Homeಅಂತರಾಷ್ಟ್ರೀಯಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

ಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

- Advertisement -
- Advertisement -

ಕೆಲವು ಜನರು ಏಕೆ ಪೂರ್ವಾಗ್ರಹ ಪೀಡಿತರಾಗಿದ್ದಾರೆ ಎಂಬುದಕ್ಕೆ ಸಂಶೋಧಕರು ಸಂಭಾವ್ಯ ವಿವರಣೆಯನ್ನು ಕಂಡುಕೊಂಡಿದ್ದಾರೆ. ಅದೆಂದರೆ ಅವರು ಕಡಿಮೆ ಬುದ್ಧಿವಂತರಾಗಿರುತ್ತಾರೆ.

ಕಡಿಮೆ ಸಾಮಾನ್ಯ ಬುದ್ಧಿವಂತಿಕೆ ಹೊಂದಿರುವ ಮಕ್ಕಳು ವಯಸ್ಕರಾದಂತೆ ಪೂರ್ವಾಗ್ರಹ ಪೀಡಿತರಾಗುತ್ತಾರೆ ಎಂದು ಬ್ರಾಕ್ ವಿಶ್ವವಿದ್ಯಾಲಯದ ಅಧ್ಯಯನ ವರದಿ ಹೇಳಿದೆ.

ಸೈಕಲಾಜಿಕಲ್ ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಎರಡು ದೊಡ್ಡ-ಪ್ರಮಾಣದ ಬ್ರಿಟಿಷ್ ಅಧ್ಯಯನಗಳ ದತ್ತಾಂಶವನ್ನು ಪರಿಶೀಲಿಸಿದೆ. ಬಾಲ್ಯದಲ್ಲಿ ಕಡಿಮೆ ಬುದ್ದಿಮತೆ ಅಂಕಗಳನ್ನು ಹೊಂದಿದ ಮಕ್ಕಳು ಪ್ರೌಢಾವಸ್ಥೆಯಲ್ಲಿ ಹೆಚ್ಚಿನ ವರ್ಣಭೇದ ನೀತಿಯ ಪ್ರತಿಪಾದಕರಾಗುತ್ತಾರೆ ಎಂದು ಸಂಶೋಧಕರು ವಿವರಿಸಿದ್ದಾರೆ. ಮುಂದೆ ಅವರು ಬಲಪಂಥೀಯ ಸಿದ್ಧಾಂತದತ್ತ ಆಕರ್ಷಿತಗೊಳ್ಳುತ್ತಾರೆ ಎಂಬ ವಿವಾದಾತ್ಮಕ ಅಂಶವನ್ನು ಸಂಶೋಧಕರು  ವಿವರಿಸುತ್ತಾರೆ.

ಯು.ಎಸ್. ಅಧ್ಯಯನದ ದತ್ತಾಂಶದ ದ್ವಿತೀಯ ವಿಶ್ಲೇಷಣೆಯು ಕಳಪೆ ಅಮೂರ್ತ-ತಾರ್ಕಿಕ ಕೌಶಲ್ಯ ಹೊಂದಿರುವವರು ಸಲಿಂಗಕಾಮ ವಿರೋಧಿ ಪೂರ್ವಾಗ್ರಹವನ್ನು ಹೊಂದುವ ಸಾಧ್ಯತೆಯಿದೆ ಎಂದು ತೋರಿಸಿದೆ. ಅವರು ಭಾಗಶಃ ಸರ್ವಾಧಿಕಾರಿ ವರ್ತನೆಗಳೊಂದಿಗೆ ಸಂಬಂಧ ಹೊಂದಿರುತ್ತಾರೆ ಎಂದಿದೆ.

ಅಧ್ಯಯನದ ಫಲಿತಾಂಶಗಳು ಒಂದು ಕೆಟ್ಟ ಚಕ್ರವನ್ನು ಸೂಚಿಸುತ್ತವೆ ಎಂದು ಮುಖ್ಯ ಸಂಶೋಧಕ ಗಾರ್ಡನ್ ಹಾಡ್ಸನ್ ಲೈವ್ ಸೈನ್ಸ್‌ ಪತ್ರಿಕೆಗೆ ತಿಳಿಸಿದ್ದಾರೆ. ಕಡಿಮೆ ಬುದ್ಧಿವಂತಿಕೆಯಿರುವ ಜನರು ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗುತ್ತಾರೆ. ಪ್ರತಿಯಾಗಿ, ಆ ಸಿದ್ಧಾಂತಗಳು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು ಎಂದಿದ್ದಾರೆ.

“ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳು ರಚನೆಯಲ್ಲಿ ಶ್ರೇಣೀಕರಣವನ್ನು ನೀಡಲು ಒಲವು ತೋರುತ್ತವೆ” ಎಂದು ಅವರು ಹೇಳಿದ್ದಾರೆ. “ದುರದೃಷ್ಟವಶಾತ್, ಈ ಹಲವು ಸಂಪ್ರದಾಯವಾದಿ ಅಂಶಗಳು ಪೂರ್ವಾಗ್ರಹಕ್ಕೆ ಕಾರಣವಾಗಬಹುದು.” ಇದು ಕಡಿಮೆ ಬುದ್ಧಿವಂತಿಕೆ ಇರುವವರು ಬಲ ಸಿದ್ದಾಂತದ ಕಡೆಗೆ ಆಕರ್ಷಿತರಾಗಬಹುದು ಎಂದು ವಿವರಿಸಿದ್ದಾರೆ.

ಕಡಿಮೆ ಬುದ್ಧಿವಂತಿಕೆಯಿರುವ ಜನರು ಇತರ ಜನಾಂಗಗಳು ಮತ್ತು ಗುಂಪುಗಳೊಂದಿಗೆ ಕಡಿಮೆ ಸಂಪರ್ಕವನ್ನು ಹೊಂದಿರುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇತರ ಗುಂಪುಗಳೊಂದಿಗೆ ಅವರಿಗೆ ಸಂವಹನ ನಡೆಸುವುದು ಅರಿವಿನ ಕೊರತೆಯಿಂದಾಗಿ ಮಾನಸಿಕವಾಗಿ ಸವಾಲಿನ ಕೆಲಸವಾಗಿರುತ್ತದೆ.

ಸಂಶೋಧನೆಗಳ ಪ್ರಕಾರ ಎಲ್ಲಾ ಉದಾರವಾದಿಗಳು ಬುದ್ದಿವಂತರು ಮತ್ತು ಎಲ್ಲಾ ಸಂಪ್ರದಾಯವಾದಿಗಳು ಮೂರ್ಖರು ಎಂದು ಅರ್ಥವಲ್ಲ ಎಂದು ಡಾ. ಹಾಡ್ಸನ್ ವಿವರಿಸಿದ್ದಾರೆ. “ಅತ್ಯಂತ ಬುದ್ದಿವಂತರಾದ ಸಂಪ್ರದಾಯವಾದಿಗಳು ಮತ್ತು ಅಷ್ಟು ಬುದ್ದಿವಂತರಲ್ಲದ ಉದಾರವಾದಿಗಳ ಅನೇಕ ಉದಾಹರಣೆಗಳಿವೆ. ಮತ್ತು ಬಹಳ ತತ್ವಬದ್ಧ ಸಂಪ್ರದಾಯವಾದಿಗಳು ಮತ್ತು ಅಸಹಿಷ್ಣು ಉದಾರವಾದಿಗಳ ಅನೇಕ ಉದಾಹರಣೆಗಳು ಸಹ ಅಲ್ಲಲ್ಲಿ ಕಂಡುಬರುತ್ತವೆ ಎಂದು ಹೇಳಿದ್ದಾರೆ. ಆದರೆ ಪೂರ್ಣಜನರನ್ನು ಗಮನದಲ್ಲಿಟ್ಟುಕೊಂಡು ಈ ಸಂಶೋಧನೆ ನಡೆದಿದೆ ಎಂದಿದಾರೆ.

ಈಗ ನಿಮ್ಮ ನಿಮ್ಮ ಬುದ್ದಿಮತ್ತೆ ಮತ್ತು ನೀವು ಪ್ರತಿನಿಧಿಸುವ ರಾಜಕೀಯವನ್ನು ತಾಳೆ ನೋಡಿಕೊಳ್ಳಿ.

ಮೂಲ: ದಿ ಗ್ಲೋಬ್‌ ಅಂಡ್‌ ಮೈಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...