Homeಕ್ರೀಡೆಒಲಂಪಿಕ್ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ.

- Advertisement -
- Advertisement -

ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟರ್ಕಿಯ ಬುಸೆನಾಜ್ ಸರ್ಮೆನೆಲಿ ವಿರುದ್ಧ ಭಾರತದ ಲವ್ಲಿನಾ ಬೊರ್ಗೊಹೈನ್ 5-0 ಅಂತರದಿಂದ ಸೋಲನಪ್ಪಿದರೂ ಸಹ ಕಂಚಿನ ಪದಕ ಗೆದ್ದು ಭಾರತಕ್ಕೆ ಗೌರವ ತಂದುಕೊಟ್ಟಿದ್ದಾಳೆ.

ಭಾರತದ ಬಹುತೇಕ ಪೋಷಕರಿಗೆ ಹೆಣ್ಣು ಮಕ್ಕಳೆಂದರೆ ತಾತ್ಸಾರ. ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳು, ಮಹಿಳಾ ಲಿಂಗಾನುಪಾತ ಕಡಿಮೆ ಇರುವುದು ಈ ವಿದ್ಯಾಮಾನಕ್ಕೆ ಸಾಕ್ಷಿ. ಇಂತಹ ಮನಸ್ಥಿತಿಯ ಪೋಷಕರಿಗೆ ತಿಳಿಹೇಳುವಂತೆ, ಮತ್ತೊಮ್ಮೆ ಯೋಚಿಸಿ ಎಂದು ಆಗ್ರಹಿಸುವಂತೆ ಭಾರತದ ಮಹಿಳಾ ಕ್ರೀಡಾಪಟುಗಳು ಟೋಕಿಯೋ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುತ್ತಿದ್ದಾರೆ.

ಈ ಬಾರಿಯ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಭಾರತವನ್ನು ಪ್ರತಿನಿಧಿಸಿ ಒಟ್ಟು 127 ಕ್ರೀಡಾಪಟುಗಳು ಟೋಕಿಯೋಗೆ ತೆರಳಿದ್ದರು. ವೆಯ್ಟ್ ಲಿಫ್ಟಿಂಗ್‌ನಲ್ಲಿ ಮಣಿಪುರದ ತಾರೆ ಮೀರಾಬಾಯಿ ಚಾನು ಬೆಳ್ಳಿ ಗೆದ್ದು ಮನೆಮಾತಾದ ಕೆಲವೇ ದಿನಗಳಲ್ಲಿ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾಳೆ. ಅಸ್ಸಾಂನ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕೂಡ ಕ್ವಾಟರ್‌ಫೈನಲ್‌ನಲ್ಲಿ ಜಯಭೇರಿ ಭಾರಿಸುವ ಮೂಲಕ ಒಲಂಪಿಕ್‌ನಲ್ಲಿ ಪದಕ ತಂದುಕೊಟ್ಟ ಮೂರನೇ ಬಾಕ್ಸರ್ ಎಂಬ ಕೀರ್ತಿಗೆ ಪಾತ್ರವಾದರು.

ಪುಟ್ಟ ತೈವಾನ್ ದೇಶದ ಬಾಕ್ಸರ್ ನೀನ್-ಚಿನ್ ಚೆನ್ ಮಾಜಿ ವಿಶ್ವ ಚಾಂಪಿಯನ್. ಈ ಬಾರಿ ಒಲಂಪಿಕ್ಸ್ ಪದಕ ಗೆಲ್ಲುವ ನೆಚ್ಚಿನ ಕ್ರೀಡಾಪಟುಗಳಲ್ಲೊಬ್ಬರು. ಆಕೆಯೆದುರು ನಾಲ್ಕು ಬಾರಿ ಸೋಲುಂಡಿದ್ದ ಲವ್ಲಿನಾ ಬೊರ್ಗೊಹೈನ್ ವೆಲ್ಟರ್‌ವೈಟ್ (69 ಕೆಜಿ) ವಿಭಾಗದಲ್ಲಿ ಜುಲೈ 30 ರಂದು ನಡೆದ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ 4-1 ಅಂತರದಿಂದ ಭರ್ಜರಿ ಗೆಲವು ಸಾಧಿಸಿ ಸೆಮಿಫೈನಲ್ ತಲುಪಿದ್ದಳು.

ಅಸ್ಸಾಂನ ಗೋಲಘಾಟ್ ಜಿಲ್ಲೆಯ ಬಾರಾಮುಖಿಯಾ ಎಂಬ ಹಳ್ಳಿಯಲ್ಲಿ ಬಡಮಧ್ಯಮ ವರ್ಗದ ಕುಟುಂಬದಲ್ಲಿ ಮೂರನೇ ಹೆಣ್ಣು ಮಗಳಾಗಿ 1997ರ ಅಕ್ಟೋಬರ್ 02 ರಂದು ಲವ್ಲಿನಾ ಜನಿಸಿದಳು. ಭಾರತದ ಬಹುತೇಕ ಪೋಷಕರ ಮನಸ್ಥಿತಿಗೆ ವಿರುದ್ಧವಾಗಿ ಲವ್ಲಿನಾ ಪೋಷಕರಾದ ಟಿಕೆನ್ ಮತ್ತು ಮಮೋನಿ ಹೆಣ್ಣು ಮಕ್ಕಳೆಂದು ಮೂಗು ಮುರಿಯದೆ ಪ್ರೀತಿಯಿಂದ ಬೆಳೆಸಿದರು. ತಮ್ಮ ಮೂರು ಹೆಣ್ಣು ಮಕ್ಕಳು ತಮಗಿಷ್ಟವಾದ ಕ್ರೀಡೆಯಲ್ಲಿ ಸಾಧನೆಗೈಯಲು ಆಸರೆಯಾದರು.

ಲವ್ಲಿನಾಳ ಅವಳಿ ಸಹೋದರಿಯರಾದ ಲಿಮಾ ಮತ್ತು ಲಿಚಾ ಮಾರ್ಷಲ್ ಆರ್ಟ್ಸ್ ಕಲಿತು ಕಿಕ್ ಬಾಕ್ಸಿಂಗ್‌ನಲ್ಲಿ ಪರಿಣಿತರಾದರು. ಅವರೀಗ CISF ಮತ್ತು BSF ನಲ್ಲಿ ಉದ್ಯೋಗಿಗಲಾಗಿದ್ದಾರೆ. ಅದೇ ಹಾದಿಯಲ್ಲಿ ಮುನ್ನಡೆದ ಲವ್ಲಿನಾ 2012 ರಿಂದ ಬಾಕ್ಸಿಂಗ್ ತರಬೇತು ಪಡೆದು ಮೊವಾಯಿ ಥಾಯ್ ಎಂಬ ಮಾರ್ಷಲ್ ಆರ್ಟ್ಸ್ ಪರಿಣಿತಳಾದಳು.

ಭಾರತೀಯ ಕ್ರೀಡಾ ಪ್ರಾಧೀಕಾರದ ತರಬೇತುದಾರರಾದ ಪದಮ್ ಬೊರೊ ಮಾರ್ಗದರ್ಶನದಲ್ಲಿ ಗೌಹಾತಿಯಲ್ಲಿ ಬಾಕ್ಸಿಂಗ್ ತರಬೇತಿ ಪಡೆದ ಲವ್ಲಿನಾ ಪ್ರಮುಖವಾಗಿ ವೆಲ್ಟರ್‌ವೈಟ್ ವಿಭಾಗದಲ್ಲಿ ನಾಲ್ಕು ಕಂಚಿನ ಪದಕ ಗೆದ್ದಿದ್ದಾರೆ. 2018ರ ದೆಹಲಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ ಮತ್ತು 2019 ರ ಉಲಾನ್-ಉಡೆ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದ ಈಕೆ 2017ರ ದುಬೈ ಮತ್ತು 2021ರ 2021 ದುಬೈ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿಯೂ ಕಂಚು ಗೆದ್ದಿದ್ದಾಳೆ. ಸೆರ್ಬಿಯಾದಲ್ಲಿ ನಡೆದ ನೇಷನ್ಸ್ ಕಪ್‌ನಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವಾರು ಗೆಲುವಿನ ನಗೆ ಬೀರಿದ್ದಾಳೆ. ಅವಳ ಒಟ್ಟಾರೆ ಸಾಧನೆ ಗುರುತಿಸಿ 2020ರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕಳೆದ ವರ್ಷ ಏಷ್ಯನ್ ಕ್ವಾಲಿಫೈಯರ್ಸ್‌ ಜೋರ್ಡಾನ್‌ನಲ್ಲಿ ಅವರು ಟೋಕಿಯೋ ಒಲಂಪಿಕ್ಸ್‌ಗೆ ಅರ್ಹತೆ ಪಡೆದರು. ಆದರೆ ಲಾಕ್‌ಡೌನ್ ಕಾರಣಕ್ಕಾಗಿ ಹಲವು ತಿಂಗಳು ಮನೆಯಲ್ಲಿಯೇ ಕಳೆದರು. ಲವ್ಲಿನಾ ಪುಣೆಯಲ್ಲಿ ತರಬೇತಿ ಪಡೆಯುತ್ತಿದ್ದ ಸಮಯದಲ್ಲಿ ಅವರ ತಾಯಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಕೋಲ್ಕತ್ತಾದಲ್ಲಿ ಆಪರೇಷನ್ ಮಾಡುವ ಸಂದರ್ಭದಲ್ಲಿ ಲವ್ಲಿನಾ ಅಲ್ಲಿದ್ದಳು. ಪಟಿಯಾಲದಲ್ಲಿ ಅವರು ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರ ತಾಯಿ ಕೋವಿಡ್‌ ಸೋಂಕಿಗೆ ತುತ್ತಾಗಿದ್ದರು. ಆಗಲೂ ಲವ್ಲಿನಾ ತನ್ನ ಸ್ವಗ್ರಾಮಕ್ಕೆ ತೆರಳಿ 11 ದಿನ ತಾಯಿಯೊಂದಿಗಿದ್ದು ಅವರನ್ನು ಉಪಚರಿಸಿ ನಂತರ ತರಬೇತಿಗೆ ಮರಳಿದ್ದಳು.

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಬಹಳ ಪ್ರಬುದ್ಧವಾಗಿ ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ. ಏನೇ ಆಗಲಿ ಆಕೆ ಭಾರತದ ಮತ್ತೊಬ್ಬ ಮೇರಿ ಕೋಮ್ ಆಗಿ ಮಿಂಚುವುದಂತೂ ಗ್ಯಾರಂಟಿ..

ಈ ಟೋಕಿಯೋ ಒಲಂಪಿಕ್ಸ್ ಭಾರತದ ಬಹುತೇಕರ ಪುರುಷರ ಮನಸ್ಥಿತಿಯನ್ನು ಬದಲಿಸಿಕೊಳ್ಳಲು ಮತ್ತೊಂದು ಸುವರ್ಣ ಅವಕಾಶವಾಗಿದೆ. ಸ್ತ್ರೀ ಸಮಾನತೆ, ಸ್ತ್ರೀ ಬಲವರ್ಧನೆ ಎಂಬುದು ಕೇವಲ ಘೋಷಣೆಯಾಗದೇ ನಿಜವಾಗಿ ಆಚರಣೆ ತರಲು ಮೊದಲು ತಲೆಯಲ್ಲಿನ ಲಿಂಗತಾರತಮ್ಯ ದೃಷ್ಟಿಕೋನವನ್ನು ಬದಲಿಸಿಕೊಳ್ಳಬೇಕಿದೆ. ಲವ್ಲಿನಾ, ಮೀರಾಬಾಯಿ, ಸಿಂಧು ಈ ನಿಟ್ಟಿನಲ್ಲಿ ನಮಗೆ ಬಹುದೊಡ್ಡ ಪಾಠವಾಗಲಿ.. ಒಲಂಪಿಕ್ಸ್‌ನಲ್ಲಿ ಪದಕ ಜಯಿಸಿ ಭಾರತದ ಗೌರವ ಕಾಪಾಡುತ್ತಿರುವ ಈ ಹೆಣ್ಮಕ್ಕಳಿಗೆ ಅಭಿನಂದನೆಗಳು.

–       ಮುತ್ತುರಾಜು


ಇದನ್ನೂ ಓದಿ; ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...