Homeಅಂತರಾಷ್ಟ್ರೀಯಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

ಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

- Advertisement -
- Advertisement -

ಕೆಲವು ಜನರು ಏಕೆ ಪೂರ್ವಾಗ್ರಹ ಪೀಡಿತರಾಗಿದ್ದಾರೆ ಎಂಬುದಕ್ಕೆ ಸಂಶೋಧಕರು ಸಂಭಾವ್ಯ ವಿವರಣೆಯನ್ನು ಕಂಡುಕೊಂಡಿದ್ದಾರೆ. ಅದೆಂದರೆ ಅವರು ಕಡಿಮೆ ಬುದ್ಧಿವಂತರಾಗಿರುತ್ತಾರೆ.

ಕಡಿಮೆ ಸಾಮಾನ್ಯ ಬುದ್ಧಿವಂತಿಕೆ ಹೊಂದಿರುವ ಮಕ್ಕಳು ವಯಸ್ಕರಾದಂತೆ ಪೂರ್ವಾಗ್ರಹ ಪೀಡಿತರಾಗುತ್ತಾರೆ ಎಂದು ಬ್ರಾಕ್ ವಿಶ್ವವಿದ್ಯಾಲಯದ ಅಧ್ಯಯನ ವರದಿ ಹೇಳಿದೆ.

ಸೈಕಲಾಜಿಕಲ್ ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಎರಡು ದೊಡ್ಡ-ಪ್ರಮಾಣದ ಬ್ರಿಟಿಷ್ ಅಧ್ಯಯನಗಳ ದತ್ತಾಂಶವನ್ನು ಪರಿಶೀಲಿಸಿದೆ. ಬಾಲ್ಯದಲ್ಲಿ ಕಡಿಮೆ ಬುದ್ದಿಮತೆ ಅಂಕಗಳನ್ನು ಹೊಂದಿದ ಮಕ್ಕಳು ಪ್ರೌಢಾವಸ್ಥೆಯಲ್ಲಿ ಹೆಚ್ಚಿನ ವರ್ಣಭೇದ ನೀತಿಯ ಪ್ರತಿಪಾದಕರಾಗುತ್ತಾರೆ ಎಂದು ಸಂಶೋಧಕರು ವಿವರಿಸಿದ್ದಾರೆ. ಮುಂದೆ ಅವರು ಬಲಪಂಥೀಯ ಸಿದ್ಧಾಂತದತ್ತ ಆಕರ್ಷಿತಗೊಳ್ಳುತ್ತಾರೆ ಎಂಬ ವಿವಾದಾತ್ಮಕ ಅಂಶವನ್ನು ಸಂಶೋಧಕರು  ವಿವರಿಸುತ್ತಾರೆ.

ಯು.ಎಸ್. ಅಧ್ಯಯನದ ದತ್ತಾಂಶದ ದ್ವಿತೀಯ ವಿಶ್ಲೇಷಣೆಯು ಕಳಪೆ ಅಮೂರ್ತ-ತಾರ್ಕಿಕ ಕೌಶಲ್ಯ ಹೊಂದಿರುವವರು ಸಲಿಂಗಕಾಮ ವಿರೋಧಿ ಪೂರ್ವಾಗ್ರಹವನ್ನು ಹೊಂದುವ ಸಾಧ್ಯತೆಯಿದೆ ಎಂದು ತೋರಿಸಿದೆ. ಅವರು ಭಾಗಶಃ ಸರ್ವಾಧಿಕಾರಿ ವರ್ತನೆಗಳೊಂದಿಗೆ ಸಂಬಂಧ ಹೊಂದಿರುತ್ತಾರೆ ಎಂದಿದೆ.

ಅಧ್ಯಯನದ ಫಲಿತಾಂಶಗಳು ಒಂದು ಕೆಟ್ಟ ಚಕ್ರವನ್ನು ಸೂಚಿಸುತ್ತವೆ ಎಂದು ಮುಖ್ಯ ಸಂಶೋಧಕ ಗಾರ್ಡನ್ ಹಾಡ್ಸನ್ ಲೈವ್ ಸೈನ್ಸ್‌ ಪತ್ರಿಕೆಗೆ ತಿಳಿಸಿದ್ದಾರೆ. ಕಡಿಮೆ ಬುದ್ಧಿವಂತಿಕೆಯಿರುವ ಜನರು ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗುತ್ತಾರೆ. ಪ್ರತಿಯಾಗಿ, ಆ ಸಿದ್ಧಾಂತಗಳು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು ಎಂದಿದ್ದಾರೆ.

“ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳು ರಚನೆಯಲ್ಲಿ ಶ್ರೇಣೀಕರಣವನ್ನು ನೀಡಲು ಒಲವು ತೋರುತ್ತವೆ” ಎಂದು ಅವರು ಹೇಳಿದ್ದಾರೆ. “ದುರದೃಷ್ಟವಶಾತ್, ಈ ಹಲವು ಸಂಪ್ರದಾಯವಾದಿ ಅಂಶಗಳು ಪೂರ್ವಾಗ್ರಹಕ್ಕೆ ಕಾರಣವಾಗಬಹುದು.” ಇದು ಕಡಿಮೆ ಬುದ್ಧಿವಂತಿಕೆ ಇರುವವರು ಬಲ ಸಿದ್ದಾಂತದ ಕಡೆಗೆ ಆಕರ್ಷಿತರಾಗಬಹುದು ಎಂದು ವಿವರಿಸಿದ್ದಾರೆ.

ಕಡಿಮೆ ಬುದ್ಧಿವಂತಿಕೆಯಿರುವ ಜನರು ಇತರ ಜನಾಂಗಗಳು ಮತ್ತು ಗುಂಪುಗಳೊಂದಿಗೆ ಕಡಿಮೆ ಸಂಪರ್ಕವನ್ನು ಹೊಂದಿರುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇತರ ಗುಂಪುಗಳೊಂದಿಗೆ ಅವರಿಗೆ ಸಂವಹನ ನಡೆಸುವುದು ಅರಿವಿನ ಕೊರತೆಯಿಂದಾಗಿ ಮಾನಸಿಕವಾಗಿ ಸವಾಲಿನ ಕೆಲಸವಾಗಿರುತ್ತದೆ.

ಸಂಶೋಧನೆಗಳ ಪ್ರಕಾರ ಎಲ್ಲಾ ಉದಾರವಾದಿಗಳು ಬುದ್ದಿವಂತರು ಮತ್ತು ಎಲ್ಲಾ ಸಂಪ್ರದಾಯವಾದಿಗಳು ಮೂರ್ಖರು ಎಂದು ಅರ್ಥವಲ್ಲ ಎಂದು ಡಾ. ಹಾಡ್ಸನ್ ವಿವರಿಸಿದ್ದಾರೆ. “ಅತ್ಯಂತ ಬುದ್ದಿವಂತರಾದ ಸಂಪ್ರದಾಯವಾದಿಗಳು ಮತ್ತು ಅಷ್ಟು ಬುದ್ದಿವಂತರಲ್ಲದ ಉದಾರವಾದಿಗಳ ಅನೇಕ ಉದಾಹರಣೆಗಳಿವೆ. ಮತ್ತು ಬಹಳ ತತ್ವಬದ್ಧ ಸಂಪ್ರದಾಯವಾದಿಗಳು ಮತ್ತು ಅಸಹಿಷ್ಣು ಉದಾರವಾದಿಗಳ ಅನೇಕ ಉದಾಹರಣೆಗಳು ಸಹ ಅಲ್ಲಲ್ಲಿ ಕಂಡುಬರುತ್ತವೆ ಎಂದು ಹೇಳಿದ್ದಾರೆ. ಆದರೆ ಪೂರ್ಣಜನರನ್ನು ಗಮನದಲ್ಲಿಟ್ಟುಕೊಂಡು ಈ ಸಂಶೋಧನೆ ನಡೆದಿದೆ ಎಂದಿದಾರೆ.

ಈಗ ನಿಮ್ಮ ನಿಮ್ಮ ಬುದ್ದಿಮತ್ತೆ ಮತ್ತು ನೀವು ಪ್ರತಿನಿಧಿಸುವ ರಾಜಕೀಯವನ್ನು ತಾಳೆ ನೋಡಿಕೊಳ್ಳಿ.

ಮೂಲ: ದಿ ಗ್ಲೋಬ್‌ ಅಂಡ್‌ ಮೈಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...