Homeಮುಖಪುಟಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ ಪದಕ ವಿಜೇತೆ ಲವ್ಲಿನಾ ಬೊರ್ಗೋಹೈನ್‌‌ ಅವರಿಗೆ ಶುಭಾಶಯ ಕೋರಿ ಅಸ್ಸಾಂನಲ್ಲಿ ಹಾಕಲಾಗಿದ್ದ ಹೋರ್ಡಿಂಗ್‌ನಲ್ಲಿ ಅವರ ಚಿತ್ರವೆ ಇಲ್ಲ, ಕೇವಲ ಅಸ್ಸಾಂ ಮುಖ್ಯಮಂತ್ರಿ ಮತು ಕ್ರೀಡಾ ಸಚಿವರ ಚಿತ್ರವನ್ನು ಮಾತ್ರವೆ ಹಾಕಲಾಗಿತ್ತು ಎಂಬ ವಿವಾದವೆದ್ದಿತ್ತು. ಆದರೆ ಇದನ್ನು ಸುದ್ದಿ ಮಾಡಿದ್ದ ಅಸ್ಸಾಂನ ಗುವಾಹಟಿ ಮೂಲದ ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌ಕರೆಂಟ್‌‌’ ವಿರುದ್ದ ಪೊಲೀಸರು, ‘ಫೇಕ್ ಸುದ್ದಿ’ ಪ್ರಸಾರ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ ಪೋರ್ಟಲ್‌ ಮಾಡಿದ್ದ ಸುದ್ದಿಯನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ (ಡಿಐಪಿಆರ್) ವೆಬ್‌ಸೈಟ್ “ಇದು ನಕಲಿ ಸುದ್ದಿ” ಎಂದು ಹೇಳಿತ್ತು. ಇದರ ನಂತರ ಪೊಲೀಸರು ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌‌ಕರೆಂಟ್‌‌’ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ದೇಶದ ಹೆಮ್ಮೆ ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರೇ ಇಲ್ಲ! – ಹೀಗೊಂದು ರಾಜಕೀಯ ಮೈಲೇಜ್‌!

“ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾದ ಪಿಜುಶ್ ಹಜಾರಿಕಾ ಮತ್ತು ಇಲಾಖೆಯನ್ನು ಸಾರ್ವಜನಿಕರ ದೃಷ್ಟಿಕೋನದಲ್ಲಿ ಕೆಟ್ಟವರಾಗಿ ಬಿಂಬಿಸುವ ಸಲುವಾಗಿ ನಕಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿದೆ” ಎಂದು ಡಿಐಪಿಆರ್ ಹೇಳಿಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿಕ್ರಾಸ್‌ಕರೆಂಟ್ ಹಂಚಿಕೊಂಡ ನಾಲ್ಕು ನಿಮಿಷಗಳ ಕ್ಲಿಪ್ ಅಲ್ಲಿ, “ಹಿಮಂತ ಬಿಸ್ವಾ ಶರ್ಮ ಅವರನ್ನು ಹೊಗಳಲು ಬೇಕಾಗಿ ಪಿಜುಶ್ ಹಜಾರಿಕಾ ಅವರನ್ನು ನೇಮಿಸಲಾಗಿದೆಯೆ?” ಎಂಬ ಶಿರ್ಷಿಕೆಯನ್ನು ನೀಡಲಾಗಿತ್ತು ಎಂದು ಕ್ವಿಂಟ್ ವರದಿ ಮಾಡಿದ್ದು, ಆದಾಗ್ಯೂ, ವೀಡಿಯೊ ಸಧ್ಯಕ್ಕೆ ಡಿಲೀಟ್‌ ಆಗಿದೆ.

“ಸಾಮಾನ್ಯವಾಗಿ ಡಿಐಪಿಆರ್ ಇಂತಹ ಹೋರ್ಡಿಂಗ್‌ಗಳನ್ನು ಹಾಕುತ್ತದೆ. ಒಂದು ವೇಳೆ ಅದನ್ನು ಅವರು ಮಾಡಿದ್ದರೆ ನಾವು ಪ್ರಶ್ನೆಗಳನ್ನು ಎತ್ತಿದ್ದೇವೆ. ಅವರು ಅದನ್ನು ಮಾಡಿಲ್ಲ ಎಂದಾದರೆ, ಅದಕ್ಕೆ ಅನುಮೋದನೆ ನೀಡಿದವರು ಯಾರು? ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾಗಿರುವ ಪಿಜುಶ್ ಹಜಾರಿಕಾ ಅವರನ್ನೂ ನಾವು ಕೇಳಿದ್ದೆವು. ಆದರೆ ಅವರು ಈಗ ಹೋರ್ಡಿಂಗ್‌ಗೆ ನಾವು ಅನುಮೋದನೆ ನೀಡಿಲ್ಲ ಎಂದು ಹೇಳುತ್ತಿದ್ದಾರೆ” ಎಂದು ವೆಬ್‌ಸೈಟ್‌ನ ಸಂಪಾದಕ ಗೌತಮ್ ಗೊಗೊಯ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆನ್ನಿಗೇ ಚೂರಿ ಹಾಕಲು ಸಜ್ಜಾಗಿದ್ದನಾ ಪೋಸ್ಟ್‌ ಕಾರ್ಡ್ ಮಹೇಶ್‌ ಹೆಗ್ಡೆ..

ಇದೀಗ ವೆಬ್‌ಸೈಟ್‌ ವಿರುದ್ಧ ಕೇಸ್ ದಾಖಲಾಗಿದೆ. ವೆಬ್‌ಸೈಟ್‌ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಿ, ಡಿಐಪಿಆರ್ ನಿರ್ದೇಶಕರು ಆಗಸ್ಟ್ 6 ರ ಶುಕ್ರವಾರದಂದು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. “ಮುಗ್ಧ ವ್ಯಕ್ತಿಗಳ ಚಾರಿತ್ಯ್ರಹರಣ ಮಾಡಲು ಉದ್ದೇಶಪೂರ್ವಕವಾಗಿ ಸಂಪೂರ್ಣ ಸುಳ್ಳು ಮತ್ತು ಕಲ್ಪಿತ ಮಾಹಿತಿಯನ್ನು ಪ್ರಸಾರ ಮಾಡಲಾಗಿದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 ಎ/500/505 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 45 ಎ ಅಡಿಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿ ಕ್ರಾಸ್‌ಕರೆಂಟ್‌ ವೆಬ್‌ಸೈಟ್‌ ಗುವಾಹಟಿಯಲ್ಲಿ ಹಾಕಲಾಗಿದ್ದ ಹಲವು ಹೋರ್ಡಿಂಗ್‌ಗಳಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಫೋಟೋಗಳನ್ನು ಬಳಸಿರುವುದನ್ನು ಈ ಹಿಂದೆ ಪ್ರಶ್ನಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ವಿವಾದಿತ ಹೋರ್ಡಿಂಗ್ಸ್ ಹೇಗಿತ್ತು?

ಟೋಕಿಯೊದಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದ ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಟ್ ವಿಭಾಗದಲ್ಲಿ ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. ಇದು ಒಲಿಂಪಿಕ್ಸ್‌ನಲ್ಲಿ ಅವರ ಚೊಚ್ಚಲ ಪಂದ್ಯವಾಗಿತ್ತು.

ಆದರೆ ಲವ್ಲಿನಾ ಪದಕ ಗೆಲ್ಲುವ ಮುನ್ನ, ಅವರ ಮುಂಬರುವ ಆಟಗಳಿಗೆ ಶುಭ ಹಾರೈಸುವ ಕೆಲವು ಬ್ಯಾನರ್‌ಗಳನ್ನು ರಸ್ತೆ ಬದಿಗಳಲ್ಲಿ ಹಾಕಲಾಗಿತ್ತು. ಈ ಬ್ಯಾನರ್‌‌ಗಳ ವಿಶೇಷತೆಗಳೇನು ಎಂದರೆ, ಶುಭಹಾರೈಕೆ ಪಡೆಯುತ್ತಿರುವ ಲವ್ಲಿನಾ ಅವರ ಚಿತ್ರದ ಬದಲು ದೊಡ್ಡದಾಗಿ, ಮುಖ್ಯಮಂತ್ರಿ ಮತ್ತು ಸಚಿವರ ಚಿತ್ರಗಳು ಮಾತ್ರ ಕಾಣುತ್ತಿದ್ದವು. ಲವ್ಲಿನಾ ಅವರ ಪೋಟೋಗಳು ಈ ಬ್ಯಾನರ್‌ಗಳಲ್ಲಿ ಇರಲಿಲ್ಲ. ಇದು ಸಾಮಾಜಿಕ ಜಾಲತಾಣದಲ್ಲಿ ಕಿರಣ್ ಮುಜುಂದಾರ್ ಶಾ ಸೇರಿದಂತೆ ಹಲವಾರು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಹೋರ್ಡಿಂಗ್‌‌ನಲ್ಲಿ, “ಟೋಕಿಯೊ ಒಲಿಂಪಿಕ್ 2020 ರ ಪಂದ್ಯಕ್ಕೆ ಅರ್ಹತೆ ಪಡೆದ ಲೊವ್ಲಿನಾ ಬೊರ್ಗೊಹೈನ್ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ನೀವು ಅಸ್ಸಾಂನ ಹೆಮ್ಮೆ” ಎಂದು ಬರೆಯಲಾಗಿದೆ. ಆದರೆ ಅದರಲ್ಲಿ ಲವ್ಲೀನಾ ಅವರ ಫೋಟೋಗೆ ಬದಲಾಗಿ ಸಿಎಂ ಅವರ ದೊಡ್ಡ ಚಿತ್ರಗಳನ್ನು ಬಳಸಲಾಗಿತ್ತು.

ಇದನ್ನೂ ಓದಿ: ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಹೋರ್ಡಿಂಗ್ಸ್‌ನಿಂದ ಅಂತರ ಕಾಯ್ದುಕೊಂಡ ಸಿಎಂ, ಸಚಿವ ಮತ್ತು ಡಿಐಪಿಆರ್!

ತಾನು ಇಂತಹ ಬ್ರ್ಯಾಂಡಿಂಗ್ ಅನ್ನು ಅನುಮೋದಿಸಲಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಈ ನಡುವೆ, ಸಚಿವ ಪಿಜುಶ್ ಹಜಾರಿಕಾ ಅವರು ಕೂಡಾ ವಿವಾದಿತ ಹೋರ್ಡಿಂಗ್‌‌ಗಳಿಗೂ ತನಗೆ ಅಥವಾ ತನ್ನ ಇಲಾಖೆಯಾದ ಡಿಐಪಿಆರ್‌‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಹಾಗಾಗಿ ಕೊನೆಗೂ ಉಳಿಯುವ ಪ್ರಶ್ನೆ ಈ ಹೋರ್ಡಿಂಗ್ ಹಾಕಿದ್ದವರು ಯಾರು? ಅವರಿಗೆ ಬುದ್ದಿ ಹೇಳುವವರು ಯಾರು? ಇದನ್ನು ವರದಿ ಮಾಡಿದ್ದು ತಪ್ಪೆ? ವರದಿ ಮಾಡಿದ್ದಕ್ಕೆ ಪ್ರಕರಣ ದಾಖಲಿಸುವುದು ಸರಿಯೇ? ಎನ್ನುವುದಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...