Homeಅಂತರಾಷ್ಟ್ರೀಯಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

ಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

- Advertisement -
- Advertisement -

ಕೆಲವು ಜನರು ಏಕೆ ಪೂರ್ವಾಗ್ರಹ ಪೀಡಿತರಾಗಿದ್ದಾರೆ ಎಂಬುದಕ್ಕೆ ಸಂಶೋಧಕರು ಸಂಭಾವ್ಯ ವಿವರಣೆಯನ್ನು ಕಂಡುಕೊಂಡಿದ್ದಾರೆ. ಅದೆಂದರೆ ಅವರು ಕಡಿಮೆ ಬುದ್ಧಿವಂತರಾಗಿರುತ್ತಾರೆ.

ಕಡಿಮೆ ಸಾಮಾನ್ಯ ಬುದ್ಧಿವಂತಿಕೆ ಹೊಂದಿರುವ ಮಕ್ಕಳು ವಯಸ್ಕರಾದಂತೆ ಪೂರ್ವಾಗ್ರಹ ಪೀಡಿತರಾಗುತ್ತಾರೆ ಎಂದು ಬ್ರಾಕ್ ವಿಶ್ವವಿದ್ಯಾಲಯದ ಅಧ್ಯಯನ ವರದಿ ಹೇಳಿದೆ.

ಸೈಕಲಾಜಿಕಲ್ ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಎರಡು ದೊಡ್ಡ-ಪ್ರಮಾಣದ ಬ್ರಿಟಿಷ್ ಅಧ್ಯಯನಗಳ ದತ್ತಾಂಶವನ್ನು ಪರಿಶೀಲಿಸಿದೆ. ಬಾಲ್ಯದಲ್ಲಿ ಕಡಿಮೆ ಬುದ್ದಿಮತೆ ಅಂಕಗಳನ್ನು ಹೊಂದಿದ ಮಕ್ಕಳು ಪ್ರೌಢಾವಸ್ಥೆಯಲ್ಲಿ ಹೆಚ್ಚಿನ ವರ್ಣಭೇದ ನೀತಿಯ ಪ್ರತಿಪಾದಕರಾಗುತ್ತಾರೆ ಎಂದು ಸಂಶೋಧಕರು ವಿವರಿಸಿದ್ದಾರೆ. ಮುಂದೆ ಅವರು ಬಲಪಂಥೀಯ ಸಿದ್ಧಾಂತದತ್ತ ಆಕರ್ಷಿತಗೊಳ್ಳುತ್ತಾರೆ ಎಂಬ ವಿವಾದಾತ್ಮಕ ಅಂಶವನ್ನು ಸಂಶೋಧಕರು  ವಿವರಿಸುತ್ತಾರೆ.

ಯು.ಎಸ್. ಅಧ್ಯಯನದ ದತ್ತಾಂಶದ ದ್ವಿತೀಯ ವಿಶ್ಲೇಷಣೆಯು ಕಳಪೆ ಅಮೂರ್ತ-ತಾರ್ಕಿಕ ಕೌಶಲ್ಯ ಹೊಂದಿರುವವರು ಸಲಿಂಗಕಾಮ ವಿರೋಧಿ ಪೂರ್ವಾಗ್ರಹವನ್ನು ಹೊಂದುವ ಸಾಧ್ಯತೆಯಿದೆ ಎಂದು ತೋರಿಸಿದೆ. ಅವರು ಭಾಗಶಃ ಸರ್ವಾಧಿಕಾರಿ ವರ್ತನೆಗಳೊಂದಿಗೆ ಸಂಬಂಧ ಹೊಂದಿರುತ್ತಾರೆ ಎಂದಿದೆ.

ಅಧ್ಯಯನದ ಫಲಿತಾಂಶಗಳು ಒಂದು ಕೆಟ್ಟ ಚಕ್ರವನ್ನು ಸೂಚಿಸುತ್ತವೆ ಎಂದು ಮುಖ್ಯ ಸಂಶೋಧಕ ಗಾರ್ಡನ್ ಹಾಡ್ಸನ್ ಲೈವ್ ಸೈನ್ಸ್‌ ಪತ್ರಿಕೆಗೆ ತಿಳಿಸಿದ್ದಾರೆ. ಕಡಿಮೆ ಬುದ್ಧಿವಂತಿಕೆಯಿರುವ ಜನರು ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗುತ್ತಾರೆ. ಪ್ರತಿಯಾಗಿ, ಆ ಸಿದ್ಧಾಂತಗಳು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು ಎಂದಿದ್ದಾರೆ.

“ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳು ರಚನೆಯಲ್ಲಿ ಶ್ರೇಣೀಕರಣವನ್ನು ನೀಡಲು ಒಲವು ತೋರುತ್ತವೆ” ಎಂದು ಅವರು ಹೇಳಿದ್ದಾರೆ. “ದುರದೃಷ್ಟವಶಾತ್, ಈ ಹಲವು ಸಂಪ್ರದಾಯವಾದಿ ಅಂಶಗಳು ಪೂರ್ವಾಗ್ರಹಕ್ಕೆ ಕಾರಣವಾಗಬಹುದು.” ಇದು ಕಡಿಮೆ ಬುದ್ಧಿವಂತಿಕೆ ಇರುವವರು ಬಲ ಸಿದ್ದಾಂತದ ಕಡೆಗೆ ಆಕರ್ಷಿತರಾಗಬಹುದು ಎಂದು ವಿವರಿಸಿದ್ದಾರೆ.

ಕಡಿಮೆ ಬುದ್ಧಿವಂತಿಕೆಯಿರುವ ಜನರು ಇತರ ಜನಾಂಗಗಳು ಮತ್ತು ಗುಂಪುಗಳೊಂದಿಗೆ ಕಡಿಮೆ ಸಂಪರ್ಕವನ್ನು ಹೊಂದಿರುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇತರ ಗುಂಪುಗಳೊಂದಿಗೆ ಅವರಿಗೆ ಸಂವಹನ ನಡೆಸುವುದು ಅರಿವಿನ ಕೊರತೆಯಿಂದಾಗಿ ಮಾನಸಿಕವಾಗಿ ಸವಾಲಿನ ಕೆಲಸವಾಗಿರುತ್ತದೆ.

ಸಂಶೋಧನೆಗಳ ಪ್ರಕಾರ ಎಲ್ಲಾ ಉದಾರವಾದಿಗಳು ಬುದ್ದಿವಂತರು ಮತ್ತು ಎಲ್ಲಾ ಸಂಪ್ರದಾಯವಾದಿಗಳು ಮೂರ್ಖರು ಎಂದು ಅರ್ಥವಲ್ಲ ಎಂದು ಡಾ. ಹಾಡ್ಸನ್ ವಿವರಿಸಿದ್ದಾರೆ. “ಅತ್ಯಂತ ಬುದ್ದಿವಂತರಾದ ಸಂಪ್ರದಾಯವಾದಿಗಳು ಮತ್ತು ಅಷ್ಟು ಬುದ್ದಿವಂತರಲ್ಲದ ಉದಾರವಾದಿಗಳ ಅನೇಕ ಉದಾಹರಣೆಗಳಿವೆ. ಮತ್ತು ಬಹಳ ತತ್ವಬದ್ಧ ಸಂಪ್ರದಾಯವಾದಿಗಳು ಮತ್ತು ಅಸಹಿಷ್ಣು ಉದಾರವಾದಿಗಳ ಅನೇಕ ಉದಾಹರಣೆಗಳು ಸಹ ಅಲ್ಲಲ್ಲಿ ಕಂಡುಬರುತ್ತವೆ ಎಂದು ಹೇಳಿದ್ದಾರೆ. ಆದರೆ ಪೂರ್ಣಜನರನ್ನು ಗಮನದಲ್ಲಿಟ್ಟುಕೊಂಡು ಈ ಸಂಶೋಧನೆ ನಡೆದಿದೆ ಎಂದಿದಾರೆ.

ಈಗ ನಿಮ್ಮ ನಿಮ್ಮ ಬುದ್ದಿಮತ್ತೆ ಮತ್ತು ನೀವು ಪ್ರತಿನಿಧಿಸುವ ರಾಜಕೀಯವನ್ನು ತಾಳೆ ನೋಡಿಕೊಳ್ಳಿ.

ಮೂಲ: ದಿ ಗ್ಲೋಬ್‌ ಅಂಡ್‌ ಮೈಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...