HomeಮುಖಪುಟSC, ST ಮತ್ತು ಈಶಾನ್ಯ ರಾಜ್ಯಗಳಲ್ಲಿ ಕಡಿಮೆ ಅನುದಾನ ಬಳಕೆ: ಕೃಷಿ ಇಲಾಖೆಗೆ ಮಂಜೂರಾದ 44,000...

SC, ST ಮತ್ತು ಈಶಾನ್ಯ ರಾಜ್ಯಗಳಲ್ಲಿ ಕಡಿಮೆ ಅನುದಾನ ಬಳಕೆ: ಕೃಷಿ ಇಲಾಖೆಗೆ ಮಂಜೂರಾದ 44,000 ಕೋಟಿ ರೂ. ಬಳಕೆಯಾಗದೆ ವಾಪಸ್

- Advertisement -
- Advertisement -

ಲೋಕಸಭೆಯಲ್ಲಿ ಸೋಮವಾರ ಮಂಡಿಸಲಾದ ಸಂಸದೀಯ ಸ್ಥಾಯಿ ಸಮಿತಿಯ ವರದಿಯ ಪ್ರಕಾರ,  ”ಕೃಷಿ ಸಚಿವಾಲಯದ ಅಡಿಯಲ್ಲಿ ಬರುವ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು ಕಳೆದ ಮೂರು ವರ್ಷಗಳಲ್ಲಿ ತನ್ನ ಬಜೆಟ್‌ನ 44,015.81 ಕೋಟಿ ರೂ. ಹಂಚಿಕೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ” ಎಂದು ತಿಳಿಸಿದೆ.

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಅನುದಾನದ ಬೇಡಿಕೆಯ (2023-24) ವರದಿಯಲ್ಲಿ, ಪಿ ಸಿ ಗದ್ದಿಗೌಡರ್ ಅವರ ನೇತೃತ್ವದ ಕೃಷಿ, ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಸ್ಥಾಯಿ ಸಮಿತಿಯು ಹಂಚಿಕೆಯಾದ ಹಣವನ್ನು ಸರ್ಕಾರ ಮರಳಿ ಪಡೆಯುವ ಅಭ್ಯಾಸವನ್ನು ಬಿಡಬೇಕು ಎಂದು ಕೇಳಿಕೊಂಡಿದೆ.

“2020-21, 2021-22 ಮತ್ತು 2022-23 (ತಾತ್ಕಾಲಿಕ) ಅವಧಿಯಲ್ಲಿ ಕ್ರಮವಾಗಿ 23,824.54 ಕೋಟಿ, 429.22 ಕೋಟಿ ಮತ್ತು 19,762.05 ಕೋಟಿ ರೂಪಾಯಿ ಮೊತ್ತದ ಹಣವನ್ನು ಹಿಂಪಡೆದಿದೆ ಎಂದು ಇಲಾಖೆಯ ಉತ್ತರದಿಂದ ಸಮಿತಿಯು ಟಿಪ್ಪಣಿಯಲ್ಲಿ ತಿಳಿಸಿದೆ. ಅಂದರೆ ಈ ವರ್ಷಗಳಲ್ಲಿ ಇಲಾಖೆಯಿಂದ ಒಟ್ಟು 44,015.81 ಕೋಟಿ ರೂ. ಹಿಂಪಡೆಯಲಾಗಿದೆ.”

ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದು ಸರಿಯಲ್ಲ: ಕೇಂದ್ರದ ವಿರೋಧ

ಮುಖ್ಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಕಲ್ಯಾಣದ ಉದ್ದೇಶಿತ ಯೋಜನೆಗಳಿಗೆ ಕಡಿಮೆ ಅವಶ್ಯಕತೆ ಇರುವುದರಿಂದ ನಿಧಿಯನ್ನು ಹಿಂಪಡೆಯಲಾಗಿದೆ ಸಚಿವಾಲಯವು ವರದಿಯಲ್ಲಿ ಹೇಳಿದೆ. ಎನ್‌ಇಎಸ್ (ಈಶಾನ್ಯ ರಾಜ್ಯಗಳು), ಎಸ್‌ಸಿಎಸ್‌ಪಿ (ಪರಿಶಿಷ್ಟ ಜಾತಿ ಉಪ ಯೋಜನೆ) ಮತ್ತು ಬುಡಕಟ್ಟು ಪ್ರದೇಶದ ಉಪ ಯೋಜನೆ (ಟಿಎಎಸ್‌ಪಿ) ಘಟಕಗಳ ಅಡಿಯಲ್ಲಿ ಕಡಿಮೆ ಬಳಕೆಯಾಗುವುದರಿಂದ ಹಣವನ್ನು ಹಿಂಪಡೆಯುವುದು ಮುಖ್ಯವಾಗಿದೆ ಎಂದು ಸಮಿತಿಗೆ ತಿಳಿಸಲಾಗಿದೆ” ಎಂದು ಸಚಿವಾಲಯವು ಹೇಳಿದೆ.

ಇನ್ನು ಮುಂದೆ ಸರ್ಕಾರ ನಿಧಿಯನ್ನು ಹಿಂಪಡೆಯುವ ಅಭ್ಯಾಸವನ್ನು ಬಿಡಬೇಕು ಎಂದು ಸಮಿತಿಯು ಭಾವಿಸುತ್ತದೆ, ಇದರಿಂದಾಗಿ ಯೋಜನೆಗಳು ದೇಶದ ಕೆಳಮಟ್ಟದ ಜನರಿಗೂ ತಲುಪುತ್ತವೆ, ಮತ್ತು ಅತ್ಯುತ್ತಮ ರೀತಿಯಲ್ಲಿ ಯೋಜನೆಗಳು ಯಶಸ್ವಿಯಾಗುತ್ತವೆ. ಆದ್ದರಿಂದ, ನಿಧಿಯ ಹಿಂಪಡೆಯುವಿಕೆಗೆ ಕಾರಣವಾಗುವ ಅಂಶಗಳನ್ನು ಗುರುತಿಸಲು ಮತ್ತು ಹಣವನ್ನು ಸಂಪೂರ್ಣ ಮತ್ತು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲು ಇಲಾಖೆಗೆ ಸಮಿತಿಯು ಶಿಫಾರಸು ಮಾಡಿದೆ.

ಕೇಂದ್ರದ ಒಟ್ಟು ಬಜೆಟ್‌ಗೆ ಕೃಷ ಇಲಾಖೆಯ ಶೇಕಡಾವಾರು ಬಜೆಟ್ ಹಂಚಿಕೆಯು 2020-21 ರಲ್ಲಿ 4.41% ರಿಂದ 2023-24 ರಲ್ಲಿ 2.57% ಕ್ಕೆ ಇಳಿದಿದೆ ಎಂದು ವರದಿಯು ಹೇಳುತ್ತದೆ.

2020-21, 2021-22ರ ಅವಧಿಯಲ್ಲಿ ಕೇಂದ್ರ ಸರ್ಕಾರ ಒಟ್ಟು ಬಜೆಟ್‌ನಲ್ಲಿ ಶೇಕಡಾವಾರು ಪ್ರಮಾಣದಲ್ಲಿ ಕೃಷಿ ಇಲಾಖೆಗೆ ನಿಗಧಿಗೊಳಿಸಿದ ಬಜೆಟ್ ಹಂಚಿಕೆ ಪ್ರತಿ ವರ್ಷ ಕಡಿಮೆಯಾಗುತ್ತಿರುವುದನ್ನು ಇಲಾಖೆಯು ಒಪ್ಪಿಕೊಂಡಿದೆ. 2020-21 ಮತ್ತು 2023-24 ಅನುಕ್ರಮವಾಗಿ 4.41%, 3.53%, 3.14 % ಮತ್ತು 2.57% ರಷ್ಟಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...