Homeಕ್ರೀಡೆಒಲಂಪಿಕ್ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ.

- Advertisement -
- Advertisement -

ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟರ್ಕಿಯ ಬುಸೆನಾಜ್ ಸರ್ಮೆನೆಲಿ ವಿರುದ್ಧ ಭಾರತದ ಲವ್ಲಿನಾ ಬೊರ್ಗೊಹೈನ್ 5-0 ಅಂತರದಿಂದ ಸೋಲನಪ್ಪಿದರೂ ಸಹ ಕಂಚಿನ ಪದಕ ಗೆದ್ದು ಭಾರತಕ್ಕೆ ಗೌರವ ತಂದುಕೊಟ್ಟಿದ್ದಾಳೆ.

ಭಾರತದ ಬಹುತೇಕ ಪೋಷಕರಿಗೆ ಹೆಣ್ಣು ಮಕ್ಕಳೆಂದರೆ ತಾತ್ಸಾರ. ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳು, ಮಹಿಳಾ ಲಿಂಗಾನುಪಾತ ಕಡಿಮೆ ಇರುವುದು ಈ ವಿದ್ಯಾಮಾನಕ್ಕೆ ಸಾಕ್ಷಿ. ಇಂತಹ ಮನಸ್ಥಿತಿಯ ಪೋಷಕರಿಗೆ ತಿಳಿಹೇಳುವಂತೆ, ಮತ್ತೊಮ್ಮೆ ಯೋಚಿಸಿ ಎಂದು ಆಗ್ರಹಿಸುವಂತೆ ಭಾರತದ ಮಹಿಳಾ ಕ್ರೀಡಾಪಟುಗಳು ಟೋಕಿಯೋ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುತ್ತಿದ್ದಾರೆ.

ಈ ಬಾರಿಯ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಭಾರತವನ್ನು ಪ್ರತಿನಿಧಿಸಿ ಒಟ್ಟು 127 ಕ್ರೀಡಾಪಟುಗಳು ಟೋಕಿಯೋಗೆ ತೆರಳಿದ್ದರು. ವೆಯ್ಟ್ ಲಿಫ್ಟಿಂಗ್‌ನಲ್ಲಿ ಮಣಿಪುರದ ತಾರೆ ಮೀರಾಬಾಯಿ ಚಾನು ಬೆಳ್ಳಿ ಗೆದ್ದು ಮನೆಮಾತಾದ ಕೆಲವೇ ದಿನಗಳಲ್ಲಿ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾಳೆ. ಅಸ್ಸಾಂನ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕೂಡ ಕ್ವಾಟರ್‌ಫೈನಲ್‌ನಲ್ಲಿ ಜಯಭೇರಿ ಭಾರಿಸುವ ಮೂಲಕ ಒಲಂಪಿಕ್‌ನಲ್ಲಿ ಪದಕ ತಂದುಕೊಟ್ಟ ಮೂರನೇ ಬಾಕ್ಸರ್ ಎಂಬ ಕೀರ್ತಿಗೆ ಪಾತ್ರವಾದರು.

ಪುಟ್ಟ ತೈವಾನ್ ದೇಶದ ಬಾಕ್ಸರ್ ನೀನ್-ಚಿನ್ ಚೆನ್ ಮಾಜಿ ವಿಶ್ವ ಚಾಂಪಿಯನ್. ಈ ಬಾರಿ ಒಲಂಪಿಕ್ಸ್ ಪದಕ ಗೆಲ್ಲುವ ನೆಚ್ಚಿನ ಕ್ರೀಡಾಪಟುಗಳಲ್ಲೊಬ್ಬರು. ಆಕೆಯೆದುರು ನಾಲ್ಕು ಬಾರಿ ಸೋಲುಂಡಿದ್ದ ಲವ್ಲಿನಾ ಬೊರ್ಗೊಹೈನ್ ವೆಲ್ಟರ್‌ವೈಟ್ (69 ಕೆಜಿ) ವಿಭಾಗದಲ್ಲಿ ಜುಲೈ 30 ರಂದು ನಡೆದ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ 4-1 ಅಂತರದಿಂದ ಭರ್ಜರಿ ಗೆಲವು ಸಾಧಿಸಿ ಸೆಮಿಫೈನಲ್ ತಲುಪಿದ್ದಳು.

ಅಸ್ಸಾಂನ ಗೋಲಘಾಟ್ ಜಿಲ್ಲೆಯ ಬಾರಾಮುಖಿಯಾ ಎಂಬ ಹಳ್ಳಿಯಲ್ಲಿ ಬಡಮಧ್ಯಮ ವರ್ಗದ ಕುಟುಂಬದಲ್ಲಿ ಮೂರನೇ ಹೆಣ್ಣು ಮಗಳಾಗಿ 1997ರ ಅಕ್ಟೋಬರ್ 02 ರಂದು ಲವ್ಲಿನಾ ಜನಿಸಿದಳು. ಭಾರತದ ಬಹುತೇಕ ಪೋಷಕರ ಮನಸ್ಥಿತಿಗೆ ವಿರುದ್ಧವಾಗಿ ಲವ್ಲಿನಾ ಪೋಷಕರಾದ ಟಿಕೆನ್ ಮತ್ತು ಮಮೋನಿ ಹೆಣ್ಣು ಮಕ್ಕಳೆಂದು ಮೂಗು ಮುರಿಯದೆ ಪ್ರೀತಿಯಿಂದ ಬೆಳೆಸಿದರು. ತಮ್ಮ ಮೂರು ಹೆಣ್ಣು ಮಕ್ಕಳು ತಮಗಿಷ್ಟವಾದ ಕ್ರೀಡೆಯಲ್ಲಿ ಸಾಧನೆಗೈಯಲು ಆಸರೆಯಾದರು.

ಲವ್ಲಿನಾಳ ಅವಳಿ ಸಹೋದರಿಯರಾದ ಲಿಮಾ ಮತ್ತು ಲಿಚಾ ಮಾರ್ಷಲ್ ಆರ್ಟ್ಸ್ ಕಲಿತು ಕಿಕ್ ಬಾಕ್ಸಿಂಗ್‌ನಲ್ಲಿ ಪರಿಣಿತರಾದರು. ಅವರೀಗ CISF ಮತ್ತು BSF ನಲ್ಲಿ ಉದ್ಯೋಗಿಗಲಾಗಿದ್ದಾರೆ. ಅದೇ ಹಾದಿಯಲ್ಲಿ ಮುನ್ನಡೆದ ಲವ್ಲಿನಾ 2012 ರಿಂದ ಬಾಕ್ಸಿಂಗ್ ತರಬೇತು ಪಡೆದು ಮೊವಾಯಿ ಥಾಯ್ ಎಂಬ ಮಾರ್ಷಲ್ ಆರ್ಟ್ಸ್ ಪರಿಣಿತಳಾದಳು.

ಭಾರತೀಯ ಕ್ರೀಡಾ ಪ್ರಾಧೀಕಾರದ ತರಬೇತುದಾರರಾದ ಪದಮ್ ಬೊರೊ ಮಾರ್ಗದರ್ಶನದಲ್ಲಿ ಗೌಹಾತಿಯಲ್ಲಿ ಬಾಕ್ಸಿಂಗ್ ತರಬೇತಿ ಪಡೆದ ಲವ್ಲಿನಾ ಪ್ರಮುಖವಾಗಿ ವೆಲ್ಟರ್‌ವೈಟ್ ವಿಭಾಗದಲ್ಲಿ ನಾಲ್ಕು ಕಂಚಿನ ಪದಕ ಗೆದ್ದಿದ್ದಾರೆ. 2018ರ ದೆಹಲಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ ಮತ್ತು 2019 ರ ಉಲಾನ್-ಉಡೆ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದ ಈಕೆ 2017ರ ದುಬೈ ಮತ್ತು 2021ರ 2021 ದುಬೈ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿಯೂ ಕಂಚು ಗೆದ್ದಿದ್ದಾಳೆ. ಸೆರ್ಬಿಯಾದಲ್ಲಿ ನಡೆದ ನೇಷನ್ಸ್ ಕಪ್‌ನಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವಾರು ಗೆಲುವಿನ ನಗೆ ಬೀರಿದ್ದಾಳೆ. ಅವಳ ಒಟ್ಟಾರೆ ಸಾಧನೆ ಗುರುತಿಸಿ 2020ರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕಳೆದ ವರ್ಷ ಏಷ್ಯನ್ ಕ್ವಾಲಿಫೈಯರ್ಸ್‌ ಜೋರ್ಡಾನ್‌ನಲ್ಲಿ ಅವರು ಟೋಕಿಯೋ ಒಲಂಪಿಕ್ಸ್‌ಗೆ ಅರ್ಹತೆ ಪಡೆದರು. ಆದರೆ ಲಾಕ್‌ಡೌನ್ ಕಾರಣಕ್ಕಾಗಿ ಹಲವು ತಿಂಗಳು ಮನೆಯಲ್ಲಿಯೇ ಕಳೆದರು. ಲವ್ಲಿನಾ ಪುಣೆಯಲ್ಲಿ ತರಬೇತಿ ಪಡೆಯುತ್ತಿದ್ದ ಸಮಯದಲ್ಲಿ ಅವರ ತಾಯಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಕೋಲ್ಕತ್ತಾದಲ್ಲಿ ಆಪರೇಷನ್ ಮಾಡುವ ಸಂದರ್ಭದಲ್ಲಿ ಲವ್ಲಿನಾ ಅಲ್ಲಿದ್ದಳು. ಪಟಿಯಾಲದಲ್ಲಿ ಅವರು ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರ ತಾಯಿ ಕೋವಿಡ್‌ ಸೋಂಕಿಗೆ ತುತ್ತಾಗಿದ್ದರು. ಆಗಲೂ ಲವ್ಲಿನಾ ತನ್ನ ಸ್ವಗ್ರಾಮಕ್ಕೆ ತೆರಳಿ 11 ದಿನ ತಾಯಿಯೊಂದಿಗಿದ್ದು ಅವರನ್ನು ಉಪಚರಿಸಿ ನಂತರ ತರಬೇತಿಗೆ ಮರಳಿದ್ದಳು.

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಬಹಳ ಪ್ರಬುದ್ಧವಾಗಿ ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ. ಏನೇ ಆಗಲಿ ಆಕೆ ಭಾರತದ ಮತ್ತೊಬ್ಬ ಮೇರಿ ಕೋಮ್ ಆಗಿ ಮಿಂಚುವುದಂತೂ ಗ್ಯಾರಂಟಿ..

ಈ ಟೋಕಿಯೋ ಒಲಂಪಿಕ್ಸ್ ಭಾರತದ ಬಹುತೇಕರ ಪುರುಷರ ಮನಸ್ಥಿತಿಯನ್ನು ಬದಲಿಸಿಕೊಳ್ಳಲು ಮತ್ತೊಂದು ಸುವರ್ಣ ಅವಕಾಶವಾಗಿದೆ. ಸ್ತ್ರೀ ಸಮಾನತೆ, ಸ್ತ್ರೀ ಬಲವರ್ಧನೆ ಎಂಬುದು ಕೇವಲ ಘೋಷಣೆಯಾಗದೇ ನಿಜವಾಗಿ ಆಚರಣೆ ತರಲು ಮೊದಲು ತಲೆಯಲ್ಲಿನ ಲಿಂಗತಾರತಮ್ಯ ದೃಷ್ಟಿಕೋನವನ್ನು ಬದಲಿಸಿಕೊಳ್ಳಬೇಕಿದೆ. ಲವ್ಲಿನಾ, ಮೀರಾಬಾಯಿ, ಸಿಂಧು ಈ ನಿಟ್ಟಿನಲ್ಲಿ ನಮಗೆ ಬಹುದೊಡ್ಡ ಪಾಠವಾಗಲಿ.. ಒಲಂಪಿಕ್ಸ್‌ನಲ್ಲಿ ಪದಕ ಜಯಿಸಿ ಭಾರತದ ಗೌರವ ಕಾಪಾಡುತ್ತಿರುವ ಈ ಹೆಣ್ಮಕ್ಕಳಿಗೆ ಅಭಿನಂದನೆಗಳು.

–       ಮುತ್ತುರಾಜು


ಇದನ್ನೂ ಓದಿ; ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...