Homeಕ್ರೀಡೆಒಲಂಪಿಕ್ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ.

- Advertisement -
- Advertisement -

ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟರ್ಕಿಯ ಬುಸೆನಾಜ್ ಸರ್ಮೆನೆಲಿ ವಿರುದ್ಧ ಭಾರತದ ಲವ್ಲಿನಾ ಬೊರ್ಗೊಹೈನ್ 5-0 ಅಂತರದಿಂದ ಸೋಲನಪ್ಪಿದರೂ ಸಹ ಕಂಚಿನ ಪದಕ ಗೆದ್ದು ಭಾರತಕ್ಕೆ ಗೌರವ ತಂದುಕೊಟ್ಟಿದ್ದಾಳೆ.

ಭಾರತದ ಬಹುತೇಕ ಪೋಷಕರಿಗೆ ಹೆಣ್ಣು ಮಕ್ಕಳೆಂದರೆ ತಾತ್ಸಾರ. ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳು, ಮಹಿಳಾ ಲಿಂಗಾನುಪಾತ ಕಡಿಮೆ ಇರುವುದು ಈ ವಿದ್ಯಾಮಾನಕ್ಕೆ ಸಾಕ್ಷಿ. ಇಂತಹ ಮನಸ್ಥಿತಿಯ ಪೋಷಕರಿಗೆ ತಿಳಿಹೇಳುವಂತೆ, ಮತ್ತೊಮ್ಮೆ ಯೋಚಿಸಿ ಎಂದು ಆಗ್ರಹಿಸುವಂತೆ ಭಾರತದ ಮಹಿಳಾ ಕ್ರೀಡಾಪಟುಗಳು ಟೋಕಿಯೋ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುತ್ತಿದ್ದಾರೆ.

ಈ ಬಾರಿಯ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಭಾರತವನ್ನು ಪ್ರತಿನಿಧಿಸಿ ಒಟ್ಟು 127 ಕ್ರೀಡಾಪಟುಗಳು ಟೋಕಿಯೋಗೆ ತೆರಳಿದ್ದರು. ವೆಯ್ಟ್ ಲಿಫ್ಟಿಂಗ್‌ನಲ್ಲಿ ಮಣಿಪುರದ ತಾರೆ ಮೀರಾಬಾಯಿ ಚಾನು ಬೆಳ್ಳಿ ಗೆದ್ದು ಮನೆಮಾತಾದ ಕೆಲವೇ ದಿನಗಳಲ್ಲಿ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾಳೆ. ಅಸ್ಸಾಂನ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕೂಡ ಕ್ವಾಟರ್‌ಫೈನಲ್‌ನಲ್ಲಿ ಜಯಭೇರಿ ಭಾರಿಸುವ ಮೂಲಕ ಒಲಂಪಿಕ್‌ನಲ್ಲಿ ಪದಕ ತಂದುಕೊಟ್ಟ ಮೂರನೇ ಬಾಕ್ಸರ್ ಎಂಬ ಕೀರ್ತಿಗೆ ಪಾತ್ರವಾದರು.

ಪುಟ್ಟ ತೈವಾನ್ ದೇಶದ ಬಾಕ್ಸರ್ ನೀನ್-ಚಿನ್ ಚೆನ್ ಮಾಜಿ ವಿಶ್ವ ಚಾಂಪಿಯನ್. ಈ ಬಾರಿ ಒಲಂಪಿಕ್ಸ್ ಪದಕ ಗೆಲ್ಲುವ ನೆಚ್ಚಿನ ಕ್ರೀಡಾಪಟುಗಳಲ್ಲೊಬ್ಬರು. ಆಕೆಯೆದುರು ನಾಲ್ಕು ಬಾರಿ ಸೋಲುಂಡಿದ್ದ ಲವ್ಲಿನಾ ಬೊರ್ಗೊಹೈನ್ ವೆಲ್ಟರ್‌ವೈಟ್ (69 ಕೆಜಿ) ವಿಭಾಗದಲ್ಲಿ ಜುಲೈ 30 ರಂದು ನಡೆದ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ 4-1 ಅಂತರದಿಂದ ಭರ್ಜರಿ ಗೆಲವು ಸಾಧಿಸಿ ಸೆಮಿಫೈನಲ್ ತಲುಪಿದ್ದಳು.

ಅಸ್ಸಾಂನ ಗೋಲಘಾಟ್ ಜಿಲ್ಲೆಯ ಬಾರಾಮುಖಿಯಾ ಎಂಬ ಹಳ್ಳಿಯಲ್ಲಿ ಬಡಮಧ್ಯಮ ವರ್ಗದ ಕುಟುಂಬದಲ್ಲಿ ಮೂರನೇ ಹೆಣ್ಣು ಮಗಳಾಗಿ 1997ರ ಅಕ್ಟೋಬರ್ 02 ರಂದು ಲವ್ಲಿನಾ ಜನಿಸಿದಳು. ಭಾರತದ ಬಹುತೇಕ ಪೋಷಕರ ಮನಸ್ಥಿತಿಗೆ ವಿರುದ್ಧವಾಗಿ ಲವ್ಲಿನಾ ಪೋಷಕರಾದ ಟಿಕೆನ್ ಮತ್ತು ಮಮೋನಿ ಹೆಣ್ಣು ಮಕ್ಕಳೆಂದು ಮೂಗು ಮುರಿಯದೆ ಪ್ರೀತಿಯಿಂದ ಬೆಳೆಸಿದರು. ತಮ್ಮ ಮೂರು ಹೆಣ್ಣು ಮಕ್ಕಳು ತಮಗಿಷ್ಟವಾದ ಕ್ರೀಡೆಯಲ್ಲಿ ಸಾಧನೆಗೈಯಲು ಆಸರೆಯಾದರು.

ಲವ್ಲಿನಾಳ ಅವಳಿ ಸಹೋದರಿಯರಾದ ಲಿಮಾ ಮತ್ತು ಲಿಚಾ ಮಾರ್ಷಲ್ ಆರ್ಟ್ಸ್ ಕಲಿತು ಕಿಕ್ ಬಾಕ್ಸಿಂಗ್‌ನಲ್ಲಿ ಪರಿಣಿತರಾದರು. ಅವರೀಗ CISF ಮತ್ತು BSF ನಲ್ಲಿ ಉದ್ಯೋಗಿಗಲಾಗಿದ್ದಾರೆ. ಅದೇ ಹಾದಿಯಲ್ಲಿ ಮುನ್ನಡೆದ ಲವ್ಲಿನಾ 2012 ರಿಂದ ಬಾಕ್ಸಿಂಗ್ ತರಬೇತು ಪಡೆದು ಮೊವಾಯಿ ಥಾಯ್ ಎಂಬ ಮಾರ್ಷಲ್ ಆರ್ಟ್ಸ್ ಪರಿಣಿತಳಾದಳು.

ಭಾರತೀಯ ಕ್ರೀಡಾ ಪ್ರಾಧೀಕಾರದ ತರಬೇತುದಾರರಾದ ಪದಮ್ ಬೊರೊ ಮಾರ್ಗದರ್ಶನದಲ್ಲಿ ಗೌಹಾತಿಯಲ್ಲಿ ಬಾಕ್ಸಿಂಗ್ ತರಬೇತಿ ಪಡೆದ ಲವ್ಲಿನಾ ಪ್ರಮುಖವಾಗಿ ವೆಲ್ಟರ್‌ವೈಟ್ ವಿಭಾಗದಲ್ಲಿ ನಾಲ್ಕು ಕಂಚಿನ ಪದಕ ಗೆದ್ದಿದ್ದಾರೆ. 2018ರ ದೆಹಲಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ ಮತ್ತು 2019 ರ ಉಲಾನ್-ಉಡೆ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದ ಈಕೆ 2017ರ ದುಬೈ ಮತ್ತು 2021ರ 2021 ದುಬೈ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿಯೂ ಕಂಚು ಗೆದ್ದಿದ್ದಾಳೆ. ಸೆರ್ಬಿಯಾದಲ್ಲಿ ನಡೆದ ನೇಷನ್ಸ್ ಕಪ್‌ನಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವಾರು ಗೆಲುವಿನ ನಗೆ ಬೀರಿದ್ದಾಳೆ. ಅವಳ ಒಟ್ಟಾರೆ ಸಾಧನೆ ಗುರುತಿಸಿ 2020ರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕಳೆದ ವರ್ಷ ಏಷ್ಯನ್ ಕ್ವಾಲಿಫೈಯರ್ಸ್‌ ಜೋರ್ಡಾನ್‌ನಲ್ಲಿ ಅವರು ಟೋಕಿಯೋ ಒಲಂಪಿಕ್ಸ್‌ಗೆ ಅರ್ಹತೆ ಪಡೆದರು. ಆದರೆ ಲಾಕ್‌ಡೌನ್ ಕಾರಣಕ್ಕಾಗಿ ಹಲವು ತಿಂಗಳು ಮನೆಯಲ್ಲಿಯೇ ಕಳೆದರು. ಲವ್ಲಿನಾ ಪುಣೆಯಲ್ಲಿ ತರಬೇತಿ ಪಡೆಯುತ್ತಿದ್ದ ಸಮಯದಲ್ಲಿ ಅವರ ತಾಯಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಕೋಲ್ಕತ್ತಾದಲ್ಲಿ ಆಪರೇಷನ್ ಮಾಡುವ ಸಂದರ್ಭದಲ್ಲಿ ಲವ್ಲಿನಾ ಅಲ್ಲಿದ್ದಳು. ಪಟಿಯಾಲದಲ್ಲಿ ಅವರು ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರ ತಾಯಿ ಕೋವಿಡ್‌ ಸೋಂಕಿಗೆ ತುತ್ತಾಗಿದ್ದರು. ಆಗಲೂ ಲವ್ಲಿನಾ ತನ್ನ ಸ್ವಗ್ರಾಮಕ್ಕೆ ತೆರಳಿ 11 ದಿನ ತಾಯಿಯೊಂದಿಗಿದ್ದು ಅವರನ್ನು ಉಪಚರಿಸಿ ನಂತರ ತರಬೇತಿಗೆ ಮರಳಿದ್ದಳು.

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಬಹಳ ಪ್ರಬುದ್ಧವಾಗಿ ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ. ಏನೇ ಆಗಲಿ ಆಕೆ ಭಾರತದ ಮತ್ತೊಬ್ಬ ಮೇರಿ ಕೋಮ್ ಆಗಿ ಮಿಂಚುವುದಂತೂ ಗ್ಯಾರಂಟಿ..

ಈ ಟೋಕಿಯೋ ಒಲಂಪಿಕ್ಸ್ ಭಾರತದ ಬಹುತೇಕರ ಪುರುಷರ ಮನಸ್ಥಿತಿಯನ್ನು ಬದಲಿಸಿಕೊಳ್ಳಲು ಮತ್ತೊಂದು ಸುವರ್ಣ ಅವಕಾಶವಾಗಿದೆ. ಸ್ತ್ರೀ ಸಮಾನತೆ, ಸ್ತ್ರೀ ಬಲವರ್ಧನೆ ಎಂಬುದು ಕೇವಲ ಘೋಷಣೆಯಾಗದೇ ನಿಜವಾಗಿ ಆಚರಣೆ ತರಲು ಮೊದಲು ತಲೆಯಲ್ಲಿನ ಲಿಂಗತಾರತಮ್ಯ ದೃಷ್ಟಿಕೋನವನ್ನು ಬದಲಿಸಿಕೊಳ್ಳಬೇಕಿದೆ. ಲವ್ಲಿನಾ, ಮೀರಾಬಾಯಿ, ಸಿಂಧು ಈ ನಿಟ್ಟಿನಲ್ಲಿ ನಮಗೆ ಬಹುದೊಡ್ಡ ಪಾಠವಾಗಲಿ.. ಒಲಂಪಿಕ್ಸ್‌ನಲ್ಲಿ ಪದಕ ಜಯಿಸಿ ಭಾರತದ ಗೌರವ ಕಾಪಾಡುತ್ತಿರುವ ಈ ಹೆಣ್ಮಕ್ಕಳಿಗೆ ಅಭಿನಂದನೆಗಳು.

–       ಮುತ್ತುರಾಜು


ಇದನ್ನೂ ಓದಿ; ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....