಯ ಮುದ್ದಾದ ಫೋಟೋಗಳ ಮೇಲೆ ಬರೆದ ತಲೆ ಬರಹಗಳು ಅವರು ಒಬ್ಬರನ್ನೊಬ್ಬರು ಎಷ್ಟು ಪ್ರೀತಿಸುತ್ತಿದ್ದರು ಎನ್ನುವುದನ್ನೂ ಹೇಳುತ್ತವೆ.
ಹಾಗೆಯೇ ಈ ಕಾಲದಲ್ಲಿನ ಶ್ರೀಮಂತರ ಮತ್ತು ಮೇಲ್ಮಧ್ಯಮ ವರ್ಗದ ಮದುವೆಯ ಭಾಗವಾಗಿರುವ ಪ್ರೀ ವೆಡ್ಡಿಂಗ್ ಶೂಟ್ ಸಹಾ ಈಕೆಯ ಫೇಸ್‍ಬುಕ್‍ನಲ್ಲಿ ಬಿತ್ತರವಾಗಿದೆ.

ಅದನ್ನು ಸಾಕಷ್ಟು ಜನ ನೋಡಿದ್ಧಾರೆ. ಈ ವಿಡಿಯೋಗೆ ಹೆಚ್ಚು ಲೈಕ್ಸ್ ಬಂದಿರುವುದನ್ನು ನೋಡಿದ ಅಮೃತಾಳ ತಂದೆ, ನಿನ್ನ ಗಂಡನ ಸಾವಿನ ವಿಡಿಯೋ ಕೂಡ ಇದಕ್ಕಿಂತ ಹೆಚ್ಚು ಜನ ನೋಡುತ್ತಾರೆ ಎಂದಿದ್ದನಂತೆ. ಈ ವಿಡಿಯೋ ನೋಡಿ ಮಾರುತಿರಾವ್ ಮತ್ತಷ್ಟು ಕೆರಳಿದ್ದನೆಂದು ಹೇಳುವ ವಿಡಿಯೋ ಈಗಾಗಲೇ ಯೂಟ್ಯೂಬ್‍ನಲ್ಲಿ ಓಡಾಡುತ್ತಿದೆ. ಸರಿಯೋ ತಪ್ಪೋ, ಇಂದಿನ ಯುವಜನರ ಮನೋಭಾವ, ಮದುವೆಯ ಮಾರುಕಟ್ಟೆ, ಸಿನೆಮಾ ಸಂಸ್ಕೃತಿಯ ಪ್ರಭಾವ ಎಲ್ಲವೂ ಫೇಸ್‍ಬುಕ್‍ನಲ್ಲಿ ಎದ್ದು ಕಾಣುತ್ತದೆ.

ತನ್ನ ಪ್ರೇಮಿಯೆಡೆಗಿನ ಪ್ರೀತಿಯೂ ಉತ್ಕಟವಾಗಿ ಮತ್ತು ಎಂದೆಂದೂ ಬಿಟ್ಟಿರಲಾರೆನೆಂಬ ಭಾವವನ್ನು ಹಲವು ಪೋಸ್ಟ್‌ಗಳಲ್ಲಿ ಅವರು ವ್ಯಕ್ತಪಡಿಸುತ್ತಾರೆ; ಅದೇ ರೀತಿಯಲ್ಲಿ ತಂದೆಯ ಕುರಿತ ಉತ್ಕಟ ಅಭಿಮಾನವೂ ಫೇಸ್‍ಬುಕ್‍ನಲ್ಲೇ ಕಾಣುತ್ತದೆ.

ತನ್ನ ಗಂಡನ ಹತ್ಯೆಯ ನಂತರ ತಂದೆಯ ಕುರಿತು ಆಕ್ರೋಶಭರಿತಳಾಗಿರುವ ಅಮೃತ ‘ಜಸ್ಟೀಸ್ ಫಾರ್ ಪ್ರಣಯ್’ ಎಂಬ ಪೇಸ್‍ಬುಕ್ ಪೇಜ್ ತೆರೆದು, ತನ್ನ ತಂದೆಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸುತ್ತಿದ್ದಾಳೆ. ಅಲ್ಲೂ ಮೂರು ಬಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಒಂದು, ಅಮೃತಾ ಮತ್ತು ಪ್ರಣಯ್‍ರ ಮುಗ್ಧ ಪ್ರೀತಿಯ ಪರವಾಗಿ ದನಿಯೆತ್ತಿ ಸಹಾನುಭೂತಿ ವ್ಯಕ್ತಪಡಿಸಿ ಸಂತಾಪ ಸೂಚಿಸುವ ಬಹುತೇಕರು. ಎರಡು, ನಿನ್ನಿಂದ ಮತ್ತು ನಿನ್ನಂತಹ ಜಾತಿಯ ಜನರಿಂದ ಪ್ರಣಯ್ ಥರದವರು ಕೊಲೆಯಾಗುತ್ತಿದ್ದಾರೆ; ನೀನು ನಿನ್ನ ಪಾಡಿಗಿರು ಎಂದು ಹೇಳುವ ಪ್ರಣಯ್‍ನ ಪರವಾಗಿ ನಿಂತ ಬೆರಳೆಣಿಕೆಯವರು. ಮೂರು, ಮೀಸಲಾತಿ ತೆಗೆಯಲು ಹೋರಾಡು; ಆಗಲೇ ಜಾತಿಯೂ ಹೋಗುತ್ತೆ ಎಂದು ಹೇಳುವ ಕೆಲವರು.

ಪ್ರೀತಿ, ದ್ವೇಷ, ಹೋರಾಟ, ಕ್ರೌರ್ಯ ಎಲ್ಲವೂ ಸಾಮಾಜಿಕ ಜಾಲತಾಣಗಳ ಭಾಗವಾಗುತ್ತಿರುವ ದಿನಗಳಲ್ಲಿ ನಮ್ಮೆಲ್ಲರ ಬದುಕಿನ ಮೇಲೂ ಸಮಾಜದ ಪ್ರಭಾವ ಮತ್ತಷ್ಟು ಹೆಚ್ಚಾಗುತ್ತದೆ. ಅದೇ ಸಮಾಜದಲ್ಲಿ ಎಲ್ಲವೂ ಮಾಡ್ರನ್ ಆಗುತ್ತಾ, ಜಾತಿಯ ವಿಷಯದಲ್ಲಿ ಮಾತ್ರ ಹಿಂದುಳಿಯುತ್ತಿರುವುದು ವಿಪರ್ಯಾಸ.

– ಅನಿಲ್‍ಕುಮಾರ್ ಚಿಕ್ಕದಾಳವಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...