Homeಮುಖಪುಟಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ ಪದಕ ವಿಜೇತೆ ಲವ್ಲಿನಾ ಬೊರ್ಗೋಹೈನ್‌‌ ಅವರಿಗೆ ಶುಭಾಶಯ ಕೋರಿ ಅಸ್ಸಾಂನಲ್ಲಿ ಹಾಕಲಾಗಿದ್ದ ಹೋರ್ಡಿಂಗ್‌ನಲ್ಲಿ ಅವರ ಚಿತ್ರವೆ ಇಲ್ಲ, ಕೇವಲ ಅಸ್ಸಾಂ ಮುಖ್ಯಮಂತ್ರಿ ಮತು ಕ್ರೀಡಾ ಸಚಿವರ ಚಿತ್ರವನ್ನು ಮಾತ್ರವೆ ಹಾಕಲಾಗಿತ್ತು ಎಂಬ ವಿವಾದವೆದ್ದಿತ್ತು. ಆದರೆ ಇದನ್ನು ಸುದ್ದಿ ಮಾಡಿದ್ದ ಅಸ್ಸಾಂನ ಗುವಾಹಟಿ ಮೂಲದ ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌ಕರೆಂಟ್‌‌’ ವಿರುದ್ದ ಪೊಲೀಸರು, ‘ಫೇಕ್ ಸುದ್ದಿ’ ಪ್ರಸಾರ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ ಪೋರ್ಟಲ್‌ ಮಾಡಿದ್ದ ಸುದ್ದಿಯನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ (ಡಿಐಪಿಆರ್) ವೆಬ್‌ಸೈಟ್ “ಇದು ನಕಲಿ ಸುದ್ದಿ” ಎಂದು ಹೇಳಿತ್ತು. ಇದರ ನಂತರ ಪೊಲೀಸರು ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌‌ಕರೆಂಟ್‌‌’ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ದೇಶದ ಹೆಮ್ಮೆ ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರೇ ಇಲ್ಲ! – ಹೀಗೊಂದು ರಾಜಕೀಯ ಮೈಲೇಜ್‌!

“ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾದ ಪಿಜುಶ್ ಹಜಾರಿಕಾ ಮತ್ತು ಇಲಾಖೆಯನ್ನು ಸಾರ್ವಜನಿಕರ ದೃಷ್ಟಿಕೋನದಲ್ಲಿ ಕೆಟ್ಟವರಾಗಿ ಬಿಂಬಿಸುವ ಸಲುವಾಗಿ ನಕಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿದೆ” ಎಂದು ಡಿಐಪಿಆರ್ ಹೇಳಿಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿಕ್ರಾಸ್‌ಕರೆಂಟ್ ಹಂಚಿಕೊಂಡ ನಾಲ್ಕು ನಿಮಿಷಗಳ ಕ್ಲಿಪ್ ಅಲ್ಲಿ, “ಹಿಮಂತ ಬಿಸ್ವಾ ಶರ್ಮ ಅವರನ್ನು ಹೊಗಳಲು ಬೇಕಾಗಿ ಪಿಜುಶ್ ಹಜಾರಿಕಾ ಅವರನ್ನು ನೇಮಿಸಲಾಗಿದೆಯೆ?” ಎಂಬ ಶಿರ್ಷಿಕೆಯನ್ನು ನೀಡಲಾಗಿತ್ತು ಎಂದು ಕ್ವಿಂಟ್ ವರದಿ ಮಾಡಿದ್ದು, ಆದಾಗ್ಯೂ, ವೀಡಿಯೊ ಸಧ್ಯಕ್ಕೆ ಡಿಲೀಟ್‌ ಆಗಿದೆ.

“ಸಾಮಾನ್ಯವಾಗಿ ಡಿಐಪಿಆರ್ ಇಂತಹ ಹೋರ್ಡಿಂಗ್‌ಗಳನ್ನು ಹಾಕುತ್ತದೆ. ಒಂದು ವೇಳೆ ಅದನ್ನು ಅವರು ಮಾಡಿದ್ದರೆ ನಾವು ಪ್ರಶ್ನೆಗಳನ್ನು ಎತ್ತಿದ್ದೇವೆ. ಅವರು ಅದನ್ನು ಮಾಡಿಲ್ಲ ಎಂದಾದರೆ, ಅದಕ್ಕೆ ಅನುಮೋದನೆ ನೀಡಿದವರು ಯಾರು? ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾಗಿರುವ ಪಿಜುಶ್ ಹಜಾರಿಕಾ ಅವರನ್ನೂ ನಾವು ಕೇಳಿದ್ದೆವು. ಆದರೆ ಅವರು ಈಗ ಹೋರ್ಡಿಂಗ್‌ಗೆ ನಾವು ಅನುಮೋದನೆ ನೀಡಿಲ್ಲ ಎಂದು ಹೇಳುತ್ತಿದ್ದಾರೆ” ಎಂದು ವೆಬ್‌ಸೈಟ್‌ನ ಸಂಪಾದಕ ಗೌತಮ್ ಗೊಗೊಯ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆನ್ನಿಗೇ ಚೂರಿ ಹಾಕಲು ಸಜ್ಜಾಗಿದ್ದನಾ ಪೋಸ್ಟ್‌ ಕಾರ್ಡ್ ಮಹೇಶ್‌ ಹೆಗ್ಡೆ..

ಇದೀಗ ವೆಬ್‌ಸೈಟ್‌ ವಿರುದ್ಧ ಕೇಸ್ ದಾಖಲಾಗಿದೆ. ವೆಬ್‌ಸೈಟ್‌ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಿ, ಡಿಐಪಿಆರ್ ನಿರ್ದೇಶಕರು ಆಗಸ್ಟ್ 6 ರ ಶುಕ್ರವಾರದಂದು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. “ಮುಗ್ಧ ವ್ಯಕ್ತಿಗಳ ಚಾರಿತ್ಯ್ರಹರಣ ಮಾಡಲು ಉದ್ದೇಶಪೂರ್ವಕವಾಗಿ ಸಂಪೂರ್ಣ ಸುಳ್ಳು ಮತ್ತು ಕಲ್ಪಿತ ಮಾಹಿತಿಯನ್ನು ಪ್ರಸಾರ ಮಾಡಲಾಗಿದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 ಎ/500/505 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 45 ಎ ಅಡಿಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿ ಕ್ರಾಸ್‌ಕರೆಂಟ್‌ ವೆಬ್‌ಸೈಟ್‌ ಗುವಾಹಟಿಯಲ್ಲಿ ಹಾಕಲಾಗಿದ್ದ ಹಲವು ಹೋರ್ಡಿಂಗ್‌ಗಳಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಫೋಟೋಗಳನ್ನು ಬಳಸಿರುವುದನ್ನು ಈ ಹಿಂದೆ ಪ್ರಶ್ನಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ವಿವಾದಿತ ಹೋರ್ಡಿಂಗ್ಸ್ ಹೇಗಿತ್ತು?

ಟೋಕಿಯೊದಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದ ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಟ್ ವಿಭಾಗದಲ್ಲಿ ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. ಇದು ಒಲಿಂಪಿಕ್ಸ್‌ನಲ್ಲಿ ಅವರ ಚೊಚ್ಚಲ ಪಂದ್ಯವಾಗಿತ್ತು.

ಆದರೆ ಲವ್ಲಿನಾ ಪದಕ ಗೆಲ್ಲುವ ಮುನ್ನ, ಅವರ ಮುಂಬರುವ ಆಟಗಳಿಗೆ ಶುಭ ಹಾರೈಸುವ ಕೆಲವು ಬ್ಯಾನರ್‌ಗಳನ್ನು ರಸ್ತೆ ಬದಿಗಳಲ್ಲಿ ಹಾಕಲಾಗಿತ್ತು. ಈ ಬ್ಯಾನರ್‌‌ಗಳ ವಿಶೇಷತೆಗಳೇನು ಎಂದರೆ, ಶುಭಹಾರೈಕೆ ಪಡೆಯುತ್ತಿರುವ ಲವ್ಲಿನಾ ಅವರ ಚಿತ್ರದ ಬದಲು ದೊಡ್ಡದಾಗಿ, ಮುಖ್ಯಮಂತ್ರಿ ಮತ್ತು ಸಚಿವರ ಚಿತ್ರಗಳು ಮಾತ್ರ ಕಾಣುತ್ತಿದ್ದವು. ಲವ್ಲಿನಾ ಅವರ ಪೋಟೋಗಳು ಈ ಬ್ಯಾನರ್‌ಗಳಲ್ಲಿ ಇರಲಿಲ್ಲ. ಇದು ಸಾಮಾಜಿಕ ಜಾಲತಾಣದಲ್ಲಿ ಕಿರಣ್ ಮುಜುಂದಾರ್ ಶಾ ಸೇರಿದಂತೆ ಹಲವಾರು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಹೋರ್ಡಿಂಗ್‌‌ನಲ್ಲಿ, “ಟೋಕಿಯೊ ಒಲಿಂಪಿಕ್ 2020 ರ ಪಂದ್ಯಕ್ಕೆ ಅರ್ಹತೆ ಪಡೆದ ಲೊವ್ಲಿನಾ ಬೊರ್ಗೊಹೈನ್ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ನೀವು ಅಸ್ಸಾಂನ ಹೆಮ್ಮೆ” ಎಂದು ಬರೆಯಲಾಗಿದೆ. ಆದರೆ ಅದರಲ್ಲಿ ಲವ್ಲೀನಾ ಅವರ ಫೋಟೋಗೆ ಬದಲಾಗಿ ಸಿಎಂ ಅವರ ದೊಡ್ಡ ಚಿತ್ರಗಳನ್ನು ಬಳಸಲಾಗಿತ್ತು.

ಇದನ್ನೂ ಓದಿ: ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಹೋರ್ಡಿಂಗ್ಸ್‌ನಿಂದ ಅಂತರ ಕಾಯ್ದುಕೊಂಡ ಸಿಎಂ, ಸಚಿವ ಮತ್ತು ಡಿಐಪಿಆರ್!

ತಾನು ಇಂತಹ ಬ್ರ್ಯಾಂಡಿಂಗ್ ಅನ್ನು ಅನುಮೋದಿಸಲಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಈ ನಡುವೆ, ಸಚಿವ ಪಿಜುಶ್ ಹಜಾರಿಕಾ ಅವರು ಕೂಡಾ ವಿವಾದಿತ ಹೋರ್ಡಿಂಗ್‌‌ಗಳಿಗೂ ತನಗೆ ಅಥವಾ ತನ್ನ ಇಲಾಖೆಯಾದ ಡಿಐಪಿಆರ್‌‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಹಾಗಾಗಿ ಕೊನೆಗೂ ಉಳಿಯುವ ಪ್ರಶ್ನೆ ಈ ಹೋರ್ಡಿಂಗ್ ಹಾಕಿದ್ದವರು ಯಾರು? ಅವರಿಗೆ ಬುದ್ದಿ ಹೇಳುವವರು ಯಾರು? ಇದನ್ನು ವರದಿ ಮಾಡಿದ್ದು ತಪ್ಪೆ? ವರದಿ ಮಾಡಿದ್ದಕ್ಕೆ ಪ್ರಕರಣ ದಾಖಲಿಸುವುದು ಸರಿಯೇ? ಎನ್ನುವುದಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...