Homeಕ್ರೀಡೆಒಲಂಪಿಕ್ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ.

- Advertisement -
- Advertisement -

ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟರ್ಕಿಯ ಬುಸೆನಾಜ್ ಸರ್ಮೆನೆಲಿ ವಿರುದ್ಧ ಭಾರತದ ಲವ್ಲಿನಾ ಬೊರ್ಗೊಹೈನ್ 5-0 ಅಂತರದಿಂದ ಸೋಲನಪ್ಪಿದರೂ ಸಹ ಕಂಚಿನ ಪದಕ ಗೆದ್ದು ಭಾರತಕ್ಕೆ ಗೌರವ ತಂದುಕೊಟ್ಟಿದ್ದಾಳೆ.

ಭಾರತದ ಬಹುತೇಕ ಪೋಷಕರಿಗೆ ಹೆಣ್ಣು ಮಕ್ಕಳೆಂದರೆ ತಾತ್ಸಾರ. ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳು, ಮಹಿಳಾ ಲಿಂಗಾನುಪಾತ ಕಡಿಮೆ ಇರುವುದು ಈ ವಿದ್ಯಾಮಾನಕ್ಕೆ ಸಾಕ್ಷಿ. ಇಂತಹ ಮನಸ್ಥಿತಿಯ ಪೋಷಕರಿಗೆ ತಿಳಿಹೇಳುವಂತೆ, ಮತ್ತೊಮ್ಮೆ ಯೋಚಿಸಿ ಎಂದು ಆಗ್ರಹಿಸುವಂತೆ ಭಾರತದ ಮಹಿಳಾ ಕ್ರೀಡಾಪಟುಗಳು ಟೋಕಿಯೋ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುತ್ತಿದ್ದಾರೆ.

ಈ ಬಾರಿಯ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಭಾರತವನ್ನು ಪ್ರತಿನಿಧಿಸಿ ಒಟ್ಟು 127 ಕ್ರೀಡಾಪಟುಗಳು ಟೋಕಿಯೋಗೆ ತೆರಳಿದ್ದರು. ವೆಯ್ಟ್ ಲಿಫ್ಟಿಂಗ್‌ನಲ್ಲಿ ಮಣಿಪುರದ ತಾರೆ ಮೀರಾಬಾಯಿ ಚಾನು ಬೆಳ್ಳಿ ಗೆದ್ದು ಮನೆಮಾತಾದ ಕೆಲವೇ ದಿನಗಳಲ್ಲಿ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾಳೆ. ಅಸ್ಸಾಂನ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕೂಡ ಕ್ವಾಟರ್‌ಫೈನಲ್‌ನಲ್ಲಿ ಜಯಭೇರಿ ಭಾರಿಸುವ ಮೂಲಕ ಒಲಂಪಿಕ್‌ನಲ್ಲಿ ಪದಕ ತಂದುಕೊಟ್ಟ ಮೂರನೇ ಬಾಕ್ಸರ್ ಎಂಬ ಕೀರ್ತಿಗೆ ಪಾತ್ರವಾದರು.

ಪುಟ್ಟ ತೈವಾನ್ ದೇಶದ ಬಾಕ್ಸರ್ ನೀನ್-ಚಿನ್ ಚೆನ್ ಮಾಜಿ ವಿಶ್ವ ಚಾಂಪಿಯನ್. ಈ ಬಾರಿ ಒಲಂಪಿಕ್ಸ್ ಪದಕ ಗೆಲ್ಲುವ ನೆಚ್ಚಿನ ಕ್ರೀಡಾಪಟುಗಳಲ್ಲೊಬ್ಬರು. ಆಕೆಯೆದುರು ನಾಲ್ಕು ಬಾರಿ ಸೋಲುಂಡಿದ್ದ ಲವ್ಲಿನಾ ಬೊರ್ಗೊಹೈನ್ ವೆಲ್ಟರ್‌ವೈಟ್ (69 ಕೆಜಿ) ವಿಭಾಗದಲ್ಲಿ ಜುಲೈ 30 ರಂದು ನಡೆದ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ 4-1 ಅಂತರದಿಂದ ಭರ್ಜರಿ ಗೆಲವು ಸಾಧಿಸಿ ಸೆಮಿಫೈನಲ್ ತಲುಪಿದ್ದಳು.

ಅಸ್ಸಾಂನ ಗೋಲಘಾಟ್ ಜಿಲ್ಲೆಯ ಬಾರಾಮುಖಿಯಾ ಎಂಬ ಹಳ್ಳಿಯಲ್ಲಿ ಬಡಮಧ್ಯಮ ವರ್ಗದ ಕುಟುಂಬದಲ್ಲಿ ಮೂರನೇ ಹೆಣ್ಣು ಮಗಳಾಗಿ 1997ರ ಅಕ್ಟೋಬರ್ 02 ರಂದು ಲವ್ಲಿನಾ ಜನಿಸಿದಳು. ಭಾರತದ ಬಹುತೇಕ ಪೋಷಕರ ಮನಸ್ಥಿತಿಗೆ ವಿರುದ್ಧವಾಗಿ ಲವ್ಲಿನಾ ಪೋಷಕರಾದ ಟಿಕೆನ್ ಮತ್ತು ಮಮೋನಿ ಹೆಣ್ಣು ಮಕ್ಕಳೆಂದು ಮೂಗು ಮುರಿಯದೆ ಪ್ರೀತಿಯಿಂದ ಬೆಳೆಸಿದರು. ತಮ್ಮ ಮೂರು ಹೆಣ್ಣು ಮಕ್ಕಳು ತಮಗಿಷ್ಟವಾದ ಕ್ರೀಡೆಯಲ್ಲಿ ಸಾಧನೆಗೈಯಲು ಆಸರೆಯಾದರು.

ಲವ್ಲಿನಾಳ ಅವಳಿ ಸಹೋದರಿಯರಾದ ಲಿಮಾ ಮತ್ತು ಲಿಚಾ ಮಾರ್ಷಲ್ ಆರ್ಟ್ಸ್ ಕಲಿತು ಕಿಕ್ ಬಾಕ್ಸಿಂಗ್‌ನಲ್ಲಿ ಪರಿಣಿತರಾದರು. ಅವರೀಗ CISF ಮತ್ತು BSF ನಲ್ಲಿ ಉದ್ಯೋಗಿಗಲಾಗಿದ್ದಾರೆ. ಅದೇ ಹಾದಿಯಲ್ಲಿ ಮುನ್ನಡೆದ ಲವ್ಲಿನಾ 2012 ರಿಂದ ಬಾಕ್ಸಿಂಗ್ ತರಬೇತು ಪಡೆದು ಮೊವಾಯಿ ಥಾಯ್ ಎಂಬ ಮಾರ್ಷಲ್ ಆರ್ಟ್ಸ್ ಪರಿಣಿತಳಾದಳು.

ಭಾರತೀಯ ಕ್ರೀಡಾ ಪ್ರಾಧೀಕಾರದ ತರಬೇತುದಾರರಾದ ಪದಮ್ ಬೊರೊ ಮಾರ್ಗದರ್ಶನದಲ್ಲಿ ಗೌಹಾತಿಯಲ್ಲಿ ಬಾಕ್ಸಿಂಗ್ ತರಬೇತಿ ಪಡೆದ ಲವ್ಲಿನಾ ಪ್ರಮುಖವಾಗಿ ವೆಲ್ಟರ್‌ವೈಟ್ ವಿಭಾಗದಲ್ಲಿ ನಾಲ್ಕು ಕಂಚಿನ ಪದಕ ಗೆದ್ದಿದ್ದಾರೆ. 2018ರ ದೆಹಲಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ ಮತ್ತು 2019 ರ ಉಲಾನ್-ಉಡೆ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದ ಈಕೆ 2017ರ ದುಬೈ ಮತ್ತು 2021ರ 2021 ದುಬೈ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿಯೂ ಕಂಚು ಗೆದ್ದಿದ್ದಾಳೆ. ಸೆರ್ಬಿಯಾದಲ್ಲಿ ನಡೆದ ನೇಷನ್ಸ್ ಕಪ್‌ನಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವಾರು ಗೆಲುವಿನ ನಗೆ ಬೀರಿದ್ದಾಳೆ. ಅವಳ ಒಟ್ಟಾರೆ ಸಾಧನೆ ಗುರುತಿಸಿ 2020ರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕಳೆದ ವರ್ಷ ಏಷ್ಯನ್ ಕ್ವಾಲಿಫೈಯರ್ಸ್‌ ಜೋರ್ಡಾನ್‌ನಲ್ಲಿ ಅವರು ಟೋಕಿಯೋ ಒಲಂಪಿಕ್ಸ್‌ಗೆ ಅರ್ಹತೆ ಪಡೆದರು. ಆದರೆ ಲಾಕ್‌ಡೌನ್ ಕಾರಣಕ್ಕಾಗಿ ಹಲವು ತಿಂಗಳು ಮನೆಯಲ್ಲಿಯೇ ಕಳೆದರು. ಲವ್ಲಿನಾ ಪುಣೆಯಲ್ಲಿ ತರಬೇತಿ ಪಡೆಯುತ್ತಿದ್ದ ಸಮಯದಲ್ಲಿ ಅವರ ತಾಯಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಕೋಲ್ಕತ್ತಾದಲ್ಲಿ ಆಪರೇಷನ್ ಮಾಡುವ ಸಂದರ್ಭದಲ್ಲಿ ಲವ್ಲಿನಾ ಅಲ್ಲಿದ್ದಳು. ಪಟಿಯಾಲದಲ್ಲಿ ಅವರು ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರ ತಾಯಿ ಕೋವಿಡ್‌ ಸೋಂಕಿಗೆ ತುತ್ತಾಗಿದ್ದರು. ಆಗಲೂ ಲವ್ಲಿನಾ ತನ್ನ ಸ್ವಗ್ರಾಮಕ್ಕೆ ತೆರಳಿ 11 ದಿನ ತಾಯಿಯೊಂದಿಗಿದ್ದು ಅವರನ್ನು ಉಪಚರಿಸಿ ನಂತರ ತರಬೇತಿಗೆ ಮರಳಿದ್ದಳು.

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಬಹಳ ಪ್ರಬುದ್ಧವಾಗಿ ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ. ಏನೇ ಆಗಲಿ ಆಕೆ ಭಾರತದ ಮತ್ತೊಬ್ಬ ಮೇರಿ ಕೋಮ್ ಆಗಿ ಮಿಂಚುವುದಂತೂ ಗ್ಯಾರಂಟಿ..

ಈ ಟೋಕಿಯೋ ಒಲಂಪಿಕ್ಸ್ ಭಾರತದ ಬಹುತೇಕರ ಪುರುಷರ ಮನಸ್ಥಿತಿಯನ್ನು ಬದಲಿಸಿಕೊಳ್ಳಲು ಮತ್ತೊಂದು ಸುವರ್ಣ ಅವಕಾಶವಾಗಿದೆ. ಸ್ತ್ರೀ ಸಮಾನತೆ, ಸ್ತ್ರೀ ಬಲವರ್ಧನೆ ಎಂಬುದು ಕೇವಲ ಘೋಷಣೆಯಾಗದೇ ನಿಜವಾಗಿ ಆಚರಣೆ ತರಲು ಮೊದಲು ತಲೆಯಲ್ಲಿನ ಲಿಂಗತಾರತಮ್ಯ ದೃಷ್ಟಿಕೋನವನ್ನು ಬದಲಿಸಿಕೊಳ್ಳಬೇಕಿದೆ. ಲವ್ಲಿನಾ, ಮೀರಾಬಾಯಿ, ಸಿಂಧು ಈ ನಿಟ್ಟಿನಲ್ಲಿ ನಮಗೆ ಬಹುದೊಡ್ಡ ಪಾಠವಾಗಲಿ.. ಒಲಂಪಿಕ್ಸ್‌ನಲ್ಲಿ ಪದಕ ಜಯಿಸಿ ಭಾರತದ ಗೌರವ ಕಾಪಾಡುತ್ತಿರುವ ಈ ಹೆಣ್ಮಕ್ಕಳಿಗೆ ಅಭಿನಂದನೆಗಳು.

–       ಮುತ್ತುರಾಜು


ಇದನ್ನೂ ಓದಿ; ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...