Homeಮುಖಪುಟಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ ಪದಕ ವಿಜೇತೆ ಲವ್ಲಿನಾ ಬೊರ್ಗೋಹೈನ್‌‌ ಅವರಿಗೆ ಶುಭಾಶಯ ಕೋರಿ ಅಸ್ಸಾಂನಲ್ಲಿ ಹಾಕಲಾಗಿದ್ದ ಹೋರ್ಡಿಂಗ್‌ನಲ್ಲಿ ಅವರ ಚಿತ್ರವೆ ಇಲ್ಲ, ಕೇವಲ ಅಸ್ಸಾಂ ಮುಖ್ಯಮಂತ್ರಿ ಮತು ಕ್ರೀಡಾ ಸಚಿವರ ಚಿತ್ರವನ್ನು ಮಾತ್ರವೆ ಹಾಕಲಾಗಿತ್ತು ಎಂಬ ವಿವಾದವೆದ್ದಿತ್ತು. ಆದರೆ ಇದನ್ನು ಸುದ್ದಿ ಮಾಡಿದ್ದ ಅಸ್ಸಾಂನ ಗುವಾಹಟಿ ಮೂಲದ ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌ಕರೆಂಟ್‌‌’ ವಿರುದ್ದ ಪೊಲೀಸರು, ‘ಫೇಕ್ ಸುದ್ದಿ’ ಪ್ರಸಾರ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ ಪೋರ್ಟಲ್‌ ಮಾಡಿದ್ದ ಸುದ್ದಿಯನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ (ಡಿಐಪಿಆರ್) ವೆಬ್‌ಸೈಟ್ “ಇದು ನಕಲಿ ಸುದ್ದಿ” ಎಂದು ಹೇಳಿತ್ತು. ಇದರ ನಂತರ ಪೊಲೀಸರು ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌‌ಕರೆಂಟ್‌‌’ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ದೇಶದ ಹೆಮ್ಮೆ ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರೇ ಇಲ್ಲ! – ಹೀಗೊಂದು ರಾಜಕೀಯ ಮೈಲೇಜ್‌!

“ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾದ ಪಿಜುಶ್ ಹಜಾರಿಕಾ ಮತ್ತು ಇಲಾಖೆಯನ್ನು ಸಾರ್ವಜನಿಕರ ದೃಷ್ಟಿಕೋನದಲ್ಲಿ ಕೆಟ್ಟವರಾಗಿ ಬಿಂಬಿಸುವ ಸಲುವಾಗಿ ನಕಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿದೆ” ಎಂದು ಡಿಐಪಿಆರ್ ಹೇಳಿಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿಕ್ರಾಸ್‌ಕರೆಂಟ್ ಹಂಚಿಕೊಂಡ ನಾಲ್ಕು ನಿಮಿಷಗಳ ಕ್ಲಿಪ್ ಅಲ್ಲಿ, “ಹಿಮಂತ ಬಿಸ್ವಾ ಶರ್ಮ ಅವರನ್ನು ಹೊಗಳಲು ಬೇಕಾಗಿ ಪಿಜುಶ್ ಹಜಾರಿಕಾ ಅವರನ್ನು ನೇಮಿಸಲಾಗಿದೆಯೆ?” ಎಂಬ ಶಿರ್ಷಿಕೆಯನ್ನು ನೀಡಲಾಗಿತ್ತು ಎಂದು ಕ್ವಿಂಟ್ ವರದಿ ಮಾಡಿದ್ದು, ಆದಾಗ್ಯೂ, ವೀಡಿಯೊ ಸಧ್ಯಕ್ಕೆ ಡಿಲೀಟ್‌ ಆಗಿದೆ.

“ಸಾಮಾನ್ಯವಾಗಿ ಡಿಐಪಿಆರ್ ಇಂತಹ ಹೋರ್ಡಿಂಗ್‌ಗಳನ್ನು ಹಾಕುತ್ತದೆ. ಒಂದು ವೇಳೆ ಅದನ್ನು ಅವರು ಮಾಡಿದ್ದರೆ ನಾವು ಪ್ರಶ್ನೆಗಳನ್ನು ಎತ್ತಿದ್ದೇವೆ. ಅವರು ಅದನ್ನು ಮಾಡಿಲ್ಲ ಎಂದಾದರೆ, ಅದಕ್ಕೆ ಅನುಮೋದನೆ ನೀಡಿದವರು ಯಾರು? ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾಗಿರುವ ಪಿಜುಶ್ ಹಜಾರಿಕಾ ಅವರನ್ನೂ ನಾವು ಕೇಳಿದ್ದೆವು. ಆದರೆ ಅವರು ಈಗ ಹೋರ್ಡಿಂಗ್‌ಗೆ ನಾವು ಅನುಮೋದನೆ ನೀಡಿಲ್ಲ ಎಂದು ಹೇಳುತ್ತಿದ್ದಾರೆ” ಎಂದು ವೆಬ್‌ಸೈಟ್‌ನ ಸಂಪಾದಕ ಗೌತಮ್ ಗೊಗೊಯ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆನ್ನಿಗೇ ಚೂರಿ ಹಾಕಲು ಸಜ್ಜಾಗಿದ್ದನಾ ಪೋಸ್ಟ್‌ ಕಾರ್ಡ್ ಮಹೇಶ್‌ ಹೆಗ್ಡೆ..

ಇದೀಗ ವೆಬ್‌ಸೈಟ್‌ ವಿರುದ್ಧ ಕೇಸ್ ದಾಖಲಾಗಿದೆ. ವೆಬ್‌ಸೈಟ್‌ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಿ, ಡಿಐಪಿಆರ್ ನಿರ್ದೇಶಕರು ಆಗಸ್ಟ್ 6 ರ ಶುಕ್ರವಾರದಂದು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. “ಮುಗ್ಧ ವ್ಯಕ್ತಿಗಳ ಚಾರಿತ್ಯ್ರಹರಣ ಮಾಡಲು ಉದ್ದೇಶಪೂರ್ವಕವಾಗಿ ಸಂಪೂರ್ಣ ಸುಳ್ಳು ಮತ್ತು ಕಲ್ಪಿತ ಮಾಹಿತಿಯನ್ನು ಪ್ರಸಾರ ಮಾಡಲಾಗಿದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 ಎ/500/505 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 45 ಎ ಅಡಿಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿ ಕ್ರಾಸ್‌ಕರೆಂಟ್‌ ವೆಬ್‌ಸೈಟ್‌ ಗುವಾಹಟಿಯಲ್ಲಿ ಹಾಕಲಾಗಿದ್ದ ಹಲವು ಹೋರ್ಡಿಂಗ್‌ಗಳಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಫೋಟೋಗಳನ್ನು ಬಳಸಿರುವುದನ್ನು ಈ ಹಿಂದೆ ಪ್ರಶ್ನಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ವಿವಾದಿತ ಹೋರ್ಡಿಂಗ್ಸ್ ಹೇಗಿತ್ತು?

ಟೋಕಿಯೊದಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದ ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಟ್ ವಿಭಾಗದಲ್ಲಿ ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. ಇದು ಒಲಿಂಪಿಕ್ಸ್‌ನಲ್ಲಿ ಅವರ ಚೊಚ್ಚಲ ಪಂದ್ಯವಾಗಿತ್ತು.

ಆದರೆ ಲವ್ಲಿನಾ ಪದಕ ಗೆಲ್ಲುವ ಮುನ್ನ, ಅವರ ಮುಂಬರುವ ಆಟಗಳಿಗೆ ಶುಭ ಹಾರೈಸುವ ಕೆಲವು ಬ್ಯಾನರ್‌ಗಳನ್ನು ರಸ್ತೆ ಬದಿಗಳಲ್ಲಿ ಹಾಕಲಾಗಿತ್ತು. ಈ ಬ್ಯಾನರ್‌‌ಗಳ ವಿಶೇಷತೆಗಳೇನು ಎಂದರೆ, ಶುಭಹಾರೈಕೆ ಪಡೆಯುತ್ತಿರುವ ಲವ್ಲಿನಾ ಅವರ ಚಿತ್ರದ ಬದಲು ದೊಡ್ಡದಾಗಿ, ಮುಖ್ಯಮಂತ್ರಿ ಮತ್ತು ಸಚಿವರ ಚಿತ್ರಗಳು ಮಾತ್ರ ಕಾಣುತ್ತಿದ್ದವು. ಲವ್ಲಿನಾ ಅವರ ಪೋಟೋಗಳು ಈ ಬ್ಯಾನರ್‌ಗಳಲ್ಲಿ ಇರಲಿಲ್ಲ. ಇದು ಸಾಮಾಜಿಕ ಜಾಲತಾಣದಲ್ಲಿ ಕಿರಣ್ ಮುಜುಂದಾರ್ ಶಾ ಸೇರಿದಂತೆ ಹಲವಾರು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಹೋರ್ಡಿಂಗ್‌‌ನಲ್ಲಿ, “ಟೋಕಿಯೊ ಒಲಿಂಪಿಕ್ 2020 ರ ಪಂದ್ಯಕ್ಕೆ ಅರ್ಹತೆ ಪಡೆದ ಲೊವ್ಲಿನಾ ಬೊರ್ಗೊಹೈನ್ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ನೀವು ಅಸ್ಸಾಂನ ಹೆಮ್ಮೆ” ಎಂದು ಬರೆಯಲಾಗಿದೆ. ಆದರೆ ಅದರಲ್ಲಿ ಲವ್ಲೀನಾ ಅವರ ಫೋಟೋಗೆ ಬದಲಾಗಿ ಸಿಎಂ ಅವರ ದೊಡ್ಡ ಚಿತ್ರಗಳನ್ನು ಬಳಸಲಾಗಿತ್ತು.

ಇದನ್ನೂ ಓದಿ: ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಹೋರ್ಡಿಂಗ್ಸ್‌ನಿಂದ ಅಂತರ ಕಾಯ್ದುಕೊಂಡ ಸಿಎಂ, ಸಚಿವ ಮತ್ತು ಡಿಐಪಿಆರ್!

ತಾನು ಇಂತಹ ಬ್ರ್ಯಾಂಡಿಂಗ್ ಅನ್ನು ಅನುಮೋದಿಸಲಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಈ ನಡುವೆ, ಸಚಿವ ಪಿಜುಶ್ ಹಜಾರಿಕಾ ಅವರು ಕೂಡಾ ವಿವಾದಿತ ಹೋರ್ಡಿಂಗ್‌‌ಗಳಿಗೂ ತನಗೆ ಅಥವಾ ತನ್ನ ಇಲಾಖೆಯಾದ ಡಿಐಪಿಆರ್‌‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಹಾಗಾಗಿ ಕೊನೆಗೂ ಉಳಿಯುವ ಪ್ರಶ್ನೆ ಈ ಹೋರ್ಡಿಂಗ್ ಹಾಕಿದ್ದವರು ಯಾರು? ಅವರಿಗೆ ಬುದ್ದಿ ಹೇಳುವವರು ಯಾರು? ಇದನ್ನು ವರದಿ ಮಾಡಿದ್ದು ತಪ್ಪೆ? ವರದಿ ಮಾಡಿದ್ದಕ್ಕೆ ಪ್ರಕರಣ ದಾಖಲಿಸುವುದು ಸರಿಯೇ? ಎನ್ನುವುದಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...