Homeಮುಖಪುಟ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

- Advertisement -
- Advertisement -

ಭಾರತೀಯ ಸಿನಿಮಾ ಉದ್ದಿಮೆಯಲ್ಲಿ ಹಿಂದಿ ಚಿತ್ರರಂಗ ಬಿಟ್ಟರೆ ಹೆಚ್ಚು ವಹಿವಾಟು ಇರುವುದು ತೆಲುಗು ಸಿನಿಮಾಗಳಿಗೆ. ಒಂದು ಕಾಲಕ್ಕೆ ಭಾರತದಲ್ಲೇ ಅತಿಹೆಚ್ಚು ಚಿತ್ರಮಂದಿರಗಳನ್ನು ಹೊಂದಿದ ರಾಜ್ಯ ಆಂಧ್ರಪ್ರದೇಶ. ಸಿನಿಮಾ ನಾಯಕನಟರನ್ನು ತೀವ್ರತೆಯಲ್ಲಿ ಅಭಿಮಾನಿಸುವುದು ಕೂಡ ಇದೇ ತೆಲುಗು ಸಿನಿಮಾ ರಂಗದಲ್ಲಿ. ಇಷ್ಟು ಮಾತ್ರವಾಗಿದ್ದರೆ ಹೆಚ್ಚು ಅಪಾಯವಿಲ್ಲ, ಆದರೆ ಈ ಅಭಿಮಾನ ಜಾತಿ ಆಧಾರಿತವಾಗಿರುವುದು ಕೂಡ ತೆಲುಗು ಸಿನಿಮಾರಂಗ ಸಮಾಜದ ಸ್ವಾಸ್ಥ್ಯವನ್ನು ಇನ್ನಷ್ಟು ಹದಗೆಡಿಸಿದೆ. ತಮ್ಮ ಜಾತಿಯ ನಾಯಕನ ನಟನ ಸಿನಿಮಾ ಯಶಸ್ಸುಗಳಿಸಬೇಕು ಎಂದು ಅಭಿಮಾನಿಗಳು ಅವರ ಸಿನಿಮಾಗಳನ್ನು ವಿಜೃಂಭಿಸುವ ಉದಾಹರಣೆಗಳು ಕೂಡ ಚರ್ಚೆಯಾಗಿದೆ. ಅಲ್ಲದೆ ತೆಲುಗು ಚಿತ್ರರಂಗ ಕುಟುಂಬ ಸದಸ್ಯರಿಂದ
ಆವರಿಸಿಕೊಂಡಿರುವುದು ಕೂಡ ಸಮಸ್ಯೆಯನ್ನು ಬಿಗಡಾಯಿಸಿ, ಪಿತ್ರಾರ್ಜಿತ ಜಹಾಗೀರುದಾರಿಕೆಯನ್ನಾಗಿಸಿದೆ. ಇನ್ನು ಹಲವು ಸಿನಿಮಾಗಳಲ್ಲಿ ಚಿತ್ರಿತವಾಗುವ ಕಥೆಗಳು ಕೂಡ ಇದೇ ಪಾಳೆಗಾರಿಕೆ ಮನಸ್ಥಿತಿಯವೇ. ಈ ರೀತಿಯ ಪಾಳೆಗಾರಿಕೆ ಮನಸ್ಥಿತಿಯನ್ನು ಕೇವಲ ಸಿನಿಮಾದಲ್ಲಷ್ಟೇ ಅಲ್ಲ ಸಿನಿಮಾ ನಾಯಕ ನಟರ ಸಾರ್ವಜನಿಕ ನಡವಳಿಕೆಯಲ್ಲಿ ಪ್ರತಿಬಿಂಬವಾಗುವುದನ್ನು ಕೂಡ ಕಾಣಬಹುದು.

ಈ ಪರಿಯಾಗಿ ಬಹುತೇಕ ಜಡ್ಡುಗಟ್ಟಿದ ಫ್ಯೂಡಲ್ ತೆಲುಗು ಚಿತ್ರ ರಂಗದಲ್ಲಿ ಶೇಖರ್ ಕಮ್ಮುಲ ತಮ್ಮ ’ಲವ್ ಸ್ಟೋರಿ’ ಸಿನಿಮಾ ಮೂಲಕ ತೆಲುಗು ಸಿನಿಮಾ ಪ್ರೇಕ್ಷಕರಿಗೆ ಹೊಸ ಕಣ್ಣೋಟವೊಂದನ್ನು ನೀಡಿದ್ದಾರೆ. ಇದು ಆಶ್ಚರ್ಯಕ್ಕಿಂತ ಖುಷಿಯ ಸಂಗತಿ. ಈ ಹಿಂದೆ ಸುಕುಮಾರ್ ನಿರ್ದೇಶಿಸಿದ ’ರಂಗಸ್ಥಳಂ’ ಸಿನಿಮಾದಲ್ಲಿ ಜಾತಿ ಕುರಿತಾದ ವಿಷಯವನ್ನು ಡೀಲ್ ಮಾಡಿದ್ದರಾದರೂ, ಅದು ಜಾತಿ ಕುರಿತಾದ ಅಸಮಾನತೆ, ದಬ್ಬಾಳಿಕೆಯ, ಕ್ರೌರ್ಯ ಇಂತಹ ಮೂಲಭೂತ ಸಂಗತಿಗಳು ಸಮುದಾಯದ ಹಿನ್ನಲೆಯಲ್ಲಿ ಪ್ರೇಕ್ಷಕನಿಗೆ ದಾಟಿದ್ದಕ್ಕಿಂತ, ವ್ಯಕ್ತಿಯೊಬ್ಬನ ಖಾಸಗಿ ಪ್ರತೀಕಾರವಾಗಿ ಸಿಕ್ಕಿತ್ತು.

ಲವ್ ಸ್ಟೋರಿ

ಲವ್ ಸ್ಟೋರಿ ಸಿನಿಮಾದಲ್ಲಿ ಎರಡು ಸಂಗತಿಗಳನ್ನು ಸಮಾನಾಂತರವಾಗಿ ಕಟ್ಟಿಕೊಡಲು ಪ್ರಯತ್ನಿಸಲಾಗಿದೆ. ಒಂದು ನಮ್ಮ ಸಮಾಜದಲ್ಲಿರುವ ಜಾತಿ ವ್ಯವಸ್ಥೆ. ಮತ್ತೊಂದು ಫ್ಯೂಡಲ್ ಜಾತಿಯ ಪುರುಷ ಪ್ರಧಾನ ಕೌಟಂಬಿಕ ವ್ಯವಸ್ಥೆ ಒಳಗೆ ಹೆಣ್ಣಿನ ಬಗೆಗಿನ ದೃಷ್ಟಿಕೋನ. ದಲಿತ ಸಮುದಾಯದ ರೇವಂತ್ ಕಥಾನಾಯಕ, ಫ್ಯೂಡಲ್ ಸಮುದಾಯದ ಮೊನಿಕಾ ನಾಯಕಿ, ಕಥಾನಾಯಕನ ತಾಯಿ ಮನಮ್ಮ ಮತ್ತು ಕಥಾನಾಯಕಿಯ ಚಿಕ್ಕಪ್ಪ ನರಸಿಂಹಂ. ಈ ನಾಲ್ಕು ಪ್ರಧಾನ ಪಾತ್ರಗಳು. ಗಂಡನನ್ನು ಕಳೆದುಕೊಂಡ ಮನಮ್ಮ ಜಾತಿ ಅವಮಾನಗಳಿಂದ ಬೇಸತ್ತು ತನ್ನದೇ ಒಂದು ತುಂಡು ಭೂಮಿ ಹೊಂದುವುದು ಮತ್ತು ಆ ಮೂಲಕ ತನ್ನ ಅಸ್ತಿತ್ವ ಮತ್ತು ಸ್ವಾಭಿಮಾನವನ್ನು ಉಳಿಸಿಕೊಳ್ಳುವುದನ್ನು ಛಲಬಿಡದೆ ಸಾಧಿಸಿದ್ದಾಳೆ.

ತನ್ನ ಮಗನಿಗೆ ಬಾಲ್ಯದಿಂದಲೂ ಈ ಜಾತಿ ತಾರತಮ್ಯದ ಸೂಕ್ಷ್ಮಗಳು ಹೇಗಿರುತ್ತವೆ ಅನ್ನೋದನ್ನ ಹೇಳುತ್ತಿರುತ್ತಾಳೆ. ಈ ನಾಲ್ಕರಲ್ಲಿ ಮಾನಮ್ಮನದು ಬಹಳ ಗಟ್ಟಿಯಾದ ಮತ್ತು ವೈಚಾರಿಕವಾಗಿ ಸ್ಪಷ್ಟತೆ ಇರುವ ಪಾತ್ರ. ಅದೇ ರೀತಿ ಮಗ ರೇವಂತ್ ತನ್ನದೇ ಒಂದು ಸ್ವ ಉದ್ಯೋಗ/ಉದ್ಯಮದಿಂದ ಜೀವನ ರೂಪಿಸಿಕೊಳ್ಳಲು ಹಳ್ಳಿಯಿಂದ ನಗರಕ್ಕೆ ಬಂದು ಹೆಣಗುತ್ತಿದ್ದಾನೆ. ಕಥಾನಾಯಕಿ ಕೂಡ ತನ್ನ ಚಿಕ್ಕಪ್ಪನ ಯಜಮಾನಿಕೆಯಿಂದ ಬೇಸತ್ತು ಸ್ವಂತ ಉದ್ಯೋಗ ಮಾಡಿ ಜೀವನ ರೂಪಿಸಿಕೊಳ್ಳಲು ನಗರಕ್ಕೆ ಬಂದಿದ್ದಾಳೆ. ಇನ್ನು ಇವಳ ಚಿಕ್ಕಪ್ಪ ಹಳ್ಳಿಯಲ್ಲಿ ಬಡವರ ಜಮೀನನ್ನು ಕಬ್ಜ ಮಾಡುವುದು, ತನ್ನದೇ ಅಣ್ಣನ ಕುಡಿತದ ಚಟವನ್ನು ಮೂದಲಿಸಿ, ಅದೇ ಕಾರಣಕ್ಕೆ ಕುಟುಂಬದ ಮೇಲೆ ಯಜಮಾನಿಕೆ ಸಾಧಿಸುವುದನ್ನು ಮಾಡುತ್ತಿರುತ್ತಾನೆ. ಮೊನಿಕ ನಗರಕ್ಕೆ ಬಂದರೂ ಇವನು ಬೆಂಬಿಡದ ಭೂತದಂತೆ ಕಾಡುತ್ತಿರುತ್ತಾನೆ.

ನಿರ್ದೇಶಕ ಶೇಖರ್ ಸಿನಿಮಾದಲ್ಲಿ ಹೇಳಬೇಕಂದಿರುವ ಆಶಯ ಮೆಚ್ಚುವಂತದ್ದು. ಆದರೆ ಅದನ್ನು ಕಟ್ಟಿಕೊಡುವಲ್ಲಿ ಕೆಲವು ಕಡೆ ಎಡವಿ ನಿರೂಪಣೆ ದುರ್ಬಲವಾಗಿದೆ. ತಮ್ಮ ಅಲೋಚನೆಗೆ ಪೂರಕವಾಗಿ ದೃಶ್ಯಗಳನ್ನು ಒಟ್ಟು ಬಂಧದಲ್ಲಿ ಕಟ್ಟಿಕೊಡಲು ಸಾಧ್ಯವಾಗಿಲ್ಲ. ಪಾತ್ರಗಳಲ್ಲಿ ಕನ್ಸಿಸ್ಟಿನ್ಸಿ ಕೂಡ ಕಾಣೆಯಾಗಿದೆ.

ಸಿನಿಮಾದ ಕೊನೆಗೆ ಕಥಾನಾಯಕನನ್ನು ರೆಬಲ್ ಮಾಡುವ ಸಲುವಾಗಿ ಮಾನಮ್ಮನ ಪಾತ್ರ ಇದ್ದಕ್ಕಿಂದ್ದಂತೆ ದುರ್ಬಲವಾಗಿಬಿಡುತ್ತದೆ. ಇನ್ನು ನಗರದಲ್ಲಿಯೂ ಇರುವ ಜಾತಿ ತಾರತಮ್ಯವನ್ನು ಕಟ್ಟಿಕೊಡುವ ಬಹಳ ದೊಡ್ಡ ಅವಕಾಶವನ್ನು ನಿರ್ದೇಶಕ ಕೈಚೆಲ್ಲಿದ್ದಾರೆ. ಸಿನಿಮಾದ ಮೊದಲಾರ್ಧ ನಾಯಕ ಮತ್ತು ನಾಯಕಿ ನಡುವೆ ಉಂಟಾಗುವ ಸ್ನೇಹ, ಆನಂತರ ಅದು ಪ್ರೀತಿಯಾಗಿ ಬೆಳಯುವುದಕ್ಕಷ್ಟೇ ಮೀಸಲಾಗಿದೆ. ಸಿನಿಮಾದ ಪ್ರಾರಂಭದಲ್ಲಿ ಮಾನಮ್ಮ ತನ್ನ ಮಗನಿಗೆ ಜಾತಿ ತಾರತಮ್ಯದ ಕುರಿತು ಹೇಳುವ ಮಾತುಗಳು ನಿರೂಪಣೆಯಲ್ಲಿ ವ್ಯಕ್ತವಾಗಿದ್ದು ಬಿಟ್ಟರೆ, ಮಧ್ಯಂತರದವರೆಗೂ ಆ ತಾರತಮ್ಯವನ್ನು ಕಟ್ಟಿಕೊಡುವ ದೃಶ್ಯಗಳು ಬರುವುದೇ ಇಲ್ಲ. ಮಧ್ಯಂತರದ ನಂತರ, ನಾಯಕ ಮತ್ತು ನಾಯಕಿ ನಡೆಸುವ ಡ್ಯಾನ್ಸ್ ಕ್ಲಾಸ್‌ನಲ್ಲಿ ಕಲಿಯುತ್ತಿರುವ ಮೇಲ್ಜಾತಿ/ಶ್ರೀಮಂತ ಹುಡುಗಿ ಮತ್ತು ತಳ ಸಮುದಾಯದ/ಬಡ ಹುಡುಗನ ನಡುವಿನ ಪ್ರೀತಿ ಮರ್ಯಾದಾ ಹತ್ಯೆಯಲ್ಲಿ ಕೊನೆಯಾಗುವ ದೃಶ್ಯದೊಂದಿಗೆ ಕಥೆ ಒಂದಷ್ಟು ತೀವ್ರತೆ ಪಡೆಯುತ್ತದೆ. ನಾಯಕ ತನ್ನ ತಾಯಿಗೆ ಈ ವಿಚಾರ ತಿಳಿಸಿದಾಗ ತಾಯಿ ಮಾನಮ್ಮಳಿಗೆ ತನ್ನ ಮಗನ ಪ್ರೀತಿಗಿಂತ ತನ್ನ ಸ್ವಾಭಿಮಾನ ಮುಖ್ಯವಾಗುತ್ತದೆ. ಮಗನ ಭವಿಷ್ಯಕ್ಕಾಗಿ ತಾನು ಪೈಸೆಪೈಸೆ ಕೂಡಿಸಿ ಕೊಂಡುಕೊಂಡ ಜಮೀನನ್ನು ಮಾರುವ ಮಾನಮ್ಮ, ಈ ವಿಚಾರದಲ್ಲಿ ಮಾತ್ರ ಮಗನಿಗೆ ಷರತ್ತೊಂದನ್ನು ವಿಧಿಸುತ್ತಾಳೆ. ನಿನ್ನ ಪ್ರೀತಿಸಿದ ಹುಡುಗಿ ಮನೆಯವರು ನನ್ನ ಜಾತಿ ಪರಿಗಣಿಸದೆ ಸಮಾನವಾಗಿ ಸ್ವೀಕರಿಸಿದ್ದಾದರೆ ನಾನು ಈ ಮದುವೆಗೆ ಸಿದ್ಧ ಎಂದು ಹೇಳುತ್ತಾಳೆ. ಈ ಪ್ರಯತ್ನಕ್ಕೆ ಮುಂದಾಗುವ ನಾಯಕ ಸೋಲುತ್ತಾನೆ.

ಶೇಖರ್ ಕಮ್ಮುಲ, ಫ್ಯೂಡಲ್ ಜಾತಿಯ ಕುಟುಂಬದಲ್ಲಿ ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯವನ್ನು ಕಟ್ಟಿಕೊಟ್ಟಷ್ಟು ತೀವ್ರವಾಗಿ ಜಾತಿ ತಾರತಮ್ಯವನ್ನು ಕಟ್ಟಿಕೊಟ್ಟಿಲ್ಲ ಎಂಬ ಭಾವನೆ ಕೂಡ ಕೊನೆಗೆ ಉಳಿದುಕೊಳ್ಳುತ್ತದೆ. (ಕಥಾ ನಾಯಕಿ ಪಾತ್ರದಲ್ಲಿ ನಟಿಸಿದ ಸಾಯಿ ಪಲ್ಲವಿ ಅವರ ಜನಪ್ರಿಯತೆಯ ಕಾರಣಕ್ಕೂ ಇದು ಇರಬಹುದು). ಆದರೆ ತೆಲುಗು ಸಿನಿಮಾರಂಗದಲ್ಲಿ ಇಷ್ಟಾದರೂ ಚರ್ಚೆಮಾಡುವ ಮಾನವೀಯ ನೆಲೆಯಲ್ಲಿ ಚಲನಚಿತ್ರ ನಿರ್ದೇಶಿಸುವವರು ಇದ್ದಾರಲ್ಲ ಅನ್ನುವ ಕಾರಣಕ್ಕೆ ಶೇಖರ್ ಕಮ್ಮುಲ ಅಭಿನಂದನೀಯ.

ನಟಿಸುವ ಪಾತ್ರಕ್ಕೆ ಜೀವ ತುಂಬುವ ಸಾಯಿ ಪಲ್ಲವಿ

ನಟಿ ಸಾಯಿ ಪಲ್ಲವಿ ದಕ್ಷಿಣ ಸಿನಿಮಾ ಪ್ರೇಕ್ಷಕರಿಗೆ ಹೆಚ್ಚು ಪರಿಚಯವಾಗಿದ್ದು ಮಲೆಯಾಳಂ ಭಾಷೆಯ ’ಪ್ರೇಮಂ’ ಸಿನಿಮಾ ಮೂಲಕ. ’ಮಲರ್’ ಪಾತ್ರದಲ್ಲಿ ಅಷ್ಟು ಸಹಜವಾಗಿ ನಟಿಸಿದ ಸಾಯಿ ಪಲ್ಲವಿ ಇವತ್ತಿಗೂ ಸಿನಿಮಾ ಪ್ರೇಕ್ಷಕರಿಗೆ ’ಮಲರ್’. ತಾವು ನಟಿಸಿದ ಸರಿಸುಮಾರು ಎಲ್ಲ ಸಿನಿಮಾಗಳಲ್ಲಿ ಕಥಾ ನಾಯಕನ ಪಾತ್ರಕ್ಕಿಂತ ಸಾಯಿ ಪಲ್ಲವಿ ನಟಿಸಿದ ಪಾತ್ರ ಹೆಚ್ಚು ಮನಸ್ಸಿನಲ್ಲಿ ಉಳಿಯುತ್ತದೆ. ಲವ್ ಸ್ಟೋರಿ ಸಿನಿಮಾದಲ್ಲಿಯೂ ಹಲವು ಕೊರತೆಗಳಿದ್ದರೂ, ಸಾಯಿ ಪಲ್ಲವಿ ತೆರೆಯ ಮೇಲೆ ಕಾಣಿಸುವ ದೃಶ್ಯಗಳಿಂದ ಈ ಕೊರತೆಗಳನ್ನು ಮರೆಯುವಂತೆ ಪ್ರೇಕ್ಷಕನನ್ನು ತನ್ನ ನಟನೆಯೆಡಗೆ ಎಳೆದುಕೊಳ್ಳುತ್ತಾರೆ.

ನಿರ್ದೇಶಕ ಶೇಖರ್ ಕಮ್ಮುಲ

ದ್ರಾವಿಡ ಭಾಷೆಗಳ ಬಗ್ಗೆ ಓದುವಾಗ ತೆಲುಗು ಭಾಷೆಯಲ್ಲಿ ಸ್ತ್ರೀವಾಚಕಗಳನ್ನು ಹೇಗೆ ಸಂಬೋಧಿಸಲಾಗುತ್ತದೆ ಎಂಬುದು ಸೋಜಿಕವೆನಿಸಿತ್ತು. ಸ್ತ್ರೀವಾಚಕಗಳನ್ನು ’ಅದಿ’, ’ಇದಿ’ (ಅದು, ಇದು) ಎಂದು ವಸ್ತುಗಳ ರೀತಿ ಸಂಬೋಧಿಸಲಾಗುತ್ತದೆ (ಕರ್ನಾಟಕದಲ್ಲಿಯೂ ಈ ಬಳಕೆಯನ್ನು ಹಲವೆಡೆ ಕಾಣಬಹುದು). ತೆಲುಗು ಸಮಾಜಕ್ಕೆ
ಇದನ್ನು ಸಾಮಾನ್ಯೀಕರಿಸಲು ನನ್ನ ಅಧ್ಯಯನದ ಕೊರತೆಯಿದ್ದರೂ, ತೆಲುಗು ಸಿನಿಮಾ ಮತ್ತು ತೆಲುಗು ಸಿನಿಮಾರಂಗ ನಿಸ್ಸಂಶಯವಾಗಿ ಪುರುಷಪ್ರಧಾನವಾದದ್ದು ಎನ್ನಬಹುದು (ಕನ್ನಡ ಚಿತ್ರರಂಗವನ್ನೂ ಸೇರಿದಂತೆ, ಬಹುತೇಕ ಭಾರತೀಯ ಚಿತ್ರರಂಗಗಳಿಗೂ ಇದು ಅನ್ವಯಿಸುತ್ತದೆ). ಇಲ್ಲಿ ಕಥಾನಾಯಕಿ ಪಾತ್ರ ಸೃಷ್ಟಿ ಮಾಡೋದೇ ಕಥಾನಾಯಕನ ಹಿರೋಹಿಸಂನ್ನು ವಿಜೃಂಭಿಸುವುದಕ್ಕೆ. ಇದಕ್ಕೆ ಉದಾಹರಣೆಗಳು ದಂಡಿಯಾಗಿ ಸಿಗುತ್ತವೆ. ಬಹುಸಂಖ್ಯಾತ ಪ್ರಧಾನಧಾರೆಯ ತೆಲುಗು ಸಿನಿಮಾಗಳನ್ನು ಗಮನಿಸಿದರೆ ಒಂದು ಗಟ್ಟಿಯಾದ ಮಹಿಳಾ ಪಾತ್ರ ಸಿಗುವುದೂ ಕಷ್ಟ. ಹೆಣ್ಣು ಪಾತ್ರಗಳಿಗೆ ಅಲ್ಲಿ ಹೆಚ್ಚು ಸ್ಪೇಸ್ ಇಲ್ಲವೇ ಇಲ್ಲ.

ಶೇಖರ್ ಕಮ್ಮುಲ ಸಿನಿಮಾಗಳು ಇದಕ್ಕೆ ಅಪವಾದ ಎನ್ನಬಹುದು. ತಮ್ಮ ಮೊದಲ ಸಿನಿಮಾ ’ಆನಂದ್’ನಿಂದ ’ಗೋದಾವರಿ’, ’ಹ್ಯಾಪಿಡೇಸ್’, ’ಲೀಡರ್’, ’ಫಿದಾ’ ಈ ಎಲ್ಲಾ ಸಿನಿಮಾಗಳಲ್ಲೂ ಸಾಂಪ್ರದಾಯಿಕ ಗಂಡು ನೋಟವನ್ನು ಪ್ರಶ್ನೆ ಮಾಡಿದ, ಹೆಣ್ಣಿನ ಸ್ವತಂತ್ರ ಅಲೋಚನೆಗೆ ಒತ್ತಾಸೆಯಾದ ಮತ್ತು ಅಂತಹ ಪಾತ್ರಗಳಿಗೆ ಹೆಚ್ಚು ಅವಕಾಶ ಕೊಟ್ಟಿದ್ದನ್ನು ಕಾಣಬಹುದು. ಸಾಯಿ ಪಲ್ಲವಿ ನಟಿಸಿದ ’ಫಿದಾ’ದಲ್ಲಿ ಕಥಾ ನಾಯಕಿ ಮದುವೆ ಆದ ಮೇಲೆ ಗಂಡನ ಮನೆಗೆ ಏಕೆ ಹೋಗಬೇಕು, ಅವಳು ತನ್ನ ಹೆತ್ತವರ ಬಳಿ ಇರುವುದು ಅನಿವಾರ್ಯ ಅದಾಗ ಗಂಡನೇ ನನ್ನ ಬಳಿ ಏಕೆ ಬಂದಿರಬಾರದು ಎಂದು ಪ್ರಶ್ನಿಸುತ್ತಾಳೆ. ಶೇಖರ್ ಕಮ್ಮುಲ ಸಿನಿಮಾಗಳನ್ನ ಸ್ತ್ರೀವಾದದ ಆಳವಾದ ವಿಮರ್ಶೆಗೆ ಒಳಪಡಿಸಿದರೆ ಅಲ್ಲೂ ಸಾಕಷ್ಟು ಕೊರತೆಗಳು. ಮೇಲ್ಪದರದ ಗ್ರಹಿಕೆಗಳು, ಪೂರ್ವಗ್ರಹಗಳು ಎಲ್ಲವೂ ಬಹಳಷ್ಟು ಸಿಗುತ್ತವೆ. ಉದಾಹರಣೆಗೆ ಲವ್ ಸ್ಟೋರಿ ಸಿನಿಮಾವನ್ನೆ ನೋಡುವುದಾದರೆ, ತನ್ನ ಮನೆಯವರ ವಿರೋಧದಿಂದ ದುಡಿಯಲು ನಗರಕ್ಕೆ ಹೋಗುವ ನಾಯಕಿ ಸಂಪಾದಿಸಿದ ಹಣವನ್ನು ನೀಡುವುದು ಕುಡುಕ ಮತ್ತು ಬೇಜವ್ದಾರಿ ತಂದೆಗೆ. ಕಥಾ ನಾಯಕಿಗೆ ಯಾವ ಯಜಮಾನಿಕೆಯಿಂದ ಉಸಿರುಗಟ್ಟಿರುತ್ತದೊ ಅದೇ ಯಜಮಾನಿಕೆಯನ್ನು ಪೋಷಿಸುತ್ತದೆ ಈ ದೃಶ್ಯ. ಈ ತರಹದ ದೃಶ್ಯಗಳು ಶೇಖರ್ ಅವರ ಎಲ್ಲಾ ಸಿನಿಮಾಗಳಲ್ಲೂ ಸಾಮಾನ್ಯವಾಗಿ ಇರುತ್ತವೆ. ಆದರೆ, ಬಹಳ ನೇರಾನೇರ ಪುರುಷ ಯಜಮಾನಿಕೆ ಮತ್ತು Misogynyಗಳನ್ನು ಸಮಾಜದ ಮೌಲ್ಯಗಳು ಎಂದು ಪ್ರದರ್ಶನ ಮಾಡುವ ತೆಲುಗು ಸಿನಿಮಾಗಳ ನಡುವೆ ಶೇಖರ್ ಮಾನವೀಯವಾಗಿ ಕಾಣಿಸುತ್ತಾರೆ.

ತಮಿಳು ಚಿತ್ರರಂಗದಲ್ಲಿ ಪ ರಂಜಿತ್, ಮಾರಿ ಸೆಲ್ವರಾಜ್‌ರಂತಹ ನಿರ್ದೇಶಕರು ಜಾತಿ ಶೋಷಣೆಯ ವಿಷಯಗಳ ಚಲನಚಿತ್ರಗಳನ್ನು ನಿರ್ದೇಶಿಸಿ ಯಶಸ್ವಿಯಾದ ಉದಾಹರಣೆಗಳಿಂದ ಅಕ್ಕಪಕ್ಕದ ರಾಜ್ಯದಲ್ಲಿಯೂ ಹಲವು ನಿರ್ದೇಶಕರಿಗೆ ಇದು ಸ್ಫೂರ್ತಿಯಾಗಿರಬಹುದು. ಶೇಖರ್ ಲವ್ ಸ್ಟೋರಿಯತಂಹ ಸಿನಿಮಾಗಳನ್ನು ಹೆಚ್ಚೆಚ್ಚು ಮಾಡಲಿ. ಅವುಗಳು ಇನ್ನಷ್ಟು ಆಳವಾದ ಅಧ್ಯಯನಗಳಿಂದ, ಒಳನೋಟಗಳಿಂದ ಕೂಡಿ, ದೃಶ್ಯ ಮಾಧ್ಯಮದ ಸಾಧ್ಯತೆಯನ್ನು ಹೆಚ್ಚು ದುಡಿಸಿಕೊಂಡು ಇನ್ನಷ್ಟು ತೀವ್ರವಾಗಿ ಬೆಳ್ಳಿಪರದೆ ಮೇಲೆ ಪ್ರದರ್ಶನಗೊಳ್ಳಲಿ, ಇವು ತೆಲುಗು ಸಿನಿಮಾ ಇಂಡಸ್ಟ್ರಿಗೆ ಮಾದರಿಯಾಗಲಿ.

ಯದುನಂದನ್ ಕೀಲಾರ

ಯದುನಂದನ್ ಕೀಲಾರ
ಜಗತ್ತಿನ ಸಿನಿಮಾಗಳ ವೀಕ್ಷಣೆ ಮತ್ತು ಅವುಗಳು ಬೀರುವ ಸಾಮಾಜಿಕ ಪ್ರಭಾವದ ಸಾಧ್ಯತೆಗಳ ಬಗ್ಗೆ ಅಪಾರ ಉತ್ಸಾಹ ಇರುವ ಯದುನಂದನ್ ಸಿನಿಮಾಗಳ ರಾಜಕೀಯ ನಿಲುವುಗಳನ್ನು ತೀಕ್ಷ್ಣವಾಗಿ ಶೋಧಿಸುತ್ತಾರೆ


ಇದನ್ನೂ ಓದಿ: ವೈಚಾರಿಕತೆಯನ್ನು ಕಡೆಗಣಿಸಿ ಅಬ್ಬರಿಸುವ ಜನಪ್ರಿಯ ನಟರ ಸಿನಿಮಾದಾಚೆಗಿನ ವಿಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....

ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!

ನವದೆಹಲಿ: ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಭಾಗವಾಗಿ ಬುಲ್ಡೋಜರ್‌ಗಳನ್ನು ಏಕೆ ಓಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಮತ್ತು ಐತಿಹಾಸಿಕ ಪರಂಪರೆಯ ಅನೇಕ ಸ್ಥಳಗಳನ್ನು ಈ...

ಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ (ಜ.14) ನಕಲಿ ಗೋರಕ್ಷಕರು 35 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಜಾನುವಾರುಗಳನ್ನು ಹೊತ್ತ ವ್ಯಾನ್ ನಿಲ್ಲಿಸಿ ಪ್ರಾಣಿಗಳ ಸಾಗಣೆ ಆರೋಪದ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಜಿಲ್ಲಾ ಆಸ್ಪತ್ರೆಗೆ...