Homeಮುಖಪುಟಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ ಪದಕ ವಿಜೇತೆ ಲವ್ಲಿನಾ ಬೊರ್ಗೋಹೈನ್‌‌ ಅವರಿಗೆ ಶುಭಾಶಯ ಕೋರಿ ಅಸ್ಸಾಂನಲ್ಲಿ ಹಾಕಲಾಗಿದ್ದ ಹೋರ್ಡಿಂಗ್‌ನಲ್ಲಿ ಅವರ ಚಿತ್ರವೆ ಇಲ್ಲ, ಕೇವಲ ಅಸ್ಸಾಂ ಮುಖ್ಯಮಂತ್ರಿ ಮತು ಕ್ರೀಡಾ ಸಚಿವರ ಚಿತ್ರವನ್ನು ಮಾತ್ರವೆ ಹಾಕಲಾಗಿತ್ತು ಎಂಬ ವಿವಾದವೆದ್ದಿತ್ತು. ಆದರೆ ಇದನ್ನು ಸುದ್ದಿ ಮಾಡಿದ್ದ ಅಸ್ಸಾಂನ ಗುವಾಹಟಿ ಮೂಲದ ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌ಕರೆಂಟ್‌‌’ ವಿರುದ್ದ ಪೊಲೀಸರು, ‘ಫೇಕ್ ಸುದ್ದಿ’ ಪ್ರಸಾರ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ ಪೋರ್ಟಲ್‌ ಮಾಡಿದ್ದ ಸುದ್ದಿಯನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ (ಡಿಐಪಿಆರ್) ವೆಬ್‌ಸೈಟ್ “ಇದು ನಕಲಿ ಸುದ್ದಿ” ಎಂದು ಹೇಳಿತ್ತು. ಇದರ ನಂತರ ಪೊಲೀಸರು ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌‌ಕರೆಂಟ್‌‌’ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ದೇಶದ ಹೆಮ್ಮೆ ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರೇ ಇಲ್ಲ! – ಹೀಗೊಂದು ರಾಜಕೀಯ ಮೈಲೇಜ್‌!

“ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾದ ಪಿಜುಶ್ ಹಜಾರಿಕಾ ಮತ್ತು ಇಲಾಖೆಯನ್ನು ಸಾರ್ವಜನಿಕರ ದೃಷ್ಟಿಕೋನದಲ್ಲಿ ಕೆಟ್ಟವರಾಗಿ ಬಿಂಬಿಸುವ ಸಲುವಾಗಿ ನಕಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿದೆ” ಎಂದು ಡಿಐಪಿಆರ್ ಹೇಳಿಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿಕ್ರಾಸ್‌ಕರೆಂಟ್ ಹಂಚಿಕೊಂಡ ನಾಲ್ಕು ನಿಮಿಷಗಳ ಕ್ಲಿಪ್ ಅಲ್ಲಿ, “ಹಿಮಂತ ಬಿಸ್ವಾ ಶರ್ಮ ಅವರನ್ನು ಹೊಗಳಲು ಬೇಕಾಗಿ ಪಿಜುಶ್ ಹಜಾರಿಕಾ ಅವರನ್ನು ನೇಮಿಸಲಾಗಿದೆಯೆ?” ಎಂಬ ಶಿರ್ಷಿಕೆಯನ್ನು ನೀಡಲಾಗಿತ್ತು ಎಂದು ಕ್ವಿಂಟ್ ವರದಿ ಮಾಡಿದ್ದು, ಆದಾಗ್ಯೂ, ವೀಡಿಯೊ ಸಧ್ಯಕ್ಕೆ ಡಿಲೀಟ್‌ ಆಗಿದೆ.

“ಸಾಮಾನ್ಯವಾಗಿ ಡಿಐಪಿಆರ್ ಇಂತಹ ಹೋರ್ಡಿಂಗ್‌ಗಳನ್ನು ಹಾಕುತ್ತದೆ. ಒಂದು ವೇಳೆ ಅದನ್ನು ಅವರು ಮಾಡಿದ್ದರೆ ನಾವು ಪ್ರಶ್ನೆಗಳನ್ನು ಎತ್ತಿದ್ದೇವೆ. ಅವರು ಅದನ್ನು ಮಾಡಿಲ್ಲ ಎಂದಾದರೆ, ಅದಕ್ಕೆ ಅನುಮೋದನೆ ನೀಡಿದವರು ಯಾರು? ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾಗಿರುವ ಪಿಜುಶ್ ಹಜಾರಿಕಾ ಅವರನ್ನೂ ನಾವು ಕೇಳಿದ್ದೆವು. ಆದರೆ ಅವರು ಈಗ ಹೋರ್ಡಿಂಗ್‌ಗೆ ನಾವು ಅನುಮೋದನೆ ನೀಡಿಲ್ಲ ಎಂದು ಹೇಳುತ್ತಿದ್ದಾರೆ” ಎಂದು ವೆಬ್‌ಸೈಟ್‌ನ ಸಂಪಾದಕ ಗೌತಮ್ ಗೊಗೊಯ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆನ್ನಿಗೇ ಚೂರಿ ಹಾಕಲು ಸಜ್ಜಾಗಿದ್ದನಾ ಪೋಸ್ಟ್‌ ಕಾರ್ಡ್ ಮಹೇಶ್‌ ಹೆಗ್ಡೆ..

ಇದೀಗ ವೆಬ್‌ಸೈಟ್‌ ವಿರುದ್ಧ ಕೇಸ್ ದಾಖಲಾಗಿದೆ. ವೆಬ್‌ಸೈಟ್‌ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಿ, ಡಿಐಪಿಆರ್ ನಿರ್ದೇಶಕರು ಆಗಸ್ಟ್ 6 ರ ಶುಕ್ರವಾರದಂದು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. “ಮುಗ್ಧ ವ್ಯಕ್ತಿಗಳ ಚಾರಿತ್ಯ್ರಹರಣ ಮಾಡಲು ಉದ್ದೇಶಪೂರ್ವಕವಾಗಿ ಸಂಪೂರ್ಣ ಸುಳ್ಳು ಮತ್ತು ಕಲ್ಪಿತ ಮಾಹಿತಿಯನ್ನು ಪ್ರಸಾರ ಮಾಡಲಾಗಿದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 ಎ/500/505 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 45 ಎ ಅಡಿಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿ ಕ್ರಾಸ್‌ಕರೆಂಟ್‌ ವೆಬ್‌ಸೈಟ್‌ ಗುವಾಹಟಿಯಲ್ಲಿ ಹಾಕಲಾಗಿದ್ದ ಹಲವು ಹೋರ್ಡಿಂಗ್‌ಗಳಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಫೋಟೋಗಳನ್ನು ಬಳಸಿರುವುದನ್ನು ಈ ಹಿಂದೆ ಪ್ರಶ್ನಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ವಿವಾದಿತ ಹೋರ್ಡಿಂಗ್ಸ್ ಹೇಗಿತ್ತು?

ಟೋಕಿಯೊದಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದ ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಟ್ ವಿಭಾಗದಲ್ಲಿ ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. ಇದು ಒಲಿಂಪಿಕ್ಸ್‌ನಲ್ಲಿ ಅವರ ಚೊಚ್ಚಲ ಪಂದ್ಯವಾಗಿತ್ತು.

ಆದರೆ ಲವ್ಲಿನಾ ಪದಕ ಗೆಲ್ಲುವ ಮುನ್ನ, ಅವರ ಮುಂಬರುವ ಆಟಗಳಿಗೆ ಶುಭ ಹಾರೈಸುವ ಕೆಲವು ಬ್ಯಾನರ್‌ಗಳನ್ನು ರಸ್ತೆ ಬದಿಗಳಲ್ಲಿ ಹಾಕಲಾಗಿತ್ತು. ಈ ಬ್ಯಾನರ್‌‌ಗಳ ವಿಶೇಷತೆಗಳೇನು ಎಂದರೆ, ಶುಭಹಾರೈಕೆ ಪಡೆಯುತ್ತಿರುವ ಲವ್ಲಿನಾ ಅವರ ಚಿತ್ರದ ಬದಲು ದೊಡ್ಡದಾಗಿ, ಮುಖ್ಯಮಂತ್ರಿ ಮತ್ತು ಸಚಿವರ ಚಿತ್ರಗಳು ಮಾತ್ರ ಕಾಣುತ್ತಿದ್ದವು. ಲವ್ಲಿನಾ ಅವರ ಪೋಟೋಗಳು ಈ ಬ್ಯಾನರ್‌ಗಳಲ್ಲಿ ಇರಲಿಲ್ಲ. ಇದು ಸಾಮಾಜಿಕ ಜಾಲತಾಣದಲ್ಲಿ ಕಿರಣ್ ಮುಜುಂದಾರ್ ಶಾ ಸೇರಿದಂತೆ ಹಲವಾರು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಹೋರ್ಡಿಂಗ್‌‌ನಲ್ಲಿ, “ಟೋಕಿಯೊ ಒಲಿಂಪಿಕ್ 2020 ರ ಪಂದ್ಯಕ್ಕೆ ಅರ್ಹತೆ ಪಡೆದ ಲೊವ್ಲಿನಾ ಬೊರ್ಗೊಹೈನ್ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ನೀವು ಅಸ್ಸಾಂನ ಹೆಮ್ಮೆ” ಎಂದು ಬರೆಯಲಾಗಿದೆ. ಆದರೆ ಅದರಲ್ಲಿ ಲವ್ಲೀನಾ ಅವರ ಫೋಟೋಗೆ ಬದಲಾಗಿ ಸಿಎಂ ಅವರ ದೊಡ್ಡ ಚಿತ್ರಗಳನ್ನು ಬಳಸಲಾಗಿತ್ತು.

ಇದನ್ನೂ ಓದಿ: ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಹೋರ್ಡಿಂಗ್ಸ್‌ನಿಂದ ಅಂತರ ಕಾಯ್ದುಕೊಂಡ ಸಿಎಂ, ಸಚಿವ ಮತ್ತು ಡಿಐಪಿಆರ್!

ತಾನು ಇಂತಹ ಬ್ರ್ಯಾಂಡಿಂಗ್ ಅನ್ನು ಅನುಮೋದಿಸಲಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಈ ನಡುವೆ, ಸಚಿವ ಪಿಜುಶ್ ಹಜಾರಿಕಾ ಅವರು ಕೂಡಾ ವಿವಾದಿತ ಹೋರ್ಡಿಂಗ್‌‌ಗಳಿಗೂ ತನಗೆ ಅಥವಾ ತನ್ನ ಇಲಾಖೆಯಾದ ಡಿಐಪಿಆರ್‌‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಹಾಗಾಗಿ ಕೊನೆಗೂ ಉಳಿಯುವ ಪ್ರಶ್ನೆ ಈ ಹೋರ್ಡಿಂಗ್ ಹಾಕಿದ್ದವರು ಯಾರು? ಅವರಿಗೆ ಬುದ್ದಿ ಹೇಳುವವರು ಯಾರು? ಇದನ್ನು ವರದಿ ಮಾಡಿದ್ದು ತಪ್ಪೆ? ವರದಿ ಮಾಡಿದ್ದಕ್ಕೆ ಪ್ರಕರಣ ದಾಖಲಿಸುವುದು ಸರಿಯೇ? ಎನ್ನುವುದಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...