Homeಮುಖಪುಟನಿಕ್ಕಿ ಯಾದವ್‌ ಕೊಲೆಗೆ ಪ್ರಿಯಕರನ ಕುಟುಂಬವೂ ಸಹಕರಿಸಿತ್ತು: ದೆಹಲಿ ಪೊಲೀಸ್

ನಿಕ್ಕಿ ಯಾದವ್‌ ಕೊಲೆಗೆ ಪ್ರಿಯಕರನ ಕುಟುಂಬವೂ ಸಹಕರಿಸಿತ್ತು: ದೆಹಲಿ ಪೊಲೀಸ್

- Advertisement -
- Advertisement -

ರೆಸ್ಟೊರೆಂಟ್‌ನ ಫ್ರಿಡ್ಜ್‌ನಲ್ಲಿ ದೆಹಲಿಯ ಯುವತಿಯ ಶವವನ್ನು ಪತ್ತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ತಿರುವುಗಳು ಲಭಿಸುತ್ತಿವೆ. ಕೊಲೆ ಕೃತ್ಯದಲ್ಲಿ ಆ ಯುವತಿಯ ಪ್ರಿಯಕನ ತಂದೆಯೂ ಭಾಗಿಯಾಗಿರುವ ವಿಚಾರ ಹೊರಬಿದ್ದಿದೆ. ದೆಹಲಿ ಪೊಲೀಸರು ಪ್ರಿಯಕರನ ತಂದೆಯನ್ನೂ ಬಂಧಿಸಿದ್ದಾರೆ.

23 ವರ್ಷದ ನಿಕ್ಕಿ ಯಾದವ್ ಅವರನ್ನು ಆಕೆಯ ಪಾರ್ಟನರ್‌‌ ಸಾಹಿಲ್ ಗೆಹ್ಲೋಟ್ ಕೊಲೆಗೈದಿದ್ದನು. ಚಾರ್ಜಿಂಗ್ ಕೇಬಲ್‌ನಿಂದ ಕತ್ತು ಹಿಸುಕಿ ಕೃತ್ಯ ಎಸಗಿದ್ದನು. ಕಳೆದ ವರ್ಷ ಭಾರೀ ಸುದ್ದಿಯಾದ ಅಫ್ತಾಬ್ ಪೂನಾವಾಲಾ ಮತ್ತು ಶ್ರದ್ಧಾ ವಾಕರ್ ಪ್ರಕರಣವನ್ನು ನಿಕ್ಕಿ- ಸಾಹಿಲ್ ಪ್ರಕರಣ ಮರುಕಳಿಸಿತ್ತು. ಸಾಹಿಲ್‌ ತನ್ನ ಕುಟುಂಬದ ಒಡೆತನದ ರೆಸ್ಟೋರೆಂಟ್‌ನಲ್ಲಿ ಶವವನ್ನು ಫ್ರಿಜ್‌ನಲ್ಲಿ ಇಟ್ಟಿದ್ದನು.

ದೇಶದಲ್ಲಿ ಅನೇಕರು ಪ್ರೇಮಿಗಳ ದಿನದ ಸಂಭ್ರಮದಲ್ಲಿದ್ದಾಗ ಪೊಲೀಸರು ನಿಕ್ಕಿ ಯಾದವ್ ಅವರ ಮೃತದೇಹವನ್ನು ಪತ್ತೆಹಚ್ಚಿದ್ದರು.

“ದೆಹಲಿ ಪೊಲೀಸರು ಈವರೆಗೆ 5 ಜನರನ್ನು ಬಂಧಿಸಿದ್ದಾರೆ. ಪಿತೂರಿಗೆ ಸಹಾಯ ಮಾಡಿದ ಆರೋಪದ ಮೇಲೆ ಸಾಹಿಲ್ ಗೆಹ್ಲೋಟ್ ಅವರ ತಂದೆಯನ್ನೂ ಬಂಧಿಸಲಾಗಿದೆ” ಎಂದು ವಿಶೇಷ ಸಿಪಿ ರವೀಂದರ್ ಯಾದವ್ ಅವರು ಹೇಳಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.

ಸಾಹಿಲ್ ಮತ್ತು ನಿಕ್ಕಿಯವರು ಅಕ್ಟೋಬರ್ 2020ರಲ್ಲಿ ನೋಯ್ಡಾ ದೇವಸ್ಥಾನದಲ್ಲಿ ವಿವಾಹವಾಗಿದ್ದರು ಎಂಬ ಮತ್ತೊಂದು ವಿಚಾರವನ್ನು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಸಾಹಿಲ್‌ನ ಮನೆಯವರು ಈ ಸಂಬಂಧವನ್ನು ಒಪ್ಪಿಕೊಂಡಿರಲಿಲ್ಲ. ಬೇರೊಂದು ಹುಡುಗಿಯೊಂದಿಗೆ ಸಾಹಿಲ್‌ ಮದುವೆಯನ್ನು ನಿಶ್ಚಯಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತನ್ನ ಲಿವ್‌ ಇನ್‌ ಪಾರ್ಟನರ್‌ ಇನ್ನೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂದು ನಿಕ್ಕಿಗೆ ತಿಳಿದಿರಲಿಲ್ಲ. ಆತನ ಮದುವೆಗೆ ಒಂದು ದಿನ ಮುಂಚಿತವಾಗಿ ಈ ವಿಷಯ ಆಕೆಗೆ ಗೊತ್ತಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ನೈಋತ್ಯ ದೆಹಲಿಯಲ್ಲಿನ ತನ್ನ ಬಾಡಿಗೆ ಮನೆಗೆ ನಿಕ್ಕಿ ಯಾದವ್ ಪ್ರವೇಶಿಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ತನಿಖೆ ವೇಳೆ ಕಂಡುಕೊಂಡಿದ್ದಾರೆ. ಫೆಬ್ರವರಿ 9ರಂದು ಸೆರೆಯಾಗಿರುವ ವೀಡಿಯೊದಲ್ಲಿ, ನಿಕ್ಕಿ ಒಂಟಿಯಾಗಿದ್ದರು ಎಂಬುದು ತಿಳಿದುಬಂದಿದೆ.

ಆಕೆಯ ಗೆಳೆಯನು ಆ ದಿನ ಕೆಲವು ಗಂಟೆಗಳ ನಂತರದಲ್ಲಿ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಸಾಹಿಲ್ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದಕ್ಕಾಗಿ ಈ ದಂಪತಿಗಳು ಸುಮಾರು ಮೂರು ಗಂಟೆಗಳ ಕಾಲ ಕಾರಿನೊಳಗೆ, ಮನೆಯಿಂದ ಸ್ವಲ್ಪ ದೂರದಲ್ಲಿ ಜಗಳವಾಡಿದ್ದರು.

ಜಗಳ ತಾರಕ್ಕೇರಿದಾಗ ಸಾಹಿಲ್ ಚಾರ್ಜಿಂಗ್ ಕೇಬಲ್ ಬಳಸಿ ನಿಕ್ಕಿಯ ಕತ್ತು ಹಿಸುಕಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಭಯಭೀತನಾಗಿದ್ದ ಆತ, ತನ್ನ ಗೆಳತಿಯ ಶವವನ್ನು ತಮ್ಮ ಕುಟುಂಬದ ಧಾಬಾದಲ್ಲಿನ ಫ್ರೀಜರ್‌ನಲ್ಲಿ ಇರಿಸಲು ನಿರ್ಧರಿಸಿದ್ದನು.

ತನ್ನ ಲಿವ್‌ ಇನ್ ಪಾರ್ಟನರ್‌ಅನ್ನು ಈ ರೀತಿಯಲ್ಲಿ ದೆಹಲಿಯಲ್ಲಿ ಕೊಂದಿರುವ ಎರಡನೇ ಪ್ರಮುಖ ಘಟನೆ ಇದಾಗಿದೆ. ಕಳೆದ ವರ್ಷ, ಶ್ರದ್ಧಾ ವಾಕರ್ ಅವರನ್ನು ಆಕೆಯ ಪ್ರಿಯಕರ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದನು. ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ, ನಗರದಾದ್ಯಂತ ದೇಹದ ಭಾಗಗಳನ್ನು ವಿಲೇವಾರಿ ಮಾಡುವ ಮೊದಲು ಫ್ರಿಡ್ಜ್‌ನಲ್ಲಿ ಸಂಗ್ರಹಿಸಿಟ್ಟಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...