Homeಕ್ರೀಡೆಒಲಂಪಿಕ್ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ.

- Advertisement -
- Advertisement -

ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟರ್ಕಿಯ ಬುಸೆನಾಜ್ ಸರ್ಮೆನೆಲಿ ವಿರುದ್ಧ ಭಾರತದ ಲವ್ಲಿನಾ ಬೊರ್ಗೊಹೈನ್ 5-0 ಅಂತರದಿಂದ ಸೋಲನಪ್ಪಿದರೂ ಸಹ ಕಂಚಿನ ಪದಕ ಗೆದ್ದು ಭಾರತಕ್ಕೆ ಗೌರವ ತಂದುಕೊಟ್ಟಿದ್ದಾಳೆ.

ಭಾರತದ ಬಹುತೇಕ ಪೋಷಕರಿಗೆ ಹೆಣ್ಣು ಮಕ್ಕಳೆಂದರೆ ತಾತ್ಸಾರ. ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳು, ಮಹಿಳಾ ಲಿಂಗಾನುಪಾತ ಕಡಿಮೆ ಇರುವುದು ಈ ವಿದ್ಯಾಮಾನಕ್ಕೆ ಸಾಕ್ಷಿ. ಇಂತಹ ಮನಸ್ಥಿತಿಯ ಪೋಷಕರಿಗೆ ತಿಳಿಹೇಳುವಂತೆ, ಮತ್ತೊಮ್ಮೆ ಯೋಚಿಸಿ ಎಂದು ಆಗ್ರಹಿಸುವಂತೆ ಭಾರತದ ಮಹಿಳಾ ಕ್ರೀಡಾಪಟುಗಳು ಟೋಕಿಯೋ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುತ್ತಿದ್ದಾರೆ.

ಈ ಬಾರಿಯ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಭಾರತವನ್ನು ಪ್ರತಿನಿಧಿಸಿ ಒಟ್ಟು 127 ಕ್ರೀಡಾಪಟುಗಳು ಟೋಕಿಯೋಗೆ ತೆರಳಿದ್ದರು. ವೆಯ್ಟ್ ಲಿಫ್ಟಿಂಗ್‌ನಲ್ಲಿ ಮಣಿಪುರದ ತಾರೆ ಮೀರಾಬಾಯಿ ಚಾನು ಬೆಳ್ಳಿ ಗೆದ್ದು ಮನೆಮಾತಾದ ಕೆಲವೇ ದಿನಗಳಲ್ಲಿ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾಳೆ. ಅಸ್ಸಾಂನ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕೂಡ ಕ್ವಾಟರ್‌ಫೈನಲ್‌ನಲ್ಲಿ ಜಯಭೇರಿ ಭಾರಿಸುವ ಮೂಲಕ ಒಲಂಪಿಕ್‌ನಲ್ಲಿ ಪದಕ ತಂದುಕೊಟ್ಟ ಮೂರನೇ ಬಾಕ್ಸರ್ ಎಂಬ ಕೀರ್ತಿಗೆ ಪಾತ್ರವಾದರು.

ಪುಟ್ಟ ತೈವಾನ್ ದೇಶದ ಬಾಕ್ಸರ್ ನೀನ್-ಚಿನ್ ಚೆನ್ ಮಾಜಿ ವಿಶ್ವ ಚಾಂಪಿಯನ್. ಈ ಬಾರಿ ಒಲಂಪಿಕ್ಸ್ ಪದಕ ಗೆಲ್ಲುವ ನೆಚ್ಚಿನ ಕ್ರೀಡಾಪಟುಗಳಲ್ಲೊಬ್ಬರು. ಆಕೆಯೆದುರು ನಾಲ್ಕು ಬಾರಿ ಸೋಲುಂಡಿದ್ದ ಲವ್ಲಿನಾ ಬೊರ್ಗೊಹೈನ್ ವೆಲ್ಟರ್‌ವೈಟ್ (69 ಕೆಜಿ) ವಿಭಾಗದಲ್ಲಿ ಜುಲೈ 30 ರಂದು ನಡೆದ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ 4-1 ಅಂತರದಿಂದ ಭರ್ಜರಿ ಗೆಲವು ಸಾಧಿಸಿ ಸೆಮಿಫೈನಲ್ ತಲುಪಿದ್ದಳು.

ಅಸ್ಸಾಂನ ಗೋಲಘಾಟ್ ಜಿಲ್ಲೆಯ ಬಾರಾಮುಖಿಯಾ ಎಂಬ ಹಳ್ಳಿಯಲ್ಲಿ ಬಡಮಧ್ಯಮ ವರ್ಗದ ಕುಟುಂಬದಲ್ಲಿ ಮೂರನೇ ಹೆಣ್ಣು ಮಗಳಾಗಿ 1997ರ ಅಕ್ಟೋಬರ್ 02 ರಂದು ಲವ್ಲಿನಾ ಜನಿಸಿದಳು. ಭಾರತದ ಬಹುತೇಕ ಪೋಷಕರ ಮನಸ್ಥಿತಿಗೆ ವಿರುದ್ಧವಾಗಿ ಲವ್ಲಿನಾ ಪೋಷಕರಾದ ಟಿಕೆನ್ ಮತ್ತು ಮಮೋನಿ ಹೆಣ್ಣು ಮಕ್ಕಳೆಂದು ಮೂಗು ಮುರಿಯದೆ ಪ್ರೀತಿಯಿಂದ ಬೆಳೆಸಿದರು. ತಮ್ಮ ಮೂರು ಹೆಣ್ಣು ಮಕ್ಕಳು ತಮಗಿಷ್ಟವಾದ ಕ್ರೀಡೆಯಲ್ಲಿ ಸಾಧನೆಗೈಯಲು ಆಸರೆಯಾದರು.

ಲವ್ಲಿನಾಳ ಅವಳಿ ಸಹೋದರಿಯರಾದ ಲಿಮಾ ಮತ್ತು ಲಿಚಾ ಮಾರ್ಷಲ್ ಆರ್ಟ್ಸ್ ಕಲಿತು ಕಿಕ್ ಬಾಕ್ಸಿಂಗ್‌ನಲ್ಲಿ ಪರಿಣಿತರಾದರು. ಅವರೀಗ CISF ಮತ್ತು BSF ನಲ್ಲಿ ಉದ್ಯೋಗಿಗಲಾಗಿದ್ದಾರೆ. ಅದೇ ಹಾದಿಯಲ್ಲಿ ಮುನ್ನಡೆದ ಲವ್ಲಿನಾ 2012 ರಿಂದ ಬಾಕ್ಸಿಂಗ್ ತರಬೇತು ಪಡೆದು ಮೊವಾಯಿ ಥಾಯ್ ಎಂಬ ಮಾರ್ಷಲ್ ಆರ್ಟ್ಸ್ ಪರಿಣಿತಳಾದಳು.

ಭಾರತೀಯ ಕ್ರೀಡಾ ಪ್ರಾಧೀಕಾರದ ತರಬೇತುದಾರರಾದ ಪದಮ್ ಬೊರೊ ಮಾರ್ಗದರ್ಶನದಲ್ಲಿ ಗೌಹಾತಿಯಲ್ಲಿ ಬಾಕ್ಸಿಂಗ್ ತರಬೇತಿ ಪಡೆದ ಲವ್ಲಿನಾ ಪ್ರಮುಖವಾಗಿ ವೆಲ್ಟರ್‌ವೈಟ್ ವಿಭಾಗದಲ್ಲಿ ನಾಲ್ಕು ಕಂಚಿನ ಪದಕ ಗೆದ್ದಿದ್ದಾರೆ. 2018ರ ದೆಹಲಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ ಮತ್ತು 2019 ರ ಉಲಾನ್-ಉಡೆ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದ ಈಕೆ 2017ರ ದುಬೈ ಮತ್ತು 2021ರ 2021 ದುಬೈ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿಯೂ ಕಂಚು ಗೆದ್ದಿದ್ದಾಳೆ. ಸೆರ್ಬಿಯಾದಲ್ಲಿ ನಡೆದ ನೇಷನ್ಸ್ ಕಪ್‌ನಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವಾರು ಗೆಲುವಿನ ನಗೆ ಬೀರಿದ್ದಾಳೆ. ಅವಳ ಒಟ್ಟಾರೆ ಸಾಧನೆ ಗುರುತಿಸಿ 2020ರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕಳೆದ ವರ್ಷ ಏಷ್ಯನ್ ಕ್ವಾಲಿಫೈಯರ್ಸ್‌ ಜೋರ್ಡಾನ್‌ನಲ್ಲಿ ಅವರು ಟೋಕಿಯೋ ಒಲಂಪಿಕ್ಸ್‌ಗೆ ಅರ್ಹತೆ ಪಡೆದರು. ಆದರೆ ಲಾಕ್‌ಡೌನ್ ಕಾರಣಕ್ಕಾಗಿ ಹಲವು ತಿಂಗಳು ಮನೆಯಲ್ಲಿಯೇ ಕಳೆದರು. ಲವ್ಲಿನಾ ಪುಣೆಯಲ್ಲಿ ತರಬೇತಿ ಪಡೆಯುತ್ತಿದ್ದ ಸಮಯದಲ್ಲಿ ಅವರ ತಾಯಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಕೋಲ್ಕತ್ತಾದಲ್ಲಿ ಆಪರೇಷನ್ ಮಾಡುವ ಸಂದರ್ಭದಲ್ಲಿ ಲವ್ಲಿನಾ ಅಲ್ಲಿದ್ದಳು. ಪಟಿಯಾಲದಲ್ಲಿ ಅವರು ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರ ತಾಯಿ ಕೋವಿಡ್‌ ಸೋಂಕಿಗೆ ತುತ್ತಾಗಿದ್ದರು. ಆಗಲೂ ಲವ್ಲಿನಾ ತನ್ನ ಸ್ವಗ್ರಾಮಕ್ಕೆ ತೆರಳಿ 11 ದಿನ ತಾಯಿಯೊಂದಿಗಿದ್ದು ಅವರನ್ನು ಉಪಚರಿಸಿ ನಂತರ ತರಬೇತಿಗೆ ಮರಳಿದ್ದಳು.

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಬಹಳ ಪ್ರಬುದ್ಧವಾಗಿ ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ. ಏನೇ ಆಗಲಿ ಆಕೆ ಭಾರತದ ಮತ್ತೊಬ್ಬ ಮೇರಿ ಕೋಮ್ ಆಗಿ ಮಿಂಚುವುದಂತೂ ಗ್ಯಾರಂಟಿ..

ಈ ಟೋಕಿಯೋ ಒಲಂಪಿಕ್ಸ್ ಭಾರತದ ಬಹುತೇಕರ ಪುರುಷರ ಮನಸ್ಥಿತಿಯನ್ನು ಬದಲಿಸಿಕೊಳ್ಳಲು ಮತ್ತೊಂದು ಸುವರ್ಣ ಅವಕಾಶವಾಗಿದೆ. ಸ್ತ್ರೀ ಸಮಾನತೆ, ಸ್ತ್ರೀ ಬಲವರ್ಧನೆ ಎಂಬುದು ಕೇವಲ ಘೋಷಣೆಯಾಗದೇ ನಿಜವಾಗಿ ಆಚರಣೆ ತರಲು ಮೊದಲು ತಲೆಯಲ್ಲಿನ ಲಿಂಗತಾರತಮ್ಯ ದೃಷ್ಟಿಕೋನವನ್ನು ಬದಲಿಸಿಕೊಳ್ಳಬೇಕಿದೆ. ಲವ್ಲಿನಾ, ಮೀರಾಬಾಯಿ, ಸಿಂಧು ಈ ನಿಟ್ಟಿನಲ್ಲಿ ನಮಗೆ ಬಹುದೊಡ್ಡ ಪಾಠವಾಗಲಿ.. ಒಲಂಪಿಕ್ಸ್‌ನಲ್ಲಿ ಪದಕ ಜಯಿಸಿ ಭಾರತದ ಗೌರವ ಕಾಪಾಡುತ್ತಿರುವ ಈ ಹೆಣ್ಮಕ್ಕಳಿಗೆ ಅಭಿನಂದನೆಗಳು.

–       ಮುತ್ತುರಾಜು


ಇದನ್ನೂ ಓದಿ; ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...