Homeಮುಖಪುಟಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ ಪದಕ ವಿಜೇತೆ ಲವ್ಲಿನಾ ಬೊರ್ಗೋಹೈನ್‌‌ ಅವರಿಗೆ ಶುಭಾಶಯ ಕೋರಿ ಅಸ್ಸಾಂನಲ್ಲಿ ಹಾಕಲಾಗಿದ್ದ ಹೋರ್ಡಿಂಗ್‌ನಲ್ಲಿ ಅವರ ಚಿತ್ರವೆ ಇಲ್ಲ, ಕೇವಲ ಅಸ್ಸಾಂ ಮುಖ್ಯಮಂತ್ರಿ ಮತು ಕ್ರೀಡಾ ಸಚಿವರ ಚಿತ್ರವನ್ನು ಮಾತ್ರವೆ ಹಾಕಲಾಗಿತ್ತು ಎಂಬ ವಿವಾದವೆದ್ದಿತ್ತು. ಆದರೆ ಇದನ್ನು ಸುದ್ದಿ ಮಾಡಿದ್ದ ಅಸ್ಸಾಂನ ಗುವಾಹಟಿ ಮೂಲದ ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌ಕರೆಂಟ್‌‌’ ವಿರುದ್ದ ಪೊಲೀಸರು, ‘ಫೇಕ್ ಸುದ್ದಿ’ ಪ್ರಸಾರ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ ಪೋರ್ಟಲ್‌ ಮಾಡಿದ್ದ ಸುದ್ದಿಯನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ (ಡಿಐಪಿಆರ್) ವೆಬ್‌ಸೈಟ್ “ಇದು ನಕಲಿ ಸುದ್ದಿ” ಎಂದು ಹೇಳಿತ್ತು. ಇದರ ನಂತರ ಪೊಲೀಸರು ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌‌ಕರೆಂಟ್‌‌’ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ದೇಶದ ಹೆಮ್ಮೆ ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರೇ ಇಲ್ಲ! – ಹೀಗೊಂದು ರಾಜಕೀಯ ಮೈಲೇಜ್‌!

“ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾದ ಪಿಜುಶ್ ಹಜಾರಿಕಾ ಮತ್ತು ಇಲಾಖೆಯನ್ನು ಸಾರ್ವಜನಿಕರ ದೃಷ್ಟಿಕೋನದಲ್ಲಿ ಕೆಟ್ಟವರಾಗಿ ಬಿಂಬಿಸುವ ಸಲುವಾಗಿ ನಕಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿದೆ” ಎಂದು ಡಿಐಪಿಆರ್ ಹೇಳಿಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿಕ್ರಾಸ್‌ಕರೆಂಟ್ ಹಂಚಿಕೊಂಡ ನಾಲ್ಕು ನಿಮಿಷಗಳ ಕ್ಲಿಪ್ ಅಲ್ಲಿ, “ಹಿಮಂತ ಬಿಸ್ವಾ ಶರ್ಮ ಅವರನ್ನು ಹೊಗಳಲು ಬೇಕಾಗಿ ಪಿಜುಶ್ ಹಜಾರಿಕಾ ಅವರನ್ನು ನೇಮಿಸಲಾಗಿದೆಯೆ?” ಎಂಬ ಶಿರ್ಷಿಕೆಯನ್ನು ನೀಡಲಾಗಿತ್ತು ಎಂದು ಕ್ವಿಂಟ್ ವರದಿ ಮಾಡಿದ್ದು, ಆದಾಗ್ಯೂ, ವೀಡಿಯೊ ಸಧ್ಯಕ್ಕೆ ಡಿಲೀಟ್‌ ಆಗಿದೆ.

“ಸಾಮಾನ್ಯವಾಗಿ ಡಿಐಪಿಆರ್ ಇಂತಹ ಹೋರ್ಡಿಂಗ್‌ಗಳನ್ನು ಹಾಕುತ್ತದೆ. ಒಂದು ವೇಳೆ ಅದನ್ನು ಅವರು ಮಾಡಿದ್ದರೆ ನಾವು ಪ್ರಶ್ನೆಗಳನ್ನು ಎತ್ತಿದ್ದೇವೆ. ಅವರು ಅದನ್ನು ಮಾಡಿಲ್ಲ ಎಂದಾದರೆ, ಅದಕ್ಕೆ ಅನುಮೋದನೆ ನೀಡಿದವರು ಯಾರು? ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾಗಿರುವ ಪಿಜುಶ್ ಹಜಾರಿಕಾ ಅವರನ್ನೂ ನಾವು ಕೇಳಿದ್ದೆವು. ಆದರೆ ಅವರು ಈಗ ಹೋರ್ಡಿಂಗ್‌ಗೆ ನಾವು ಅನುಮೋದನೆ ನೀಡಿಲ್ಲ ಎಂದು ಹೇಳುತ್ತಿದ್ದಾರೆ” ಎಂದು ವೆಬ್‌ಸೈಟ್‌ನ ಸಂಪಾದಕ ಗೌತಮ್ ಗೊಗೊಯ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆನ್ನಿಗೇ ಚೂರಿ ಹಾಕಲು ಸಜ್ಜಾಗಿದ್ದನಾ ಪೋಸ್ಟ್‌ ಕಾರ್ಡ್ ಮಹೇಶ್‌ ಹೆಗ್ಡೆ..

ಇದೀಗ ವೆಬ್‌ಸೈಟ್‌ ವಿರುದ್ಧ ಕೇಸ್ ದಾಖಲಾಗಿದೆ. ವೆಬ್‌ಸೈಟ್‌ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಿ, ಡಿಐಪಿಆರ್ ನಿರ್ದೇಶಕರು ಆಗಸ್ಟ್ 6 ರ ಶುಕ್ರವಾರದಂದು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. “ಮುಗ್ಧ ವ್ಯಕ್ತಿಗಳ ಚಾರಿತ್ಯ್ರಹರಣ ಮಾಡಲು ಉದ್ದೇಶಪೂರ್ವಕವಾಗಿ ಸಂಪೂರ್ಣ ಸುಳ್ಳು ಮತ್ತು ಕಲ್ಪಿತ ಮಾಹಿತಿಯನ್ನು ಪ್ರಸಾರ ಮಾಡಲಾಗಿದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 ಎ/500/505 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 45 ಎ ಅಡಿಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿ ಕ್ರಾಸ್‌ಕರೆಂಟ್‌ ವೆಬ್‌ಸೈಟ್‌ ಗುವಾಹಟಿಯಲ್ಲಿ ಹಾಕಲಾಗಿದ್ದ ಹಲವು ಹೋರ್ಡಿಂಗ್‌ಗಳಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಫೋಟೋಗಳನ್ನು ಬಳಸಿರುವುದನ್ನು ಈ ಹಿಂದೆ ಪ್ರಶ್ನಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ವಿವಾದಿತ ಹೋರ್ಡಿಂಗ್ಸ್ ಹೇಗಿತ್ತು?

ಟೋಕಿಯೊದಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದ ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಟ್ ವಿಭಾಗದಲ್ಲಿ ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. ಇದು ಒಲಿಂಪಿಕ್ಸ್‌ನಲ್ಲಿ ಅವರ ಚೊಚ್ಚಲ ಪಂದ್ಯವಾಗಿತ್ತು.

ಆದರೆ ಲವ್ಲಿನಾ ಪದಕ ಗೆಲ್ಲುವ ಮುನ್ನ, ಅವರ ಮುಂಬರುವ ಆಟಗಳಿಗೆ ಶುಭ ಹಾರೈಸುವ ಕೆಲವು ಬ್ಯಾನರ್‌ಗಳನ್ನು ರಸ್ತೆ ಬದಿಗಳಲ್ಲಿ ಹಾಕಲಾಗಿತ್ತು. ಈ ಬ್ಯಾನರ್‌‌ಗಳ ವಿಶೇಷತೆಗಳೇನು ಎಂದರೆ, ಶುಭಹಾರೈಕೆ ಪಡೆಯುತ್ತಿರುವ ಲವ್ಲಿನಾ ಅವರ ಚಿತ್ರದ ಬದಲು ದೊಡ್ಡದಾಗಿ, ಮುಖ್ಯಮಂತ್ರಿ ಮತ್ತು ಸಚಿವರ ಚಿತ್ರಗಳು ಮಾತ್ರ ಕಾಣುತ್ತಿದ್ದವು. ಲವ್ಲಿನಾ ಅವರ ಪೋಟೋಗಳು ಈ ಬ್ಯಾನರ್‌ಗಳಲ್ಲಿ ಇರಲಿಲ್ಲ. ಇದು ಸಾಮಾಜಿಕ ಜಾಲತಾಣದಲ್ಲಿ ಕಿರಣ್ ಮುಜುಂದಾರ್ ಶಾ ಸೇರಿದಂತೆ ಹಲವಾರು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಹೋರ್ಡಿಂಗ್‌‌ನಲ್ಲಿ, “ಟೋಕಿಯೊ ಒಲಿಂಪಿಕ್ 2020 ರ ಪಂದ್ಯಕ್ಕೆ ಅರ್ಹತೆ ಪಡೆದ ಲೊವ್ಲಿನಾ ಬೊರ್ಗೊಹೈನ್ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ನೀವು ಅಸ್ಸಾಂನ ಹೆಮ್ಮೆ” ಎಂದು ಬರೆಯಲಾಗಿದೆ. ಆದರೆ ಅದರಲ್ಲಿ ಲವ್ಲೀನಾ ಅವರ ಫೋಟೋಗೆ ಬದಲಾಗಿ ಸಿಎಂ ಅವರ ದೊಡ್ಡ ಚಿತ್ರಗಳನ್ನು ಬಳಸಲಾಗಿತ್ತು.

ಇದನ್ನೂ ಓದಿ: ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಹೋರ್ಡಿಂಗ್ಸ್‌ನಿಂದ ಅಂತರ ಕಾಯ್ದುಕೊಂಡ ಸಿಎಂ, ಸಚಿವ ಮತ್ತು ಡಿಐಪಿಆರ್!

ತಾನು ಇಂತಹ ಬ್ರ್ಯಾಂಡಿಂಗ್ ಅನ್ನು ಅನುಮೋದಿಸಲಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಈ ನಡುವೆ, ಸಚಿವ ಪಿಜುಶ್ ಹಜಾರಿಕಾ ಅವರು ಕೂಡಾ ವಿವಾದಿತ ಹೋರ್ಡಿಂಗ್‌‌ಗಳಿಗೂ ತನಗೆ ಅಥವಾ ತನ್ನ ಇಲಾಖೆಯಾದ ಡಿಐಪಿಆರ್‌‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಹಾಗಾಗಿ ಕೊನೆಗೂ ಉಳಿಯುವ ಪ್ರಶ್ನೆ ಈ ಹೋರ್ಡಿಂಗ್ ಹಾಕಿದ್ದವರು ಯಾರು? ಅವರಿಗೆ ಬುದ್ದಿ ಹೇಳುವವರು ಯಾರು? ಇದನ್ನು ವರದಿ ಮಾಡಿದ್ದು ತಪ್ಪೆ? ವರದಿ ಮಾಡಿದ್ದಕ್ಕೆ ಪ್ರಕರಣ ದಾಖಲಿಸುವುದು ಸರಿಯೇ? ಎನ್ನುವುದಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...