Homeಮುಖಪುಟನಿಕ್ಕಿ ಯಾದವ್‌ ಕೊಲೆಗೆ ಪ್ರಿಯಕರನ ಕುಟುಂಬವೂ ಸಹಕರಿಸಿತ್ತು: ದೆಹಲಿ ಪೊಲೀಸ್

ನಿಕ್ಕಿ ಯಾದವ್‌ ಕೊಲೆಗೆ ಪ್ರಿಯಕರನ ಕುಟುಂಬವೂ ಸಹಕರಿಸಿತ್ತು: ದೆಹಲಿ ಪೊಲೀಸ್

- Advertisement -
- Advertisement -

ರೆಸ್ಟೊರೆಂಟ್‌ನ ಫ್ರಿಡ್ಜ್‌ನಲ್ಲಿ ದೆಹಲಿಯ ಯುವತಿಯ ಶವವನ್ನು ಪತ್ತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ತಿರುವುಗಳು ಲಭಿಸುತ್ತಿವೆ. ಕೊಲೆ ಕೃತ್ಯದಲ್ಲಿ ಆ ಯುವತಿಯ ಪ್ರಿಯಕನ ತಂದೆಯೂ ಭಾಗಿಯಾಗಿರುವ ವಿಚಾರ ಹೊರಬಿದ್ದಿದೆ. ದೆಹಲಿ ಪೊಲೀಸರು ಪ್ರಿಯಕರನ ತಂದೆಯನ್ನೂ ಬಂಧಿಸಿದ್ದಾರೆ.

23 ವರ್ಷದ ನಿಕ್ಕಿ ಯಾದವ್ ಅವರನ್ನು ಆಕೆಯ ಪಾರ್ಟನರ್‌‌ ಸಾಹಿಲ್ ಗೆಹ್ಲೋಟ್ ಕೊಲೆಗೈದಿದ್ದನು. ಚಾರ್ಜಿಂಗ್ ಕೇಬಲ್‌ನಿಂದ ಕತ್ತು ಹಿಸುಕಿ ಕೃತ್ಯ ಎಸಗಿದ್ದನು. ಕಳೆದ ವರ್ಷ ಭಾರೀ ಸುದ್ದಿಯಾದ ಅಫ್ತಾಬ್ ಪೂನಾವಾಲಾ ಮತ್ತು ಶ್ರದ್ಧಾ ವಾಕರ್ ಪ್ರಕರಣವನ್ನು ನಿಕ್ಕಿ- ಸಾಹಿಲ್ ಪ್ರಕರಣ ಮರುಕಳಿಸಿತ್ತು. ಸಾಹಿಲ್‌ ತನ್ನ ಕುಟುಂಬದ ಒಡೆತನದ ರೆಸ್ಟೋರೆಂಟ್‌ನಲ್ಲಿ ಶವವನ್ನು ಫ್ರಿಜ್‌ನಲ್ಲಿ ಇಟ್ಟಿದ್ದನು.

ದೇಶದಲ್ಲಿ ಅನೇಕರು ಪ್ರೇಮಿಗಳ ದಿನದ ಸಂಭ್ರಮದಲ್ಲಿದ್ದಾಗ ಪೊಲೀಸರು ನಿಕ್ಕಿ ಯಾದವ್ ಅವರ ಮೃತದೇಹವನ್ನು ಪತ್ತೆಹಚ್ಚಿದ್ದರು.

“ದೆಹಲಿ ಪೊಲೀಸರು ಈವರೆಗೆ 5 ಜನರನ್ನು ಬಂಧಿಸಿದ್ದಾರೆ. ಪಿತೂರಿಗೆ ಸಹಾಯ ಮಾಡಿದ ಆರೋಪದ ಮೇಲೆ ಸಾಹಿಲ್ ಗೆಹ್ಲೋಟ್ ಅವರ ತಂದೆಯನ್ನೂ ಬಂಧಿಸಲಾಗಿದೆ” ಎಂದು ವಿಶೇಷ ಸಿಪಿ ರವೀಂದರ್ ಯಾದವ್ ಅವರು ಹೇಳಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.

ಸಾಹಿಲ್ ಮತ್ತು ನಿಕ್ಕಿಯವರು ಅಕ್ಟೋಬರ್ 2020ರಲ್ಲಿ ನೋಯ್ಡಾ ದೇವಸ್ಥಾನದಲ್ಲಿ ವಿವಾಹವಾಗಿದ್ದರು ಎಂಬ ಮತ್ತೊಂದು ವಿಚಾರವನ್ನು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಸಾಹಿಲ್‌ನ ಮನೆಯವರು ಈ ಸಂಬಂಧವನ್ನು ಒಪ್ಪಿಕೊಂಡಿರಲಿಲ್ಲ. ಬೇರೊಂದು ಹುಡುಗಿಯೊಂದಿಗೆ ಸಾಹಿಲ್‌ ಮದುವೆಯನ್ನು ನಿಶ್ಚಯಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತನ್ನ ಲಿವ್‌ ಇನ್‌ ಪಾರ್ಟನರ್‌ ಇನ್ನೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂದು ನಿಕ್ಕಿಗೆ ತಿಳಿದಿರಲಿಲ್ಲ. ಆತನ ಮದುವೆಗೆ ಒಂದು ದಿನ ಮುಂಚಿತವಾಗಿ ಈ ವಿಷಯ ಆಕೆಗೆ ಗೊತ್ತಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ನೈಋತ್ಯ ದೆಹಲಿಯಲ್ಲಿನ ತನ್ನ ಬಾಡಿಗೆ ಮನೆಗೆ ನಿಕ್ಕಿ ಯಾದವ್ ಪ್ರವೇಶಿಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ತನಿಖೆ ವೇಳೆ ಕಂಡುಕೊಂಡಿದ್ದಾರೆ. ಫೆಬ್ರವರಿ 9ರಂದು ಸೆರೆಯಾಗಿರುವ ವೀಡಿಯೊದಲ್ಲಿ, ನಿಕ್ಕಿ ಒಂಟಿಯಾಗಿದ್ದರು ಎಂಬುದು ತಿಳಿದುಬಂದಿದೆ.

ಆಕೆಯ ಗೆಳೆಯನು ಆ ದಿನ ಕೆಲವು ಗಂಟೆಗಳ ನಂತರದಲ್ಲಿ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಸಾಹಿಲ್ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದಕ್ಕಾಗಿ ಈ ದಂಪತಿಗಳು ಸುಮಾರು ಮೂರು ಗಂಟೆಗಳ ಕಾಲ ಕಾರಿನೊಳಗೆ, ಮನೆಯಿಂದ ಸ್ವಲ್ಪ ದೂರದಲ್ಲಿ ಜಗಳವಾಡಿದ್ದರು.

ಜಗಳ ತಾರಕ್ಕೇರಿದಾಗ ಸಾಹಿಲ್ ಚಾರ್ಜಿಂಗ್ ಕೇಬಲ್ ಬಳಸಿ ನಿಕ್ಕಿಯ ಕತ್ತು ಹಿಸುಕಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಭಯಭೀತನಾಗಿದ್ದ ಆತ, ತನ್ನ ಗೆಳತಿಯ ಶವವನ್ನು ತಮ್ಮ ಕುಟುಂಬದ ಧಾಬಾದಲ್ಲಿನ ಫ್ರೀಜರ್‌ನಲ್ಲಿ ಇರಿಸಲು ನಿರ್ಧರಿಸಿದ್ದನು.

ತನ್ನ ಲಿವ್‌ ಇನ್ ಪಾರ್ಟನರ್‌ಅನ್ನು ಈ ರೀತಿಯಲ್ಲಿ ದೆಹಲಿಯಲ್ಲಿ ಕೊಂದಿರುವ ಎರಡನೇ ಪ್ರಮುಖ ಘಟನೆ ಇದಾಗಿದೆ. ಕಳೆದ ವರ್ಷ, ಶ್ರದ್ಧಾ ವಾಕರ್ ಅವರನ್ನು ಆಕೆಯ ಪ್ರಿಯಕರ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದನು. ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ, ನಗರದಾದ್ಯಂತ ದೇಹದ ಭಾಗಗಳನ್ನು ವಿಲೇವಾರಿ ಮಾಡುವ ಮೊದಲು ಫ್ರಿಡ್ಜ್‌ನಲ್ಲಿ ಸಂಗ್ರಹಿಸಿಟ್ಟಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...