Homeಅಂತರಾಷ್ಟ್ರೀಯಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

ಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

- Advertisement -
- Advertisement -

ಕೆಲವು ಜನರು ಏಕೆ ಪೂರ್ವಾಗ್ರಹ ಪೀಡಿತರಾಗಿದ್ದಾರೆ ಎಂಬುದಕ್ಕೆ ಸಂಶೋಧಕರು ಸಂಭಾವ್ಯ ವಿವರಣೆಯನ್ನು ಕಂಡುಕೊಂಡಿದ್ದಾರೆ. ಅದೆಂದರೆ ಅವರು ಕಡಿಮೆ ಬುದ್ಧಿವಂತರಾಗಿರುತ್ತಾರೆ.

ಕಡಿಮೆ ಸಾಮಾನ್ಯ ಬುದ್ಧಿವಂತಿಕೆ ಹೊಂದಿರುವ ಮಕ್ಕಳು ವಯಸ್ಕರಾದಂತೆ ಪೂರ್ವಾಗ್ರಹ ಪೀಡಿತರಾಗುತ್ತಾರೆ ಎಂದು ಬ್ರಾಕ್ ವಿಶ್ವವಿದ್ಯಾಲಯದ ಅಧ್ಯಯನ ವರದಿ ಹೇಳಿದೆ.

ಸೈಕಲಾಜಿಕಲ್ ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಎರಡು ದೊಡ್ಡ-ಪ್ರಮಾಣದ ಬ್ರಿಟಿಷ್ ಅಧ್ಯಯನಗಳ ದತ್ತಾಂಶವನ್ನು ಪರಿಶೀಲಿಸಿದೆ. ಬಾಲ್ಯದಲ್ಲಿ ಕಡಿಮೆ ಬುದ್ದಿಮತೆ ಅಂಕಗಳನ್ನು ಹೊಂದಿದ ಮಕ್ಕಳು ಪ್ರೌಢಾವಸ್ಥೆಯಲ್ಲಿ ಹೆಚ್ಚಿನ ವರ್ಣಭೇದ ನೀತಿಯ ಪ್ರತಿಪಾದಕರಾಗುತ್ತಾರೆ ಎಂದು ಸಂಶೋಧಕರು ವಿವರಿಸಿದ್ದಾರೆ. ಮುಂದೆ ಅವರು ಬಲಪಂಥೀಯ ಸಿದ್ಧಾಂತದತ್ತ ಆಕರ್ಷಿತಗೊಳ್ಳುತ್ತಾರೆ ಎಂಬ ವಿವಾದಾತ್ಮಕ ಅಂಶವನ್ನು ಸಂಶೋಧಕರು  ವಿವರಿಸುತ್ತಾರೆ.

ಯು.ಎಸ್. ಅಧ್ಯಯನದ ದತ್ತಾಂಶದ ದ್ವಿತೀಯ ವಿಶ್ಲೇಷಣೆಯು ಕಳಪೆ ಅಮೂರ್ತ-ತಾರ್ಕಿಕ ಕೌಶಲ್ಯ ಹೊಂದಿರುವವರು ಸಲಿಂಗಕಾಮ ವಿರೋಧಿ ಪೂರ್ವಾಗ್ರಹವನ್ನು ಹೊಂದುವ ಸಾಧ್ಯತೆಯಿದೆ ಎಂದು ತೋರಿಸಿದೆ. ಅವರು ಭಾಗಶಃ ಸರ್ವಾಧಿಕಾರಿ ವರ್ತನೆಗಳೊಂದಿಗೆ ಸಂಬಂಧ ಹೊಂದಿರುತ್ತಾರೆ ಎಂದಿದೆ.

ಅಧ್ಯಯನದ ಫಲಿತಾಂಶಗಳು ಒಂದು ಕೆಟ್ಟ ಚಕ್ರವನ್ನು ಸೂಚಿಸುತ್ತವೆ ಎಂದು ಮುಖ್ಯ ಸಂಶೋಧಕ ಗಾರ್ಡನ್ ಹಾಡ್ಸನ್ ಲೈವ್ ಸೈನ್ಸ್‌ ಪತ್ರಿಕೆಗೆ ತಿಳಿಸಿದ್ದಾರೆ. ಕಡಿಮೆ ಬುದ್ಧಿವಂತಿಕೆಯಿರುವ ಜನರು ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗುತ್ತಾರೆ. ಪ್ರತಿಯಾಗಿ, ಆ ಸಿದ್ಧಾಂತಗಳು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು ಎಂದಿದ್ದಾರೆ.

“ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳು ರಚನೆಯಲ್ಲಿ ಶ್ರೇಣೀಕರಣವನ್ನು ನೀಡಲು ಒಲವು ತೋರುತ್ತವೆ” ಎಂದು ಅವರು ಹೇಳಿದ್ದಾರೆ. “ದುರದೃಷ್ಟವಶಾತ್, ಈ ಹಲವು ಸಂಪ್ರದಾಯವಾದಿ ಅಂಶಗಳು ಪೂರ್ವಾಗ್ರಹಕ್ಕೆ ಕಾರಣವಾಗಬಹುದು.” ಇದು ಕಡಿಮೆ ಬುದ್ಧಿವಂತಿಕೆ ಇರುವವರು ಬಲ ಸಿದ್ದಾಂತದ ಕಡೆಗೆ ಆಕರ್ಷಿತರಾಗಬಹುದು ಎಂದು ವಿವರಿಸಿದ್ದಾರೆ.

ಕಡಿಮೆ ಬುದ್ಧಿವಂತಿಕೆಯಿರುವ ಜನರು ಇತರ ಜನಾಂಗಗಳು ಮತ್ತು ಗುಂಪುಗಳೊಂದಿಗೆ ಕಡಿಮೆ ಸಂಪರ್ಕವನ್ನು ಹೊಂದಿರುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇತರ ಗುಂಪುಗಳೊಂದಿಗೆ ಅವರಿಗೆ ಸಂವಹನ ನಡೆಸುವುದು ಅರಿವಿನ ಕೊರತೆಯಿಂದಾಗಿ ಮಾನಸಿಕವಾಗಿ ಸವಾಲಿನ ಕೆಲಸವಾಗಿರುತ್ತದೆ.

ಸಂಶೋಧನೆಗಳ ಪ್ರಕಾರ ಎಲ್ಲಾ ಉದಾರವಾದಿಗಳು ಬುದ್ದಿವಂತರು ಮತ್ತು ಎಲ್ಲಾ ಸಂಪ್ರದಾಯವಾದಿಗಳು ಮೂರ್ಖರು ಎಂದು ಅರ್ಥವಲ್ಲ ಎಂದು ಡಾ. ಹಾಡ್ಸನ್ ವಿವರಿಸಿದ್ದಾರೆ. “ಅತ್ಯಂತ ಬುದ್ದಿವಂತರಾದ ಸಂಪ್ರದಾಯವಾದಿಗಳು ಮತ್ತು ಅಷ್ಟು ಬುದ್ದಿವಂತರಲ್ಲದ ಉದಾರವಾದಿಗಳ ಅನೇಕ ಉದಾಹರಣೆಗಳಿವೆ. ಮತ್ತು ಬಹಳ ತತ್ವಬದ್ಧ ಸಂಪ್ರದಾಯವಾದಿಗಳು ಮತ್ತು ಅಸಹಿಷ್ಣು ಉದಾರವಾದಿಗಳ ಅನೇಕ ಉದಾಹರಣೆಗಳು ಸಹ ಅಲ್ಲಲ್ಲಿ ಕಂಡುಬರುತ್ತವೆ ಎಂದು ಹೇಳಿದ್ದಾರೆ. ಆದರೆ ಪೂರ್ಣಜನರನ್ನು ಗಮನದಲ್ಲಿಟ್ಟುಕೊಂಡು ಈ ಸಂಶೋಧನೆ ನಡೆದಿದೆ ಎಂದಿದಾರೆ.

ಈಗ ನಿಮ್ಮ ನಿಮ್ಮ ಬುದ್ದಿಮತ್ತೆ ಮತ್ತು ನೀವು ಪ್ರತಿನಿಧಿಸುವ ರಾಜಕೀಯವನ್ನು ತಾಳೆ ನೋಡಿಕೊಳ್ಳಿ.

ಮೂಲ: ದಿ ಗ್ಲೋಬ್‌ ಅಂಡ್‌ ಮೈಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...