HomeಮುಖಪುಟSC, ST ಮತ್ತು ಈಶಾನ್ಯ ರಾಜ್ಯಗಳಲ್ಲಿ ಕಡಿಮೆ ಅನುದಾನ ಬಳಕೆ: ಕೃಷಿ ಇಲಾಖೆಗೆ ಮಂಜೂರಾದ 44,000...

SC, ST ಮತ್ತು ಈಶಾನ್ಯ ರಾಜ್ಯಗಳಲ್ಲಿ ಕಡಿಮೆ ಅನುದಾನ ಬಳಕೆ: ಕೃಷಿ ಇಲಾಖೆಗೆ ಮಂಜೂರಾದ 44,000 ಕೋಟಿ ರೂ. ಬಳಕೆಯಾಗದೆ ವಾಪಸ್

- Advertisement -
- Advertisement -

ಲೋಕಸಭೆಯಲ್ಲಿ ಸೋಮವಾರ ಮಂಡಿಸಲಾದ ಸಂಸದೀಯ ಸ್ಥಾಯಿ ಸಮಿತಿಯ ವರದಿಯ ಪ್ರಕಾರ,  ”ಕೃಷಿ ಸಚಿವಾಲಯದ ಅಡಿಯಲ್ಲಿ ಬರುವ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು ಕಳೆದ ಮೂರು ವರ್ಷಗಳಲ್ಲಿ ತನ್ನ ಬಜೆಟ್‌ನ 44,015.81 ಕೋಟಿ ರೂ. ಹಂಚಿಕೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ” ಎಂದು ತಿಳಿಸಿದೆ.

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಅನುದಾನದ ಬೇಡಿಕೆಯ (2023-24) ವರದಿಯಲ್ಲಿ, ಪಿ ಸಿ ಗದ್ದಿಗೌಡರ್ ಅವರ ನೇತೃತ್ವದ ಕೃಷಿ, ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಸ್ಥಾಯಿ ಸಮಿತಿಯು ಹಂಚಿಕೆಯಾದ ಹಣವನ್ನು ಸರ್ಕಾರ ಮರಳಿ ಪಡೆಯುವ ಅಭ್ಯಾಸವನ್ನು ಬಿಡಬೇಕು ಎಂದು ಕೇಳಿಕೊಂಡಿದೆ.

“2020-21, 2021-22 ಮತ್ತು 2022-23 (ತಾತ್ಕಾಲಿಕ) ಅವಧಿಯಲ್ಲಿ ಕ್ರಮವಾಗಿ 23,824.54 ಕೋಟಿ, 429.22 ಕೋಟಿ ಮತ್ತು 19,762.05 ಕೋಟಿ ರೂಪಾಯಿ ಮೊತ್ತದ ಹಣವನ್ನು ಹಿಂಪಡೆದಿದೆ ಎಂದು ಇಲಾಖೆಯ ಉತ್ತರದಿಂದ ಸಮಿತಿಯು ಟಿಪ್ಪಣಿಯಲ್ಲಿ ತಿಳಿಸಿದೆ. ಅಂದರೆ ಈ ವರ್ಷಗಳಲ್ಲಿ ಇಲಾಖೆಯಿಂದ ಒಟ್ಟು 44,015.81 ಕೋಟಿ ರೂ. ಹಿಂಪಡೆಯಲಾಗಿದೆ.”

ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದು ಸರಿಯಲ್ಲ: ಕೇಂದ್ರದ ವಿರೋಧ

ಮುಖ್ಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಕಲ್ಯಾಣದ ಉದ್ದೇಶಿತ ಯೋಜನೆಗಳಿಗೆ ಕಡಿಮೆ ಅವಶ್ಯಕತೆ ಇರುವುದರಿಂದ ನಿಧಿಯನ್ನು ಹಿಂಪಡೆಯಲಾಗಿದೆ ಸಚಿವಾಲಯವು ವರದಿಯಲ್ಲಿ ಹೇಳಿದೆ. ಎನ್‌ಇಎಸ್ (ಈಶಾನ್ಯ ರಾಜ್ಯಗಳು), ಎಸ್‌ಸಿಎಸ್‌ಪಿ (ಪರಿಶಿಷ್ಟ ಜಾತಿ ಉಪ ಯೋಜನೆ) ಮತ್ತು ಬುಡಕಟ್ಟು ಪ್ರದೇಶದ ಉಪ ಯೋಜನೆ (ಟಿಎಎಸ್‌ಪಿ) ಘಟಕಗಳ ಅಡಿಯಲ್ಲಿ ಕಡಿಮೆ ಬಳಕೆಯಾಗುವುದರಿಂದ ಹಣವನ್ನು ಹಿಂಪಡೆಯುವುದು ಮುಖ್ಯವಾಗಿದೆ ಎಂದು ಸಮಿತಿಗೆ ತಿಳಿಸಲಾಗಿದೆ” ಎಂದು ಸಚಿವಾಲಯವು ಹೇಳಿದೆ.

ಇನ್ನು ಮುಂದೆ ಸರ್ಕಾರ ನಿಧಿಯನ್ನು ಹಿಂಪಡೆಯುವ ಅಭ್ಯಾಸವನ್ನು ಬಿಡಬೇಕು ಎಂದು ಸಮಿತಿಯು ಭಾವಿಸುತ್ತದೆ, ಇದರಿಂದಾಗಿ ಯೋಜನೆಗಳು ದೇಶದ ಕೆಳಮಟ್ಟದ ಜನರಿಗೂ ತಲುಪುತ್ತವೆ, ಮತ್ತು ಅತ್ಯುತ್ತಮ ರೀತಿಯಲ್ಲಿ ಯೋಜನೆಗಳು ಯಶಸ್ವಿಯಾಗುತ್ತವೆ. ಆದ್ದರಿಂದ, ನಿಧಿಯ ಹಿಂಪಡೆಯುವಿಕೆಗೆ ಕಾರಣವಾಗುವ ಅಂಶಗಳನ್ನು ಗುರುತಿಸಲು ಮತ್ತು ಹಣವನ್ನು ಸಂಪೂರ್ಣ ಮತ್ತು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲು ಇಲಾಖೆಗೆ ಸಮಿತಿಯು ಶಿಫಾರಸು ಮಾಡಿದೆ.

ಕೇಂದ್ರದ ಒಟ್ಟು ಬಜೆಟ್‌ಗೆ ಕೃಷ ಇಲಾಖೆಯ ಶೇಕಡಾವಾರು ಬಜೆಟ್ ಹಂಚಿಕೆಯು 2020-21 ರಲ್ಲಿ 4.41% ರಿಂದ 2023-24 ರಲ್ಲಿ 2.57% ಕ್ಕೆ ಇಳಿದಿದೆ ಎಂದು ವರದಿಯು ಹೇಳುತ್ತದೆ.

2020-21, 2021-22ರ ಅವಧಿಯಲ್ಲಿ ಕೇಂದ್ರ ಸರ್ಕಾರ ಒಟ್ಟು ಬಜೆಟ್‌ನಲ್ಲಿ ಶೇಕಡಾವಾರು ಪ್ರಮಾಣದಲ್ಲಿ ಕೃಷಿ ಇಲಾಖೆಗೆ ನಿಗಧಿಗೊಳಿಸಿದ ಬಜೆಟ್ ಹಂಚಿಕೆ ಪ್ರತಿ ವರ್ಷ ಕಡಿಮೆಯಾಗುತ್ತಿರುವುದನ್ನು ಇಲಾಖೆಯು ಒಪ್ಪಿಕೊಂಡಿದೆ. 2020-21 ಮತ್ತು 2023-24 ಅನುಕ್ರಮವಾಗಿ 4.41%, 3.53%, 3.14 % ಮತ್ತು 2.57% ರಷ್ಟಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...