Homeಕ್ರೀಡೆಒಲಂಪಿಕ್ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ.

- Advertisement -
- Advertisement -

ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟರ್ಕಿಯ ಬುಸೆನಾಜ್ ಸರ್ಮೆನೆಲಿ ವಿರುದ್ಧ ಭಾರತದ ಲವ್ಲಿನಾ ಬೊರ್ಗೊಹೈನ್ 5-0 ಅಂತರದಿಂದ ಸೋಲನಪ್ಪಿದರೂ ಸಹ ಕಂಚಿನ ಪದಕ ಗೆದ್ದು ಭಾರತಕ್ಕೆ ಗೌರವ ತಂದುಕೊಟ್ಟಿದ್ದಾಳೆ.

ಭಾರತದ ಬಹುತೇಕ ಪೋಷಕರಿಗೆ ಹೆಣ್ಣು ಮಕ್ಕಳೆಂದರೆ ತಾತ್ಸಾರ. ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳು, ಮಹಿಳಾ ಲಿಂಗಾನುಪಾತ ಕಡಿಮೆ ಇರುವುದು ಈ ವಿದ್ಯಾಮಾನಕ್ಕೆ ಸಾಕ್ಷಿ. ಇಂತಹ ಮನಸ್ಥಿತಿಯ ಪೋಷಕರಿಗೆ ತಿಳಿಹೇಳುವಂತೆ, ಮತ್ತೊಮ್ಮೆ ಯೋಚಿಸಿ ಎಂದು ಆಗ್ರಹಿಸುವಂತೆ ಭಾರತದ ಮಹಿಳಾ ಕ್ರೀಡಾಪಟುಗಳು ಟೋಕಿಯೋ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುತ್ತಿದ್ದಾರೆ.

ಈ ಬಾರಿಯ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಭಾರತವನ್ನು ಪ್ರತಿನಿಧಿಸಿ ಒಟ್ಟು 127 ಕ್ರೀಡಾಪಟುಗಳು ಟೋಕಿಯೋಗೆ ತೆರಳಿದ್ದರು. ವೆಯ್ಟ್ ಲಿಫ್ಟಿಂಗ್‌ನಲ್ಲಿ ಮಣಿಪುರದ ತಾರೆ ಮೀರಾಬಾಯಿ ಚಾನು ಬೆಳ್ಳಿ ಗೆದ್ದು ಮನೆಮಾತಾದ ಕೆಲವೇ ದಿನಗಳಲ್ಲಿ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾಳೆ. ಅಸ್ಸಾಂನ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕೂಡ ಕ್ವಾಟರ್‌ಫೈನಲ್‌ನಲ್ಲಿ ಜಯಭೇರಿ ಭಾರಿಸುವ ಮೂಲಕ ಒಲಂಪಿಕ್‌ನಲ್ಲಿ ಪದಕ ತಂದುಕೊಟ್ಟ ಮೂರನೇ ಬಾಕ್ಸರ್ ಎಂಬ ಕೀರ್ತಿಗೆ ಪಾತ್ರವಾದರು.

ಪುಟ್ಟ ತೈವಾನ್ ದೇಶದ ಬಾಕ್ಸರ್ ನೀನ್-ಚಿನ್ ಚೆನ್ ಮಾಜಿ ವಿಶ್ವ ಚಾಂಪಿಯನ್. ಈ ಬಾರಿ ಒಲಂಪಿಕ್ಸ್ ಪದಕ ಗೆಲ್ಲುವ ನೆಚ್ಚಿನ ಕ್ರೀಡಾಪಟುಗಳಲ್ಲೊಬ್ಬರು. ಆಕೆಯೆದುರು ನಾಲ್ಕು ಬಾರಿ ಸೋಲುಂಡಿದ್ದ ಲವ್ಲಿನಾ ಬೊರ್ಗೊಹೈನ್ ವೆಲ್ಟರ್‌ವೈಟ್ (69 ಕೆಜಿ) ವಿಭಾಗದಲ್ಲಿ ಜುಲೈ 30 ರಂದು ನಡೆದ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ 4-1 ಅಂತರದಿಂದ ಭರ್ಜರಿ ಗೆಲವು ಸಾಧಿಸಿ ಸೆಮಿಫೈನಲ್ ತಲುಪಿದ್ದಳು.

ಅಸ್ಸಾಂನ ಗೋಲಘಾಟ್ ಜಿಲ್ಲೆಯ ಬಾರಾಮುಖಿಯಾ ಎಂಬ ಹಳ್ಳಿಯಲ್ಲಿ ಬಡಮಧ್ಯಮ ವರ್ಗದ ಕುಟುಂಬದಲ್ಲಿ ಮೂರನೇ ಹೆಣ್ಣು ಮಗಳಾಗಿ 1997ರ ಅಕ್ಟೋಬರ್ 02 ರಂದು ಲವ್ಲಿನಾ ಜನಿಸಿದಳು. ಭಾರತದ ಬಹುತೇಕ ಪೋಷಕರ ಮನಸ್ಥಿತಿಗೆ ವಿರುದ್ಧವಾಗಿ ಲವ್ಲಿನಾ ಪೋಷಕರಾದ ಟಿಕೆನ್ ಮತ್ತು ಮಮೋನಿ ಹೆಣ್ಣು ಮಕ್ಕಳೆಂದು ಮೂಗು ಮುರಿಯದೆ ಪ್ರೀತಿಯಿಂದ ಬೆಳೆಸಿದರು. ತಮ್ಮ ಮೂರು ಹೆಣ್ಣು ಮಕ್ಕಳು ತಮಗಿಷ್ಟವಾದ ಕ್ರೀಡೆಯಲ್ಲಿ ಸಾಧನೆಗೈಯಲು ಆಸರೆಯಾದರು.

ಲವ್ಲಿನಾಳ ಅವಳಿ ಸಹೋದರಿಯರಾದ ಲಿಮಾ ಮತ್ತು ಲಿಚಾ ಮಾರ್ಷಲ್ ಆರ್ಟ್ಸ್ ಕಲಿತು ಕಿಕ್ ಬಾಕ್ಸಿಂಗ್‌ನಲ್ಲಿ ಪರಿಣಿತರಾದರು. ಅವರೀಗ CISF ಮತ್ತು BSF ನಲ್ಲಿ ಉದ್ಯೋಗಿಗಲಾಗಿದ್ದಾರೆ. ಅದೇ ಹಾದಿಯಲ್ಲಿ ಮುನ್ನಡೆದ ಲವ್ಲಿನಾ 2012 ರಿಂದ ಬಾಕ್ಸಿಂಗ್ ತರಬೇತು ಪಡೆದು ಮೊವಾಯಿ ಥಾಯ್ ಎಂಬ ಮಾರ್ಷಲ್ ಆರ್ಟ್ಸ್ ಪರಿಣಿತಳಾದಳು.

ಭಾರತೀಯ ಕ್ರೀಡಾ ಪ್ರಾಧೀಕಾರದ ತರಬೇತುದಾರರಾದ ಪದಮ್ ಬೊರೊ ಮಾರ್ಗದರ್ಶನದಲ್ಲಿ ಗೌಹಾತಿಯಲ್ಲಿ ಬಾಕ್ಸಿಂಗ್ ತರಬೇತಿ ಪಡೆದ ಲವ್ಲಿನಾ ಪ್ರಮುಖವಾಗಿ ವೆಲ್ಟರ್‌ವೈಟ್ ವಿಭಾಗದಲ್ಲಿ ನಾಲ್ಕು ಕಂಚಿನ ಪದಕ ಗೆದ್ದಿದ್ದಾರೆ. 2018ರ ದೆಹಲಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ ಮತ್ತು 2019 ರ ಉಲಾನ್-ಉಡೆ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದ ಈಕೆ 2017ರ ದುಬೈ ಮತ್ತು 2021ರ 2021 ದುಬೈ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿಯೂ ಕಂಚು ಗೆದ್ದಿದ್ದಾಳೆ. ಸೆರ್ಬಿಯಾದಲ್ಲಿ ನಡೆದ ನೇಷನ್ಸ್ ಕಪ್‌ನಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವಾರು ಗೆಲುವಿನ ನಗೆ ಬೀರಿದ್ದಾಳೆ. ಅವಳ ಒಟ್ಟಾರೆ ಸಾಧನೆ ಗುರುತಿಸಿ 2020ರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕಳೆದ ವರ್ಷ ಏಷ್ಯನ್ ಕ್ವಾಲಿಫೈಯರ್ಸ್‌ ಜೋರ್ಡಾನ್‌ನಲ್ಲಿ ಅವರು ಟೋಕಿಯೋ ಒಲಂಪಿಕ್ಸ್‌ಗೆ ಅರ್ಹತೆ ಪಡೆದರು. ಆದರೆ ಲಾಕ್‌ಡೌನ್ ಕಾರಣಕ್ಕಾಗಿ ಹಲವು ತಿಂಗಳು ಮನೆಯಲ್ಲಿಯೇ ಕಳೆದರು. ಲವ್ಲಿನಾ ಪುಣೆಯಲ್ಲಿ ತರಬೇತಿ ಪಡೆಯುತ್ತಿದ್ದ ಸಮಯದಲ್ಲಿ ಅವರ ತಾಯಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಕೋಲ್ಕತ್ತಾದಲ್ಲಿ ಆಪರೇಷನ್ ಮಾಡುವ ಸಂದರ್ಭದಲ್ಲಿ ಲವ್ಲಿನಾ ಅಲ್ಲಿದ್ದಳು. ಪಟಿಯಾಲದಲ್ಲಿ ಅವರು ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರ ತಾಯಿ ಕೋವಿಡ್‌ ಸೋಂಕಿಗೆ ತುತ್ತಾಗಿದ್ದರು. ಆಗಲೂ ಲವ್ಲಿನಾ ತನ್ನ ಸ್ವಗ್ರಾಮಕ್ಕೆ ತೆರಳಿ 11 ದಿನ ತಾಯಿಯೊಂದಿಗಿದ್ದು ಅವರನ್ನು ಉಪಚರಿಸಿ ನಂತರ ತರಬೇತಿಗೆ ಮರಳಿದ್ದಳು.

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಬಹಳ ಪ್ರಬುದ್ಧವಾಗಿ ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ. ಏನೇ ಆಗಲಿ ಆಕೆ ಭಾರತದ ಮತ್ತೊಬ್ಬ ಮೇರಿ ಕೋಮ್ ಆಗಿ ಮಿಂಚುವುದಂತೂ ಗ್ಯಾರಂಟಿ..

ಈ ಟೋಕಿಯೋ ಒಲಂಪಿಕ್ಸ್ ಭಾರತದ ಬಹುತೇಕರ ಪುರುಷರ ಮನಸ್ಥಿತಿಯನ್ನು ಬದಲಿಸಿಕೊಳ್ಳಲು ಮತ್ತೊಂದು ಸುವರ್ಣ ಅವಕಾಶವಾಗಿದೆ. ಸ್ತ್ರೀ ಸಮಾನತೆ, ಸ್ತ್ರೀ ಬಲವರ್ಧನೆ ಎಂಬುದು ಕೇವಲ ಘೋಷಣೆಯಾಗದೇ ನಿಜವಾಗಿ ಆಚರಣೆ ತರಲು ಮೊದಲು ತಲೆಯಲ್ಲಿನ ಲಿಂಗತಾರತಮ್ಯ ದೃಷ್ಟಿಕೋನವನ್ನು ಬದಲಿಸಿಕೊಳ್ಳಬೇಕಿದೆ. ಲವ್ಲಿನಾ, ಮೀರಾಬಾಯಿ, ಸಿಂಧು ಈ ನಿಟ್ಟಿನಲ್ಲಿ ನಮಗೆ ಬಹುದೊಡ್ಡ ಪಾಠವಾಗಲಿ.. ಒಲಂಪಿಕ್ಸ್‌ನಲ್ಲಿ ಪದಕ ಜಯಿಸಿ ಭಾರತದ ಗೌರವ ಕಾಪಾಡುತ್ತಿರುವ ಈ ಹೆಣ್ಮಕ್ಕಳಿಗೆ ಅಭಿನಂದನೆಗಳು.

–       ಮುತ್ತುರಾಜು


ಇದನ್ನೂ ಓದಿ; ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...