Homeಮುಖಪುಟನಿಕ್ಕಿ ಯಾದವ್‌ ಕೊಲೆಗೆ ಪ್ರಿಯಕರನ ಕುಟುಂಬವೂ ಸಹಕರಿಸಿತ್ತು: ದೆಹಲಿ ಪೊಲೀಸ್

ನಿಕ್ಕಿ ಯಾದವ್‌ ಕೊಲೆಗೆ ಪ್ರಿಯಕರನ ಕುಟುಂಬವೂ ಸಹಕರಿಸಿತ್ತು: ದೆಹಲಿ ಪೊಲೀಸ್

- Advertisement -
- Advertisement -

ರೆಸ್ಟೊರೆಂಟ್‌ನ ಫ್ರಿಡ್ಜ್‌ನಲ್ಲಿ ದೆಹಲಿಯ ಯುವತಿಯ ಶವವನ್ನು ಪತ್ತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ತಿರುವುಗಳು ಲಭಿಸುತ್ತಿವೆ. ಕೊಲೆ ಕೃತ್ಯದಲ್ಲಿ ಆ ಯುವತಿಯ ಪ್ರಿಯಕನ ತಂದೆಯೂ ಭಾಗಿಯಾಗಿರುವ ವಿಚಾರ ಹೊರಬಿದ್ದಿದೆ. ದೆಹಲಿ ಪೊಲೀಸರು ಪ್ರಿಯಕರನ ತಂದೆಯನ್ನೂ ಬಂಧಿಸಿದ್ದಾರೆ.

23 ವರ್ಷದ ನಿಕ್ಕಿ ಯಾದವ್ ಅವರನ್ನು ಆಕೆಯ ಪಾರ್ಟನರ್‌‌ ಸಾಹಿಲ್ ಗೆಹ್ಲೋಟ್ ಕೊಲೆಗೈದಿದ್ದನು. ಚಾರ್ಜಿಂಗ್ ಕೇಬಲ್‌ನಿಂದ ಕತ್ತು ಹಿಸುಕಿ ಕೃತ್ಯ ಎಸಗಿದ್ದನು. ಕಳೆದ ವರ್ಷ ಭಾರೀ ಸುದ್ದಿಯಾದ ಅಫ್ತಾಬ್ ಪೂನಾವಾಲಾ ಮತ್ತು ಶ್ರದ್ಧಾ ವಾಕರ್ ಪ್ರಕರಣವನ್ನು ನಿಕ್ಕಿ- ಸಾಹಿಲ್ ಪ್ರಕರಣ ಮರುಕಳಿಸಿತ್ತು. ಸಾಹಿಲ್‌ ತನ್ನ ಕುಟುಂಬದ ಒಡೆತನದ ರೆಸ್ಟೋರೆಂಟ್‌ನಲ್ಲಿ ಶವವನ್ನು ಫ್ರಿಜ್‌ನಲ್ಲಿ ಇಟ್ಟಿದ್ದನು.

ದೇಶದಲ್ಲಿ ಅನೇಕರು ಪ್ರೇಮಿಗಳ ದಿನದ ಸಂಭ್ರಮದಲ್ಲಿದ್ದಾಗ ಪೊಲೀಸರು ನಿಕ್ಕಿ ಯಾದವ್ ಅವರ ಮೃತದೇಹವನ್ನು ಪತ್ತೆಹಚ್ಚಿದ್ದರು.

“ದೆಹಲಿ ಪೊಲೀಸರು ಈವರೆಗೆ 5 ಜನರನ್ನು ಬಂಧಿಸಿದ್ದಾರೆ. ಪಿತೂರಿಗೆ ಸಹಾಯ ಮಾಡಿದ ಆರೋಪದ ಮೇಲೆ ಸಾಹಿಲ್ ಗೆಹ್ಲೋಟ್ ಅವರ ತಂದೆಯನ್ನೂ ಬಂಧಿಸಲಾಗಿದೆ” ಎಂದು ವಿಶೇಷ ಸಿಪಿ ರವೀಂದರ್ ಯಾದವ್ ಅವರು ಹೇಳಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.

ಸಾಹಿಲ್ ಮತ್ತು ನಿಕ್ಕಿಯವರು ಅಕ್ಟೋಬರ್ 2020ರಲ್ಲಿ ನೋಯ್ಡಾ ದೇವಸ್ಥಾನದಲ್ಲಿ ವಿವಾಹವಾಗಿದ್ದರು ಎಂಬ ಮತ್ತೊಂದು ವಿಚಾರವನ್ನು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಸಾಹಿಲ್‌ನ ಮನೆಯವರು ಈ ಸಂಬಂಧವನ್ನು ಒಪ್ಪಿಕೊಂಡಿರಲಿಲ್ಲ. ಬೇರೊಂದು ಹುಡುಗಿಯೊಂದಿಗೆ ಸಾಹಿಲ್‌ ಮದುವೆಯನ್ನು ನಿಶ್ಚಯಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತನ್ನ ಲಿವ್‌ ಇನ್‌ ಪಾರ್ಟನರ್‌ ಇನ್ನೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂದು ನಿಕ್ಕಿಗೆ ತಿಳಿದಿರಲಿಲ್ಲ. ಆತನ ಮದುವೆಗೆ ಒಂದು ದಿನ ಮುಂಚಿತವಾಗಿ ಈ ವಿಷಯ ಆಕೆಗೆ ಗೊತ್ತಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ನೈಋತ್ಯ ದೆಹಲಿಯಲ್ಲಿನ ತನ್ನ ಬಾಡಿಗೆ ಮನೆಗೆ ನಿಕ್ಕಿ ಯಾದವ್ ಪ್ರವೇಶಿಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ತನಿಖೆ ವೇಳೆ ಕಂಡುಕೊಂಡಿದ್ದಾರೆ. ಫೆಬ್ರವರಿ 9ರಂದು ಸೆರೆಯಾಗಿರುವ ವೀಡಿಯೊದಲ್ಲಿ, ನಿಕ್ಕಿ ಒಂಟಿಯಾಗಿದ್ದರು ಎಂಬುದು ತಿಳಿದುಬಂದಿದೆ.

ಆಕೆಯ ಗೆಳೆಯನು ಆ ದಿನ ಕೆಲವು ಗಂಟೆಗಳ ನಂತರದಲ್ಲಿ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಸಾಹಿಲ್ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದಕ್ಕಾಗಿ ಈ ದಂಪತಿಗಳು ಸುಮಾರು ಮೂರು ಗಂಟೆಗಳ ಕಾಲ ಕಾರಿನೊಳಗೆ, ಮನೆಯಿಂದ ಸ್ವಲ್ಪ ದೂರದಲ್ಲಿ ಜಗಳವಾಡಿದ್ದರು.

ಜಗಳ ತಾರಕ್ಕೇರಿದಾಗ ಸಾಹಿಲ್ ಚಾರ್ಜಿಂಗ್ ಕೇಬಲ್ ಬಳಸಿ ನಿಕ್ಕಿಯ ಕತ್ತು ಹಿಸುಕಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಭಯಭೀತನಾಗಿದ್ದ ಆತ, ತನ್ನ ಗೆಳತಿಯ ಶವವನ್ನು ತಮ್ಮ ಕುಟುಂಬದ ಧಾಬಾದಲ್ಲಿನ ಫ್ರೀಜರ್‌ನಲ್ಲಿ ಇರಿಸಲು ನಿರ್ಧರಿಸಿದ್ದನು.

ತನ್ನ ಲಿವ್‌ ಇನ್ ಪಾರ್ಟನರ್‌ಅನ್ನು ಈ ರೀತಿಯಲ್ಲಿ ದೆಹಲಿಯಲ್ಲಿ ಕೊಂದಿರುವ ಎರಡನೇ ಪ್ರಮುಖ ಘಟನೆ ಇದಾಗಿದೆ. ಕಳೆದ ವರ್ಷ, ಶ್ರದ್ಧಾ ವಾಕರ್ ಅವರನ್ನು ಆಕೆಯ ಪ್ರಿಯಕರ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದನು. ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ, ನಗರದಾದ್ಯಂತ ದೇಹದ ಭಾಗಗಳನ್ನು ವಿಲೇವಾರಿ ಮಾಡುವ ಮೊದಲು ಫ್ರಿಡ್ಜ್‌ನಲ್ಲಿ ಸಂಗ್ರಹಿಸಿಟ್ಟಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...