Homeಮುಖಪುಟನಿಕ್ಕಿ ಯಾದವ್‌ ಕೊಲೆಗೆ ಪ್ರಿಯಕರನ ಕುಟುಂಬವೂ ಸಹಕರಿಸಿತ್ತು: ದೆಹಲಿ ಪೊಲೀಸ್

ನಿಕ್ಕಿ ಯಾದವ್‌ ಕೊಲೆಗೆ ಪ್ರಿಯಕರನ ಕುಟುಂಬವೂ ಸಹಕರಿಸಿತ್ತು: ದೆಹಲಿ ಪೊಲೀಸ್

- Advertisement -
- Advertisement -

ರೆಸ್ಟೊರೆಂಟ್‌ನ ಫ್ರಿಡ್ಜ್‌ನಲ್ಲಿ ದೆಹಲಿಯ ಯುವತಿಯ ಶವವನ್ನು ಪತ್ತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ತಿರುವುಗಳು ಲಭಿಸುತ್ತಿವೆ. ಕೊಲೆ ಕೃತ್ಯದಲ್ಲಿ ಆ ಯುವತಿಯ ಪ್ರಿಯಕನ ತಂದೆಯೂ ಭಾಗಿಯಾಗಿರುವ ವಿಚಾರ ಹೊರಬಿದ್ದಿದೆ. ದೆಹಲಿ ಪೊಲೀಸರು ಪ್ರಿಯಕರನ ತಂದೆಯನ್ನೂ ಬಂಧಿಸಿದ್ದಾರೆ.

23 ವರ್ಷದ ನಿಕ್ಕಿ ಯಾದವ್ ಅವರನ್ನು ಆಕೆಯ ಪಾರ್ಟನರ್‌‌ ಸಾಹಿಲ್ ಗೆಹ್ಲೋಟ್ ಕೊಲೆಗೈದಿದ್ದನು. ಚಾರ್ಜಿಂಗ್ ಕೇಬಲ್‌ನಿಂದ ಕತ್ತು ಹಿಸುಕಿ ಕೃತ್ಯ ಎಸಗಿದ್ದನು. ಕಳೆದ ವರ್ಷ ಭಾರೀ ಸುದ್ದಿಯಾದ ಅಫ್ತಾಬ್ ಪೂನಾವಾಲಾ ಮತ್ತು ಶ್ರದ್ಧಾ ವಾಕರ್ ಪ್ರಕರಣವನ್ನು ನಿಕ್ಕಿ- ಸಾಹಿಲ್ ಪ್ರಕರಣ ಮರುಕಳಿಸಿತ್ತು. ಸಾಹಿಲ್‌ ತನ್ನ ಕುಟುಂಬದ ಒಡೆತನದ ರೆಸ್ಟೋರೆಂಟ್‌ನಲ್ಲಿ ಶವವನ್ನು ಫ್ರಿಜ್‌ನಲ್ಲಿ ಇಟ್ಟಿದ್ದನು.

ದೇಶದಲ್ಲಿ ಅನೇಕರು ಪ್ರೇಮಿಗಳ ದಿನದ ಸಂಭ್ರಮದಲ್ಲಿದ್ದಾಗ ಪೊಲೀಸರು ನಿಕ್ಕಿ ಯಾದವ್ ಅವರ ಮೃತದೇಹವನ್ನು ಪತ್ತೆಹಚ್ಚಿದ್ದರು.

“ದೆಹಲಿ ಪೊಲೀಸರು ಈವರೆಗೆ 5 ಜನರನ್ನು ಬಂಧಿಸಿದ್ದಾರೆ. ಪಿತೂರಿಗೆ ಸಹಾಯ ಮಾಡಿದ ಆರೋಪದ ಮೇಲೆ ಸಾಹಿಲ್ ಗೆಹ್ಲೋಟ್ ಅವರ ತಂದೆಯನ್ನೂ ಬಂಧಿಸಲಾಗಿದೆ” ಎಂದು ವಿಶೇಷ ಸಿಪಿ ರವೀಂದರ್ ಯಾದವ್ ಅವರು ಹೇಳಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.

ಸಾಹಿಲ್ ಮತ್ತು ನಿಕ್ಕಿಯವರು ಅಕ್ಟೋಬರ್ 2020ರಲ್ಲಿ ನೋಯ್ಡಾ ದೇವಸ್ಥಾನದಲ್ಲಿ ವಿವಾಹವಾಗಿದ್ದರು ಎಂಬ ಮತ್ತೊಂದು ವಿಚಾರವನ್ನು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಸಾಹಿಲ್‌ನ ಮನೆಯವರು ಈ ಸಂಬಂಧವನ್ನು ಒಪ್ಪಿಕೊಂಡಿರಲಿಲ್ಲ. ಬೇರೊಂದು ಹುಡುಗಿಯೊಂದಿಗೆ ಸಾಹಿಲ್‌ ಮದುವೆಯನ್ನು ನಿಶ್ಚಯಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತನ್ನ ಲಿವ್‌ ಇನ್‌ ಪಾರ್ಟನರ್‌ ಇನ್ನೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂದು ನಿಕ್ಕಿಗೆ ತಿಳಿದಿರಲಿಲ್ಲ. ಆತನ ಮದುವೆಗೆ ಒಂದು ದಿನ ಮುಂಚಿತವಾಗಿ ಈ ವಿಷಯ ಆಕೆಗೆ ಗೊತ್ತಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ನೈಋತ್ಯ ದೆಹಲಿಯಲ್ಲಿನ ತನ್ನ ಬಾಡಿಗೆ ಮನೆಗೆ ನಿಕ್ಕಿ ಯಾದವ್ ಪ್ರವೇಶಿಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ತನಿಖೆ ವೇಳೆ ಕಂಡುಕೊಂಡಿದ್ದಾರೆ. ಫೆಬ್ರವರಿ 9ರಂದು ಸೆರೆಯಾಗಿರುವ ವೀಡಿಯೊದಲ್ಲಿ, ನಿಕ್ಕಿ ಒಂಟಿಯಾಗಿದ್ದರು ಎಂಬುದು ತಿಳಿದುಬಂದಿದೆ.

ಆಕೆಯ ಗೆಳೆಯನು ಆ ದಿನ ಕೆಲವು ಗಂಟೆಗಳ ನಂತರದಲ್ಲಿ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಸಾಹಿಲ್ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದಕ್ಕಾಗಿ ಈ ದಂಪತಿಗಳು ಸುಮಾರು ಮೂರು ಗಂಟೆಗಳ ಕಾಲ ಕಾರಿನೊಳಗೆ, ಮನೆಯಿಂದ ಸ್ವಲ್ಪ ದೂರದಲ್ಲಿ ಜಗಳವಾಡಿದ್ದರು.

ಜಗಳ ತಾರಕ್ಕೇರಿದಾಗ ಸಾಹಿಲ್ ಚಾರ್ಜಿಂಗ್ ಕೇಬಲ್ ಬಳಸಿ ನಿಕ್ಕಿಯ ಕತ್ತು ಹಿಸುಕಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಭಯಭೀತನಾಗಿದ್ದ ಆತ, ತನ್ನ ಗೆಳತಿಯ ಶವವನ್ನು ತಮ್ಮ ಕುಟುಂಬದ ಧಾಬಾದಲ್ಲಿನ ಫ್ರೀಜರ್‌ನಲ್ಲಿ ಇರಿಸಲು ನಿರ್ಧರಿಸಿದ್ದನು.

ತನ್ನ ಲಿವ್‌ ಇನ್ ಪಾರ್ಟನರ್‌ಅನ್ನು ಈ ರೀತಿಯಲ್ಲಿ ದೆಹಲಿಯಲ್ಲಿ ಕೊಂದಿರುವ ಎರಡನೇ ಪ್ರಮುಖ ಘಟನೆ ಇದಾಗಿದೆ. ಕಳೆದ ವರ್ಷ, ಶ್ರದ್ಧಾ ವಾಕರ್ ಅವರನ್ನು ಆಕೆಯ ಪ್ರಿಯಕರ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದನು. ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ, ನಗರದಾದ್ಯಂತ ದೇಹದ ಭಾಗಗಳನ್ನು ವಿಲೇವಾರಿ ಮಾಡುವ ಮೊದಲು ಫ್ರಿಡ್ಜ್‌ನಲ್ಲಿ ಸಂಗ್ರಹಿಸಿಟ್ಟಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...