Homeಮುಖಪುಟಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ ಪದಕ ವಿಜೇತೆ ಲವ್ಲಿನಾ ಬೊರ್ಗೋಹೈನ್‌‌ ಅವರಿಗೆ ಶುಭಾಶಯ ಕೋರಿ ಅಸ್ಸಾಂನಲ್ಲಿ ಹಾಕಲಾಗಿದ್ದ ಹೋರ್ಡಿಂಗ್‌ನಲ್ಲಿ ಅವರ ಚಿತ್ರವೆ ಇಲ್ಲ, ಕೇವಲ ಅಸ್ಸಾಂ ಮುಖ್ಯಮಂತ್ರಿ ಮತು ಕ್ರೀಡಾ ಸಚಿವರ ಚಿತ್ರವನ್ನು ಮಾತ್ರವೆ ಹಾಕಲಾಗಿತ್ತು ಎಂಬ ವಿವಾದವೆದ್ದಿತ್ತು. ಆದರೆ ಇದನ್ನು ಸುದ್ದಿ ಮಾಡಿದ್ದ ಅಸ್ಸಾಂನ ಗುವಾಹಟಿ ಮೂಲದ ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌ಕರೆಂಟ್‌‌’ ವಿರುದ್ದ ಪೊಲೀಸರು, ‘ಫೇಕ್ ಸುದ್ದಿ’ ಪ್ರಸಾರ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ ಪೋರ್ಟಲ್‌ ಮಾಡಿದ್ದ ಸುದ್ದಿಯನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ (ಡಿಐಪಿಆರ್) ವೆಬ್‌ಸೈಟ್ “ಇದು ನಕಲಿ ಸುದ್ದಿ” ಎಂದು ಹೇಳಿತ್ತು. ಇದರ ನಂತರ ಪೊಲೀಸರು ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌‌ಕರೆಂಟ್‌‌’ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ದೇಶದ ಹೆಮ್ಮೆ ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರೇ ಇಲ್ಲ! – ಹೀಗೊಂದು ರಾಜಕೀಯ ಮೈಲೇಜ್‌!

“ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾದ ಪಿಜುಶ್ ಹಜಾರಿಕಾ ಮತ್ತು ಇಲಾಖೆಯನ್ನು ಸಾರ್ವಜನಿಕರ ದೃಷ್ಟಿಕೋನದಲ್ಲಿ ಕೆಟ್ಟವರಾಗಿ ಬಿಂಬಿಸುವ ಸಲುವಾಗಿ ನಕಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿದೆ” ಎಂದು ಡಿಐಪಿಆರ್ ಹೇಳಿಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿಕ್ರಾಸ್‌ಕರೆಂಟ್ ಹಂಚಿಕೊಂಡ ನಾಲ್ಕು ನಿಮಿಷಗಳ ಕ್ಲಿಪ್ ಅಲ್ಲಿ, “ಹಿಮಂತ ಬಿಸ್ವಾ ಶರ್ಮ ಅವರನ್ನು ಹೊಗಳಲು ಬೇಕಾಗಿ ಪಿಜುಶ್ ಹಜಾರಿಕಾ ಅವರನ್ನು ನೇಮಿಸಲಾಗಿದೆಯೆ?” ಎಂಬ ಶಿರ್ಷಿಕೆಯನ್ನು ನೀಡಲಾಗಿತ್ತು ಎಂದು ಕ್ವಿಂಟ್ ವರದಿ ಮಾಡಿದ್ದು, ಆದಾಗ್ಯೂ, ವೀಡಿಯೊ ಸಧ್ಯಕ್ಕೆ ಡಿಲೀಟ್‌ ಆಗಿದೆ.

“ಸಾಮಾನ್ಯವಾಗಿ ಡಿಐಪಿಆರ್ ಇಂತಹ ಹೋರ್ಡಿಂಗ್‌ಗಳನ್ನು ಹಾಕುತ್ತದೆ. ಒಂದು ವೇಳೆ ಅದನ್ನು ಅವರು ಮಾಡಿದ್ದರೆ ನಾವು ಪ್ರಶ್ನೆಗಳನ್ನು ಎತ್ತಿದ್ದೇವೆ. ಅವರು ಅದನ್ನು ಮಾಡಿಲ್ಲ ಎಂದಾದರೆ, ಅದಕ್ಕೆ ಅನುಮೋದನೆ ನೀಡಿದವರು ಯಾರು? ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾಗಿರುವ ಪಿಜುಶ್ ಹಜಾರಿಕಾ ಅವರನ್ನೂ ನಾವು ಕೇಳಿದ್ದೆವು. ಆದರೆ ಅವರು ಈಗ ಹೋರ್ಡಿಂಗ್‌ಗೆ ನಾವು ಅನುಮೋದನೆ ನೀಡಿಲ್ಲ ಎಂದು ಹೇಳುತ್ತಿದ್ದಾರೆ” ಎಂದು ವೆಬ್‌ಸೈಟ್‌ನ ಸಂಪಾದಕ ಗೌತಮ್ ಗೊಗೊಯ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆನ್ನಿಗೇ ಚೂರಿ ಹಾಕಲು ಸಜ್ಜಾಗಿದ್ದನಾ ಪೋಸ್ಟ್‌ ಕಾರ್ಡ್ ಮಹೇಶ್‌ ಹೆಗ್ಡೆ..

ಇದೀಗ ವೆಬ್‌ಸೈಟ್‌ ವಿರುದ್ಧ ಕೇಸ್ ದಾಖಲಾಗಿದೆ. ವೆಬ್‌ಸೈಟ್‌ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಿ, ಡಿಐಪಿಆರ್ ನಿರ್ದೇಶಕರು ಆಗಸ್ಟ್ 6 ರ ಶುಕ್ರವಾರದಂದು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. “ಮುಗ್ಧ ವ್ಯಕ್ತಿಗಳ ಚಾರಿತ್ಯ್ರಹರಣ ಮಾಡಲು ಉದ್ದೇಶಪೂರ್ವಕವಾಗಿ ಸಂಪೂರ್ಣ ಸುಳ್ಳು ಮತ್ತು ಕಲ್ಪಿತ ಮಾಹಿತಿಯನ್ನು ಪ್ರಸಾರ ಮಾಡಲಾಗಿದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 ಎ/500/505 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 45 ಎ ಅಡಿಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿ ಕ್ರಾಸ್‌ಕರೆಂಟ್‌ ವೆಬ್‌ಸೈಟ್‌ ಗುವಾಹಟಿಯಲ್ಲಿ ಹಾಕಲಾಗಿದ್ದ ಹಲವು ಹೋರ್ಡಿಂಗ್‌ಗಳಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಫೋಟೋಗಳನ್ನು ಬಳಸಿರುವುದನ್ನು ಈ ಹಿಂದೆ ಪ್ರಶ್ನಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ವಿವಾದಿತ ಹೋರ್ಡಿಂಗ್ಸ್ ಹೇಗಿತ್ತು?

ಟೋಕಿಯೊದಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದ ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಟ್ ವಿಭಾಗದಲ್ಲಿ ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. ಇದು ಒಲಿಂಪಿಕ್ಸ್‌ನಲ್ಲಿ ಅವರ ಚೊಚ್ಚಲ ಪಂದ್ಯವಾಗಿತ್ತು.

ಆದರೆ ಲವ್ಲಿನಾ ಪದಕ ಗೆಲ್ಲುವ ಮುನ್ನ, ಅವರ ಮುಂಬರುವ ಆಟಗಳಿಗೆ ಶುಭ ಹಾರೈಸುವ ಕೆಲವು ಬ್ಯಾನರ್‌ಗಳನ್ನು ರಸ್ತೆ ಬದಿಗಳಲ್ಲಿ ಹಾಕಲಾಗಿತ್ತು. ಈ ಬ್ಯಾನರ್‌‌ಗಳ ವಿಶೇಷತೆಗಳೇನು ಎಂದರೆ, ಶುಭಹಾರೈಕೆ ಪಡೆಯುತ್ತಿರುವ ಲವ್ಲಿನಾ ಅವರ ಚಿತ್ರದ ಬದಲು ದೊಡ್ಡದಾಗಿ, ಮುಖ್ಯಮಂತ್ರಿ ಮತ್ತು ಸಚಿವರ ಚಿತ್ರಗಳು ಮಾತ್ರ ಕಾಣುತ್ತಿದ್ದವು. ಲವ್ಲಿನಾ ಅವರ ಪೋಟೋಗಳು ಈ ಬ್ಯಾನರ್‌ಗಳಲ್ಲಿ ಇರಲಿಲ್ಲ. ಇದು ಸಾಮಾಜಿಕ ಜಾಲತಾಣದಲ್ಲಿ ಕಿರಣ್ ಮುಜುಂದಾರ್ ಶಾ ಸೇರಿದಂತೆ ಹಲವಾರು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಹೋರ್ಡಿಂಗ್‌‌ನಲ್ಲಿ, “ಟೋಕಿಯೊ ಒಲಿಂಪಿಕ್ 2020 ರ ಪಂದ್ಯಕ್ಕೆ ಅರ್ಹತೆ ಪಡೆದ ಲೊವ್ಲಿನಾ ಬೊರ್ಗೊಹೈನ್ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ನೀವು ಅಸ್ಸಾಂನ ಹೆಮ್ಮೆ” ಎಂದು ಬರೆಯಲಾಗಿದೆ. ಆದರೆ ಅದರಲ್ಲಿ ಲವ್ಲೀನಾ ಅವರ ಫೋಟೋಗೆ ಬದಲಾಗಿ ಸಿಎಂ ಅವರ ದೊಡ್ಡ ಚಿತ್ರಗಳನ್ನು ಬಳಸಲಾಗಿತ್ತು.

ಇದನ್ನೂ ಓದಿ: ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಹೋರ್ಡಿಂಗ್ಸ್‌ನಿಂದ ಅಂತರ ಕಾಯ್ದುಕೊಂಡ ಸಿಎಂ, ಸಚಿವ ಮತ್ತು ಡಿಐಪಿಆರ್!

ತಾನು ಇಂತಹ ಬ್ರ್ಯಾಂಡಿಂಗ್ ಅನ್ನು ಅನುಮೋದಿಸಲಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಈ ನಡುವೆ, ಸಚಿವ ಪಿಜುಶ್ ಹಜಾರಿಕಾ ಅವರು ಕೂಡಾ ವಿವಾದಿತ ಹೋರ್ಡಿಂಗ್‌‌ಗಳಿಗೂ ತನಗೆ ಅಥವಾ ತನ್ನ ಇಲಾಖೆಯಾದ ಡಿಐಪಿಆರ್‌‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಹಾಗಾಗಿ ಕೊನೆಗೂ ಉಳಿಯುವ ಪ್ರಶ್ನೆ ಈ ಹೋರ್ಡಿಂಗ್ ಹಾಕಿದ್ದವರು ಯಾರು? ಅವರಿಗೆ ಬುದ್ದಿ ಹೇಳುವವರು ಯಾರು? ಇದನ್ನು ವರದಿ ಮಾಡಿದ್ದು ತಪ್ಪೆ? ವರದಿ ಮಾಡಿದ್ದಕ್ಕೆ ಪ್ರಕರಣ ದಾಖಲಿಸುವುದು ಸರಿಯೇ? ಎನ್ನುವುದಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...