Homeಮುಖಪುಟನಿಕ್ಕಿ ಯಾದವ್‌ ಕೊಲೆಗೆ ಪ್ರಿಯಕರನ ಕುಟುಂಬವೂ ಸಹಕರಿಸಿತ್ತು: ದೆಹಲಿ ಪೊಲೀಸ್

ನಿಕ್ಕಿ ಯಾದವ್‌ ಕೊಲೆಗೆ ಪ್ರಿಯಕರನ ಕುಟುಂಬವೂ ಸಹಕರಿಸಿತ್ತು: ದೆಹಲಿ ಪೊಲೀಸ್

- Advertisement -
- Advertisement -

ರೆಸ್ಟೊರೆಂಟ್‌ನ ಫ್ರಿಡ್ಜ್‌ನಲ್ಲಿ ದೆಹಲಿಯ ಯುವತಿಯ ಶವವನ್ನು ಪತ್ತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ತಿರುವುಗಳು ಲಭಿಸುತ್ತಿವೆ. ಕೊಲೆ ಕೃತ್ಯದಲ್ಲಿ ಆ ಯುವತಿಯ ಪ್ರಿಯಕನ ತಂದೆಯೂ ಭಾಗಿಯಾಗಿರುವ ವಿಚಾರ ಹೊರಬಿದ್ದಿದೆ. ದೆಹಲಿ ಪೊಲೀಸರು ಪ್ರಿಯಕರನ ತಂದೆಯನ್ನೂ ಬಂಧಿಸಿದ್ದಾರೆ.

23 ವರ್ಷದ ನಿಕ್ಕಿ ಯಾದವ್ ಅವರನ್ನು ಆಕೆಯ ಪಾರ್ಟನರ್‌‌ ಸಾಹಿಲ್ ಗೆಹ್ಲೋಟ್ ಕೊಲೆಗೈದಿದ್ದನು. ಚಾರ್ಜಿಂಗ್ ಕೇಬಲ್‌ನಿಂದ ಕತ್ತು ಹಿಸುಕಿ ಕೃತ್ಯ ಎಸಗಿದ್ದನು. ಕಳೆದ ವರ್ಷ ಭಾರೀ ಸುದ್ದಿಯಾದ ಅಫ್ತಾಬ್ ಪೂನಾವಾಲಾ ಮತ್ತು ಶ್ರದ್ಧಾ ವಾಕರ್ ಪ್ರಕರಣವನ್ನು ನಿಕ್ಕಿ- ಸಾಹಿಲ್ ಪ್ರಕರಣ ಮರುಕಳಿಸಿತ್ತು. ಸಾಹಿಲ್‌ ತನ್ನ ಕುಟುಂಬದ ಒಡೆತನದ ರೆಸ್ಟೋರೆಂಟ್‌ನಲ್ಲಿ ಶವವನ್ನು ಫ್ರಿಜ್‌ನಲ್ಲಿ ಇಟ್ಟಿದ್ದನು.

ದೇಶದಲ್ಲಿ ಅನೇಕರು ಪ್ರೇಮಿಗಳ ದಿನದ ಸಂಭ್ರಮದಲ್ಲಿದ್ದಾಗ ಪೊಲೀಸರು ನಿಕ್ಕಿ ಯಾದವ್ ಅವರ ಮೃತದೇಹವನ್ನು ಪತ್ತೆಹಚ್ಚಿದ್ದರು.

“ದೆಹಲಿ ಪೊಲೀಸರು ಈವರೆಗೆ 5 ಜನರನ್ನು ಬಂಧಿಸಿದ್ದಾರೆ. ಪಿತೂರಿಗೆ ಸಹಾಯ ಮಾಡಿದ ಆರೋಪದ ಮೇಲೆ ಸಾಹಿಲ್ ಗೆಹ್ಲೋಟ್ ಅವರ ತಂದೆಯನ್ನೂ ಬಂಧಿಸಲಾಗಿದೆ” ಎಂದು ವಿಶೇಷ ಸಿಪಿ ರವೀಂದರ್ ಯಾದವ್ ಅವರು ಹೇಳಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.

ಸಾಹಿಲ್ ಮತ್ತು ನಿಕ್ಕಿಯವರು ಅಕ್ಟೋಬರ್ 2020ರಲ್ಲಿ ನೋಯ್ಡಾ ದೇವಸ್ಥಾನದಲ್ಲಿ ವಿವಾಹವಾಗಿದ್ದರು ಎಂಬ ಮತ್ತೊಂದು ವಿಚಾರವನ್ನು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಸಾಹಿಲ್‌ನ ಮನೆಯವರು ಈ ಸಂಬಂಧವನ್ನು ಒಪ್ಪಿಕೊಂಡಿರಲಿಲ್ಲ. ಬೇರೊಂದು ಹುಡುಗಿಯೊಂದಿಗೆ ಸಾಹಿಲ್‌ ಮದುವೆಯನ್ನು ನಿಶ್ಚಯಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತನ್ನ ಲಿವ್‌ ಇನ್‌ ಪಾರ್ಟನರ್‌ ಇನ್ನೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂದು ನಿಕ್ಕಿಗೆ ತಿಳಿದಿರಲಿಲ್ಲ. ಆತನ ಮದುವೆಗೆ ಒಂದು ದಿನ ಮುಂಚಿತವಾಗಿ ಈ ವಿಷಯ ಆಕೆಗೆ ಗೊತ್ತಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ನೈಋತ್ಯ ದೆಹಲಿಯಲ್ಲಿನ ತನ್ನ ಬಾಡಿಗೆ ಮನೆಗೆ ನಿಕ್ಕಿ ಯಾದವ್ ಪ್ರವೇಶಿಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ತನಿಖೆ ವೇಳೆ ಕಂಡುಕೊಂಡಿದ್ದಾರೆ. ಫೆಬ್ರವರಿ 9ರಂದು ಸೆರೆಯಾಗಿರುವ ವೀಡಿಯೊದಲ್ಲಿ, ನಿಕ್ಕಿ ಒಂಟಿಯಾಗಿದ್ದರು ಎಂಬುದು ತಿಳಿದುಬಂದಿದೆ.

ಆಕೆಯ ಗೆಳೆಯನು ಆ ದಿನ ಕೆಲವು ಗಂಟೆಗಳ ನಂತರದಲ್ಲಿ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಸಾಹಿಲ್ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದಕ್ಕಾಗಿ ಈ ದಂಪತಿಗಳು ಸುಮಾರು ಮೂರು ಗಂಟೆಗಳ ಕಾಲ ಕಾರಿನೊಳಗೆ, ಮನೆಯಿಂದ ಸ್ವಲ್ಪ ದೂರದಲ್ಲಿ ಜಗಳವಾಡಿದ್ದರು.

ಜಗಳ ತಾರಕ್ಕೇರಿದಾಗ ಸಾಹಿಲ್ ಚಾರ್ಜಿಂಗ್ ಕೇಬಲ್ ಬಳಸಿ ನಿಕ್ಕಿಯ ಕತ್ತು ಹಿಸುಕಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಭಯಭೀತನಾಗಿದ್ದ ಆತ, ತನ್ನ ಗೆಳತಿಯ ಶವವನ್ನು ತಮ್ಮ ಕುಟುಂಬದ ಧಾಬಾದಲ್ಲಿನ ಫ್ರೀಜರ್‌ನಲ್ಲಿ ಇರಿಸಲು ನಿರ್ಧರಿಸಿದ್ದನು.

ತನ್ನ ಲಿವ್‌ ಇನ್ ಪಾರ್ಟನರ್‌ಅನ್ನು ಈ ರೀತಿಯಲ್ಲಿ ದೆಹಲಿಯಲ್ಲಿ ಕೊಂದಿರುವ ಎರಡನೇ ಪ್ರಮುಖ ಘಟನೆ ಇದಾಗಿದೆ. ಕಳೆದ ವರ್ಷ, ಶ್ರದ್ಧಾ ವಾಕರ್ ಅವರನ್ನು ಆಕೆಯ ಪ್ರಿಯಕರ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದನು. ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ, ನಗರದಾದ್ಯಂತ ದೇಹದ ಭಾಗಗಳನ್ನು ವಿಲೇವಾರಿ ಮಾಡುವ ಮೊದಲು ಫ್ರಿಡ್ಜ್‌ನಲ್ಲಿ ಸಂಗ್ರಹಿಸಿಟ್ಟಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...