Homeಮುಖಪುಟಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ ಪದಕ ವಿಜೇತೆ ಲವ್ಲಿನಾ ಬೊರ್ಗೋಹೈನ್‌‌ ಅವರಿಗೆ ಶುಭಾಶಯ ಕೋರಿ ಅಸ್ಸಾಂನಲ್ಲಿ ಹಾಕಲಾಗಿದ್ದ ಹೋರ್ಡಿಂಗ್‌ನಲ್ಲಿ ಅವರ ಚಿತ್ರವೆ ಇಲ್ಲ, ಕೇವಲ ಅಸ್ಸಾಂ ಮುಖ್ಯಮಂತ್ರಿ ಮತು ಕ್ರೀಡಾ ಸಚಿವರ ಚಿತ್ರವನ್ನು ಮಾತ್ರವೆ ಹಾಕಲಾಗಿತ್ತು ಎಂಬ ವಿವಾದವೆದ್ದಿತ್ತು. ಆದರೆ ಇದನ್ನು ಸುದ್ದಿ ಮಾಡಿದ್ದ ಅಸ್ಸಾಂನ ಗುವಾಹಟಿ ಮೂಲದ ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌ಕರೆಂಟ್‌‌’ ವಿರುದ್ದ ಪೊಲೀಸರು, ‘ಫೇಕ್ ಸುದ್ದಿ’ ಪ್ರಸಾರ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ ಪೋರ್ಟಲ್‌ ಮಾಡಿದ್ದ ಸುದ್ದಿಯನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ (ಡಿಐಪಿಆರ್) ವೆಬ್‌ಸೈಟ್ “ಇದು ನಕಲಿ ಸುದ್ದಿ” ಎಂದು ಹೇಳಿತ್ತು. ಇದರ ನಂತರ ಪೊಲೀಸರು ನ್ಯೂಸ್‌ ಪೋರ್ಟಲ್‌ ‘ದಿಕ್ರಾಸ್‌‌ಕರೆಂಟ್‌‌’ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ದೇಶದ ಹೆಮ್ಮೆ ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರೇ ಇಲ್ಲ! – ಹೀಗೊಂದು ರಾಜಕೀಯ ಮೈಲೇಜ್‌!

“ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾದ ಪಿಜುಶ್ ಹಜಾರಿಕಾ ಮತ್ತು ಇಲಾಖೆಯನ್ನು ಸಾರ್ವಜನಿಕರ ದೃಷ್ಟಿಕೋನದಲ್ಲಿ ಕೆಟ್ಟವರಾಗಿ ಬಿಂಬಿಸುವ ಸಲುವಾಗಿ ನಕಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿದೆ” ಎಂದು ಡಿಐಪಿಆರ್ ಹೇಳಿಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿಕ್ರಾಸ್‌ಕರೆಂಟ್ ಹಂಚಿಕೊಂಡ ನಾಲ್ಕು ನಿಮಿಷಗಳ ಕ್ಲಿಪ್ ಅಲ್ಲಿ, “ಹಿಮಂತ ಬಿಸ್ವಾ ಶರ್ಮ ಅವರನ್ನು ಹೊಗಳಲು ಬೇಕಾಗಿ ಪಿಜುಶ್ ಹಜಾರಿಕಾ ಅವರನ್ನು ನೇಮಿಸಲಾಗಿದೆಯೆ?” ಎಂಬ ಶಿರ್ಷಿಕೆಯನ್ನು ನೀಡಲಾಗಿತ್ತು ಎಂದು ಕ್ವಿಂಟ್ ವರದಿ ಮಾಡಿದ್ದು, ಆದಾಗ್ಯೂ, ವೀಡಿಯೊ ಸಧ್ಯಕ್ಕೆ ಡಿಲೀಟ್‌ ಆಗಿದೆ.

“ಸಾಮಾನ್ಯವಾಗಿ ಡಿಐಪಿಆರ್ ಇಂತಹ ಹೋರ್ಡಿಂಗ್‌ಗಳನ್ನು ಹಾಕುತ್ತದೆ. ಒಂದು ವೇಳೆ ಅದನ್ನು ಅವರು ಮಾಡಿದ್ದರೆ ನಾವು ಪ್ರಶ್ನೆಗಳನ್ನು ಎತ್ತಿದ್ದೇವೆ. ಅವರು ಅದನ್ನು ಮಾಡಿಲ್ಲ ಎಂದಾದರೆ, ಅದಕ್ಕೆ ಅನುಮೋದನೆ ನೀಡಿದವರು ಯಾರು? ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾಗಿರುವ ಪಿಜುಶ್ ಹಜಾರಿಕಾ ಅವರನ್ನೂ ನಾವು ಕೇಳಿದ್ದೆವು. ಆದರೆ ಅವರು ಈಗ ಹೋರ್ಡಿಂಗ್‌ಗೆ ನಾವು ಅನುಮೋದನೆ ನೀಡಿಲ್ಲ ಎಂದು ಹೇಳುತ್ತಿದ್ದಾರೆ” ಎಂದು ವೆಬ್‌ಸೈಟ್‌ನ ಸಂಪಾದಕ ಗೌತಮ್ ಗೊಗೊಯ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಬೆನ್ನಿಗೇ ಚೂರಿ ಹಾಕಲು ಸಜ್ಜಾಗಿದ್ದನಾ ಪೋಸ್ಟ್‌ ಕಾರ್ಡ್ ಮಹೇಶ್‌ ಹೆಗ್ಡೆ..

ಇದೀಗ ವೆಬ್‌ಸೈಟ್‌ ವಿರುದ್ಧ ಕೇಸ್ ದಾಖಲಾಗಿದೆ. ವೆಬ್‌ಸೈಟ್‌ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಿ, ಡಿಐಪಿಆರ್ ನಿರ್ದೇಶಕರು ಆಗಸ್ಟ್ 6 ರ ಶುಕ್ರವಾರದಂದು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. “ಮುಗ್ಧ ವ್ಯಕ್ತಿಗಳ ಚಾರಿತ್ಯ್ರಹರಣ ಮಾಡಲು ಉದ್ದೇಶಪೂರ್ವಕವಾಗಿ ಸಂಪೂರ್ಣ ಸುಳ್ಳು ಮತ್ತು ಕಲ್ಪಿತ ಮಾಹಿತಿಯನ್ನು ಪ್ರಸಾರ ಮಾಡಲಾಗಿದೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 ಎ/500/505 (2) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 45 ಎ ಅಡಿಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಿ ಕ್ರಾಸ್‌ಕರೆಂಟ್‌ ವೆಬ್‌ಸೈಟ್‌ ಗುವಾಹಟಿಯಲ್ಲಿ ಹಾಕಲಾಗಿದ್ದ ಹಲವು ಹೋರ್ಡಿಂಗ್‌ಗಳಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಫೋಟೋಗಳನ್ನು ಬಳಸಿರುವುದನ್ನು ಈ ಹಿಂದೆ ಪ್ರಶ್ನಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ವಿವಾದಿತ ಹೋರ್ಡಿಂಗ್ಸ್ ಹೇಗಿತ್ತು?

ಟೋಕಿಯೊದಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದ ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಟ್ ವಿಭಾಗದಲ್ಲಿ ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. ಇದು ಒಲಿಂಪಿಕ್ಸ್‌ನಲ್ಲಿ ಅವರ ಚೊಚ್ಚಲ ಪಂದ್ಯವಾಗಿತ್ತು.

ಆದರೆ ಲವ್ಲಿನಾ ಪದಕ ಗೆಲ್ಲುವ ಮುನ್ನ, ಅವರ ಮುಂಬರುವ ಆಟಗಳಿಗೆ ಶುಭ ಹಾರೈಸುವ ಕೆಲವು ಬ್ಯಾನರ್‌ಗಳನ್ನು ರಸ್ತೆ ಬದಿಗಳಲ್ಲಿ ಹಾಕಲಾಗಿತ್ತು. ಈ ಬ್ಯಾನರ್‌‌ಗಳ ವಿಶೇಷತೆಗಳೇನು ಎಂದರೆ, ಶುಭಹಾರೈಕೆ ಪಡೆಯುತ್ತಿರುವ ಲವ್ಲಿನಾ ಅವರ ಚಿತ್ರದ ಬದಲು ದೊಡ್ಡದಾಗಿ, ಮುಖ್ಯಮಂತ್ರಿ ಮತ್ತು ಸಚಿವರ ಚಿತ್ರಗಳು ಮಾತ್ರ ಕಾಣುತ್ತಿದ್ದವು. ಲವ್ಲಿನಾ ಅವರ ಪೋಟೋಗಳು ಈ ಬ್ಯಾನರ್‌ಗಳಲ್ಲಿ ಇರಲಿಲ್ಲ. ಇದು ಸಾಮಾಜಿಕ ಜಾಲತಾಣದಲ್ಲಿ ಕಿರಣ್ ಮುಜುಂದಾರ್ ಶಾ ಸೇರಿದಂತೆ ಹಲವಾರು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಹೋರ್ಡಿಂಗ್‌‌ನಲ್ಲಿ, “ಟೋಕಿಯೊ ಒಲಿಂಪಿಕ್ 2020 ರ ಪಂದ್ಯಕ್ಕೆ ಅರ್ಹತೆ ಪಡೆದ ಲೊವ್ಲಿನಾ ಬೊರ್ಗೊಹೈನ್ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ನೀವು ಅಸ್ಸಾಂನ ಹೆಮ್ಮೆ” ಎಂದು ಬರೆಯಲಾಗಿದೆ. ಆದರೆ ಅದರಲ್ಲಿ ಲವ್ಲೀನಾ ಅವರ ಫೋಟೋಗೆ ಬದಲಾಗಿ ಸಿಎಂ ಅವರ ದೊಡ್ಡ ಚಿತ್ರಗಳನ್ನು ಬಳಸಲಾಗಿತ್ತು.

ಇದನ್ನೂ ಓದಿ: ಅಸ್ಸಾಂ ಸಿಎಂಗೆ ಗೋಮಾಂಸವನ್ನು ಗಿಫ್ಟ್ ನೀಡುವ ಪೋಸ್ಟ್ ಹಾಕಿದ್ದ ಯುವತಿ ಬಂಧನ

ಹೋರ್ಡಿಂಗ್ಸ್‌ನಿಂದ ಅಂತರ ಕಾಯ್ದುಕೊಂಡ ಸಿಎಂ, ಸಚಿವ ಮತ್ತು ಡಿಐಪಿಆರ್!

ತಾನು ಇಂತಹ ಬ್ರ್ಯಾಂಡಿಂಗ್ ಅನ್ನು ಅನುಮೋದಿಸಲಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಈ ನಡುವೆ, ಸಚಿವ ಪಿಜುಶ್ ಹಜಾರಿಕಾ ಅವರು ಕೂಡಾ ವಿವಾದಿತ ಹೋರ್ಡಿಂಗ್‌‌ಗಳಿಗೂ ತನಗೆ ಅಥವಾ ತನ್ನ ಇಲಾಖೆಯಾದ ಡಿಐಪಿಆರ್‌‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಹಾಗಾಗಿ ಕೊನೆಗೂ ಉಳಿಯುವ ಪ್ರಶ್ನೆ ಈ ಹೋರ್ಡಿಂಗ್ ಹಾಕಿದ್ದವರು ಯಾರು? ಅವರಿಗೆ ಬುದ್ದಿ ಹೇಳುವವರು ಯಾರು? ಇದನ್ನು ವರದಿ ಮಾಡಿದ್ದು ತಪ್ಪೆ? ವರದಿ ಮಾಡಿದ್ದಕ್ಕೆ ಪ್ರಕರಣ ದಾಖಲಿಸುವುದು ಸರಿಯೇ? ಎನ್ನುವುದಾಗಿದೆ.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...