Homeಕ್ರೀಡೆಒಲಂಪಿಕ್ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ.

- Advertisement -
- Advertisement -

ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟರ್ಕಿಯ ಬುಸೆನಾಜ್ ಸರ್ಮೆನೆಲಿ ವಿರುದ್ಧ ಭಾರತದ ಲವ್ಲಿನಾ ಬೊರ್ಗೊಹೈನ್ 5-0 ಅಂತರದಿಂದ ಸೋಲನಪ್ಪಿದರೂ ಸಹ ಕಂಚಿನ ಪದಕ ಗೆದ್ದು ಭಾರತಕ್ಕೆ ಗೌರವ ತಂದುಕೊಟ್ಟಿದ್ದಾಳೆ.

ಭಾರತದ ಬಹುತೇಕ ಪೋಷಕರಿಗೆ ಹೆಣ್ಣು ಮಕ್ಕಳೆಂದರೆ ತಾತ್ಸಾರ. ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳು, ಮಹಿಳಾ ಲಿಂಗಾನುಪಾತ ಕಡಿಮೆ ಇರುವುದು ಈ ವಿದ್ಯಾಮಾನಕ್ಕೆ ಸಾಕ್ಷಿ. ಇಂತಹ ಮನಸ್ಥಿತಿಯ ಪೋಷಕರಿಗೆ ತಿಳಿಹೇಳುವಂತೆ, ಮತ್ತೊಮ್ಮೆ ಯೋಚಿಸಿ ಎಂದು ಆಗ್ರಹಿಸುವಂತೆ ಭಾರತದ ಮಹಿಳಾ ಕ್ರೀಡಾಪಟುಗಳು ಟೋಕಿಯೋ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುತ್ತಿದ್ದಾರೆ.

ಈ ಬಾರಿಯ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಭಾರತವನ್ನು ಪ್ರತಿನಿಧಿಸಿ ಒಟ್ಟು 127 ಕ್ರೀಡಾಪಟುಗಳು ಟೋಕಿಯೋಗೆ ತೆರಳಿದ್ದರು. ವೆಯ್ಟ್ ಲಿಫ್ಟಿಂಗ್‌ನಲ್ಲಿ ಮಣಿಪುರದ ತಾರೆ ಮೀರಾಬಾಯಿ ಚಾನು ಬೆಳ್ಳಿ ಗೆದ್ದು ಮನೆಮಾತಾದ ಕೆಲವೇ ದಿನಗಳಲ್ಲಿ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾಳೆ. ಅಸ್ಸಾಂನ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕೂಡ ಕ್ವಾಟರ್‌ಫೈನಲ್‌ನಲ್ಲಿ ಜಯಭೇರಿ ಭಾರಿಸುವ ಮೂಲಕ ಒಲಂಪಿಕ್‌ನಲ್ಲಿ ಪದಕ ತಂದುಕೊಟ್ಟ ಮೂರನೇ ಬಾಕ್ಸರ್ ಎಂಬ ಕೀರ್ತಿಗೆ ಪಾತ್ರವಾದರು.

ಪುಟ್ಟ ತೈವಾನ್ ದೇಶದ ಬಾಕ್ಸರ್ ನೀನ್-ಚಿನ್ ಚೆನ್ ಮಾಜಿ ವಿಶ್ವ ಚಾಂಪಿಯನ್. ಈ ಬಾರಿ ಒಲಂಪಿಕ್ಸ್ ಪದಕ ಗೆಲ್ಲುವ ನೆಚ್ಚಿನ ಕ್ರೀಡಾಪಟುಗಳಲ್ಲೊಬ್ಬರು. ಆಕೆಯೆದುರು ನಾಲ್ಕು ಬಾರಿ ಸೋಲುಂಡಿದ್ದ ಲವ್ಲಿನಾ ಬೊರ್ಗೊಹೈನ್ ವೆಲ್ಟರ್‌ವೈಟ್ (69 ಕೆಜಿ) ವಿಭಾಗದಲ್ಲಿ ಜುಲೈ 30 ರಂದು ನಡೆದ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ 4-1 ಅಂತರದಿಂದ ಭರ್ಜರಿ ಗೆಲವು ಸಾಧಿಸಿ ಸೆಮಿಫೈನಲ್ ತಲುಪಿದ್ದಳು.

ಅಸ್ಸಾಂನ ಗೋಲಘಾಟ್ ಜಿಲ್ಲೆಯ ಬಾರಾಮುಖಿಯಾ ಎಂಬ ಹಳ್ಳಿಯಲ್ಲಿ ಬಡಮಧ್ಯಮ ವರ್ಗದ ಕುಟುಂಬದಲ್ಲಿ ಮೂರನೇ ಹೆಣ್ಣು ಮಗಳಾಗಿ 1997ರ ಅಕ್ಟೋಬರ್ 02 ರಂದು ಲವ್ಲಿನಾ ಜನಿಸಿದಳು. ಭಾರತದ ಬಹುತೇಕ ಪೋಷಕರ ಮನಸ್ಥಿತಿಗೆ ವಿರುದ್ಧವಾಗಿ ಲವ್ಲಿನಾ ಪೋಷಕರಾದ ಟಿಕೆನ್ ಮತ್ತು ಮಮೋನಿ ಹೆಣ್ಣು ಮಕ್ಕಳೆಂದು ಮೂಗು ಮುರಿಯದೆ ಪ್ರೀತಿಯಿಂದ ಬೆಳೆಸಿದರು. ತಮ್ಮ ಮೂರು ಹೆಣ್ಣು ಮಕ್ಕಳು ತಮಗಿಷ್ಟವಾದ ಕ್ರೀಡೆಯಲ್ಲಿ ಸಾಧನೆಗೈಯಲು ಆಸರೆಯಾದರು.

ಲವ್ಲಿನಾಳ ಅವಳಿ ಸಹೋದರಿಯರಾದ ಲಿಮಾ ಮತ್ತು ಲಿಚಾ ಮಾರ್ಷಲ್ ಆರ್ಟ್ಸ್ ಕಲಿತು ಕಿಕ್ ಬಾಕ್ಸಿಂಗ್‌ನಲ್ಲಿ ಪರಿಣಿತರಾದರು. ಅವರೀಗ CISF ಮತ್ತು BSF ನಲ್ಲಿ ಉದ್ಯೋಗಿಗಲಾಗಿದ್ದಾರೆ. ಅದೇ ಹಾದಿಯಲ್ಲಿ ಮುನ್ನಡೆದ ಲವ್ಲಿನಾ 2012 ರಿಂದ ಬಾಕ್ಸಿಂಗ್ ತರಬೇತು ಪಡೆದು ಮೊವಾಯಿ ಥಾಯ್ ಎಂಬ ಮಾರ್ಷಲ್ ಆರ್ಟ್ಸ್ ಪರಿಣಿತಳಾದಳು.

ಭಾರತೀಯ ಕ್ರೀಡಾ ಪ್ರಾಧೀಕಾರದ ತರಬೇತುದಾರರಾದ ಪದಮ್ ಬೊರೊ ಮಾರ್ಗದರ್ಶನದಲ್ಲಿ ಗೌಹಾತಿಯಲ್ಲಿ ಬಾಕ್ಸಿಂಗ್ ತರಬೇತಿ ಪಡೆದ ಲವ್ಲಿನಾ ಪ್ರಮುಖವಾಗಿ ವೆಲ್ಟರ್‌ವೈಟ್ ವಿಭಾಗದಲ್ಲಿ ನಾಲ್ಕು ಕಂಚಿನ ಪದಕ ಗೆದ್ದಿದ್ದಾರೆ. 2018ರ ದೆಹಲಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ ಮತ್ತು 2019 ರ ಉಲಾನ್-ಉಡೆ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದ ಈಕೆ 2017ರ ದುಬೈ ಮತ್ತು 2021ರ 2021 ದುಬೈ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿಯೂ ಕಂಚು ಗೆದ್ದಿದ್ದಾಳೆ. ಸೆರ್ಬಿಯಾದಲ್ಲಿ ನಡೆದ ನೇಷನ್ಸ್ ಕಪ್‌ನಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವಾರು ಗೆಲುವಿನ ನಗೆ ಬೀರಿದ್ದಾಳೆ. ಅವಳ ಒಟ್ಟಾರೆ ಸಾಧನೆ ಗುರುತಿಸಿ 2020ರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕಳೆದ ವರ್ಷ ಏಷ್ಯನ್ ಕ್ವಾಲಿಫೈಯರ್ಸ್‌ ಜೋರ್ಡಾನ್‌ನಲ್ಲಿ ಅವರು ಟೋಕಿಯೋ ಒಲಂಪಿಕ್ಸ್‌ಗೆ ಅರ್ಹತೆ ಪಡೆದರು. ಆದರೆ ಲಾಕ್‌ಡೌನ್ ಕಾರಣಕ್ಕಾಗಿ ಹಲವು ತಿಂಗಳು ಮನೆಯಲ್ಲಿಯೇ ಕಳೆದರು. ಲವ್ಲಿನಾ ಪುಣೆಯಲ್ಲಿ ತರಬೇತಿ ಪಡೆಯುತ್ತಿದ್ದ ಸಮಯದಲ್ಲಿ ಅವರ ತಾಯಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಕೋಲ್ಕತ್ತಾದಲ್ಲಿ ಆಪರೇಷನ್ ಮಾಡುವ ಸಂದರ್ಭದಲ್ಲಿ ಲವ್ಲಿನಾ ಅಲ್ಲಿದ್ದಳು. ಪಟಿಯಾಲದಲ್ಲಿ ಅವರು ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರ ತಾಯಿ ಕೋವಿಡ್‌ ಸೋಂಕಿಗೆ ತುತ್ತಾಗಿದ್ದರು. ಆಗಲೂ ಲವ್ಲಿನಾ ತನ್ನ ಸ್ವಗ್ರಾಮಕ್ಕೆ ತೆರಳಿ 11 ದಿನ ತಾಯಿಯೊಂದಿಗಿದ್ದು ಅವರನ್ನು ಉಪಚರಿಸಿ ನಂತರ ತರಬೇತಿಗೆ ಮರಳಿದ್ದಳು.

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಬಹಳ ಪ್ರಬುದ್ಧವಾಗಿ ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ. ಏನೇ ಆಗಲಿ ಆಕೆ ಭಾರತದ ಮತ್ತೊಬ್ಬ ಮೇರಿ ಕೋಮ್ ಆಗಿ ಮಿಂಚುವುದಂತೂ ಗ್ಯಾರಂಟಿ..

ಈ ಟೋಕಿಯೋ ಒಲಂಪಿಕ್ಸ್ ಭಾರತದ ಬಹುತೇಕರ ಪುರುಷರ ಮನಸ್ಥಿತಿಯನ್ನು ಬದಲಿಸಿಕೊಳ್ಳಲು ಮತ್ತೊಂದು ಸುವರ್ಣ ಅವಕಾಶವಾಗಿದೆ. ಸ್ತ್ರೀ ಸಮಾನತೆ, ಸ್ತ್ರೀ ಬಲವರ್ಧನೆ ಎಂಬುದು ಕೇವಲ ಘೋಷಣೆಯಾಗದೇ ನಿಜವಾಗಿ ಆಚರಣೆ ತರಲು ಮೊದಲು ತಲೆಯಲ್ಲಿನ ಲಿಂಗತಾರತಮ್ಯ ದೃಷ್ಟಿಕೋನವನ್ನು ಬದಲಿಸಿಕೊಳ್ಳಬೇಕಿದೆ. ಲವ್ಲಿನಾ, ಮೀರಾಬಾಯಿ, ಸಿಂಧು ಈ ನಿಟ್ಟಿನಲ್ಲಿ ನಮಗೆ ಬಹುದೊಡ್ಡ ಪಾಠವಾಗಲಿ.. ಒಲಂಪಿಕ್ಸ್‌ನಲ್ಲಿ ಪದಕ ಜಯಿಸಿ ಭಾರತದ ಗೌರವ ಕಾಪಾಡುತ್ತಿರುವ ಈ ಹೆಣ್ಮಕ್ಕಳಿಗೆ ಅಭಿನಂದನೆಗಳು.

–       ಮುತ್ತುರಾಜು


ಇದನ್ನೂ ಓದಿ; ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...