Homeಮುಖಪುಟಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ ಪದಕ ವಿಜೇತೆ ಲವ್ಲಿನಾ ಬೊರ್ಗೋಹೈನ್‌‌ ಅವರಿಗೆ ಶುಭಾಶಯ ಕೋರಿ ಅಸ್ಸಾಂನಲ್ಲಿ ಹಾಕಲಾಗಿದ್ದ ಹೋರ್ಡಿಂಗ್‌ನಲ್ಲಿ ಅವರ ಚಿತ್ರವೆ ಇಲ್ಲ, ಕೇವಲ ಅಸ್ಸಾಂ ಮುಖ್ಯಮಂತ್ರಿ ಮತು ಕ್ರೀಡಾ ಸಚಿವರ ಚಿತ್ರವನ್ನು ಮಾತ್ರವೆ ಹಾಕಲಾಗಿತ್ತು ಎಂಬ ವಿವಾದವೆದ್ದಿತ್ತು. ಆದರೆ ಇದನ್ನು ಸುದ್ದಿ ಮಾಡಿದ್ದ ಅಸ್ಸಾಂನ ಗುವಾಹಟಿ ಮೂಲದ ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌ಕರೆಂಟ್‌‌’ ವಿರುದ್ದ ಪೊಲೀಸರು, ‘ಫೇಕ್ ಸುದ್ದಿ’ ಪ್ರಸಾರ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ ಪೋರ್ಟಲ್‌ ಮಾಡಿದ್ದ ಸುದ್ದಿಯನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ (ಡಿಐಪಿಆರ್) ವೆಬ್‌ಸೈಟ್ “ಇದು ನಕಲಿ ಸುದ್ದಿ” ಎಂದು ಹೇಳಿತ್ತು. ಇದರ ನಂತರ ಪೊಲೀಸರು ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌‌ಕರೆಂಟ್‌‌’ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ದೇಶದ ಹೆಮ್ಮೆ ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರೇ ಇಲ್ಲ! – ಹೀಗೊಂದು ರಾಜಕೀಯ ಮೈಲೇಜ್‌!

“ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾದ ಪಿಜುಶ್ ಹಜಾರಿಕಾ ಮತ್ತು ಇಲಾಖೆಯನ್ನು ಸಾರ್ವಜನಿಕರ ದೃಷ್ಟಿಕೋನದಲ್ಲಿ ಕೆಟ್ಟವರಾಗಿ ಬಿಂಬಿಸುವ ಸಲುವಾಗಿ ನಕಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿದೆ” ಎಂದು ಡಿಐಪಿಆರ್ ಹೇಳಿಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿಕ್ರಾಸ್‌ಕರೆಂಟ್ ಹಂಚಿಕೊಂಡ ನಾಲ್ಕು ನಿಮಿಷಗಳ ಕ್ಲಿಪ್ ಅಲ್ಲಿ, “ಹಿಮಂತ ಬಿಸ್ವಾ ಶರ್ಮ ಅವರನ್ನು ಹೊಗಳಲು ಬೇಕಾಗಿ ಪಿಜುಶ್ ಹಜಾರಿಕಾ ಅವರನ್ನು ನೇಮಿಸಲಾಗಿದೆಯೆ?” ಎಂಬ ಶಿರ್ಷಿಕೆಯನ್ನು ನೀಡಲಾಗಿತ್ತು ಎಂದು ಕ್ವಿಂಟ್ ವರದಿ ಮಾಡಿದ್ದು, ಆದಾಗ್ಯೂ, ವೀಡಿಯೊ ಸಧ್ಯಕ್ಕೆ ಡಿಲೀಟ್‌ ಆಗಿದೆ.

“ಸಾಮಾನ್ಯವಾಗಿ ಡಿಐಪಿಆರ್ ಇಂತಹ ಹೋರ್ಡಿಂಗ್‌ಗಳನ್ನು ಹಾಕುತ್ತದೆ. ಒಂದು ವೇಳೆ ಅದನ್ನು ಅವರು ಮಾಡಿದ್ದರೆ ನಾವು ಪ್ರಶ್ನೆಗಳನ್ನು ಎತ್ತಿದ್ದೇವೆ. ಅವರು ಅದನ್ನು ಮಾಡಿಲ್ಲ ಎಂದಾದರೆ, ಅದಕ್ಕೆ ಅನುಮೋದನೆ ನೀಡಿದವರು ಯಾರು? ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾಗಿರುವ ಪಿಜುಶ್ ಹಜಾರಿಕಾ ಅವರನ್ನೂ ನಾವು ಕೇಳಿದ್ದೆವು. ಆದರೆ ಅವರು ಈಗ ಹೋರ್ಡಿಂಗ್‌ಗೆ ನಾವು ಅನುಮೋದನೆ ನೀಡಿಲ್ಲ ಎಂದು ಹೇಳುತ್ತಿದ್ದಾರೆ” ಎಂದು ವೆಬ್‌ಸೈಟ್‌ನ ಸಂಪಾದಕ ಗೌತಮ್ ಗೊಗೊಯ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆನ್ನಿಗೇ ಚೂರಿ ಹಾಕಲು ಸಜ್ಜಾಗಿದ್ದನಾ ಪೋಸ್ಟ್‌ ಕಾರ್ಡ್ ಮಹೇಶ್‌ ಹೆಗ್ಡೆ..

ಇದೀಗ ವೆಬ್‌ಸೈಟ್‌ ವಿರುದ್ಧ ಕೇಸ್ ದಾಖಲಾಗಿದೆ. ವೆಬ್‌ಸೈಟ್‌ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಿ, ಡಿಐಪಿಆರ್ ನಿರ್ದೇಶಕರು ಆಗಸ್ಟ್ 6 ರ ಶುಕ್ರವಾರದಂದು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. “ಮುಗ್ಧ ವ್ಯಕ್ತಿಗಳ ಚಾರಿತ್ಯ್ರಹರಣ ಮಾಡಲು ಉದ್ದೇಶಪೂರ್ವಕವಾಗಿ ಸಂಪೂರ್ಣ ಸುಳ್ಳು ಮತ್ತು ಕಲ್ಪಿತ ಮಾಹಿತಿಯನ್ನು ಪ್ರಸಾರ ಮಾಡಲಾಗಿದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 ಎ/500/505 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 45 ಎ ಅಡಿಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿ ಕ್ರಾಸ್‌ಕರೆಂಟ್‌ ವೆಬ್‌ಸೈಟ್‌ ಗುವಾಹಟಿಯಲ್ಲಿ ಹಾಕಲಾಗಿದ್ದ ಹಲವು ಹೋರ್ಡಿಂಗ್‌ಗಳಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಫೋಟೋಗಳನ್ನು ಬಳಸಿರುವುದನ್ನು ಈ ಹಿಂದೆ ಪ್ರಶ್ನಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ವಿವಾದಿತ ಹೋರ್ಡಿಂಗ್ಸ್ ಹೇಗಿತ್ತು?

ಟೋಕಿಯೊದಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದ ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಟ್ ವಿಭಾಗದಲ್ಲಿ ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. ಇದು ಒಲಿಂಪಿಕ್ಸ್‌ನಲ್ಲಿ ಅವರ ಚೊಚ್ಚಲ ಪಂದ್ಯವಾಗಿತ್ತು.

ಆದರೆ ಲವ್ಲಿನಾ ಪದಕ ಗೆಲ್ಲುವ ಮುನ್ನ, ಅವರ ಮುಂಬರುವ ಆಟಗಳಿಗೆ ಶುಭ ಹಾರೈಸುವ ಕೆಲವು ಬ್ಯಾನರ್‌ಗಳನ್ನು ರಸ್ತೆ ಬದಿಗಳಲ್ಲಿ ಹಾಕಲಾಗಿತ್ತು. ಈ ಬ್ಯಾನರ್‌‌ಗಳ ವಿಶೇಷತೆಗಳೇನು ಎಂದರೆ, ಶುಭಹಾರೈಕೆ ಪಡೆಯುತ್ತಿರುವ ಲವ್ಲಿನಾ ಅವರ ಚಿತ್ರದ ಬದಲು ದೊಡ್ಡದಾಗಿ, ಮುಖ್ಯಮಂತ್ರಿ ಮತ್ತು ಸಚಿವರ ಚಿತ್ರಗಳು ಮಾತ್ರ ಕಾಣುತ್ತಿದ್ದವು. ಲವ್ಲಿನಾ ಅವರ ಪೋಟೋಗಳು ಈ ಬ್ಯಾನರ್‌ಗಳಲ್ಲಿ ಇರಲಿಲ್ಲ. ಇದು ಸಾಮಾಜಿಕ ಜಾಲತಾಣದಲ್ಲಿ ಕಿರಣ್ ಮುಜುಂದಾರ್ ಶಾ ಸೇರಿದಂತೆ ಹಲವಾರು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಹೋರ್ಡಿಂಗ್‌‌ನಲ್ಲಿ, “ಟೋಕಿಯೊ ಒಲಿಂಪಿಕ್ 2020 ರ ಪಂದ್ಯಕ್ಕೆ ಅರ್ಹತೆ ಪಡೆದ ಲೊವ್ಲಿನಾ ಬೊರ್ಗೊಹೈನ್ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ನೀವು ಅಸ್ಸಾಂನ ಹೆಮ್ಮೆ” ಎಂದು ಬರೆಯಲಾಗಿದೆ. ಆದರೆ ಅದರಲ್ಲಿ ಲವ್ಲೀನಾ ಅವರ ಫೋಟೋಗೆ ಬದಲಾಗಿ ಸಿಎಂ ಅವರ ದೊಡ್ಡ ಚಿತ್ರಗಳನ್ನು ಬಳಸಲಾಗಿತ್ತು.

ಇದನ್ನೂ ಓದಿ: ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಹೋರ್ಡಿಂಗ್ಸ್‌ನಿಂದ ಅಂತರ ಕಾಯ್ದುಕೊಂಡ ಸಿಎಂ, ಸಚಿವ ಮತ್ತು ಡಿಐಪಿಆರ್!

ತಾನು ಇಂತಹ ಬ್ರ್ಯಾಂಡಿಂಗ್ ಅನ್ನು ಅನುಮೋದಿಸಲಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಈ ನಡುವೆ, ಸಚಿವ ಪಿಜುಶ್ ಹಜಾರಿಕಾ ಅವರು ಕೂಡಾ ವಿವಾದಿತ ಹೋರ್ಡಿಂಗ್‌‌ಗಳಿಗೂ ತನಗೆ ಅಥವಾ ತನ್ನ ಇಲಾಖೆಯಾದ ಡಿಐಪಿಆರ್‌‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಹಾಗಾಗಿ ಕೊನೆಗೂ ಉಳಿಯುವ ಪ್ರಶ್ನೆ ಈ ಹೋರ್ಡಿಂಗ್ ಹಾಕಿದ್ದವರು ಯಾರು? ಅವರಿಗೆ ಬುದ್ದಿ ಹೇಳುವವರು ಯಾರು? ಇದನ್ನು ವರದಿ ಮಾಡಿದ್ದು ತಪ್ಪೆ? ವರದಿ ಮಾಡಿದ್ದಕ್ಕೆ ಪ್ರಕರಣ ದಾಖಲಿಸುವುದು ಸರಿಯೇ? ಎನ್ನುವುದಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...