Homeಕ್ರೀಡೆಒಲಂಪಿಕ್ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ.

- Advertisement -
- Advertisement -

ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟರ್ಕಿಯ ಬುಸೆನಾಜ್ ಸರ್ಮೆನೆಲಿ ವಿರುದ್ಧ ಭಾರತದ ಲವ್ಲಿನಾ ಬೊರ್ಗೊಹೈನ್ 5-0 ಅಂತರದಿಂದ ಸೋಲನಪ್ಪಿದರೂ ಸಹ ಕಂಚಿನ ಪದಕ ಗೆದ್ದು ಭಾರತಕ್ಕೆ ಗೌರವ ತಂದುಕೊಟ್ಟಿದ್ದಾಳೆ.

ಭಾರತದ ಬಹುತೇಕ ಪೋಷಕರಿಗೆ ಹೆಣ್ಣು ಮಕ್ಕಳೆಂದರೆ ತಾತ್ಸಾರ. ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳು, ಮಹಿಳಾ ಲಿಂಗಾನುಪಾತ ಕಡಿಮೆ ಇರುವುದು ಈ ವಿದ್ಯಾಮಾನಕ್ಕೆ ಸಾಕ್ಷಿ. ಇಂತಹ ಮನಸ್ಥಿತಿಯ ಪೋಷಕರಿಗೆ ತಿಳಿಹೇಳುವಂತೆ, ಮತ್ತೊಮ್ಮೆ ಯೋಚಿಸಿ ಎಂದು ಆಗ್ರಹಿಸುವಂತೆ ಭಾರತದ ಮಹಿಳಾ ಕ್ರೀಡಾಪಟುಗಳು ಟೋಕಿಯೋ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುತ್ತಿದ್ದಾರೆ.

ಈ ಬಾರಿಯ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಭಾರತವನ್ನು ಪ್ರತಿನಿಧಿಸಿ ಒಟ್ಟು 127 ಕ್ರೀಡಾಪಟುಗಳು ಟೋಕಿಯೋಗೆ ತೆರಳಿದ್ದರು. ವೆಯ್ಟ್ ಲಿಫ್ಟಿಂಗ್‌ನಲ್ಲಿ ಮಣಿಪುರದ ತಾರೆ ಮೀರಾಬಾಯಿ ಚಾನು ಬೆಳ್ಳಿ ಗೆದ್ದು ಮನೆಮಾತಾದ ಕೆಲವೇ ದಿನಗಳಲ್ಲಿ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾಳೆ. ಅಸ್ಸಾಂನ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕೂಡ ಕ್ವಾಟರ್‌ಫೈನಲ್‌ನಲ್ಲಿ ಜಯಭೇರಿ ಭಾರಿಸುವ ಮೂಲಕ ಒಲಂಪಿಕ್‌ನಲ್ಲಿ ಪದಕ ತಂದುಕೊಟ್ಟ ಮೂರನೇ ಬಾಕ್ಸರ್ ಎಂಬ ಕೀರ್ತಿಗೆ ಪಾತ್ರವಾದರು.

ಪುಟ್ಟ ತೈವಾನ್ ದೇಶದ ಬಾಕ್ಸರ್ ನೀನ್-ಚಿನ್ ಚೆನ್ ಮಾಜಿ ವಿಶ್ವ ಚಾಂಪಿಯನ್. ಈ ಬಾರಿ ಒಲಂಪಿಕ್ಸ್ ಪದಕ ಗೆಲ್ಲುವ ನೆಚ್ಚಿನ ಕ್ರೀಡಾಪಟುಗಳಲ್ಲೊಬ್ಬರು. ಆಕೆಯೆದುರು ನಾಲ್ಕು ಬಾರಿ ಸೋಲುಂಡಿದ್ದ ಲವ್ಲಿನಾ ಬೊರ್ಗೊಹೈನ್ ವೆಲ್ಟರ್‌ವೈಟ್ (69 ಕೆಜಿ) ವಿಭಾಗದಲ್ಲಿ ಜುಲೈ 30 ರಂದು ನಡೆದ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ 4-1 ಅಂತರದಿಂದ ಭರ್ಜರಿ ಗೆಲವು ಸಾಧಿಸಿ ಸೆಮಿಫೈನಲ್ ತಲುಪಿದ್ದಳು.

ಅಸ್ಸಾಂನ ಗೋಲಘಾಟ್ ಜಿಲ್ಲೆಯ ಬಾರಾಮುಖಿಯಾ ಎಂಬ ಹಳ್ಳಿಯಲ್ಲಿ ಬಡಮಧ್ಯಮ ವರ್ಗದ ಕುಟುಂಬದಲ್ಲಿ ಮೂರನೇ ಹೆಣ್ಣು ಮಗಳಾಗಿ 1997ರ ಅಕ್ಟೋಬರ್ 02 ರಂದು ಲವ್ಲಿನಾ ಜನಿಸಿದಳು. ಭಾರತದ ಬಹುತೇಕ ಪೋಷಕರ ಮನಸ್ಥಿತಿಗೆ ವಿರುದ್ಧವಾಗಿ ಲವ್ಲಿನಾ ಪೋಷಕರಾದ ಟಿಕೆನ್ ಮತ್ತು ಮಮೋನಿ ಹೆಣ್ಣು ಮಕ್ಕಳೆಂದು ಮೂಗು ಮುರಿಯದೆ ಪ್ರೀತಿಯಿಂದ ಬೆಳೆಸಿದರು. ತಮ್ಮ ಮೂರು ಹೆಣ್ಣು ಮಕ್ಕಳು ತಮಗಿಷ್ಟವಾದ ಕ್ರೀಡೆಯಲ್ಲಿ ಸಾಧನೆಗೈಯಲು ಆಸರೆಯಾದರು.

ಲವ್ಲಿನಾಳ ಅವಳಿ ಸಹೋದರಿಯರಾದ ಲಿಮಾ ಮತ್ತು ಲಿಚಾ ಮಾರ್ಷಲ್ ಆರ್ಟ್ಸ್ ಕಲಿತು ಕಿಕ್ ಬಾಕ್ಸಿಂಗ್‌ನಲ್ಲಿ ಪರಿಣಿತರಾದರು. ಅವರೀಗ CISF ಮತ್ತು BSF ನಲ್ಲಿ ಉದ್ಯೋಗಿಗಲಾಗಿದ್ದಾರೆ. ಅದೇ ಹಾದಿಯಲ್ಲಿ ಮುನ್ನಡೆದ ಲವ್ಲಿನಾ 2012 ರಿಂದ ಬಾಕ್ಸಿಂಗ್ ತರಬೇತು ಪಡೆದು ಮೊವಾಯಿ ಥಾಯ್ ಎಂಬ ಮಾರ್ಷಲ್ ಆರ್ಟ್ಸ್ ಪರಿಣಿತಳಾದಳು.

ಭಾರತೀಯ ಕ್ರೀಡಾ ಪ್ರಾಧೀಕಾರದ ತರಬೇತುದಾರರಾದ ಪದಮ್ ಬೊರೊ ಮಾರ್ಗದರ್ಶನದಲ್ಲಿ ಗೌಹಾತಿಯಲ್ಲಿ ಬಾಕ್ಸಿಂಗ್ ತರಬೇತಿ ಪಡೆದ ಲವ್ಲಿನಾ ಪ್ರಮುಖವಾಗಿ ವೆಲ್ಟರ್‌ವೈಟ್ ವಿಭಾಗದಲ್ಲಿ ನಾಲ್ಕು ಕಂಚಿನ ಪದಕ ಗೆದ್ದಿದ್ದಾರೆ. 2018ರ ದೆಹಲಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ ಮತ್ತು 2019 ರ ಉಲಾನ್-ಉಡೆ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದ ಈಕೆ 2017ರ ದುಬೈ ಮತ್ತು 2021ರ 2021 ದುಬೈ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿಯೂ ಕಂಚು ಗೆದ್ದಿದ್ದಾಳೆ. ಸೆರ್ಬಿಯಾದಲ್ಲಿ ನಡೆದ ನೇಷನ್ಸ್ ಕಪ್‌ನಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವಾರು ಗೆಲುವಿನ ನಗೆ ಬೀರಿದ್ದಾಳೆ. ಅವಳ ಒಟ್ಟಾರೆ ಸಾಧನೆ ಗುರುತಿಸಿ 2020ರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕಳೆದ ವರ್ಷ ಏಷ್ಯನ್ ಕ್ವಾಲಿಫೈಯರ್ಸ್‌ ಜೋರ್ಡಾನ್‌ನಲ್ಲಿ ಅವರು ಟೋಕಿಯೋ ಒಲಂಪಿಕ್ಸ್‌ಗೆ ಅರ್ಹತೆ ಪಡೆದರು. ಆದರೆ ಲಾಕ್‌ಡೌನ್ ಕಾರಣಕ್ಕಾಗಿ ಹಲವು ತಿಂಗಳು ಮನೆಯಲ್ಲಿಯೇ ಕಳೆದರು. ಲವ್ಲಿನಾ ಪುಣೆಯಲ್ಲಿ ತರಬೇತಿ ಪಡೆಯುತ್ತಿದ್ದ ಸಮಯದಲ್ಲಿ ಅವರ ತಾಯಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಕೋಲ್ಕತ್ತಾದಲ್ಲಿ ಆಪರೇಷನ್ ಮಾಡುವ ಸಂದರ್ಭದಲ್ಲಿ ಲವ್ಲಿನಾ ಅಲ್ಲಿದ್ದಳು. ಪಟಿಯಾಲದಲ್ಲಿ ಅವರು ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರ ತಾಯಿ ಕೋವಿಡ್‌ ಸೋಂಕಿಗೆ ತುತ್ತಾಗಿದ್ದರು. ಆಗಲೂ ಲವ್ಲಿನಾ ತನ್ನ ಸ್ವಗ್ರಾಮಕ್ಕೆ ತೆರಳಿ 11 ದಿನ ತಾಯಿಯೊಂದಿಗಿದ್ದು ಅವರನ್ನು ಉಪಚರಿಸಿ ನಂತರ ತರಬೇತಿಗೆ ಮರಳಿದ್ದಳು.

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಬಹಳ ಪ್ರಬುದ್ಧವಾಗಿ ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ. ಏನೇ ಆಗಲಿ ಆಕೆ ಭಾರತದ ಮತ್ತೊಬ್ಬ ಮೇರಿ ಕೋಮ್ ಆಗಿ ಮಿಂಚುವುದಂತೂ ಗ್ಯಾರಂಟಿ..

ಈ ಟೋಕಿಯೋ ಒಲಂಪಿಕ್ಸ್ ಭಾರತದ ಬಹುತೇಕರ ಪುರುಷರ ಮನಸ್ಥಿತಿಯನ್ನು ಬದಲಿಸಿಕೊಳ್ಳಲು ಮತ್ತೊಂದು ಸುವರ್ಣ ಅವಕಾಶವಾಗಿದೆ. ಸ್ತ್ರೀ ಸಮಾನತೆ, ಸ್ತ್ರೀ ಬಲವರ್ಧನೆ ಎಂಬುದು ಕೇವಲ ಘೋಷಣೆಯಾಗದೇ ನಿಜವಾಗಿ ಆಚರಣೆ ತರಲು ಮೊದಲು ತಲೆಯಲ್ಲಿನ ಲಿಂಗತಾರತಮ್ಯ ದೃಷ್ಟಿಕೋನವನ್ನು ಬದಲಿಸಿಕೊಳ್ಳಬೇಕಿದೆ. ಲವ್ಲಿನಾ, ಮೀರಾಬಾಯಿ, ಸಿಂಧು ಈ ನಿಟ್ಟಿನಲ್ಲಿ ನಮಗೆ ಬಹುದೊಡ್ಡ ಪಾಠವಾಗಲಿ.. ಒಲಂಪಿಕ್ಸ್‌ನಲ್ಲಿ ಪದಕ ಜಯಿಸಿ ಭಾರತದ ಗೌರವ ಕಾಪಾಡುತ್ತಿರುವ ಈ ಹೆಣ್ಮಕ್ಕಳಿಗೆ ಅಭಿನಂದನೆಗಳು.

–       ಮುತ್ತುರಾಜು


ಇದನ್ನೂ ಓದಿ; ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...