Homeಅಂತರಾಷ್ಟ್ರೀಯಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

ಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

- Advertisement -
- Advertisement -

ಕೆಲವು ಜನರು ಏಕೆ ಪೂರ್ವಾಗ್ರಹ ಪೀಡಿತರಾಗಿದ್ದಾರೆ ಎಂಬುದಕ್ಕೆ ಸಂಶೋಧಕರು ಸಂಭಾವ್ಯ ವಿವರಣೆಯನ್ನು ಕಂಡುಕೊಂಡಿದ್ದಾರೆ. ಅದೆಂದರೆ ಅವರು ಕಡಿಮೆ ಬುದ್ಧಿವಂತರಾಗಿರುತ್ತಾರೆ.

ಕಡಿಮೆ ಸಾಮಾನ್ಯ ಬುದ್ಧಿವಂತಿಕೆ ಹೊಂದಿರುವ ಮಕ್ಕಳು ವಯಸ್ಕರಾದಂತೆ ಪೂರ್ವಾಗ್ರಹ ಪೀಡಿತರಾಗುತ್ತಾರೆ ಎಂದು ಬ್ರಾಕ್ ವಿಶ್ವವಿದ್ಯಾಲಯದ ಅಧ್ಯಯನ ವರದಿ ಹೇಳಿದೆ.

ಸೈಕಲಾಜಿಕಲ್ ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಎರಡು ದೊಡ್ಡ-ಪ್ರಮಾಣದ ಬ್ರಿಟಿಷ್ ಅಧ್ಯಯನಗಳ ದತ್ತಾಂಶವನ್ನು ಪರಿಶೀಲಿಸಿದೆ. ಬಾಲ್ಯದಲ್ಲಿ ಕಡಿಮೆ ಬುದ್ದಿಮತೆ ಅಂಕಗಳನ್ನು ಹೊಂದಿದ ಮಕ್ಕಳು ಪ್ರೌಢಾವಸ್ಥೆಯಲ್ಲಿ ಹೆಚ್ಚಿನ ವರ್ಣಭೇದ ನೀತಿಯ ಪ್ರತಿಪಾದಕರಾಗುತ್ತಾರೆ ಎಂದು ಸಂಶೋಧಕರು ವಿವರಿಸಿದ್ದಾರೆ. ಮುಂದೆ ಅವರು ಬಲಪಂಥೀಯ ಸಿದ್ಧಾಂತದತ್ತ ಆಕರ್ಷಿತಗೊಳ್ಳುತ್ತಾರೆ ಎಂಬ ವಿವಾದಾತ್ಮಕ ಅಂಶವನ್ನು ಸಂಶೋಧಕರು  ವಿವರಿಸುತ್ತಾರೆ.

ಯು.ಎಸ್. ಅಧ್ಯಯನದ ದತ್ತಾಂಶದ ದ್ವಿತೀಯ ವಿಶ್ಲೇಷಣೆಯು ಕಳಪೆ ಅಮೂರ್ತ-ತಾರ್ಕಿಕ ಕೌಶಲ್ಯ ಹೊಂದಿರುವವರು ಸಲಿಂಗಕಾಮ ವಿರೋಧಿ ಪೂರ್ವಾಗ್ರಹವನ್ನು ಹೊಂದುವ ಸಾಧ್ಯತೆಯಿದೆ ಎಂದು ತೋರಿಸಿದೆ. ಅವರು ಭಾಗಶಃ ಸರ್ವಾಧಿಕಾರಿ ವರ್ತನೆಗಳೊಂದಿಗೆ ಸಂಬಂಧ ಹೊಂದಿರುತ್ತಾರೆ ಎಂದಿದೆ.

ಅಧ್ಯಯನದ ಫಲಿತಾಂಶಗಳು ಒಂದು ಕೆಟ್ಟ ಚಕ್ರವನ್ನು ಸೂಚಿಸುತ್ತವೆ ಎಂದು ಮುಖ್ಯ ಸಂಶೋಧಕ ಗಾರ್ಡನ್ ಹಾಡ್ಸನ್ ಲೈವ್ ಸೈನ್ಸ್‌ ಪತ್ರಿಕೆಗೆ ತಿಳಿಸಿದ್ದಾರೆ. ಕಡಿಮೆ ಬುದ್ಧಿವಂತಿಕೆಯಿರುವ ಜನರು ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗುತ್ತಾರೆ. ಪ್ರತಿಯಾಗಿ, ಆ ಸಿದ್ಧಾಂತಗಳು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು ಎಂದಿದ್ದಾರೆ.

“ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳು ರಚನೆಯಲ್ಲಿ ಶ್ರೇಣೀಕರಣವನ್ನು ನೀಡಲು ಒಲವು ತೋರುತ್ತವೆ” ಎಂದು ಅವರು ಹೇಳಿದ್ದಾರೆ. “ದುರದೃಷ್ಟವಶಾತ್, ಈ ಹಲವು ಸಂಪ್ರದಾಯವಾದಿ ಅಂಶಗಳು ಪೂರ್ವಾಗ್ರಹಕ್ಕೆ ಕಾರಣವಾಗಬಹುದು.” ಇದು ಕಡಿಮೆ ಬುದ್ಧಿವಂತಿಕೆ ಇರುವವರು ಬಲ ಸಿದ್ದಾಂತದ ಕಡೆಗೆ ಆಕರ್ಷಿತರಾಗಬಹುದು ಎಂದು ವಿವರಿಸಿದ್ದಾರೆ.

ಕಡಿಮೆ ಬುದ್ಧಿವಂತಿಕೆಯಿರುವ ಜನರು ಇತರ ಜನಾಂಗಗಳು ಮತ್ತು ಗುಂಪುಗಳೊಂದಿಗೆ ಕಡಿಮೆ ಸಂಪರ್ಕವನ್ನು ಹೊಂದಿರುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇತರ ಗುಂಪುಗಳೊಂದಿಗೆ ಅವರಿಗೆ ಸಂವಹನ ನಡೆಸುವುದು ಅರಿವಿನ ಕೊರತೆಯಿಂದಾಗಿ ಮಾನಸಿಕವಾಗಿ ಸವಾಲಿನ ಕೆಲಸವಾಗಿರುತ್ತದೆ.

ಸಂಶೋಧನೆಗಳ ಪ್ರಕಾರ ಎಲ್ಲಾ ಉದಾರವಾದಿಗಳು ಬುದ್ದಿವಂತರು ಮತ್ತು ಎಲ್ಲಾ ಸಂಪ್ರದಾಯವಾದಿಗಳು ಮೂರ್ಖರು ಎಂದು ಅರ್ಥವಲ್ಲ ಎಂದು ಡಾ. ಹಾಡ್ಸನ್ ವಿವರಿಸಿದ್ದಾರೆ. “ಅತ್ಯಂತ ಬುದ್ದಿವಂತರಾದ ಸಂಪ್ರದಾಯವಾದಿಗಳು ಮತ್ತು ಅಷ್ಟು ಬುದ್ದಿವಂತರಲ್ಲದ ಉದಾರವಾದಿಗಳ ಅನೇಕ ಉದಾಹರಣೆಗಳಿವೆ. ಮತ್ತು ಬಹಳ ತತ್ವಬದ್ಧ ಸಂಪ್ರದಾಯವಾದಿಗಳು ಮತ್ತು ಅಸಹಿಷ್ಣು ಉದಾರವಾದಿಗಳ ಅನೇಕ ಉದಾಹರಣೆಗಳು ಸಹ ಅಲ್ಲಲ್ಲಿ ಕಂಡುಬರುತ್ತವೆ ಎಂದು ಹೇಳಿದ್ದಾರೆ. ಆದರೆ ಪೂರ್ಣಜನರನ್ನು ಗಮನದಲ್ಲಿಟ್ಟುಕೊಂಡು ಈ ಸಂಶೋಧನೆ ನಡೆದಿದೆ ಎಂದಿದಾರೆ.

ಈಗ ನಿಮ್ಮ ನಿಮ್ಮ ಬುದ್ದಿಮತ್ತೆ ಮತ್ತು ನೀವು ಪ್ರತಿನಿಧಿಸುವ ರಾಜಕೀಯವನ್ನು ತಾಳೆ ನೋಡಿಕೊಳ್ಳಿ.

ಮೂಲ: ದಿ ಗ್ಲೋಬ್‌ ಅಂಡ್‌ ಮೈಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...